ETV Bharat / bharat

80,039 ಸರ್ಕಾರಿ ಹುದ್ದೆಗಳಿಗೆ ಅಧಿವೇಶನದಲ್ಲೇ ಅಧಿಸೂಚನೆ ಹೊರಡಿಸಿದ ಸಿಎಂ ಕೆಸಿಆರ್

author img

By

Published : Mar 9, 2022, 12:55 PM IST

Updated : Mar 9, 2022, 1:55 PM IST

ತೆಲಂಗಾಣ ಬಜೆಟ್​​ ಅಧಿವೇಶನದಲ್ಲಿ ಭಾಗಿಯಾಗಿ ಮಾತನಾಡಿದ ಮುಖ್ಯಮಂತ್ರಿ ಕೆಸಿಆರ್​​ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗಿಫ್ಟ್ ನೀಡಿದ್ದು, 80,039 ಸರ್ಕಾರಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದಾರೆ.

CM KCR ANNOUNCED ON GOVERNMENT JOB
CM KCR ANNOUNCED ON GOVERNMENT JOB

ಹೈದರಾಬಾದ್​​(ತೆಲಂಗಾಣ): ತೆಲಂಗಾಣದಲ್ಲಿ ಬಜೆಟ್​ ಅಧಿವೇಶನ ಆರಂಭಗೊಂಡಿದ್ದು, ಬಜೆಟ್​ ಮಂಡನೆ ವೇಳೆ ರೈತರಿಗೆ ಭರ್ಜರಿ ಉಡುಗೊರೆ ನೀಡಿದ್ದ ಮುಖ್ಯಮಂತ್ರಿ ಕೆಸಿಆರ್ ಇದೀಗ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​ ನೀಡಿದ್ದಾರೆ.

CM KCR ANNOUNCED ON GOVERNMENT JOB
ಅಧಿವೇಶನದಲ್ಲೇ ಸರ್ಕಾರಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ ಸಿಎಂ

ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗಿ ಮಾತನಾಡಿರುವ ಮುಖ್ಯಮಂತ್ರಿ ಕೆಸಿಆರ್​, ರಾಜ್ಯಾದ್ಯಂತ 91,142 ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಈ ಪೈಕಿ 80,039 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದರು. ಉಳಿದ 11,103 ಹುದ್ದೆಗಳಿಗೆ ಗುತ್ತಿಗೆ ನೌಕರರನ್ನು ಖಾಯಂಗೊಳಿಸಲಾಗುವುದು ಎಂಬ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ ನೀಡಿದ್ದಾರೆ.

ಇದನ್ನೂ ಓದಿರಿ: ₹50 ಸಾವಿರಕ್ಕಿಂತ ಕಡಿಮೆ ಇರುವ ರೈತರ ಸಾಲ ಮನ್ನಾ: ಕೆಸಿಆರ್‌ ಸರ್ಕಾರದ ಘೋಷಣೆ

ಶೇ. 95ರಷ್ಟು ಸ್ಥಳೀಯ ಅಭ್ಯರ್ಥಿಗಳಿಗೆ ಕೆಲಸ ನೀಡಲು ನಿರ್ಧರಿಸಲಾಗಿದೆ ಎಂದಿರುವ ಸಿಎಂ, ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಹೆಚ್ಚಿಸಲಾಗಿದೆ ಎಂದರು. ಇತರ ವರ್ಗದ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 44 ವರ್ಷ, ಎಸ್​​​ಸಿ, ಎಸ್​ಟಿ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ವಯೋಮಿತಿ 49 ವರ್ಷಕ್ಕೆ ಏರಿಕೆ ಮಾಡಲಗಿದೆ ಎಂದಿರುವ ಸಿಎಂ, ದಿವ್ಯಾಂಗ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 54ಕ್ಕೆ ಏರಿಕೆ ಮಾಡಲಾಗಿದೆ ಎಂದರು.

50 ಸಾವಿರ ರೂವರೆಗೆ ಸಾಲ ಮನ್ನಾ: ರಾಜ್ಯದ ರೈತರು ಮಾಡಿರುವ 50 ಸಾವಿರ ರೂಗಿಂತಲೂ ಕಡಿಮೆ ಸಾಲ ಮನ್ನಾ ಮಾಡಲಾಗುವುದು. 2022-23ರಲ್ಲಿ ಬೆಳೆ ಸಾಲಕ್ಕಾಗಿ 16,144 ಕೋಟಿ ರೂ. ಮೀಸಲಿಡಲಾಗಿದ್ದು, ಒಟ್ಟು 5.12 ಲಕ್ಷ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ತಿಳಿಸಿದರು. ಜೊತೆಗೆ ಮುಂದಿನ ಆರ್ಥಿಕ ವರ್ಷದಲ್ಲಿ 75 ಸಾವಿರ ರೂ.ಗಿಂತಲೂ ಕಡಿಮೆ ಸಾಲ ಹೊಂದಿರುವವರ ಸಾಲ ಮನ್ನಾ ಮಾಡುವುದಾಗಿ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವ ಹರೀಶ್ ರಾವ್ ತಿಳಿಸಿದ್ದಾರೆ.

ಹೈದರಾಬಾದ್​​(ತೆಲಂಗಾಣ): ತೆಲಂಗಾಣದಲ್ಲಿ ಬಜೆಟ್​ ಅಧಿವೇಶನ ಆರಂಭಗೊಂಡಿದ್ದು, ಬಜೆಟ್​ ಮಂಡನೆ ವೇಳೆ ರೈತರಿಗೆ ಭರ್ಜರಿ ಉಡುಗೊರೆ ನೀಡಿದ್ದ ಮುಖ್ಯಮಂತ್ರಿ ಕೆಸಿಆರ್ ಇದೀಗ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​ ನೀಡಿದ್ದಾರೆ.

CM KCR ANNOUNCED ON GOVERNMENT JOB
ಅಧಿವೇಶನದಲ್ಲೇ ಸರ್ಕಾರಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ ಸಿಎಂ

ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗಿ ಮಾತನಾಡಿರುವ ಮುಖ್ಯಮಂತ್ರಿ ಕೆಸಿಆರ್​, ರಾಜ್ಯಾದ್ಯಂತ 91,142 ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಈ ಪೈಕಿ 80,039 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದರು. ಉಳಿದ 11,103 ಹುದ್ದೆಗಳಿಗೆ ಗುತ್ತಿಗೆ ನೌಕರರನ್ನು ಖಾಯಂಗೊಳಿಸಲಾಗುವುದು ಎಂಬ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ ನೀಡಿದ್ದಾರೆ.

ಇದನ್ನೂ ಓದಿರಿ: ₹50 ಸಾವಿರಕ್ಕಿಂತ ಕಡಿಮೆ ಇರುವ ರೈತರ ಸಾಲ ಮನ್ನಾ: ಕೆಸಿಆರ್‌ ಸರ್ಕಾರದ ಘೋಷಣೆ

ಶೇ. 95ರಷ್ಟು ಸ್ಥಳೀಯ ಅಭ್ಯರ್ಥಿಗಳಿಗೆ ಕೆಲಸ ನೀಡಲು ನಿರ್ಧರಿಸಲಾಗಿದೆ ಎಂದಿರುವ ಸಿಎಂ, ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಹೆಚ್ಚಿಸಲಾಗಿದೆ ಎಂದರು. ಇತರ ವರ್ಗದ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 44 ವರ್ಷ, ಎಸ್​​​ಸಿ, ಎಸ್​ಟಿ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ವಯೋಮಿತಿ 49 ವರ್ಷಕ್ಕೆ ಏರಿಕೆ ಮಾಡಲಗಿದೆ ಎಂದಿರುವ ಸಿಎಂ, ದಿವ್ಯಾಂಗ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 54ಕ್ಕೆ ಏರಿಕೆ ಮಾಡಲಾಗಿದೆ ಎಂದರು.

50 ಸಾವಿರ ರೂವರೆಗೆ ಸಾಲ ಮನ್ನಾ: ರಾಜ್ಯದ ರೈತರು ಮಾಡಿರುವ 50 ಸಾವಿರ ರೂಗಿಂತಲೂ ಕಡಿಮೆ ಸಾಲ ಮನ್ನಾ ಮಾಡಲಾಗುವುದು. 2022-23ರಲ್ಲಿ ಬೆಳೆ ಸಾಲಕ್ಕಾಗಿ 16,144 ಕೋಟಿ ರೂ. ಮೀಸಲಿಡಲಾಗಿದ್ದು, ಒಟ್ಟು 5.12 ಲಕ್ಷ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ತಿಳಿಸಿದರು. ಜೊತೆಗೆ ಮುಂದಿನ ಆರ್ಥಿಕ ವರ್ಷದಲ್ಲಿ 75 ಸಾವಿರ ರೂ.ಗಿಂತಲೂ ಕಡಿಮೆ ಸಾಲ ಹೊಂದಿರುವವರ ಸಾಲ ಮನ್ನಾ ಮಾಡುವುದಾಗಿ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವ ಹರೀಶ್ ರಾವ್ ತಿಳಿಸಿದ್ದಾರೆ.

Last Updated : Mar 9, 2022, 1:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.