ETV Bharat / bharat

ಲಾಕ್​ಡೌನ್​ಗೆ ಮಹಾರಾಷ್ಟ್ರ ಸಚಿವರ ಪ್ರಸ್ತಾಪ: ನಾಳೆಯ ಸರ್ಪಪಕ್ಷ ಸಭೆಯಲ್ಲಿ ಅಂತಿಮ ನಿರ್ಧಾರ!

author img

By

Published : Apr 9, 2021, 6:39 PM IST

ಎರಡನೇ ಹಂತದ ಕೋವಿಡ್ ಅಲೆ ಮಹಾರಾಷ್ಟ್ರದಲ್ಲಿ ಜೋರಾಗಿದ್ದು, ಇದರ ಮಧ್ಯೆ ಉದ್ಧವ್​ ಠಾಕ್ರೆ ನಾಳೆ ಸರ್ವಪಕ್ಷ ಸಭೆ ಕರೆದಿದ್ದು, ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

CM Uddhav Thackeray
CM Uddhav Thackeray

ಮುಂಬೈ: ಮಹಾರಾಷ್ಟ್ರದಲ್ಲಿ ಎರಡನೇ ಹಂತದ ಕೋವಿಡ್​ ಅಲೆ ಜೋರಾಗಿ ಬೀಸಲು ಶುರುವಾಗಿದ್ದು, ಈಗಾಗಲೇ ನಿತ್ಯ ಮೀತಿ ಮೀರಿ ಕೊರೊನಾ ಸೋಂಕಿತ ಪ್ರಕರಣ ದಾಖಲಾಗುತ್ತಿವೆ. ಹೀಗಾಗಿ ಈಗಾಗಲೇ ರಾಜ್ಯಾದ್ಯಂತ ನೈಟ್​ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ಇದೀಗ ಲಾಕ್​ಡೌನ್​​ಗೆ ಸಂಬಂಧಿಸಿದಂತೆ ನಾಳೆ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಮಹಾರಾಷ್ಟ್ರದ ವಿಪತ್ತು ನಿರ್ವಹಣಾ ಸಚಿವ ವಿಜಯ್​ ವಾಡೆಟ್ಟಿವಾರ್​​ ಮಾತನಾಡಿದ್ದು, ರಾಜ್ಯದಲ್ಲಿ ಸಂಪೂರ್ಣ ಲಾಕ್​ಡೌನ್​​ ಘೋಷಣೆ ಮಾಡಲು ಪ್ರಸ್ತಾಪ ಮಾಡಲಾಗಿದ್ದು, ಇದೇ ವಿಚಾರವಾಗಿ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನಾಳೆ ಸರ್ವಪಕ್ಷ ಸಭೆ ಕರೆದಿದ್ದಾರೆ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಪ್ರತಿದಿನ 50 ರಿಂದ 60 ಸಾವಿರ ಕೋವಿಡ್​ ಕೇಸ್​ ದಾಖಲಾಗುತ್ತಿದ್ದು, ಸದ್ಯ ರಾಜ್ಯದಲ್ಲಿ 5.31 ಸಕ್ರಿಯ ಪ್ರಕರಣಗಳಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಶೀಘ್ರದಲ್ಲೇ 10 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣ ಹೊಂದಲಿದ್ದೇವೆ. ಆದರೆ ಈ ಪರಿಸ್ಥಿತಿ ತಪ್ಪಿಸಲು ಇದೀಗ ಜನಸಂದಣಿ ಕಡಿಮೆ ಮಾಡುವ ಅವಶ್ಯಕತೆ ಇದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಸಿವು ತಾಳಲಾಗದೇ ಊಟ ಮಾಡಿ ಬಿಸಾಡಿದ ಫ್ಲೇಟ್ ನೆಕ್ಕಿದ ಬಾಲಕ... ವಿಡಿಯೋ ವೈರಲ್​!

ಈ ಜನಸಂದಣಿ ಸರಪಳಿ ಮುರಿಯಬೇಕಾದರೆ ಅರ್ಧದಷ್ಟು ಅಂಗಡಿ, ಸಂಸ್ಥೆ ತೆರೆದಿಡಲು ಸಾಧ್ಯವಿಲ್ಲ. ಮೂರು ವಾರಗಳ ಕಾಲ ಕಟ್ಟುನಿಟ್ಟಾದ ಲಾಕ್​ಡೌನ್​ ಘೋಷಣೆ ಮಾಡಲು ಈಗಾಗಲೇ ಪ್ರಸ್ತಾಪ ಮಾಡಲಾಗಿದೆ ಎಂದಿದ್ದಾರೆ.

ನಾಳೆ ಸರ್ವಪಕ್ಷ ಸಭೆ: ಇದೇ ವಿಚಾರವಾಗಿ ನಾಳೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ವಪಕ್ಷ ಸಭೆ ಕರೆದಿದ್ದು, ರಾಜ್ಯದಲ್ಲಿ ಲಾಕ್​ಡೌನ್​ ಹೇರಿಕೆ ಮಾಡುವ ಕುರಿತು ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಕೊರೊನಾ ವೈರಸ್​ ಹಾವಳಿ ಹೆಚ್ಚಾಗಿರುವ ಕಾರಣ ಮಹಾರಾಷ್ಟ್ರ ಈಗಾಗಲೇ ಕೆಲವೊಂದು ಮಹತ್ವದ ನಿರ್ಧಾರ ಕೈಗೊಂಡಿರುವುದು ಗಮನಾರ್ಹ.

ಮುಂಬೈ: ಮಹಾರಾಷ್ಟ್ರದಲ್ಲಿ ಎರಡನೇ ಹಂತದ ಕೋವಿಡ್​ ಅಲೆ ಜೋರಾಗಿ ಬೀಸಲು ಶುರುವಾಗಿದ್ದು, ಈಗಾಗಲೇ ನಿತ್ಯ ಮೀತಿ ಮೀರಿ ಕೊರೊನಾ ಸೋಂಕಿತ ಪ್ರಕರಣ ದಾಖಲಾಗುತ್ತಿವೆ. ಹೀಗಾಗಿ ಈಗಾಗಲೇ ರಾಜ್ಯಾದ್ಯಂತ ನೈಟ್​ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ಇದೀಗ ಲಾಕ್​ಡೌನ್​​ಗೆ ಸಂಬಂಧಿಸಿದಂತೆ ನಾಳೆ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಮಹಾರಾಷ್ಟ್ರದ ವಿಪತ್ತು ನಿರ್ವಹಣಾ ಸಚಿವ ವಿಜಯ್​ ವಾಡೆಟ್ಟಿವಾರ್​​ ಮಾತನಾಡಿದ್ದು, ರಾಜ್ಯದಲ್ಲಿ ಸಂಪೂರ್ಣ ಲಾಕ್​ಡೌನ್​​ ಘೋಷಣೆ ಮಾಡಲು ಪ್ರಸ್ತಾಪ ಮಾಡಲಾಗಿದ್ದು, ಇದೇ ವಿಚಾರವಾಗಿ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನಾಳೆ ಸರ್ವಪಕ್ಷ ಸಭೆ ಕರೆದಿದ್ದಾರೆ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಪ್ರತಿದಿನ 50 ರಿಂದ 60 ಸಾವಿರ ಕೋವಿಡ್​ ಕೇಸ್​ ದಾಖಲಾಗುತ್ತಿದ್ದು, ಸದ್ಯ ರಾಜ್ಯದಲ್ಲಿ 5.31 ಸಕ್ರಿಯ ಪ್ರಕರಣಗಳಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಶೀಘ್ರದಲ್ಲೇ 10 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣ ಹೊಂದಲಿದ್ದೇವೆ. ಆದರೆ ಈ ಪರಿಸ್ಥಿತಿ ತಪ್ಪಿಸಲು ಇದೀಗ ಜನಸಂದಣಿ ಕಡಿಮೆ ಮಾಡುವ ಅವಶ್ಯಕತೆ ಇದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಸಿವು ತಾಳಲಾಗದೇ ಊಟ ಮಾಡಿ ಬಿಸಾಡಿದ ಫ್ಲೇಟ್ ನೆಕ್ಕಿದ ಬಾಲಕ... ವಿಡಿಯೋ ವೈರಲ್​!

ಈ ಜನಸಂದಣಿ ಸರಪಳಿ ಮುರಿಯಬೇಕಾದರೆ ಅರ್ಧದಷ್ಟು ಅಂಗಡಿ, ಸಂಸ್ಥೆ ತೆರೆದಿಡಲು ಸಾಧ್ಯವಿಲ್ಲ. ಮೂರು ವಾರಗಳ ಕಾಲ ಕಟ್ಟುನಿಟ್ಟಾದ ಲಾಕ್​ಡೌನ್​ ಘೋಷಣೆ ಮಾಡಲು ಈಗಾಗಲೇ ಪ್ರಸ್ತಾಪ ಮಾಡಲಾಗಿದೆ ಎಂದಿದ್ದಾರೆ.

ನಾಳೆ ಸರ್ವಪಕ್ಷ ಸಭೆ: ಇದೇ ವಿಚಾರವಾಗಿ ನಾಳೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ವಪಕ್ಷ ಸಭೆ ಕರೆದಿದ್ದು, ರಾಜ್ಯದಲ್ಲಿ ಲಾಕ್​ಡೌನ್​ ಹೇರಿಕೆ ಮಾಡುವ ಕುರಿತು ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಕೊರೊನಾ ವೈರಸ್​ ಹಾವಳಿ ಹೆಚ್ಚಾಗಿರುವ ಕಾರಣ ಮಹಾರಾಷ್ಟ್ರ ಈಗಾಗಲೇ ಕೆಲವೊಂದು ಮಹತ್ವದ ನಿರ್ಧಾರ ಕೈಗೊಂಡಿರುವುದು ಗಮನಾರ್ಹ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.