ETV Bharat / bharat

ಬ್ಯಾಂಕ್​, ವಿಮಾ ಕಂಪನಿ ಉದ್ಯೋಗಿಗಳಿಗೆ ಲಸಿಕೆ ನೀಡಿ: ರಾಜ್ಯಗಳಿಗೆ ಕೇಂದ್ರದ ಪತ್ರ - ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ

ಕೊರೊನಾ ಮಹಾಮಾರಿ ಸಂದರ್ಭದಲ್ಲೂ ಬ್ಯಾಂಕಿಂಗ್​ ವಲಯದ ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದು, ಅವರಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳಿಗೆ ಪತ್ರ ಬರೆದಿದೆ.

staff of banks
staff of banks
author img

By

Published : May 14, 2021, 6:31 PM IST

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ಇದರ ವಿರುದ್ಧದ ಹೋರಾಟ ಮುಂದುವರೆದಿದೆ. ಈಗಾಗಲೇ ಫ್ರಂಟ್​ಲೈನ್​ ಕಾರ್ಯಕರ್ತರು ಸೇರಿ ಜನಸಾಮಾನ್ಯರಿಗೂ ಲಸಿಕೆ ನೀಡಲಾಗ್ತಿದೆ. ಇದರ ಮಧ್ಯೆ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಪತ್ರ ಬರೆದಿದೆ.

ಬ್ಯಾಂಕ್​, ವಿಮಾ ಕಂಪನಿ, ವ್ಯಾಪಾರ ಪ್ರತಿನಿಧಿಗಳು ಮತ್ತು ಇತರೆ ಹಣಕಾಸು ಸೇವಾ ಪೂರೈಕೆದಾರ ಸಿಬ್ಬಂದಿಗೆ ಲಸಿಕೆ ನೀಡಲು ಆದ್ಯತೆ ನೀಡಬೇಕು ಎಂದು ತಿಳಿಸಿದೆ. ಕೇಂದ್ರ ಹಣಕಾಸು ಸಚಿವಾಲಯ ರಾಜ್ಯ ಸರ್ಕಾರಕ್ಕೆ ಈ ಪತ್ರ ಬರೆದಿದ್ದು, ಈ ಕಷ್ಟದ ಸಮಯದಲ್ಲೂ ಅವರು ಹೆಚ್ಚಿನ ಅಪಾಯಕ್ಕೊಳಗಾಗಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: ಪಂಜಾಬ್​ನ 23ನೇ ಜಿಲ್ಲೆಯಾಗಿ ಮಲೆರ್​ಕೋಟ್ಲಾ ಘೋಷಣೆ.. ₹500 ಕೋಟಿ ಅನುದಾನ ಘೋಷಿಸಿದ ಸಿಎಂ

ಕೋವಿಡ್ ಸವಾಲಿನ ಸಮಯದಲ್ಲಿ ಅಗತ್ಯವಿರುವ ಜನರಿಗೆ ಬ್ಯಾಂಕಿಂಗ್​ ಮತ್ತು ಹಣಕಾಸು ಸೇವೆ ನಿರಂತರವಾಗಿ ತಲುಪಿಸುವಲ್ಲಿ ಸಿಬ್ಬಂದಿ ಕಾರ್ಯಮಗ್ನರಾಗಿದ್ದಾರೆ ಎಂದು ಹಣಕಾಸು ಸೇವೆಗಳ ಇಲಾಖೆ ಕಾರ್ಯದರ್ಶಿ ಡೆಬಾಶಿಶ್ ಪಾಂಡಾ ತಿಳಿಸಿದ್ದಾರೆ. ಈ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅನೇಕರು ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಆದ್ಯತೆ ಮೇರೆಗೆ ಲಸಿಕೆ ಹಾಕುವುದು ಸಾರ್ವಜನಿಕ ಸೇವೆಯ ವಿತರಣೆಯಲ್ಲಿ ಅಪಾಯ ಕಡಿಮೆ ಮಾಡುತ್ತದೆ ಎಂದಿದ್ದಾರೆ.

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ಇದರ ವಿರುದ್ಧದ ಹೋರಾಟ ಮುಂದುವರೆದಿದೆ. ಈಗಾಗಲೇ ಫ್ರಂಟ್​ಲೈನ್​ ಕಾರ್ಯಕರ್ತರು ಸೇರಿ ಜನಸಾಮಾನ್ಯರಿಗೂ ಲಸಿಕೆ ನೀಡಲಾಗ್ತಿದೆ. ಇದರ ಮಧ್ಯೆ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಪತ್ರ ಬರೆದಿದೆ.

ಬ್ಯಾಂಕ್​, ವಿಮಾ ಕಂಪನಿ, ವ್ಯಾಪಾರ ಪ್ರತಿನಿಧಿಗಳು ಮತ್ತು ಇತರೆ ಹಣಕಾಸು ಸೇವಾ ಪೂರೈಕೆದಾರ ಸಿಬ್ಬಂದಿಗೆ ಲಸಿಕೆ ನೀಡಲು ಆದ್ಯತೆ ನೀಡಬೇಕು ಎಂದು ತಿಳಿಸಿದೆ. ಕೇಂದ್ರ ಹಣಕಾಸು ಸಚಿವಾಲಯ ರಾಜ್ಯ ಸರ್ಕಾರಕ್ಕೆ ಈ ಪತ್ರ ಬರೆದಿದ್ದು, ಈ ಕಷ್ಟದ ಸಮಯದಲ್ಲೂ ಅವರು ಹೆಚ್ಚಿನ ಅಪಾಯಕ್ಕೊಳಗಾಗಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: ಪಂಜಾಬ್​ನ 23ನೇ ಜಿಲ್ಲೆಯಾಗಿ ಮಲೆರ್​ಕೋಟ್ಲಾ ಘೋಷಣೆ.. ₹500 ಕೋಟಿ ಅನುದಾನ ಘೋಷಿಸಿದ ಸಿಎಂ

ಕೋವಿಡ್ ಸವಾಲಿನ ಸಮಯದಲ್ಲಿ ಅಗತ್ಯವಿರುವ ಜನರಿಗೆ ಬ್ಯಾಂಕಿಂಗ್​ ಮತ್ತು ಹಣಕಾಸು ಸೇವೆ ನಿರಂತರವಾಗಿ ತಲುಪಿಸುವಲ್ಲಿ ಸಿಬ್ಬಂದಿ ಕಾರ್ಯಮಗ್ನರಾಗಿದ್ದಾರೆ ಎಂದು ಹಣಕಾಸು ಸೇವೆಗಳ ಇಲಾಖೆ ಕಾರ್ಯದರ್ಶಿ ಡೆಬಾಶಿಶ್ ಪಾಂಡಾ ತಿಳಿಸಿದ್ದಾರೆ. ಈ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅನೇಕರು ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಆದ್ಯತೆ ಮೇರೆಗೆ ಲಸಿಕೆ ಹಾಕುವುದು ಸಾರ್ವಜನಿಕ ಸೇವೆಯ ವಿತರಣೆಯಲ್ಲಿ ಅಪಾಯ ಕಡಿಮೆ ಮಾಡುತ್ತದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.