ETV Bharat / bharat

ಮಳೆಯ ಅಬ್ಬರಕ್ಕೆ ನದಿಯಂತಾದ ಧರ್ಮಾಶಾಲಾ : ಕೊಚ್ಚಿಹೋದ ಕಾರುಗಳು - ಹಿಮಾಚಲ ಪ್ರದೇಶ ಮಳೆ ಸುದ್ದಿ

ಮಳೆ ನೀರು ವಸತಿ ಪ್ರದೇಶಗಳಿಗೆ ನುಗ್ಗುತ್ತಿರುವುದರಿಂದ ಜನರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದ್ರೆ, ಇತ್ತ ವ್ಯಾಪಕ ಮಳೆ ಬಂದಿದ್ದಕ್ಕೆ ಮೆಕ್ಕೆಜೋಳ ಬೆಳೆದ ರೈತರು ಸಂತಸಗೊಂಡಿದ್ದಾರೆ..

swept away
ಕೊಚ್ಚಿಹೋದ ಕಾರುಗಳು
author img

By

Published : Jul 12, 2021, 1:38 PM IST

ಧರ್ಮಶಾಲಾ : ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಭಾನುವಾರ ತಡರಾತ್ರಿಯಿಂದ ಕಾಂಗ್ರಾ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ, ಪ್ರವಾಸಿ ಪಟ್ಟಣವಾದ ಧರ್ಮಶಾಲಾದ ಭಗ್ಸುನಾಗ್‌ನಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದಾಗಿ ಪಟ್ಟಣ ನದಿಯಾಗಿ ಮಾರ್ಪಟ್ಟಿದೆ.

ಮಳೆನೀರಿನ ರಭಸಕ್ಕೆ ವಾಹನಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಭಾರಿ ಮಳೆಯಿಂದಾಗಿ ಚರಂಡಿ ಪಕ್ಕದಲ್ಲಿ ನಿರ್ಮಿಸಲಾದ ಮನೆಗಳು ಮತ್ತು ಹೋಟೆಲ್‌ಗಳು, ಮಾರುಕಟ್ಟೆಗಳಿಗೆ ಸಾಕಷ್ಟು ಹಾನಿಯಾಗಿದೆ.

ಕೊಚ್ಚಿಹೋದ ಕಾರುಗಳು

ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಧಾವಿಸಿದ್ದಾರೆ. ಡಿಸಿ ನಿಪುಣ್​ ಜಿಂದಾಲ್ ಸಹ ಸ್ಥಳಕ್ಕೆ ಆಗಮಿಸಿದ್ದು, ನದಿ ಚರಂಡಿಗಳಿರುವ ಪ್ರದೇಶದಿಂದ ದೂರ ತೆರಳಲು ಪ್ರವಾಸಿಗರು ಮತ್ತು ಸ್ಥಳೀಯ ಜನರಿಗೆ ಮನವಿ ಮಾಡಿದ್ದಾರೆ.

ಮಳೆ ನೀರು ವಸತಿ ಪ್ರದೇಶಗಳಿಗೆ ನುಗ್ಗುತ್ತಿರುವುದರಿಂದ ಜನರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದ್ರೆ, ಇತ್ತ ವ್ಯಾಪಕ ಮಳೆ ಬಂದಿದ್ದಕ್ಕೆ ಮೆಕ್ಕೆಜೋಳ ಬೆಳೆದ ರೈತರು ಸಂತಸಗೊಂಡಿದ್ದಾರೆ.

ಧರ್ಮಶಾಲಾ : ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಭಾನುವಾರ ತಡರಾತ್ರಿಯಿಂದ ಕಾಂಗ್ರಾ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ, ಪ್ರವಾಸಿ ಪಟ್ಟಣವಾದ ಧರ್ಮಶಾಲಾದ ಭಗ್ಸುನಾಗ್‌ನಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದಾಗಿ ಪಟ್ಟಣ ನದಿಯಾಗಿ ಮಾರ್ಪಟ್ಟಿದೆ.

ಮಳೆನೀರಿನ ರಭಸಕ್ಕೆ ವಾಹನಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಭಾರಿ ಮಳೆಯಿಂದಾಗಿ ಚರಂಡಿ ಪಕ್ಕದಲ್ಲಿ ನಿರ್ಮಿಸಲಾದ ಮನೆಗಳು ಮತ್ತು ಹೋಟೆಲ್‌ಗಳು, ಮಾರುಕಟ್ಟೆಗಳಿಗೆ ಸಾಕಷ್ಟು ಹಾನಿಯಾಗಿದೆ.

ಕೊಚ್ಚಿಹೋದ ಕಾರುಗಳು

ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಧಾವಿಸಿದ್ದಾರೆ. ಡಿಸಿ ನಿಪುಣ್​ ಜಿಂದಾಲ್ ಸಹ ಸ್ಥಳಕ್ಕೆ ಆಗಮಿಸಿದ್ದು, ನದಿ ಚರಂಡಿಗಳಿರುವ ಪ್ರದೇಶದಿಂದ ದೂರ ತೆರಳಲು ಪ್ರವಾಸಿಗರು ಮತ್ತು ಸ್ಥಳೀಯ ಜನರಿಗೆ ಮನವಿ ಮಾಡಿದ್ದಾರೆ.

ಮಳೆ ನೀರು ವಸತಿ ಪ್ರದೇಶಗಳಿಗೆ ನುಗ್ಗುತ್ತಿರುವುದರಿಂದ ಜನರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದ್ರೆ, ಇತ್ತ ವ್ಯಾಪಕ ಮಳೆ ಬಂದಿದ್ದಕ್ಕೆ ಮೆಕ್ಕೆಜೋಳ ಬೆಳೆದ ರೈತರು ಸಂತಸಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.