ETV Bharat / bharat

ಬ್ಯಾಕ್​ ಡೋರ್ ಮೂಲಕ ದೆಹಲಿಯಲ್ಲಿ ಅಧಿಕಾರ ನಡೆಸಲು ಕೇಂದ್ರ ಪ್ರಯತ್ನ: ಸಿಸೋಡಿಯಾ

author img

By

Published : Feb 4, 2021, 9:03 PM IST

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಲೆಫ್ಟಿನೆಂಟ್​ ಗವರ್ನರ್​ ಮೂಲಕ ದೆಹಲಿಯಲ್ಲಿ ಅಧಿಕಾರ ನಡೆಸಲು ಯತ್ನಿಸುತ್ತಿದೆ ಎಂದು ದೂರಿದ್ದಾರೆ.

Sisodia
Sisodia

ನವದೆಹಲಿ: ಬ್ಯಾಕ್​ ಡೋರ್​ ಮೂಲಕ ದೆಹಲಿಯಲ್ಲಿ ಕೇಂದ್ರ ಸರ್ಕಾರ ಅಧಿಕಾರ ನಡೆಸಲು ಪ್ರಯತ್ನ ನಡೆಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಹೇಳಿದ್ದು, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಿಎನ್​​ಸಿಟಿಡಿ ಮಸೂದೆ ಅಂಗೀಕಾರಗೊಳ್ಳುವಂತೆ ಕೇಂದ್ರ ಸರ್ಕಾರ ರಹಸ್ಯವಾಗಿ ಕೆಲಸ ಮಾಡಿದೆ ಎಂದು ಆರೋಪ ಮಾಡಿರುವ ಸಿಸೋಡಿಯಾ, ಲೆಫ್ಟಿನೆಂಟ್​ ಗವರ್ನರ್​ಗೆ ಹೆಚ್ಚಿನ ಅಧಿಕಾರ ನೀಡಿ, ತನ್ನ ಕೆಲಸ ಮಾಡಿಕೊಳ್ಳುತ್ತಿದೆ ಎಂದಿದ್ದಾರೆ.

ಓದಿ: ಕಾರ್ಮಿಕರಿಗೆ ಟಿಕೆಟ್ ದುಡ್ಡು ಕೊಡದವರು ಕಳ್ಳರನ್ನು ವಿಮಾನದಲ್ಲಿ ಕರೆಸಿಕೊಂಡರು : ಬಿಜೆಪಿಗೆ ದೀದಿ ಟಾಂಗ್

ಎನ್​ಸಿಟಿ ಕಾಯ್ದೆ ತಿದ್ದುಪಡಿ ವಿಚಾರವಾಗಿ ಮಾತನಾಡಿರುವ ಸಿಸೋಡಿಯಾ, ಈ ಕ್ರಮವು ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ದೆಹಲಿ ನಾಗರಿಕರ ಇಚ್ಛೆಗೆ ವಿರುದ್ಧವಾಗಿದೆ ಎಂದಿದ್ದಾರೆ. ದೆಹಲಿ ಚುನಾಯಿತ ಸರ್ಕಾರದ ಅಧಿಕಾರ ಕಸಿದುಕೊಳ್ಳಲು ಹಾಗೂ ಕೇಂದ್ರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್​ ಗವರ್ನರ್ ಮೂಲಕ ಕೇಂದ್ರ ಸರ್ಕಾರ ದೆಹಲಿಯಲ್ಲಿ ಅಧಿಕಾರ ನಡೆಸುವ ಇರಾದೆ ಹೊಂದಿದೆ. ಇದೇ ಕಾರಣಕ್ಕಾಗಿ ಜಿಎನ್​ಸಿಟಿಡಿ ಮಸೂದೆ ಅಂಗೀಕಾರಗೊಳ್ಳಲು ರಹಸ್ಯವಾಗಿ ಕೆಲಸ ಮಾಡಿದೆ ಎಂದಿದ್ದಾರೆ.

ಈ ಮಸೂದೆ ಪ್ರಜಾಪ್ರಭುತ್ವದ ಹತ್ಯೆ ಎಂದಿರುವ ಸಿಸೋಡಿಯಾ, ದೆಹಲಿ ಅಭಿವೃದ್ಧಿ ಮತ್ತು ಪ್ರಗತಿಗೆ ಅಡ್ಡಿಯುಂಟಾಗುತ್ತದೆ ಎಂದು ಹೇಳಿದ್ದಾರೆ.

ನವದೆಹಲಿ: ಬ್ಯಾಕ್​ ಡೋರ್​ ಮೂಲಕ ದೆಹಲಿಯಲ್ಲಿ ಕೇಂದ್ರ ಸರ್ಕಾರ ಅಧಿಕಾರ ನಡೆಸಲು ಪ್ರಯತ್ನ ನಡೆಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಹೇಳಿದ್ದು, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಿಎನ್​​ಸಿಟಿಡಿ ಮಸೂದೆ ಅಂಗೀಕಾರಗೊಳ್ಳುವಂತೆ ಕೇಂದ್ರ ಸರ್ಕಾರ ರಹಸ್ಯವಾಗಿ ಕೆಲಸ ಮಾಡಿದೆ ಎಂದು ಆರೋಪ ಮಾಡಿರುವ ಸಿಸೋಡಿಯಾ, ಲೆಫ್ಟಿನೆಂಟ್​ ಗವರ್ನರ್​ಗೆ ಹೆಚ್ಚಿನ ಅಧಿಕಾರ ನೀಡಿ, ತನ್ನ ಕೆಲಸ ಮಾಡಿಕೊಳ್ಳುತ್ತಿದೆ ಎಂದಿದ್ದಾರೆ.

ಓದಿ: ಕಾರ್ಮಿಕರಿಗೆ ಟಿಕೆಟ್ ದುಡ್ಡು ಕೊಡದವರು ಕಳ್ಳರನ್ನು ವಿಮಾನದಲ್ಲಿ ಕರೆಸಿಕೊಂಡರು : ಬಿಜೆಪಿಗೆ ದೀದಿ ಟಾಂಗ್

ಎನ್​ಸಿಟಿ ಕಾಯ್ದೆ ತಿದ್ದುಪಡಿ ವಿಚಾರವಾಗಿ ಮಾತನಾಡಿರುವ ಸಿಸೋಡಿಯಾ, ಈ ಕ್ರಮವು ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ದೆಹಲಿ ನಾಗರಿಕರ ಇಚ್ಛೆಗೆ ವಿರುದ್ಧವಾಗಿದೆ ಎಂದಿದ್ದಾರೆ. ದೆಹಲಿ ಚುನಾಯಿತ ಸರ್ಕಾರದ ಅಧಿಕಾರ ಕಸಿದುಕೊಳ್ಳಲು ಹಾಗೂ ಕೇಂದ್ರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್​ ಗವರ್ನರ್ ಮೂಲಕ ಕೇಂದ್ರ ಸರ್ಕಾರ ದೆಹಲಿಯಲ್ಲಿ ಅಧಿಕಾರ ನಡೆಸುವ ಇರಾದೆ ಹೊಂದಿದೆ. ಇದೇ ಕಾರಣಕ್ಕಾಗಿ ಜಿಎನ್​ಸಿಟಿಡಿ ಮಸೂದೆ ಅಂಗೀಕಾರಗೊಳ್ಳಲು ರಹಸ್ಯವಾಗಿ ಕೆಲಸ ಮಾಡಿದೆ ಎಂದಿದ್ದಾರೆ.

ಈ ಮಸೂದೆ ಪ್ರಜಾಪ್ರಭುತ್ವದ ಹತ್ಯೆ ಎಂದಿರುವ ಸಿಸೋಡಿಯಾ, ದೆಹಲಿ ಅಭಿವೃದ್ಧಿ ಮತ್ತು ಪ್ರಗತಿಗೆ ಅಡ್ಡಿಯುಂಟಾಗುತ್ತದೆ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.