ETV Bharat / bharat

ವಿಧಾನಸಭೆ ಚುನಾವಣೆ ತಯಾರಿ; ತಮಿಳುನಾಡಿಗೆ ಚು. ಆಯೋಗ ತಂಡ ಭೇಟಿ

author img

By

Published : Feb 11, 2021, 3:18 PM IST

ತಮಿಳುನಾಡು ವಿಧಾನಸಭೆಯ ಅವಧಿ ಮೇ 24, 2021ಕ್ಕೆ ಕೊನೆಗೊಳ್ಳುತ್ತಿದೆ. 234 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಯಾವಾಗಲೂ ಹೆಚ್ಚಿನ ಮತದಾನವಾಗಿದೆ. ನ್ಯಾಯಯುತ ಚುನಾವಣೆ ನಡೆಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ.

Sunil Arora on TN Assembly election
ಸುನಿಲ್ ಅರೋರಾ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರದ ತಂಡ ರಾಜ್ಯಕ್ಕೆ ಭೇಟಿ ನೀಡಿದೆ ಎಂದು ಭಾರತದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ

ಚುನಾವಣಾ ಆಯೋಗವು ರಾಜ್ಯದಲ್ಲಿ ಸಕ್ರಿಯವಾಗಿರುವ ರಾಜಕೀಯ ಪಕ್ಷಗಳೊಂದಿಗೆ, ಆಡಳಿತ ಅಧಿಕಾರಿಗಳು, ರಾಜ್ಯ ಚುನಾವಣಾ ಮತ್ತು ಜಾರಿ ಸಂಸ್ಥೆಗಳ ಅಧಿಕಾರಿಗಳು ಹಾಗೂ ತಮಿಳುನಾಡಿನ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದೆ ಎಂದು ಅರೋರಾ ಹೇಳಿದ್ದಾರೆ.

ತಮಿಳುನಾಡು ವಿಧಾನಸಭೆಯ ಅವಧಿ ಮೇ 24, 2021ಕ್ಕೆ ಕೊನೆಗೊಳ್ಳುತ್ತಿದೆ. 234 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ 188 ರಲ್ಲಿ ಸಾಮಾನ್ಯ ಸ್ಥಾನಗಳಿವೆ ಎಂದು ಅವರು ಹೇಳಿದರು.

ಓದಿ: ಮಮತಾ ಬ್ಯಾನರ್ಜಿ ಸ್ಥಿತಿ ಬೆಂಗಾಲ್​ ಟೈಗರನಂತೆ ಅಲ್ಲ, ಬೆಕ್ಕಿನಂತಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷರ ಟಾಂಗ್​

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಯಾವಾಗಲೂ ಹೆಚ್ಚಿನ ಮತದಾನವಾಗಿದೆ. ಈ ಸಂದರ್ಭದಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ ಎಂದು ಆಯೋಗವು ನಂಬುತ್ತದೆ. ನ್ಯಾಯಯುತ ಚುನಾವಣೆ ನಡೆಸುವುದು ನಮ್ಮ ಜವಾಬ್ದಾರಿಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಆಯೋಗವು ಹೊಸ ಮತದಾರರ ಮೇಲೆ ಮಾತ್ರ ಕೇಂದ್ರೀಕರಿಸುತ್ತಿದೆ ಎಂದು ಅವರು ಹೇಳಿದರು.

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರದ ತಂಡ ರಾಜ್ಯಕ್ಕೆ ಭೇಟಿ ನೀಡಿದೆ ಎಂದು ಭಾರತದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ

ಚುನಾವಣಾ ಆಯೋಗವು ರಾಜ್ಯದಲ್ಲಿ ಸಕ್ರಿಯವಾಗಿರುವ ರಾಜಕೀಯ ಪಕ್ಷಗಳೊಂದಿಗೆ, ಆಡಳಿತ ಅಧಿಕಾರಿಗಳು, ರಾಜ್ಯ ಚುನಾವಣಾ ಮತ್ತು ಜಾರಿ ಸಂಸ್ಥೆಗಳ ಅಧಿಕಾರಿಗಳು ಹಾಗೂ ತಮಿಳುನಾಡಿನ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದೆ ಎಂದು ಅರೋರಾ ಹೇಳಿದ್ದಾರೆ.

ತಮಿಳುನಾಡು ವಿಧಾನಸಭೆಯ ಅವಧಿ ಮೇ 24, 2021ಕ್ಕೆ ಕೊನೆಗೊಳ್ಳುತ್ತಿದೆ. 234 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ 188 ರಲ್ಲಿ ಸಾಮಾನ್ಯ ಸ್ಥಾನಗಳಿವೆ ಎಂದು ಅವರು ಹೇಳಿದರು.

ಓದಿ: ಮಮತಾ ಬ್ಯಾನರ್ಜಿ ಸ್ಥಿತಿ ಬೆಂಗಾಲ್​ ಟೈಗರನಂತೆ ಅಲ್ಲ, ಬೆಕ್ಕಿನಂತಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷರ ಟಾಂಗ್​

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಯಾವಾಗಲೂ ಹೆಚ್ಚಿನ ಮತದಾನವಾಗಿದೆ. ಈ ಸಂದರ್ಭದಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ ಎಂದು ಆಯೋಗವು ನಂಬುತ್ತದೆ. ನ್ಯಾಯಯುತ ಚುನಾವಣೆ ನಡೆಸುವುದು ನಮ್ಮ ಜವಾಬ್ದಾರಿಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಆಯೋಗವು ಹೊಸ ಮತದಾರರ ಮೇಲೆ ಮಾತ್ರ ಕೇಂದ್ರೀಕರಿಸುತ್ತಿದೆ ಎಂದು ಅವರು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.