ETV Bharat / bharat

ಜಮ್ಮು ಕಾಶ್ಮೀರ ಅಭಿವೃದ್ಧಿಗಾಗಿ ಕೇಂದ್ರ 60 ಸಾವಿರ ಕೋಟಿ ರೂ. ಖರ್ಚು ಮಾಡಲಿದೆ: ಸಚಿವ ರಾಜೀವ್ ಚಂದ್ರಶೇಖರ್ - ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್,

ಎರಡು-ಮೂರು ವರ್ಷಗಳಲ್ಲಿ ಜಮ್ಮುಕಾಶ್ಮೀರದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಿದೆ ಅಂತಾ ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್ ಹೇಳಿದ್ದಾರೆ.

ರಾಜೀವ್ ಚಂದ್ರಶೇಖರ್
ರಾಜೀವ್ ಚಂದ್ರಶೇಖರ್
author img

By

Published : Sep 26, 2021, 10:17 AM IST

ಶ್ರೀನಗರ (ಜಮ್ಮು-ಕಾಶ್ಮೀರ): ಮುಂದಿನ ಎರಡು-ಮೂರು ವರ್ಷಗಳಲ್ಲಿ ಜಮ್ಮುಕಾಶ್ಮೀರದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಿದೆ ಎಂದು ಕೇಂದ್ರ ಕಶಲ್ಯಾಭಿವೃದ್ಧಿ ರಾಜ್ಯ ಖಾತೆ ಸಚಿವ ರಾಜೀವ್ ಚಂದ್ರಶೇಖರ್​ ಹೇಳಿದ್ದಾರೆ.

ಬುದ್ಗಾಮ್​ಮಲ್ಲಿ ಮಾತನಾಡಿರುವ ಅವರು, ಕೇಂದ್ರಾಡಳಿತ ಪ್ರದೇಶ ಜಮ್ಮುಕಾಶ್ಮೀರದ ಅಭಿವೃದ್ಧಿಗಾಗಿಯೇ ಕೇಂದ್ರ ಸರ್ಕಾರ 60 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಿದೆ. ಜಮ್ಮುಕಾಶ್ಮೀರ ಮುಂದಿನ ಎರಡು ಮೂರು ವರ್ಷಗಳಲ್ಲಿ ಅಭಿವೃದ್ಧಿ ಮತ್ತು ಸಮೃದ್ಧಿಯ ಹೊಸ ಅಲೆಯನ್ನು ನೋಡಲಿದೆ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರ (ಜೆ-ಕೆ)ಕ್ಕೆ ಕೇಂದ್ರ ಸರ್ಕಾರದ ವಿಶೇಷ ಪ್ರಚಾರ ಕಾರ್ಯಕ್ರಮದ ಭಾಗವಾಗಿ ಅವರು ಜಿಲ್ಲೆಗೆ ಆಗಮಿಸಿದ್ದರು. ಉದ್ಯೋಗ ಸೃಷ್ಟಿಸಲು, ಸ್ಥಳೀಯ ಆರ್ಥಿಕತೆ ಉತ್ತೇಜಿಸಲು ಈ ಮೊತ್ತವನ್ನು ಬಳಸಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಕಾಶ್ಮೀರದ ಯುವಜನತೆ ಪ್ರತಿಭೆ ಮತ್ತು ಕೌಶಲ್ಯವುಳ್ಳವುರು ಅನ್ನೋದನ್ನ ನಾನು ಗಮನಿಸಿದ್ದೇನೆ. ಅವರಿಗೆ ಹೆಚ್ಚಿನದ್ದನ್ನು ಕಲಿಯಲು ತರಬೇತಿ ಬೇಕು. ಉದ್ಯೋಗ ಸೃಷ್ಟಿಗೆ ಅಗಾಧ ಅವಕಾಶಗಳು ಲಭ್ಯವಿರುವುದರಿಂದ ಅವರು ಎಲ್ಲಾ ರೀತಿಯಲ್ಲಿಯೂ ಸಬಲರಾಗಿರಬೇಕು ಎಂದರು.

ಏಪ್ರಿಲ್ 1, 2020 ರಿಂದ ಏಪ್ರಿಲ್ 30, 2021 ರವರೆಗೆ ಐಟಿ ಮತ್ತು ಉತ್ಪಾದನಾ ವಲಯದಲ್ಲಿ ಸುಮಾರು ಎಂಟು ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ ಎಂದು ರಾಜೀವ್​ ಚಂದ್ರಶೇಖರ್ ಹೇಳಿದರು.

ಯುವಕರು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಬದ್ಧತೆ ಜತೆಗೆ ಪಾಸಿಟಿವ್ ಆಗಿ ಚಿಂತಿಸಿ, ಉತ್ಸಾಹದಿಂದಿರಿ ಎಂದು ಸಚಿವರು ಮನವಿ ಮಾಡಿದ್ರು.

ನಾವು ವೃತ್ತಿಪರ ಉದ್ದೇಶವನ್ನು ಜನರಿಗೆ ತಲುಪಿಸುವ ಮಹತ್ವಾಕಾಂಕ್ಷೆಯೊಂದಿಗೆ ಇಲ್ಲಿಗೆ ಬಂದಿದ್ದೇವೆ. ನಮ್ಮ ಭೇಟಿಯ ಫಲಿತಾಂಶ ಶೀಘ್ರದಲ್ಲೇ ತಿಳಿಯಲಿದೆ ಎಂದು ಸಚಿವರು ತಿಳಿಸಿದ್ರು.

ಇದನ್ನೂ ಓದಿ: ಇಂದು ಪ್ರಧಾನಿ ಮೋದಿ 'ಮನ್​ ಕಿ ಬಾತ್​' 81 ನೇ ಆವೃತ್ತಿ ಪ್ರಸಾರ

ಶ್ರೀನಗರ (ಜಮ್ಮು-ಕಾಶ್ಮೀರ): ಮುಂದಿನ ಎರಡು-ಮೂರು ವರ್ಷಗಳಲ್ಲಿ ಜಮ್ಮುಕಾಶ್ಮೀರದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಿದೆ ಎಂದು ಕೇಂದ್ರ ಕಶಲ್ಯಾಭಿವೃದ್ಧಿ ರಾಜ್ಯ ಖಾತೆ ಸಚಿವ ರಾಜೀವ್ ಚಂದ್ರಶೇಖರ್​ ಹೇಳಿದ್ದಾರೆ.

ಬುದ್ಗಾಮ್​ಮಲ್ಲಿ ಮಾತನಾಡಿರುವ ಅವರು, ಕೇಂದ್ರಾಡಳಿತ ಪ್ರದೇಶ ಜಮ್ಮುಕಾಶ್ಮೀರದ ಅಭಿವೃದ್ಧಿಗಾಗಿಯೇ ಕೇಂದ್ರ ಸರ್ಕಾರ 60 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಿದೆ. ಜಮ್ಮುಕಾಶ್ಮೀರ ಮುಂದಿನ ಎರಡು ಮೂರು ವರ್ಷಗಳಲ್ಲಿ ಅಭಿವೃದ್ಧಿ ಮತ್ತು ಸಮೃದ್ಧಿಯ ಹೊಸ ಅಲೆಯನ್ನು ನೋಡಲಿದೆ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರ (ಜೆ-ಕೆ)ಕ್ಕೆ ಕೇಂದ್ರ ಸರ್ಕಾರದ ವಿಶೇಷ ಪ್ರಚಾರ ಕಾರ್ಯಕ್ರಮದ ಭಾಗವಾಗಿ ಅವರು ಜಿಲ್ಲೆಗೆ ಆಗಮಿಸಿದ್ದರು. ಉದ್ಯೋಗ ಸೃಷ್ಟಿಸಲು, ಸ್ಥಳೀಯ ಆರ್ಥಿಕತೆ ಉತ್ತೇಜಿಸಲು ಈ ಮೊತ್ತವನ್ನು ಬಳಸಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಕಾಶ್ಮೀರದ ಯುವಜನತೆ ಪ್ರತಿಭೆ ಮತ್ತು ಕೌಶಲ್ಯವುಳ್ಳವುರು ಅನ್ನೋದನ್ನ ನಾನು ಗಮನಿಸಿದ್ದೇನೆ. ಅವರಿಗೆ ಹೆಚ್ಚಿನದ್ದನ್ನು ಕಲಿಯಲು ತರಬೇತಿ ಬೇಕು. ಉದ್ಯೋಗ ಸೃಷ್ಟಿಗೆ ಅಗಾಧ ಅವಕಾಶಗಳು ಲಭ್ಯವಿರುವುದರಿಂದ ಅವರು ಎಲ್ಲಾ ರೀತಿಯಲ್ಲಿಯೂ ಸಬಲರಾಗಿರಬೇಕು ಎಂದರು.

ಏಪ್ರಿಲ್ 1, 2020 ರಿಂದ ಏಪ್ರಿಲ್ 30, 2021 ರವರೆಗೆ ಐಟಿ ಮತ್ತು ಉತ್ಪಾದನಾ ವಲಯದಲ್ಲಿ ಸುಮಾರು ಎಂಟು ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ ಎಂದು ರಾಜೀವ್​ ಚಂದ್ರಶೇಖರ್ ಹೇಳಿದರು.

ಯುವಕರು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಬದ್ಧತೆ ಜತೆಗೆ ಪಾಸಿಟಿವ್ ಆಗಿ ಚಿಂತಿಸಿ, ಉತ್ಸಾಹದಿಂದಿರಿ ಎಂದು ಸಚಿವರು ಮನವಿ ಮಾಡಿದ್ರು.

ನಾವು ವೃತ್ತಿಪರ ಉದ್ದೇಶವನ್ನು ಜನರಿಗೆ ತಲುಪಿಸುವ ಮಹತ್ವಾಕಾಂಕ್ಷೆಯೊಂದಿಗೆ ಇಲ್ಲಿಗೆ ಬಂದಿದ್ದೇವೆ. ನಮ್ಮ ಭೇಟಿಯ ಫಲಿತಾಂಶ ಶೀಘ್ರದಲ್ಲೇ ತಿಳಿಯಲಿದೆ ಎಂದು ಸಚಿವರು ತಿಳಿಸಿದ್ರು.

ಇದನ್ನೂ ಓದಿ: ಇಂದು ಪ್ರಧಾನಿ ಮೋದಿ 'ಮನ್​ ಕಿ ಬಾತ್​' 81 ನೇ ಆವೃತ್ತಿ ಪ್ರಸಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.