ETV Bharat / bharat

ನೈರುತ್ಯ ಮಾನ್ಸೂನ್ ಚುರುಕು​.. ಕರ್ನಾಟಕ ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಭಾರಿ ಮಳೆ ಸಾಧ್ಯತೆ

author img

By

Published : Jun 24, 2023, 8:19 AM IST

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ ಮತ್ತು ತೆಲಂಗಾಣದ ಕೆಲವು ಪ್ರದೇಶಗಳಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Conditions favourable for monsoon  very heavy rainfall  NW India soon  ವೇಗ ಪಡೆದಿರುವ ನೈರುತ್ಯ ಮಾನ್ಸೂನ್  ದೇಶದ ಇತರ ಭಾಗಗಳಲ್ಲಿ ಭಾರೀ ಮಳೆ  ಕರ್ನಾಟಕ ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಭಾರೀ ಮಳೆ  ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ  ಭಾರತೀಯ ಹವಾಮಾನ ಇಲಾಖೆ  ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯ ಸೂಚನೆ  ದೇಶದ ಇತರೆ ಭಾಗಗಳಲ್ಲಿ ಭಾರೀ ಮಳೆ
ವೇಗ ಪಡೆದಿರುವ ನೈರುತ್ಯ ಮಾನ್ಸೂನ್

ನವದೆಹಲಿ: ಮುಂದಿನ ನಾಲ್ಕೈದು ದಿನಗಳು ದೇಶದ ಇತರೆ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯ ಸೂಚನೆ ನೀಡಿದೆ. ನೈರುತ್ಯ ಮಾನ್ಸೂನ್‌ ಮಾರುತಗಳ ಚಲನವಲನಗಳ ಗಮನವಿಟ್ಟಿರುವ ಅವರು ಮಾರುತಗಳ ಪ್ರವೇಶ ವೇಗಗೊಳ್ಳುತ್ತಿದ್ದು, ಮುಂದಿನ ಎರಡು ದಿನಗಳ ಪರಿಸ್ಥಿತಿ ಅನುಕೂಲವಾಗಿದೆ ಎಂದು ಹೇಳಿದೆ.

ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಬಿಹಾರ ಸೇರಿ ಈ ಎಲ್ಲ ರಾಜ್ಯದ ಕೆಲ ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ.

ಮುಂದಿನ 3-4 ದಿನಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗುತ್ತಿವೆ. ಅಷ್ಟೇ ಅಲ್ಲ ಮುಂದಿನ ಐದು ದಿನಗಳಲ್ಲಿ ಪೂರ್ವ-ಮಧ್ಯ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

ಶುಕ್ರವಾರ ಹೊರಡಿಸಿದ ಹೇಳಿಕೆಯಲ್ಲಿ ಜೂನ್ 23 ರಿಂದ 26 ರ ಅವಧಿಯಲ್ಲಿ ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೂನ್ 23 ರಂದು ಅರುಣಾಚಲ ಪ್ರದೇಶ ಮತ್ತು ಬಿಹಾರದಲ್ಲಿ, ಜೂನ್ 23, 26 ಮತ್ತು 27 ರಂದು ಅಸ್ಸೋಂ ಮತ್ತು ಮೇಘಾಲಯದಲ್ಲಿ, ಜೂನ್ 23 ರಿಂದ 27 ರವರೆಗೆ ನಾಗಾಲ್ಯಾಂಡ್​, ಮಣಿಪುರ ಮತ್ತು ಮಿಜೋರಾಂದಲ್ಲಿ, ಜೂನ್ 23 ಮತ್ತು 26 ರಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ, ಜೂನ್ 25 ಮತ್ತು 26 ರಂದು ಜಾರ್ಖಂಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಇಲಾಖೆ ತಿಳಿಸಿದೆ.

ಜೂನ್ 23 ರಿಂದ 27 ರ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ. ಜೂನ್ 25 ರಿಂದ 27 ರ ಅವಧಿಯಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ ಮತ್ತು ಪೂರ್ವ ರಾಜಸ್ಥಾನದಲ್ಲಿ ಸಾಧಾರಣ ಮತ್ತು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಮುಂದಿನ ಐದು ದಿನಗಳಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿದರ್ಭದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಅಥವಾ ಧಾರಾಕಾರ ಮಳೆ, ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ. ಅಷ್ಟೇ ಅಲ್ಲ ಜೂನ್ 24 ರಂದು ಛತ್ತೀಸ್‌ಗಢದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

ಮಳೆ ಹಿನ್ನೆಲೆ ಸವಾರರು ವಾಹನವನ್ನು ಜಾಗೃತವಾಗಿ ಚಲಿಸುವುದು ಸೂಕ್ತ. ಹಳೆ ಮನೆ, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವುದು ಸೂಕ್ತ. ಸಾರ್ವಜನಿಕರು ಗಿಡ-ಮರಗಳ ಪಕ್ಕ ಜಾಗೃತವಾಗಿರಬೇಕು. ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆಯಿದ್ದು, ಜನರು ಜಾಗೃತವಾಗಿರಬೇಕೆಂದು ಈಟಿವಿ ಭಾರತ ವಿನಂತಿಸಿಕೊಳ್ಳುತ್ತಿದೆ.

ಓದಿ: ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ನವದೆಹಲಿ: ಮುಂದಿನ ನಾಲ್ಕೈದು ದಿನಗಳು ದೇಶದ ಇತರೆ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯ ಸೂಚನೆ ನೀಡಿದೆ. ನೈರುತ್ಯ ಮಾನ್ಸೂನ್‌ ಮಾರುತಗಳ ಚಲನವಲನಗಳ ಗಮನವಿಟ್ಟಿರುವ ಅವರು ಮಾರುತಗಳ ಪ್ರವೇಶ ವೇಗಗೊಳ್ಳುತ್ತಿದ್ದು, ಮುಂದಿನ ಎರಡು ದಿನಗಳ ಪರಿಸ್ಥಿತಿ ಅನುಕೂಲವಾಗಿದೆ ಎಂದು ಹೇಳಿದೆ.

ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಬಿಹಾರ ಸೇರಿ ಈ ಎಲ್ಲ ರಾಜ್ಯದ ಕೆಲ ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ.

ಮುಂದಿನ 3-4 ದಿನಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗುತ್ತಿವೆ. ಅಷ್ಟೇ ಅಲ್ಲ ಮುಂದಿನ ಐದು ದಿನಗಳಲ್ಲಿ ಪೂರ್ವ-ಮಧ್ಯ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

ಶುಕ್ರವಾರ ಹೊರಡಿಸಿದ ಹೇಳಿಕೆಯಲ್ಲಿ ಜೂನ್ 23 ರಿಂದ 26 ರ ಅವಧಿಯಲ್ಲಿ ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೂನ್ 23 ರಂದು ಅರುಣಾಚಲ ಪ್ರದೇಶ ಮತ್ತು ಬಿಹಾರದಲ್ಲಿ, ಜೂನ್ 23, 26 ಮತ್ತು 27 ರಂದು ಅಸ್ಸೋಂ ಮತ್ತು ಮೇಘಾಲಯದಲ್ಲಿ, ಜೂನ್ 23 ರಿಂದ 27 ರವರೆಗೆ ನಾಗಾಲ್ಯಾಂಡ್​, ಮಣಿಪುರ ಮತ್ತು ಮಿಜೋರಾಂದಲ್ಲಿ, ಜೂನ್ 23 ಮತ್ತು 26 ರಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ, ಜೂನ್ 25 ಮತ್ತು 26 ರಂದು ಜಾರ್ಖಂಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಇಲಾಖೆ ತಿಳಿಸಿದೆ.

ಜೂನ್ 23 ರಿಂದ 27 ರ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ. ಜೂನ್ 25 ರಿಂದ 27 ರ ಅವಧಿಯಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ ಮತ್ತು ಪೂರ್ವ ರಾಜಸ್ಥಾನದಲ್ಲಿ ಸಾಧಾರಣ ಮತ್ತು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಮುಂದಿನ ಐದು ದಿನಗಳಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿದರ್ಭದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಅಥವಾ ಧಾರಾಕಾರ ಮಳೆ, ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ. ಅಷ್ಟೇ ಅಲ್ಲ ಜೂನ್ 24 ರಂದು ಛತ್ತೀಸ್‌ಗಢದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

ಮಳೆ ಹಿನ್ನೆಲೆ ಸವಾರರು ವಾಹನವನ್ನು ಜಾಗೃತವಾಗಿ ಚಲಿಸುವುದು ಸೂಕ್ತ. ಹಳೆ ಮನೆ, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವುದು ಸೂಕ್ತ. ಸಾರ್ವಜನಿಕರು ಗಿಡ-ಮರಗಳ ಪಕ್ಕ ಜಾಗೃತವಾಗಿರಬೇಕು. ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆಯಿದ್ದು, ಜನರು ಜಾಗೃತವಾಗಿರಬೇಕೆಂದು ಈಟಿವಿ ಭಾರತ ವಿನಂತಿಸಿಕೊಳ್ಳುತ್ತಿದೆ.

ಓದಿ: ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.