ETV Bharat / bharat

ಮೂರು ತಲೆಮಾರುಗಳಿಂದಲೂ ದೇಶ ಸೇವೆ.. ಅಜ್ಜ, ತಂದೆಯ ಹಾದಿಯಲ್ಲಿ ಸಾಗಿದ್ದ ಹುತಾತ್ಮ ಕರ್ನಲ್​​ ಮನ್​ಪ್ರೀತ್​ ಸಿಂಗ್​

author img

By ETV Bharat Karnataka Team

Published : Sep 14, 2023, 1:43 PM IST

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕರ್ನಲ್​​ ಮನ್​ಪ್ರೀತ್​ ಸಿಂಗ್​ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ತಮ್ಮ ಕುಟುಂಬದ ಮೂರನೇ ತಲೆಮಾರಿನ ಕುಡಿಯಾಗಿದ್ದಾರೆ.

Colonel Manpreet Singh, a third-generation Soldier, killed in heroic encounter with terrorists in Anantnag
ಮೂರು ತಲೆಮಾರುಗಳಿಂದಲೂ ದೇಶ ಸೇವೆ... ಅಜ್ಜ, ತಂದೆಯಲ್ಲಿ ಹಾದಿಯಲ್ಲಿ ಸಾಗಿದ್ದ ಹುತಾತ್ಮ ಕರ್ನಲ್​​ ಮನ್​ಪ್ರೀತ್​ ಸಿಂಗ್​

ಅನಂತನಾಗ್ (ಜಮ್ಮು ಮತ್ತು ಕಾಶ್ಮೀರ): ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಬುಧವಾರ ಭಾರತೀಯ ಸೇನೆಯ ಮೂವರು ಹಿರಿಯ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಇದರಲ್ಲಿ ಕರ್ನಲ್​​ ಮನ್​ಪ್ರೀತ್​ ಸಿಂಗ್​ ಕೂಡ ಒಬ್ಬರರಾಗಿದ್ದು, ಇವರ ನಿವೃತ್ತಿಗೆ ಕೇವಲ ನಾಲ್ಕು ತಿಂಗಳ ಮಾತ್ರ ಬಾಕಿ ಇತ್ತು. ಹರಿಯಾಣ ಮೂಲದ ಕರ್ನಲ್​ ಮನ್​ಪ್ರೀತ್​ ಅವರ ಕುಟುಂಬವು ಮೂರು ತಲೆಮಾರುಗಳಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದೆ. ಇವರ ನಿಧನದಿಂದ ಹುಟ್ಟೂರು ಶೋಕ ಸಾಗರದಲ್ಲಿ ಮುಳುಗಿದೆ.

ಇದನ್ನೂ ಓದಿ: ಹುತಾತ್ಮ ಮಗನಿಗೆ ತಂದೆಯ ವೀರನಮನ; ಮೆಚ್ಚುಗೆಗೆ ಪಾತ್ರವಾದ ನಿವೃತ್ತ ಐಜಿಪಿಯ ದೃಢತೆ

19ನೇ ರಾಷ್ಟ್ರೀಯ ರೈಫಲ್ಸ್‌ನ ಕರ್ನಲ್​ ಆಗಿದ್ದ ಮನ್‌ಪ್ರೀತ್ ಸಿಂಗ್ ಅನಂತನಾಗ್‌ನಲ್ಲಿ ಉಂಟಾದ ಭಯೋತ್ಪಾದಕರೊಂದಿಗಿನ ಭೀಕರ ಎನ್‌ಕೌಂಟರ್‌ನಲ್ಲಿ ತಮ್ಮ ಪ್ರಾಣ ಅರ್ಪಿಸಿದ್ದಾರೆ. ಇವರ ಸಾವಿನ ಸುದ್ದಿಯು ಅವರ ಹುಟ್ಟೂರಾದ ಹರಿಯಾಣದ ಪಂಚಕುಲ ಮತ್ತು ಸಮೀಪದ ಪಂಜಾಬ್‌ನ ಮೊಹಾಲಿಯ ಮೂಲ ಗ್ರಾಮದಲ್ಲಿ ದುಃಖದ ಛಾಯೆ ಆವರಿಸಿದೆ. ಇಂದು ಈ ವೀರ ಯೋಧನ ಪಾರ್ಥಿವ ಶರೀರವನ್ನು ಮೊಹಾಲಿ ಜಿಲ್ಲೆಯ ಭಂಜೋರಿಯಾ ಎಂಬ ಅವರ ಪೂರ್ವಜರ ಗ್ರಾಮಕ್ಕೆ ಸ್ಥಳಾಂತರ ಮಾಡಲಾಗುತ್ತದೆ.

ಕರ್ನಲ್ ಮನ್‌ಪ್ರೀತ್​ ಸಿಂಗ್ ಕುಟುಂಬವು ದೇಶ ಸೇವೆಯ ಪರಂಪರೆಯನ್ನೇ ಹೊಂದಿದೆ. ಇವರು ಸಿಂಗ್ ಕುಟುಂಬದ ಹೆಮ್ಮೆಯ ಕುಡಿಯಾಗಿದ್ದರು. ತಮ್ಮ ಅಜ್ಜ ಶೀತಲ್ ಸಿಂಗ್, ತಂದೆ ದಿವಂಗತ ಲಖ್ಮೀರ್ ಸಿಂಗ್ ಹಾಗೂ ಚಿಕ್ಕಪ್ಪ ರಂಜಿತ್ ಸಿಂಗ್​ ಅವರ ಹಾದಿಯಲ್ಲೇ ಮನ್​ಪ್ರೀತ್ ಕೂಡ ಆಗಿದ್ದರು. ಇವರೆಲ್ಲರೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸೇನೆಯಿಂದ ನಿವೃತ್ತರಾದ ನಂತರ ಮನ್‌ಪ್ರೀತ್ ಸಿಂಗ್ ಅವರ ತಂದೆ ಪಂಜಾಬ್ ವಿಶ್ವವಿದ್ಯಾನಿಲಯದಲ್ಲಿ ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಮೂಲಕ ವಿವಿ ಭದ್ರತೆಗೆ ತಮ್ಮ ಬದ್ಧತೆ ಮುಂದುವರೆಸಿದ್ದರು. ಮತ್ತೊಂದೆಡೆ, ಪುತ್ರ ಮನ್‌ಪ್ರೀತ್​ ತಂದೆ ಮರಣದ ಸಮಯದಲ್ಲಿ ಭಾರತೀಯ ಸೇನೆಯಲ್ಲಿ ಸಕ್ರಿಯವಾಗಿ ದೇಶ ಸೇವೆಯಲ್ಲಿ ತೊಡಗಿದ್ದರು. ಈ ಮೂಲಕ ರಾಷ್ಟ್ರಕ್ಕೆ ತಮ್ಮ ಕುಟುಂಬದ ನಿಸ್ವಾರ್ಥ ಸಮರ್ಪಣೆಯ ಪರಂಪರೆಯನ್ನು ಮುಂದುವರೆಸಿದ್ದರು.

ಇದನ್ನೂ ಓದಿ: ಜಮ್ಮು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಡಿಎಸ್‌ಪಿ ಹುಮಾಯೂನ್ ಮುಜಾಮ್ಮಿಲ್ ಅಂತ್ಯಕ್ರಿಯೆ

ಕರ್ನಲ್ ಮನ್‌ಪ್ರೀತ್ ಸಿಂಗ್ ಅವರು ಪತ್ನಿ ಜಗ್‌ಮೀತ್ ಮತ್ತು ಇಬ್ಬರು ಮಕ್ಕಳು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹುತಾತ್ಮರಾದ ಸುದ್ದಿ ತಿಳಿದು ಇಡೀ ಕುಟುಂಬವು ದುಃಖದಲ್ಲಿ ಮುಳುಗಿದೆ. ಆರಂಭದಲ್ಲಿ ಮನ್​ಪೀತ್​ ಸಿಂಗ್​ ಅವರ ನಿಧನ ಸುದ್ದಿಯನ್ನು ಪತ್ನಿ ಮತ್ತು ಮಕ್ಕಳು ಕುಗ್ಗಿ ಹೋಗುತ್ತಾರೆ ಎಂಬ ಕಾರಣಕ್ಕೆ ತಿಳಿಸಿರಲಿಲ್ಲ. ಬದಲಿಗೆ ಗಾಯಗಳಾಗಿವೆ ಎಂದು ತಿಳಿಸಲಾಯಿತು. ರಾಷ್ಟ್ರೀಯ ರೈಫಲ್ಸ್‌ನಿಂದ ನಾಲ್ಕು ತಿಂಗಳಲ್ಲಿ ನಿವೃತ್ತಿ ಹೊಂದಿ ಮನೆಗೆ ಹೋಗಿದ್ದ ಮನ್​ಪ್ರೀತ್​ ರಾಷ್ಟ್ರ ಸೇವೆಯಲ್ಲಿ ವೀರೋಚಿತ ಅಂತ್ಯವನ್ನು ಕಂಡಿದ್ದಾರೆ.

ಇದನ್ನೂ ಓದಿ: ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ: ಸೇನೆಯ ಕರ್ನಲ್, ಮೇಜರ್ ಸೇರಿ ಮೂವರು ಹುತಾತ್ಮ

ಅನಂತನಾಗ್ (ಜಮ್ಮು ಮತ್ತು ಕಾಶ್ಮೀರ): ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಬುಧವಾರ ಭಾರತೀಯ ಸೇನೆಯ ಮೂವರು ಹಿರಿಯ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಇದರಲ್ಲಿ ಕರ್ನಲ್​​ ಮನ್​ಪ್ರೀತ್​ ಸಿಂಗ್​ ಕೂಡ ಒಬ್ಬರರಾಗಿದ್ದು, ಇವರ ನಿವೃತ್ತಿಗೆ ಕೇವಲ ನಾಲ್ಕು ತಿಂಗಳ ಮಾತ್ರ ಬಾಕಿ ಇತ್ತು. ಹರಿಯಾಣ ಮೂಲದ ಕರ್ನಲ್​ ಮನ್​ಪ್ರೀತ್​ ಅವರ ಕುಟುಂಬವು ಮೂರು ತಲೆಮಾರುಗಳಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದೆ. ಇವರ ನಿಧನದಿಂದ ಹುಟ್ಟೂರು ಶೋಕ ಸಾಗರದಲ್ಲಿ ಮುಳುಗಿದೆ.

ಇದನ್ನೂ ಓದಿ: ಹುತಾತ್ಮ ಮಗನಿಗೆ ತಂದೆಯ ವೀರನಮನ; ಮೆಚ್ಚುಗೆಗೆ ಪಾತ್ರವಾದ ನಿವೃತ್ತ ಐಜಿಪಿಯ ದೃಢತೆ

19ನೇ ರಾಷ್ಟ್ರೀಯ ರೈಫಲ್ಸ್‌ನ ಕರ್ನಲ್​ ಆಗಿದ್ದ ಮನ್‌ಪ್ರೀತ್ ಸಿಂಗ್ ಅನಂತನಾಗ್‌ನಲ್ಲಿ ಉಂಟಾದ ಭಯೋತ್ಪಾದಕರೊಂದಿಗಿನ ಭೀಕರ ಎನ್‌ಕೌಂಟರ್‌ನಲ್ಲಿ ತಮ್ಮ ಪ್ರಾಣ ಅರ್ಪಿಸಿದ್ದಾರೆ. ಇವರ ಸಾವಿನ ಸುದ್ದಿಯು ಅವರ ಹುಟ್ಟೂರಾದ ಹರಿಯಾಣದ ಪಂಚಕುಲ ಮತ್ತು ಸಮೀಪದ ಪಂಜಾಬ್‌ನ ಮೊಹಾಲಿಯ ಮೂಲ ಗ್ರಾಮದಲ್ಲಿ ದುಃಖದ ಛಾಯೆ ಆವರಿಸಿದೆ. ಇಂದು ಈ ವೀರ ಯೋಧನ ಪಾರ್ಥಿವ ಶರೀರವನ್ನು ಮೊಹಾಲಿ ಜಿಲ್ಲೆಯ ಭಂಜೋರಿಯಾ ಎಂಬ ಅವರ ಪೂರ್ವಜರ ಗ್ರಾಮಕ್ಕೆ ಸ್ಥಳಾಂತರ ಮಾಡಲಾಗುತ್ತದೆ.

ಕರ್ನಲ್ ಮನ್‌ಪ್ರೀತ್​ ಸಿಂಗ್ ಕುಟುಂಬವು ದೇಶ ಸೇವೆಯ ಪರಂಪರೆಯನ್ನೇ ಹೊಂದಿದೆ. ಇವರು ಸಿಂಗ್ ಕುಟುಂಬದ ಹೆಮ್ಮೆಯ ಕುಡಿಯಾಗಿದ್ದರು. ತಮ್ಮ ಅಜ್ಜ ಶೀತಲ್ ಸಿಂಗ್, ತಂದೆ ದಿವಂಗತ ಲಖ್ಮೀರ್ ಸಿಂಗ್ ಹಾಗೂ ಚಿಕ್ಕಪ್ಪ ರಂಜಿತ್ ಸಿಂಗ್​ ಅವರ ಹಾದಿಯಲ್ಲೇ ಮನ್​ಪ್ರೀತ್ ಕೂಡ ಆಗಿದ್ದರು. ಇವರೆಲ್ಲರೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸೇನೆಯಿಂದ ನಿವೃತ್ತರಾದ ನಂತರ ಮನ್‌ಪ್ರೀತ್ ಸಿಂಗ್ ಅವರ ತಂದೆ ಪಂಜಾಬ್ ವಿಶ್ವವಿದ್ಯಾನಿಲಯದಲ್ಲಿ ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಮೂಲಕ ವಿವಿ ಭದ್ರತೆಗೆ ತಮ್ಮ ಬದ್ಧತೆ ಮುಂದುವರೆಸಿದ್ದರು. ಮತ್ತೊಂದೆಡೆ, ಪುತ್ರ ಮನ್‌ಪ್ರೀತ್​ ತಂದೆ ಮರಣದ ಸಮಯದಲ್ಲಿ ಭಾರತೀಯ ಸೇನೆಯಲ್ಲಿ ಸಕ್ರಿಯವಾಗಿ ದೇಶ ಸೇವೆಯಲ್ಲಿ ತೊಡಗಿದ್ದರು. ಈ ಮೂಲಕ ರಾಷ್ಟ್ರಕ್ಕೆ ತಮ್ಮ ಕುಟುಂಬದ ನಿಸ್ವಾರ್ಥ ಸಮರ್ಪಣೆಯ ಪರಂಪರೆಯನ್ನು ಮುಂದುವರೆಸಿದ್ದರು.

ಇದನ್ನೂ ಓದಿ: ಜಮ್ಮು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಡಿಎಸ್‌ಪಿ ಹುಮಾಯೂನ್ ಮುಜಾಮ್ಮಿಲ್ ಅಂತ್ಯಕ್ರಿಯೆ

ಕರ್ನಲ್ ಮನ್‌ಪ್ರೀತ್ ಸಿಂಗ್ ಅವರು ಪತ್ನಿ ಜಗ್‌ಮೀತ್ ಮತ್ತು ಇಬ್ಬರು ಮಕ್ಕಳು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹುತಾತ್ಮರಾದ ಸುದ್ದಿ ತಿಳಿದು ಇಡೀ ಕುಟುಂಬವು ದುಃಖದಲ್ಲಿ ಮುಳುಗಿದೆ. ಆರಂಭದಲ್ಲಿ ಮನ್​ಪೀತ್​ ಸಿಂಗ್​ ಅವರ ನಿಧನ ಸುದ್ದಿಯನ್ನು ಪತ್ನಿ ಮತ್ತು ಮಕ್ಕಳು ಕುಗ್ಗಿ ಹೋಗುತ್ತಾರೆ ಎಂಬ ಕಾರಣಕ್ಕೆ ತಿಳಿಸಿರಲಿಲ್ಲ. ಬದಲಿಗೆ ಗಾಯಗಳಾಗಿವೆ ಎಂದು ತಿಳಿಸಲಾಯಿತು. ರಾಷ್ಟ್ರೀಯ ರೈಫಲ್ಸ್‌ನಿಂದ ನಾಲ್ಕು ತಿಂಗಳಲ್ಲಿ ನಿವೃತ್ತಿ ಹೊಂದಿ ಮನೆಗೆ ಹೋಗಿದ್ದ ಮನ್​ಪ್ರೀತ್​ ರಾಷ್ಟ್ರ ಸೇವೆಯಲ್ಲಿ ವೀರೋಚಿತ ಅಂತ್ಯವನ್ನು ಕಂಡಿದ್ದಾರೆ.

ಇದನ್ನೂ ಓದಿ: ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ: ಸೇನೆಯ ಕರ್ನಲ್, ಮೇಜರ್ ಸೇರಿ ಮೂವರು ಹುತಾತ್ಮ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.