ETV Bharat / bharat

ಮನೋನ್ಮಣಿ ವಿವಿಯಲ್ಲಿ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಆರೋಪ: ಎಬಿವಿಪಿ ದೂರು

author img

By

Published : Feb 2, 2023, 2:06 PM IST

Updated : Feb 2, 2023, 3:13 PM IST

ಭಾರತದಲ್ಲಿ ನಿಷೇಧಿಸಲಾಗಿರುವ ವಿವಾದಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ವಿಶ್ವವಿದ್ಯಾಲಯದ ತರಗತಿ ಕೊಠಡಿಯೊಂದರಲ್ಲಿ ಪ್ರದರ್ಶಿಸಲಾಗಿದೆ ಎಂದು ಆರೋಪಿಸಿ ಎಬಿವಿಪಿ ವಿಶ್ವವಿದ್ಯಾಲಯದ ಉಪಕುಲಪತಿಗೆ ದೂರು ನೀಡಿದೆ.

BBC documentary in Nellai Manonmaniam Sundaranar University.. Vice Chancellor orders to take disciplinary action
BBC documentary in Nellai Manonmaniam Sundaranar University.. Vice Chancellor orders to take disciplinary action

ತಿರುನೆಲ್ವೇಲಿ: 2002ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ಬಿಬಿಸಿ ತಯಾರಿಸಿರುವ ಹಾಗೂ ಭಾರತದಲ್ಲಿ ನಿಷೇಧಿತವಾಗಿರುವ ಸಾಕ್ಷ್ಯಚಿತ್ರವನ್ನು ಮನೋನ್ಮಣಿಯನ್ ಸುಂದರನಾರ್ ವಿಶ್ವವಿದ್ಯಾಲಯದ ತರಗತಿಯೊಂದರಲ್ಲಿ ಜನವರಿ 25 ರಂದು ಹಾಗೂ ಜನವರಿ 30 ರಮದು ಕಾಲೇಜಿನ ಹಾಸ್ಟೆಲ್ ರೂಮ್ ಒಂದರಲ್ಲಿ ಪ್ರದರ್ಶಿಸಲಾಗಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆರೋಪಿಸಿದೆ. ಇದರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಬಿವಿಪಿ ವಿಶ್ವವಿದ್ಯಾನಿಲಯದ ಉಪಕುಲಪತಿ ಚಂದ್ರಶೇಖರ್ ಅವರಿಗೆ ದೂರು ನೀಡಿದೆ. ದೂರಿನ ಸತ್ಯಾಸತ್ಯತೆ ಹಾಗೂ ಘಟನೆಯ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟ ವ್ಯಕ್ತಿಗಳ ತನಿಖೆ ನಡೆಸುವಂತೆ ವಿಶ್ವವಿದ್ಯಾಲಯದ ಶಿಸ್ತು ಕ್ರಮ ಸಮಿತಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್ ಕ್ಲಬ್ ಖಂಡನೆ: ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಗೆ ನಿರ್ಬಂಧ ಹೇರಿದ ಭಾರತ ಸರ್ಕಾರದ ಕ್ರಮವನ್ನು ವಾಷಿಂಗ್ಟನ್‌ನ ಪ್ರಮುಖ ಮಾಧ್ಯಮ ಸಂಸ್ಥೆಯಾದ ನ್ಯಾಷನಲ್ ಪ್ರೆಸ್ ಕ್ಲಬ್ (ಎನ್‌ಪಿಸಿ) ಬಲವಾಗಿ ಖಂಡಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಪ್ರಜಾಪ್ರಭುತ್ವಕ್ಕೆ ಒಡ್ಡುತ್ತಿರುವ ದೊಡ್ಡ ಬೆದರಿಕೆಯ ಭಾಗವಾಗಿ ಸಾಕ್ಷ್ಯಚಿತ್ರವನ್ನು ಭಾರತ ಸರ್ಕಾರ ನಿಗ್ರಹಿಸಿರುವುದು ಕಂಡುಬರುತ್ತದೆ ಎಂದು ಮಂಗಳವಾರ ಬಿಡುಗಡೆಯಾದ ಎನ್​ಪಿಸಿ ಹೇಳಿಕೆಯಲ್ಲಿ ತಿಳಿಸಲಾಗಿದೆ. "ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವದಕ್ಕೆ ಹೆಮ್ಮೆಪಡಬೇಕು. ಆದರೆ ಪತ್ರಿಕಾ ಸ್ವಾತಂತ್ರ್ಯವನ್ನು ನಾಶಪಡಿಸುವುದು, ಪತ್ರಕರ್ತರನ್ನು ಹಿಂಸಿಸುವುದು ಮತ್ತು ಅದರ ನ್ಯೂನತೆಗಳಿಗೆ ಕನ್ನಡಿ ಹಿಡಿಯುವ ಸುದ್ದಿಗಳನ್ನು ಹತ್ತಿಕ್ಕುವುದನ್ನು ಮುಂದುವರಿಸಿದರೆ ಅದು ತನ್ನ ಗುರುತನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ" ಎಂದು ಎನ್‌ಪಿಸಿ ಅಧ್ಯಕ್ಷ ಐಲೀನ್ ಒ'ರೈಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ: ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ನಿರ್ಬಂಧಿಸಲಾಗಿರುವ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬರುವ ಸೋಮವಾರ ನಡೆಸಲಿದೆ. ವಕೀಲ ಎಂಎಲ್ ಶರ್ಮಾ ಮತ್ತು ಹಿರಿಯ ವಕೀಲ ಸಿಯು ಸಿಂಗ್ ಇಬ್ಬರು ಈ ವಿಚಾರದಲ್ಲಿ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ದಾವೆ ಸಲ್ಲಿಸಿದ್ದು, ಇವುಗಳ ವಿಚಾರಣೆಯನ್ನು ತುರ್ತಾಗಿ ಪಟ್ಟಿ ಮಾಡಬೇಕೆಂದು ಕೋರಿದ್ದಾರೆ. ಇವುಗಳ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಅರ್ಜಿಗಳ ಮೇಲೆ ಬರುವ ಸೋಮವಾರ ವಿಚಾರಣೆ ನಡೆಸಲು ಒಪ್ಪಿದೆ. ಶರ್ಮಾ ಅವರ ಜೊತೆಗೆ ಹಿರಿಯ ಪತ್ರಕರ್ತ ಎನ್ ರಾಮ್, ವಕೀಲ ಪ್ರಶಾಂತ್ ಭೂಷಣ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸೇರಿ ಇದೇ ವಿಷಯದಲ್ಲಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್​ಗೆ ಸಲ್ಲಿಸಲಾಗಿರುವ ಪಿಐಎಲ್​ಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಅರ್ಜಿದಾರರು ಕೋರ್ಟ್‌ಗಳ ಸಮಯ ಹಾಳು ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಸಾವಿರಾರು ಸಾಮಾನ್ಯ ನಾಗರಿಕರು ನ್ಯಾಯಕ್ಕಾಗಿ ಕಾಯುತ್ತಿರುವ ಮತ್ತು ದಿನಾಂಕಗಳನ್ನು ಹುಡುಕುತ್ತಿರುವ ಮಧ್ಯೆ ಅರ್ಜಿದಾರರು ಸುಪ್ರೀಂ ಕೋರ್ಟ್‌ನ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಶ್ನಿಸಿ ಪಿಐಎಲ್: ಫೆ.6 ರಂದು ಸುಪ್ರೀಂಕೋರ್ಟ್ ವಿಚಾರಣೆ

ತಿರುನೆಲ್ವೇಲಿ: 2002ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ಬಿಬಿಸಿ ತಯಾರಿಸಿರುವ ಹಾಗೂ ಭಾರತದಲ್ಲಿ ನಿಷೇಧಿತವಾಗಿರುವ ಸಾಕ್ಷ್ಯಚಿತ್ರವನ್ನು ಮನೋನ್ಮಣಿಯನ್ ಸುಂದರನಾರ್ ವಿಶ್ವವಿದ್ಯಾಲಯದ ತರಗತಿಯೊಂದರಲ್ಲಿ ಜನವರಿ 25 ರಂದು ಹಾಗೂ ಜನವರಿ 30 ರಮದು ಕಾಲೇಜಿನ ಹಾಸ್ಟೆಲ್ ರೂಮ್ ಒಂದರಲ್ಲಿ ಪ್ರದರ್ಶಿಸಲಾಗಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆರೋಪಿಸಿದೆ. ಇದರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಬಿವಿಪಿ ವಿಶ್ವವಿದ್ಯಾನಿಲಯದ ಉಪಕುಲಪತಿ ಚಂದ್ರಶೇಖರ್ ಅವರಿಗೆ ದೂರು ನೀಡಿದೆ. ದೂರಿನ ಸತ್ಯಾಸತ್ಯತೆ ಹಾಗೂ ಘಟನೆಯ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟ ವ್ಯಕ್ತಿಗಳ ತನಿಖೆ ನಡೆಸುವಂತೆ ವಿಶ್ವವಿದ್ಯಾಲಯದ ಶಿಸ್ತು ಕ್ರಮ ಸಮಿತಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್ ಕ್ಲಬ್ ಖಂಡನೆ: ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಗೆ ನಿರ್ಬಂಧ ಹೇರಿದ ಭಾರತ ಸರ್ಕಾರದ ಕ್ರಮವನ್ನು ವಾಷಿಂಗ್ಟನ್‌ನ ಪ್ರಮುಖ ಮಾಧ್ಯಮ ಸಂಸ್ಥೆಯಾದ ನ್ಯಾಷನಲ್ ಪ್ರೆಸ್ ಕ್ಲಬ್ (ಎನ್‌ಪಿಸಿ) ಬಲವಾಗಿ ಖಂಡಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಪ್ರಜಾಪ್ರಭುತ್ವಕ್ಕೆ ಒಡ್ಡುತ್ತಿರುವ ದೊಡ್ಡ ಬೆದರಿಕೆಯ ಭಾಗವಾಗಿ ಸಾಕ್ಷ್ಯಚಿತ್ರವನ್ನು ಭಾರತ ಸರ್ಕಾರ ನಿಗ್ರಹಿಸಿರುವುದು ಕಂಡುಬರುತ್ತದೆ ಎಂದು ಮಂಗಳವಾರ ಬಿಡುಗಡೆಯಾದ ಎನ್​ಪಿಸಿ ಹೇಳಿಕೆಯಲ್ಲಿ ತಿಳಿಸಲಾಗಿದೆ. "ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವದಕ್ಕೆ ಹೆಮ್ಮೆಪಡಬೇಕು. ಆದರೆ ಪತ್ರಿಕಾ ಸ್ವಾತಂತ್ರ್ಯವನ್ನು ನಾಶಪಡಿಸುವುದು, ಪತ್ರಕರ್ತರನ್ನು ಹಿಂಸಿಸುವುದು ಮತ್ತು ಅದರ ನ್ಯೂನತೆಗಳಿಗೆ ಕನ್ನಡಿ ಹಿಡಿಯುವ ಸುದ್ದಿಗಳನ್ನು ಹತ್ತಿಕ್ಕುವುದನ್ನು ಮುಂದುವರಿಸಿದರೆ ಅದು ತನ್ನ ಗುರುತನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ" ಎಂದು ಎನ್‌ಪಿಸಿ ಅಧ್ಯಕ್ಷ ಐಲೀನ್ ಒ'ರೈಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ: ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ನಿರ್ಬಂಧಿಸಲಾಗಿರುವ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬರುವ ಸೋಮವಾರ ನಡೆಸಲಿದೆ. ವಕೀಲ ಎಂಎಲ್ ಶರ್ಮಾ ಮತ್ತು ಹಿರಿಯ ವಕೀಲ ಸಿಯು ಸಿಂಗ್ ಇಬ್ಬರು ಈ ವಿಚಾರದಲ್ಲಿ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ದಾವೆ ಸಲ್ಲಿಸಿದ್ದು, ಇವುಗಳ ವಿಚಾರಣೆಯನ್ನು ತುರ್ತಾಗಿ ಪಟ್ಟಿ ಮಾಡಬೇಕೆಂದು ಕೋರಿದ್ದಾರೆ. ಇವುಗಳ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಅರ್ಜಿಗಳ ಮೇಲೆ ಬರುವ ಸೋಮವಾರ ವಿಚಾರಣೆ ನಡೆಸಲು ಒಪ್ಪಿದೆ. ಶರ್ಮಾ ಅವರ ಜೊತೆಗೆ ಹಿರಿಯ ಪತ್ರಕರ್ತ ಎನ್ ರಾಮ್, ವಕೀಲ ಪ್ರಶಾಂತ್ ಭೂಷಣ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸೇರಿ ಇದೇ ವಿಷಯದಲ್ಲಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್​ಗೆ ಸಲ್ಲಿಸಲಾಗಿರುವ ಪಿಐಎಲ್​ಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಅರ್ಜಿದಾರರು ಕೋರ್ಟ್‌ಗಳ ಸಮಯ ಹಾಳು ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಸಾವಿರಾರು ಸಾಮಾನ್ಯ ನಾಗರಿಕರು ನ್ಯಾಯಕ್ಕಾಗಿ ಕಾಯುತ್ತಿರುವ ಮತ್ತು ದಿನಾಂಕಗಳನ್ನು ಹುಡುಕುತ್ತಿರುವ ಮಧ್ಯೆ ಅರ್ಜಿದಾರರು ಸುಪ್ರೀಂ ಕೋರ್ಟ್‌ನ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಶ್ನಿಸಿ ಪಿಐಎಲ್: ಫೆ.6 ರಂದು ಸುಪ್ರೀಂಕೋರ್ಟ್ ವಿಚಾರಣೆ

Last Updated : Feb 2, 2023, 3:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.