ರಾಣಿಗಂಜ್ (ಪಶ್ಚಿಮ ಬಂಗಾಳ): ಕಲ್ಲಿದ್ದಲು ಗಣಿ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ್ ಬರ್ಧಮಾನ್ ಜಿಲ್ಲೆಯ ರಾಣಿಗಂಜ್ನಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಮೂರು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ನಾರಾಯಣಕುರಿಯ ಈಸ್ಟರ್ನ್ ಕೋಲ್ಫೀಲ್ಡ್ ಲಿಮಿಟೆಡ್ನಲ್ಲಿ (ಇಸಿಎಲ್) ಗಣಿ ಕುಸಿದಿದೆ. ಈಗಾಗಲೇ ಮೂರು ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಸನ್ಸೋಲ್ ದುರ್ಗಾಪುರ ಉಪ ಪೊಲೀಸ್ ಆಯುಕ್ತ ಎಸ್.ಎಸ್.ಕುಲದೀಪ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಮತ್ತೊಂದೆಡೆ, ಏಳು ಜನರ ಶವಗಳು ಪತ್ತೆಯಾಗಿವೆ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ ಎಂದು ಬಿಜೆಪಿ ಶಾಸಕಿ ಅಗ್ನಿಮಿತ್ರ ಪಾಲ್ ಹೇಳಿದ್ದಾರೆ. ಇದರಿಂದಾಗಿ ಮೃತರ ಸಂಖ್ಯೆಯ ಬಗ್ಗೆ ಸದ್ಯಕ್ಕೆ ಗೊಂದಲವಿದೆ.