ETV Bharat / bharat

ಇನ್ನಾದ್ರೂ ಎಚ್ಚೆತ್ತುಕೊಳ್ಳಿ... ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಸೋನಿಯಾ

author img

By

Published : May 1, 2021, 3:28 PM IST

ದೇಶದಲ್ಲಿ ಕೊರೊನಾ ವೈರಸ್ ಹಾವಳಿ ಮಿತಿಮೀರಿದ್ದು, ಇದೇ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Congress president sonia gandhi
Congress president sonia gandhi

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೇ ವಿಷಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟರ್​ನಲ್ಲಿ ವಿಡಿಯೋ ಶೇರ್ ಮಾಡಿಕೊಂಡಿರುವ ಸೋನಿಯಾ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಎಚ್ಚೆತ್ತುಕೊಂಡು ತಮ್ಮ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದಿದ್ದಾರೆ. ದೇಶದ ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್​ ನೀಡಬೇಕು ಎಂದಿರುವ ಸೋನಿಯಾ, ಲಸಿಕೆ ವೇಗವಾಗಿ ಉತ್ಪಾದನೆ ಮಾಡಲು ಕಡ್ಡಾಯ ಪರವಾನಗಿ ನೀಡಬೇಕು ಎಂದಿದ್ದಾರೆ.

  • कोरोना महामारी के इस चुनौतीपूर्ण समय में आपके व आपके परिवार की सुरक्षा और अच्छे स्वास्थ्य की कामना करती हूं। वह लाखों परिवार जिन्होंने अपने परिजनों को खोया है, उनके प्रति दिल से अपनी संवेदना व्यक्त करती हूं।

    - कांग्रेस अध्यक्षा, श्रीमती सोनिया गांधी#COVID19India pic.twitter.com/btmCeG8K6B

    — Congress (@INCIndia) May 1, 2021 " class="align-text-top noRightClick twitterSection" data=" ">

ಡೆಡ್ಲಿ ವೈರಸ್​ ಕೋವಿಡ್​ ಬಿಕ್ಕಟ್ಟು ಎದುರಿಸಲು ರಾಷ್ಟ್ರೀಯ ನೀತಿ ರೂಪಿಸಬೇಕು ಎಂದಿರುವ ಸೋನಿಯಾ, ಅದರಲ್ಲಿ ಯಾವುದೇ ರೀತಿಯ ರಾಜಕೀಯ ತರಬಾರದು ಎಂದು ಹೇಳಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಬಡವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 6 ಸಾವಿರ ರೂ. ನೀಡಬೇಕು ಎಂದಿರುವ ಸೋನಿಯಾ, ಕಾಳಸಂತೆಯಲ್ಲಿ ಕೋವಿಡ್​ ಔಷಧ ಮಾರಾಟವಾಗುವುದನ್ನ ತಡೆಯಬೇಕು ಎಂದಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ ಕಾಂಗ್ರೆಸ್​ ಕೂಡ ಸರ್ಕಾರದ ಜೊತೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಮಧ್ಯೆ ಪಂಚಾಯ್ತಿ ಚುನಾವಣೆ: ಯುಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಕಳೆದ ಕೆಲ ದಿನಗಳಿಂದ ದೇಶದಲ್ಲಿ ಪ್ರತಿದಿನ ಲಕ್ಷಾಂತರ ಕೋವಿಡ್ ಕೇಸ್ ದಾಖಲಾಗುತ್ತಿದ್ದು, ನಿನ್ನೆ ದಾಖಲೆಯ 4 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ಕಾಣಿಸಿಕೊಂಡಿವೆ. ಇದರ ಮಧ್ಯೆ 3500ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೇ ವಿಷಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟರ್​ನಲ್ಲಿ ವಿಡಿಯೋ ಶೇರ್ ಮಾಡಿಕೊಂಡಿರುವ ಸೋನಿಯಾ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಎಚ್ಚೆತ್ತುಕೊಂಡು ತಮ್ಮ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದಿದ್ದಾರೆ. ದೇಶದ ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್​ ನೀಡಬೇಕು ಎಂದಿರುವ ಸೋನಿಯಾ, ಲಸಿಕೆ ವೇಗವಾಗಿ ಉತ್ಪಾದನೆ ಮಾಡಲು ಕಡ್ಡಾಯ ಪರವಾನಗಿ ನೀಡಬೇಕು ಎಂದಿದ್ದಾರೆ.

  • कोरोना महामारी के इस चुनौतीपूर्ण समय में आपके व आपके परिवार की सुरक्षा और अच्छे स्वास्थ्य की कामना करती हूं। वह लाखों परिवार जिन्होंने अपने परिजनों को खोया है, उनके प्रति दिल से अपनी संवेदना व्यक्त करती हूं।

    - कांग्रेस अध्यक्षा, श्रीमती सोनिया गांधी#COVID19India pic.twitter.com/btmCeG8K6B

    — Congress (@INCIndia) May 1, 2021 " class="align-text-top noRightClick twitterSection" data=" ">

ಡೆಡ್ಲಿ ವೈರಸ್​ ಕೋವಿಡ್​ ಬಿಕ್ಕಟ್ಟು ಎದುರಿಸಲು ರಾಷ್ಟ್ರೀಯ ನೀತಿ ರೂಪಿಸಬೇಕು ಎಂದಿರುವ ಸೋನಿಯಾ, ಅದರಲ್ಲಿ ಯಾವುದೇ ರೀತಿಯ ರಾಜಕೀಯ ತರಬಾರದು ಎಂದು ಹೇಳಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಬಡವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 6 ಸಾವಿರ ರೂ. ನೀಡಬೇಕು ಎಂದಿರುವ ಸೋನಿಯಾ, ಕಾಳಸಂತೆಯಲ್ಲಿ ಕೋವಿಡ್​ ಔಷಧ ಮಾರಾಟವಾಗುವುದನ್ನ ತಡೆಯಬೇಕು ಎಂದಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ ಕಾಂಗ್ರೆಸ್​ ಕೂಡ ಸರ್ಕಾರದ ಜೊತೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಮಧ್ಯೆ ಪಂಚಾಯ್ತಿ ಚುನಾವಣೆ: ಯುಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಕಳೆದ ಕೆಲ ದಿನಗಳಿಂದ ದೇಶದಲ್ಲಿ ಪ್ರತಿದಿನ ಲಕ್ಷಾಂತರ ಕೋವಿಡ್ ಕೇಸ್ ದಾಖಲಾಗುತ್ತಿದ್ದು, ನಿನ್ನೆ ದಾಖಲೆಯ 4 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ಕಾಣಿಸಿಕೊಂಡಿವೆ. ಇದರ ಮಧ್ಯೆ 3500ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.