ETV Bharat / bharat

ಕಾಂಗ್ರೆಸ್​ಗೆ​ ರಾಜೀನಾಮೆ ನೀಡಿದ ಮಾಜಿ ಸಂಸದ ಮಿಲಿಂದ್ ದಿಯೋರಾ

author img

By ETV Bharat Karnataka Team

Published : Jan 14, 2024, 10:01 AM IST

ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭವಾಗಿರುವ ಮಧ್ಯೆಗೆ ಮಾಜಿ ಸಂಸದ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದ್ದಾರೆ. ಪಕ್ಷಕ್ಕೆ ಇವರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಮಿಲಿಂದ್ ದಿಯೋರಾ Milind Deora quits Congress party
ಮಿಲಿಂದ್ ದಿಯೋರಾ

ಮುಂಬೈ(ಮಹಾರಾಷ್ಟ್ರ): ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಮಹಾರಾಷ್ಟ್ರ ಕಾಂಗ್ರೆಸ್​​ನಲ್ಲಿ ಸಂಚಲನ ಉಂಟಾಗಿದೆ. ಮಾಜಿ ಸಂಸದ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, "ನನ್ನ ರಾಜಕೀಯ ಜೀವನದ ಮಹತ್ವದ ಘಟ್ಟವೊಂದು ಇಂದು ಮುಕ್ತಾಯವಾಗಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಪಕ್ಷದ ಜೊತೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಅಂತ್ಯಗೊಳಿಸಿದ್ದೇನೆ. ಇಷ್ಟು ವರ್ಷ ಬೆಂಬಲಿಸಿದ ಅಭಿಮಾನಿಗಳು, ಕಾರ್ಯಕರ್ತರು ಮತ್ತು ಸಹೋದ್ಯೋಗಿಗಳಿಗೆ ಕೃತಜ್ಞನಾಗಿದ್ದೇನೆ." ಎಂದು ಬರೆದುಕೊಂಡಿದ್ದಾರೆ.

ಕೈ ಬಿಟ್ಟು ಶಿಂಧೆ ನೇತೃತ್ವದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾಗುವುದನ್ನು ಶನಿವಾರವಷ್ಟೇ ಮಿಲಿಂದ್ ಅವರು ಅಲ್ಲಗಳೆದಿದ್ದರು. ಆದ್ರೆ ಇಂದು ಪಕ್ಷವನ್ನು ತ್ಯಜಿಸಿರುವ ಬಗ್ಗೆ ಅಧಿಕೃತವಾಗಿ ಅವರೇ ಘೋಷಿಸಿದ್ದಾರೆ. ರಾಹುಲ್ ಗಾಂಧಿ ಅವರು ಇಂದು ಮಣಿಪುರದಿಂದ ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಳ್ಳಲಿದ್ದು, ಇದೇ ದಿನ ಮಿಲಿಂದ್ ಅವರು ರಾಜೀನಾಮೆ ಬಾಂಬ್ ಸಿಡಿಸಿದ್ದಾರೆ.

ಮಹಾವಿಕಾಸ ಅಘಾಡಿಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಪರೇಷನ್ ಮಾಡಿದ್ದು, ಮಾಜಿ ಸಂಸದ ಮಿಲಿಂದ್ ದಿಯೋರಾ ಅವರು ಶಿವಸೇನೆ ಸೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಕಾಂಗ್ರೆಸ್​​ನಿಂದ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ದಿಯೋರಾ ಬಯಸಿದ್ದರು. ಆದರೆ ಅವರಿಗೆ ಮುಂಬರುವ ಚುನಾವಣೆಯಲ್ಲಿ ಟಿಕೆಟ್​ ಸಿಗದಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಶಿವಸೇನೆ ಶಿಂಧೆ ಗುಂಪು ಸೇರಲು ಪ್ರಯತ್ನ ಆರಂಭಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮಾಜಿ ಸಂಸದ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಕಾರ್ಯಕರ್ತರು, ಮಾಜಿ ಕಾರ್ಪೊರೇಟರ್‌ಗಳು, ಜನಪ್ರತಿನಿಧಿಗಳು ಮತ್ತು ತಮ್ಮ ಲೋಕಸಭಾ ಕ್ಷೇತ್ರದ ಶಾಸಕ ಅಮೀನ್ ಪಟೇಲ್ ಅವರೊಂದಿಗೆ ಮಾತುಕತೆ ಹಾಗೂ ಚರ್ಚೆ ನಡೆಸಿದ್ದರು.

ಇದನ್ನೂ ಓದಿ:

ಮುಂಬೈ(ಮಹಾರಾಷ್ಟ್ರ): ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಮಹಾರಾಷ್ಟ್ರ ಕಾಂಗ್ರೆಸ್​​ನಲ್ಲಿ ಸಂಚಲನ ಉಂಟಾಗಿದೆ. ಮಾಜಿ ಸಂಸದ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, "ನನ್ನ ರಾಜಕೀಯ ಜೀವನದ ಮಹತ್ವದ ಘಟ್ಟವೊಂದು ಇಂದು ಮುಕ್ತಾಯವಾಗಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಪಕ್ಷದ ಜೊತೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಅಂತ್ಯಗೊಳಿಸಿದ್ದೇನೆ. ಇಷ್ಟು ವರ್ಷ ಬೆಂಬಲಿಸಿದ ಅಭಿಮಾನಿಗಳು, ಕಾರ್ಯಕರ್ತರು ಮತ್ತು ಸಹೋದ್ಯೋಗಿಗಳಿಗೆ ಕೃತಜ್ಞನಾಗಿದ್ದೇನೆ." ಎಂದು ಬರೆದುಕೊಂಡಿದ್ದಾರೆ.

ಕೈ ಬಿಟ್ಟು ಶಿಂಧೆ ನೇತೃತ್ವದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾಗುವುದನ್ನು ಶನಿವಾರವಷ್ಟೇ ಮಿಲಿಂದ್ ಅವರು ಅಲ್ಲಗಳೆದಿದ್ದರು. ಆದ್ರೆ ಇಂದು ಪಕ್ಷವನ್ನು ತ್ಯಜಿಸಿರುವ ಬಗ್ಗೆ ಅಧಿಕೃತವಾಗಿ ಅವರೇ ಘೋಷಿಸಿದ್ದಾರೆ. ರಾಹುಲ್ ಗಾಂಧಿ ಅವರು ಇಂದು ಮಣಿಪುರದಿಂದ ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಳ್ಳಲಿದ್ದು, ಇದೇ ದಿನ ಮಿಲಿಂದ್ ಅವರು ರಾಜೀನಾಮೆ ಬಾಂಬ್ ಸಿಡಿಸಿದ್ದಾರೆ.

ಮಹಾವಿಕಾಸ ಅಘಾಡಿಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಪರೇಷನ್ ಮಾಡಿದ್ದು, ಮಾಜಿ ಸಂಸದ ಮಿಲಿಂದ್ ದಿಯೋರಾ ಅವರು ಶಿವಸೇನೆ ಸೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಕಾಂಗ್ರೆಸ್​​ನಿಂದ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ದಿಯೋರಾ ಬಯಸಿದ್ದರು. ಆದರೆ ಅವರಿಗೆ ಮುಂಬರುವ ಚುನಾವಣೆಯಲ್ಲಿ ಟಿಕೆಟ್​ ಸಿಗದಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಶಿವಸೇನೆ ಶಿಂಧೆ ಗುಂಪು ಸೇರಲು ಪ್ರಯತ್ನ ಆರಂಭಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮಾಜಿ ಸಂಸದ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಕಾರ್ಯಕರ್ತರು, ಮಾಜಿ ಕಾರ್ಪೊರೇಟರ್‌ಗಳು, ಜನಪ್ರತಿನಿಧಿಗಳು ಮತ್ತು ತಮ್ಮ ಲೋಕಸಭಾ ಕ್ಷೇತ್ರದ ಶಾಸಕ ಅಮೀನ್ ಪಟೇಲ್ ಅವರೊಂದಿಗೆ ಮಾತುಕತೆ ಹಾಗೂ ಚರ್ಚೆ ನಡೆಸಿದ್ದರು.

ಇದನ್ನೂ ಓದಿ:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.