ETV Bharat / bharat

'ಶಾರುಖ್ ಖಾನ್ ಅಯೋಧ್ಯೆ ವಿವಾದದ ಮಧ್ಯಸ್ಥಿಕೆ ಸಮಿತಿ ಭಾಗವಾಗಲು ನ್ಯಾ. ಬೋಬ್ಡೆ ಬಯಸಿದ್ದರು' - Ayodhya Dispute

ರಾಮಜನ್ಮ ಭೂಮಿ ಪ್ರಕರಣದ ಆರಂಭಿಕ ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿ ಬೋಡ್ಡೆ ಅವರು, ಶಾರುಖ್ ಖಾನ್ ಮಧ್ಯಸ್ಥಿಕೆ ಸಮಿತಿಯ ಭಾಗವಾಗಬೇಕೆಂದು ಬಯಸಿದ್ದರು ಎಂದು ವಕೀಲ ವಿಕಾಸ್ ಸಿಂಗ್ ಹೇಳಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

Ayodhya Dispute Mediation Committee
ಅಯೋಧ್ಯೆ ವಿವಾದದ ಮಧ್ಯಸ್ಥಿಕೆ ಸಮಿತಿ
author img

By

Published : Apr 24, 2021, 9:19 AM IST

ನವದೆಹಲಿ : ಬಾಲಿವುಡ್ ನಟ ಶಾರುಖ್ ಖಾನ್ ರಾಮಜನ್ಮ ಭೂಮಿ-ಬಾಬರಿ ಮಸೀದಿ ವಿವಾದದ ಮಧ್ಯಸ್ಥಿಕೆ ಪ್ರಕ್ರಿಯೆಯ ಭಾಗವಾಗಬೇಕೆಂದು ಮುಖ್ಯ ನ್ಯಾಯಮೂರ್ತಿ ಬಯಸಿದ್ದರು ಎಂದು, ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಆಗಿದ್ದ ಎಸ್.ಎ. ಬೋಬ್ಡೆ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಸುಪ್ರೀಂಕೋರ್ಟ್​ನ ಹಿರಿಯ ವಕೀಲ ವಿಕಾಸ್ ಸಿಂಗ್ ಹೇಳಿದ್ದಾರೆ.

ನ್ಯಾಯಮೂರ್ತಿ ಬೋಬ್ಡೆ ಅವರು ಅಯೋಧ್ಯೆಯ ವಿವಾದದ ವಿಚಾರಣೆ ನಡೆಸಿದ್ದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದ ಭಾಗವಾಗಿದ್ದರು. ಈ ಪೀಠ ಅಯೋಧ್ಯೆ ವಿವಾದವನ್ನು ಆಲಿಸಿ 2019 ರಲ್ಲಿ ತನ್ನ ತೀರ್ಪನ್ನು ಪ್ರಕಟಿಸಿತ್ತು. ಪ್ರಕರಣದ ಆರಂಭಿಕ ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿ ಬೋಡ್ಡೆ ಅವರು, ಶಾರುಖ್ ಖಾನ್ ಮಧ್ಯಸ್ಥಿಕೆ ಸಮಿತಿಯ ಭಾಗವಾಗಬೇಕೆಂದು ಬಯಸಿದ್ದರು ಎಂದು ವಕೀಲ ಸಿಂಗ್ ತಿಳಿಸಿದ್ದಾರೆ.

ಓದಿ : ಕೊರೊನಾದಿಂದಾಗಿ ನಂಬಿಕೆ ಕಳೆದುಕೊಳ್ಳಬೇಡಿ; ನಿರ್ಗಮಿತ ಸಿಜೆಐ ಬೊಬ್ಡೆ

ಶಾರುಖ್ ಖಾನ್ ಕೂಡ ಮಧ್ಯಸ್ಥಿಕೆ ಸಮಿತಿಯಲ್ಲಿ ಸೇರಲು ಒಲವು ಹೊಂದಿದ್ದರು. ಆದರೆ ನಂತರ ಮಧ್ಯಸ್ಥಿಕೆ ಸಮಿತಿಯನ್ನು ರದ್ದುಪಡಿಸಲಾಯಿತು ಮತ್ತು ನ್ಯಾಯಾಲಯ ಈ ವಿಷಯವನ್ನು ವಿಚಾರಣೆಗೆ ತೆಗೆದುಕೊಂಡಿತು. ಅಯೋಧ್ಯೆ ವಿವಾದವನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಬೇಕು ನ್ಯಾಯಮೂರ್ತಿ ಬೋಬ್ಡೆ ಬಲವಾದ ಅಭಿಪ್ರಾಯ ಹೊಂದಿದ್ದರು ಎಂದು ಸಿಂಗ್ ಹೇಳಿದ್ದಾರೆ.

ನವದೆಹಲಿ : ಬಾಲಿವುಡ್ ನಟ ಶಾರುಖ್ ಖಾನ್ ರಾಮಜನ್ಮ ಭೂಮಿ-ಬಾಬರಿ ಮಸೀದಿ ವಿವಾದದ ಮಧ್ಯಸ್ಥಿಕೆ ಪ್ರಕ್ರಿಯೆಯ ಭಾಗವಾಗಬೇಕೆಂದು ಮುಖ್ಯ ನ್ಯಾಯಮೂರ್ತಿ ಬಯಸಿದ್ದರು ಎಂದು, ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಆಗಿದ್ದ ಎಸ್.ಎ. ಬೋಬ್ಡೆ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಸುಪ್ರೀಂಕೋರ್ಟ್​ನ ಹಿರಿಯ ವಕೀಲ ವಿಕಾಸ್ ಸಿಂಗ್ ಹೇಳಿದ್ದಾರೆ.

ನ್ಯಾಯಮೂರ್ತಿ ಬೋಬ್ಡೆ ಅವರು ಅಯೋಧ್ಯೆಯ ವಿವಾದದ ವಿಚಾರಣೆ ನಡೆಸಿದ್ದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದ ಭಾಗವಾಗಿದ್ದರು. ಈ ಪೀಠ ಅಯೋಧ್ಯೆ ವಿವಾದವನ್ನು ಆಲಿಸಿ 2019 ರಲ್ಲಿ ತನ್ನ ತೀರ್ಪನ್ನು ಪ್ರಕಟಿಸಿತ್ತು. ಪ್ರಕರಣದ ಆರಂಭಿಕ ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿ ಬೋಡ್ಡೆ ಅವರು, ಶಾರುಖ್ ಖಾನ್ ಮಧ್ಯಸ್ಥಿಕೆ ಸಮಿತಿಯ ಭಾಗವಾಗಬೇಕೆಂದು ಬಯಸಿದ್ದರು ಎಂದು ವಕೀಲ ಸಿಂಗ್ ತಿಳಿಸಿದ್ದಾರೆ.

ಓದಿ : ಕೊರೊನಾದಿಂದಾಗಿ ನಂಬಿಕೆ ಕಳೆದುಕೊಳ್ಳಬೇಡಿ; ನಿರ್ಗಮಿತ ಸಿಜೆಐ ಬೊಬ್ಡೆ

ಶಾರುಖ್ ಖಾನ್ ಕೂಡ ಮಧ್ಯಸ್ಥಿಕೆ ಸಮಿತಿಯಲ್ಲಿ ಸೇರಲು ಒಲವು ಹೊಂದಿದ್ದರು. ಆದರೆ ನಂತರ ಮಧ್ಯಸ್ಥಿಕೆ ಸಮಿತಿಯನ್ನು ರದ್ದುಪಡಿಸಲಾಯಿತು ಮತ್ತು ನ್ಯಾಯಾಲಯ ಈ ವಿಷಯವನ್ನು ವಿಚಾರಣೆಗೆ ತೆಗೆದುಕೊಂಡಿತು. ಅಯೋಧ್ಯೆ ವಿವಾದವನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಬೇಕು ನ್ಯಾಯಮೂರ್ತಿ ಬೋಬ್ಡೆ ಬಲವಾದ ಅಭಿಪ್ರಾಯ ಹೊಂದಿದ್ದರು ಎಂದು ಸಿಂಗ್ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.