ETV Bharat / bharat

ಪ್ರಧಾನಿ ಜೊತೆಗಿನ ಮಾತುಕತೆ ತೃಪ್ತಿ ತಂದಿದೆ: ’ಮಹಾ’ ಸಿಎಂ ಠಾಕ್ರೆ ಹೇಳಿಕೆ

author img

By

Published : Jun 8, 2021, 5:36 PM IST

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ನಿಯೋಗವು ಇಂದು ನವದೆಹಲಿಯಲ್ಲಿ ಪ್ರಧಾನಿಯನ್ನು ಭೇಟಿ ಮಾಡಿದೆ. ಈ ಸಂದರ್ಭದಲ್ಲಿ ಮರಾಠಾ, ಒಬಿಸಿ ಮೀಸಲಾತಿ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸಭೆ
ಪ್ರಧಾನಿ ನರೇಂದ್ರ ಮೋದಿ ಸಭೆ

ನವದೆಹಲಿ: ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಭೆಯ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಾತನಾಡಿದ್ದು, ಮರಾಠ, ಒಬಿಸಿ ಮೀಸಲಾತಿ ಮುಂತಾದ ವಿಷಯಗಳ ಬಗ್ಗೆ ಕೇಂದ್ರವು ಸಕಾರಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.

ಸಭೆಯ ನಂತರ ಮಹಾರಾಷ್ಟ್ರ ಸದನ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಠಾಕ್ರೆ, “ಈ ಸಂದರ್ಭದಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ಪ್ರಧಾನಿ ಎಲ್ಲ ಸಮಸ್ಯೆಗಳನ್ನು ಗಂಭೀರವಾಗಿ ಆಲಿಸಿದ್ದಾರೆ. ಬಾಕಿ ಇರುವ ವಿಷಯಗಳ ಬಗ್ಗೆ ಕೇಂದ್ರವು ಸಕಾರಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಎಲ್ಲಿಯೂ ರಾಜಕೀಯ ಗೀಳು ಇರಲಿಲ್ಲ. ಸಭೆ ನಮಗೆ ತೃಪ್ತಿ ತಂದಿದೆ” ಎಂದರು.

ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ನಿಯೋಗವು ಇಂದು ನವದೆಹಲಿಯಲ್ಲಿ ಪ್ರಧಾನಿಯನ್ನು ಭೇಟಿ ಮಾಡಿದೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಲೋಕೋಪಯೋಗಿ ಸಚಿವ ಅಶೋಕ್ ಚವಾಣ್ ಉಪಸ್ಥಿತರಿದ್ದರು. ಕೇಂದ್ರದಲ್ಲಿ ಬಾಕಿ ಉಳಿದಿರುವ ಮಹಾರಾಷ್ಟ್ರದ ಸಮಸ್ಯೆಗಳನ್ನು ಬಗೆಹರಿಸಲು ಈ ಸಭೆ ನಡೆಸಲಾಯಿತು.

ಮಹಾರಾಷ್ಟ್ರ ಸರ್ಕಾರದ ಪ್ರಕಾರ, ಪ್ರಧಾನ ಮಂತ್ರಿಯವರ ಸಭೆಯಲ್ಲಿ ಚರ್ಚಿಸಿದ ವಿಷಯಗಳಲ್ಲಿ ಮರಾಠ ಮೀಸಲಾತಿ, ಪಂಚಾಯತ್ ರಾಜ್ ಚುನಾವಣೆಯಲ್ಲಿ ಇತರ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ, ಪ್ರಚಾರದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಮತ್ತು ಮೆಟ್ರೊ ಕಾರ್ ಶೆಡ್‌ಗಾಗಿ ಕಾಂಜುರ್ಮಾರ್ಗ್‌ನಲ್ಲಿ ಸ್ಥಳಾವಕಾಶ ಲಭ್ಯತೆಯಂತಹ ಪ್ರಮುಖ ಚರ್ಚೆಗಳು ನಡೆದಿದೆ. ಕಳೆದ ತಿಂಗಳು, ಉದ್ಧವ್ ಠಾಕ್ರೆ ಅವರು ಪಿಎಂ ಮೋದಿಗೆ ಪತ್ರ ಬರೆದಿದ್ದರು. ರಾಜ್ಯದಲ್ಲಿ ಮರಾಠ ಸಮುದಾಯವನ್ನು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು (ಎಸ್‌ಬಿಸಿ) ಎಂದು ಘೋಷಿಸಲು ಕ್ರಮ ಕೈಗೊಳ್ಳುವಂತೆ ಕೋರಿದ್ದರು.

ಆದರೆ, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಲ್ ನಾಗೇಶ್ವರ ರಾವ್, ಎಸ್ ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ರವೀಂದ್ರ ಭಟ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠವು, ಮರಾಠ ಸಮುದಾಯದ ಜನರನ್ನು ಮೀಸಲು ವ್ಯಾಪ್ತಿಗೆ ತರಲು ಅವರನ್ನು ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಸಮುದಾಯ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿತ್ತು.

ನವದೆಹಲಿ: ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಭೆಯ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಾತನಾಡಿದ್ದು, ಮರಾಠ, ಒಬಿಸಿ ಮೀಸಲಾತಿ ಮುಂತಾದ ವಿಷಯಗಳ ಬಗ್ಗೆ ಕೇಂದ್ರವು ಸಕಾರಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.

ಸಭೆಯ ನಂತರ ಮಹಾರಾಷ್ಟ್ರ ಸದನ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಠಾಕ್ರೆ, “ಈ ಸಂದರ್ಭದಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ಪ್ರಧಾನಿ ಎಲ್ಲ ಸಮಸ್ಯೆಗಳನ್ನು ಗಂಭೀರವಾಗಿ ಆಲಿಸಿದ್ದಾರೆ. ಬಾಕಿ ಇರುವ ವಿಷಯಗಳ ಬಗ್ಗೆ ಕೇಂದ್ರವು ಸಕಾರಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಎಲ್ಲಿಯೂ ರಾಜಕೀಯ ಗೀಳು ಇರಲಿಲ್ಲ. ಸಭೆ ನಮಗೆ ತೃಪ್ತಿ ತಂದಿದೆ” ಎಂದರು.

ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ನಿಯೋಗವು ಇಂದು ನವದೆಹಲಿಯಲ್ಲಿ ಪ್ರಧಾನಿಯನ್ನು ಭೇಟಿ ಮಾಡಿದೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಲೋಕೋಪಯೋಗಿ ಸಚಿವ ಅಶೋಕ್ ಚವಾಣ್ ಉಪಸ್ಥಿತರಿದ್ದರು. ಕೇಂದ್ರದಲ್ಲಿ ಬಾಕಿ ಉಳಿದಿರುವ ಮಹಾರಾಷ್ಟ್ರದ ಸಮಸ್ಯೆಗಳನ್ನು ಬಗೆಹರಿಸಲು ಈ ಸಭೆ ನಡೆಸಲಾಯಿತು.

ಮಹಾರಾಷ್ಟ್ರ ಸರ್ಕಾರದ ಪ್ರಕಾರ, ಪ್ರಧಾನ ಮಂತ್ರಿಯವರ ಸಭೆಯಲ್ಲಿ ಚರ್ಚಿಸಿದ ವಿಷಯಗಳಲ್ಲಿ ಮರಾಠ ಮೀಸಲಾತಿ, ಪಂಚಾಯತ್ ರಾಜ್ ಚುನಾವಣೆಯಲ್ಲಿ ಇತರ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ, ಪ್ರಚಾರದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಮತ್ತು ಮೆಟ್ರೊ ಕಾರ್ ಶೆಡ್‌ಗಾಗಿ ಕಾಂಜುರ್ಮಾರ್ಗ್‌ನಲ್ಲಿ ಸ್ಥಳಾವಕಾಶ ಲಭ್ಯತೆಯಂತಹ ಪ್ರಮುಖ ಚರ್ಚೆಗಳು ನಡೆದಿದೆ. ಕಳೆದ ತಿಂಗಳು, ಉದ್ಧವ್ ಠಾಕ್ರೆ ಅವರು ಪಿಎಂ ಮೋದಿಗೆ ಪತ್ರ ಬರೆದಿದ್ದರು. ರಾಜ್ಯದಲ್ಲಿ ಮರಾಠ ಸಮುದಾಯವನ್ನು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು (ಎಸ್‌ಬಿಸಿ) ಎಂದು ಘೋಷಿಸಲು ಕ್ರಮ ಕೈಗೊಳ್ಳುವಂತೆ ಕೋರಿದ್ದರು.

ಆದರೆ, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಲ್ ನಾಗೇಶ್ವರ ರಾವ್, ಎಸ್ ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ರವೀಂದ್ರ ಭಟ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠವು, ಮರಾಠ ಸಮುದಾಯದ ಜನರನ್ನು ಮೀಸಲು ವ್ಯಾಪ್ತಿಗೆ ತರಲು ಅವರನ್ನು ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಸಮುದಾಯ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.