ETV Bharat / bharat

ಚಂದ್ರಬಾಬು ಭೇಟಿ ಮಾಡಿದ ವೈಎಸ್ ಶರ್ಮಿಳಾ; ಮಗನ ಮದುವೆಗೆ ಆಹ್ವಾನ - ಚಂದ್ರಬಾಬು ನಾಯ್ಡು ಭೇಟಿಯಾದ ಶರ್ಮಿಳಾ

YS Sharmila Invites Chandrababu Naidu: ವೈಎಸ್‌ಆರ್‌ಟಿಪಿ ನಾಯಕಿ ವೈಎಸ್ ಶರ್ಮಿಳಾ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಅವರ ನಿವಾಸದಲ್ಲಿ ಭೇಟಿಯಾದರು.

Congress leader YS Sharmila met former Andhra Pradesh CM and TDP chief
Congress leader YS Sharmila met former Andhra Pradesh CM and TDP chief
author img

By ETV Bharat Karnataka Team

Published : Jan 13, 2024, 4:52 PM IST

ಹೈದರಾಬಾದ್‌: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾದ ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ತಮ್ಮ ಪುತ್ರನ ವಿವಾಹಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. ಜನವರಿ 18ರಂದು ನಿಶ್ಚಿತಾರ್ಥ ನಡೆಯಲಿದ್ದು, ಫೆಬ್ರವರಿ 17 ರಂದು ವಿವಾಹ ಜರುಗಲಿದೆ. ಪುತ್ರ ವೈಎಸ್​​​ ರಾಜಾರೆಡ್ಡಿ ವಿವಾಹಕ್ಕೆ ಕುಟುಂಬ ಸಮೇತರಾಗಿ ಸಾಕ್ಷಿಯಾಗುವಂತೆ ಶರ್ಮಿಳಾ ಅವರು ನಾಯ್ಡು ಅವರಲ್ಲಿ ಮನವಿ ಮಾಡಿದರು. ಹೈದರಾಬಾದ್‌ನಲ್ಲಿರುವ ನಿವಾಸಕ್ಕೆ ತೆರಳಿದ ಶರ್ಮಿಳಾ, ಪುತ್ರನ ವಿವಾಹ ಪತ್ರಿಕೆಯೊಂದಿಗೆ ಚಂದ್ರಬಾಬು ನಾಯ್ಡು ಅವರನ್ನು ಆಹ್ವಾನಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳ ನಡುವೆ ಸೌಹಾರ್ದತೆ ಅತ್ಯಗತ್ಯ. ಈ ಆಹ್ವಾನವನ್ನು ರಾಜಕೀಯವಾಗಿ ನೋಡಬಾರದು. ರಾಜಕಾರಣಿಗಳಲ್ಲಿ ರಾಜಕೀಯ ಹೊರತಾಗಿಯೂ ಜೀವನ ಇರುತ್ತದೆ. ಈ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿರುವೆ. ಈ ಭೇಟಿಗೆ ಯಾವುದೇ ರಾಜಕೀಯ ಬಣ್ಣದ ಅವಶ್ಯಕತೆ ಇಲ್ಲ. ಯಾರು ಸಹ ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಶರ್ಮಿಳಾ ಕೇಳಿಕೊಂಡರು. ಅವರ ಆಹ್ವಾನಕ್ಕೆ ಚಂದ್ರಬಾಬು ನಾಯ್ಡು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಟಿಡಿಪಿ ಮೂಲಗಳು ಖಚಿತಪಡಿಸಿವೆ.

ನವದೆಹಲಿಯಲ್ಲಿ ಜನವರಿ 3 ರಂದು​​ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರ್ಮಿಳಾ ಅವರು ತಮ್ಮ ಪಕ್ಷ ವೈಎಸ್ಆರ್ ತೆಲಂಗಾಣವನ್ನೂ ಕಾಂಗ್ರೆಸ್​​​​ನಲ್ಲಿ ವಿಲೀನ ಮಾಡುವ ಮೂಲಕ ಕೈ ಪಕ್ಷಕ್ಕೆ ಸೇರಿದ್ದರು.

ಕಾಂಗ್ರೆಸ್​ ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ''ಆಂಧ್ರಪ್ರದೇಶದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನ ಸೇರಿದಂತೆ ಯಾವುದೇ ಜವಾಬ್ದಾರಿ ನೀಡಿದರೂ ತೆಗೆದುಕೊಳ್ಳಲು ಸಿದ್ಧ'' ಎಂದು ಇಚ್ಛೆ ವ್ಯಕ್ತಪಡಿಸಿದ್ದರು. ರಾಜಕೀಯದಲ್ಲಿ ವೈಯಕ್ತಿಕ ಬಣಗಳು ಇರಬಾರದು. ಅದರಿಂದ ಯಾವುದೇ ಲಾಭ ಆಗದು. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿಭಾಯಿಸುವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡುವುದೇ ನನ್ನ ತಂದೆ ವೈಎಸ್ ರಾಜಶೇಖರ್ ರೆಡ್ಡಿ ಅವರ ಕನಸಾಗಿತ್ತು. ಈ ನಿಟ್ಟಿನಲ್ಲಿ ಆ ಗುರಿಯನ್ನು ಸಾಧಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದರು.

ಚಂದ್ರಬಾಬು ನಾಯ್ಡು ಭೇಟಿಗೂ ಮುನ್ನ ಶರ್ಮಿಳಾ ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಅನೇಕ ರಾಜಕೀಯ ಮುಖಂಡರಿಗೂ ಪುತ್ರನ ಮದುವೆಗೆ ಆಗಮಿಸುವಂತೆ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಹುಲ್​, ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ ಆಂಧ್ರ ಸಿಎಂ ಜಗನ್​ ಸಹೋದರಿ ಶರ್ಮಿಳಾ

ಹೈದರಾಬಾದ್‌: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾದ ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ತಮ್ಮ ಪುತ್ರನ ವಿವಾಹಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. ಜನವರಿ 18ರಂದು ನಿಶ್ಚಿತಾರ್ಥ ನಡೆಯಲಿದ್ದು, ಫೆಬ್ರವರಿ 17 ರಂದು ವಿವಾಹ ಜರುಗಲಿದೆ. ಪುತ್ರ ವೈಎಸ್​​​ ರಾಜಾರೆಡ್ಡಿ ವಿವಾಹಕ್ಕೆ ಕುಟುಂಬ ಸಮೇತರಾಗಿ ಸಾಕ್ಷಿಯಾಗುವಂತೆ ಶರ್ಮಿಳಾ ಅವರು ನಾಯ್ಡು ಅವರಲ್ಲಿ ಮನವಿ ಮಾಡಿದರು. ಹೈದರಾಬಾದ್‌ನಲ್ಲಿರುವ ನಿವಾಸಕ್ಕೆ ತೆರಳಿದ ಶರ್ಮಿಳಾ, ಪುತ್ರನ ವಿವಾಹ ಪತ್ರಿಕೆಯೊಂದಿಗೆ ಚಂದ್ರಬಾಬು ನಾಯ್ಡು ಅವರನ್ನು ಆಹ್ವಾನಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳ ನಡುವೆ ಸೌಹಾರ್ದತೆ ಅತ್ಯಗತ್ಯ. ಈ ಆಹ್ವಾನವನ್ನು ರಾಜಕೀಯವಾಗಿ ನೋಡಬಾರದು. ರಾಜಕಾರಣಿಗಳಲ್ಲಿ ರಾಜಕೀಯ ಹೊರತಾಗಿಯೂ ಜೀವನ ಇರುತ್ತದೆ. ಈ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿರುವೆ. ಈ ಭೇಟಿಗೆ ಯಾವುದೇ ರಾಜಕೀಯ ಬಣ್ಣದ ಅವಶ್ಯಕತೆ ಇಲ್ಲ. ಯಾರು ಸಹ ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಶರ್ಮಿಳಾ ಕೇಳಿಕೊಂಡರು. ಅವರ ಆಹ್ವಾನಕ್ಕೆ ಚಂದ್ರಬಾಬು ನಾಯ್ಡು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಟಿಡಿಪಿ ಮೂಲಗಳು ಖಚಿತಪಡಿಸಿವೆ.

ನವದೆಹಲಿಯಲ್ಲಿ ಜನವರಿ 3 ರಂದು​​ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರ್ಮಿಳಾ ಅವರು ತಮ್ಮ ಪಕ್ಷ ವೈಎಸ್ಆರ್ ತೆಲಂಗಾಣವನ್ನೂ ಕಾಂಗ್ರೆಸ್​​​​ನಲ್ಲಿ ವಿಲೀನ ಮಾಡುವ ಮೂಲಕ ಕೈ ಪಕ್ಷಕ್ಕೆ ಸೇರಿದ್ದರು.

ಕಾಂಗ್ರೆಸ್​ ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ''ಆಂಧ್ರಪ್ರದೇಶದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನ ಸೇರಿದಂತೆ ಯಾವುದೇ ಜವಾಬ್ದಾರಿ ನೀಡಿದರೂ ತೆಗೆದುಕೊಳ್ಳಲು ಸಿದ್ಧ'' ಎಂದು ಇಚ್ಛೆ ವ್ಯಕ್ತಪಡಿಸಿದ್ದರು. ರಾಜಕೀಯದಲ್ಲಿ ವೈಯಕ್ತಿಕ ಬಣಗಳು ಇರಬಾರದು. ಅದರಿಂದ ಯಾವುದೇ ಲಾಭ ಆಗದು. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿಭಾಯಿಸುವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡುವುದೇ ನನ್ನ ತಂದೆ ವೈಎಸ್ ರಾಜಶೇಖರ್ ರೆಡ್ಡಿ ಅವರ ಕನಸಾಗಿತ್ತು. ಈ ನಿಟ್ಟಿನಲ್ಲಿ ಆ ಗುರಿಯನ್ನು ಸಾಧಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದರು.

ಚಂದ್ರಬಾಬು ನಾಯ್ಡು ಭೇಟಿಗೂ ಮುನ್ನ ಶರ್ಮಿಳಾ ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಅನೇಕ ರಾಜಕೀಯ ಮುಖಂಡರಿಗೂ ಪುತ್ರನ ಮದುವೆಗೆ ಆಗಮಿಸುವಂತೆ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಹುಲ್​, ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ ಆಂಧ್ರ ಸಿಎಂ ಜಗನ್​ ಸಹೋದರಿ ಶರ್ಮಿಳಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.