ETV Bharat / bharat

ಮಕ್ಕಳಿಗೂ ಕೋವಿಡ್​ ಹರಡುವ ಭಯ.. ಆತ್ಮಹತ್ಯೆಗೆ ಶರಣಾದ ದಂಪತಿ - ದಂಪತಿಗೆ ಕೋವಿಡ್​

ಕೋವಿಡ್ ಸೋಂಕಿಗೊಳಗಾಗಿದ್ದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಪೊಲೀಸ್ ಪ್ರಕರಣ ದಾಖಲಾಗಿದೆ.

Couple end lives after testing Covid positive
Couple end lives after testing Covid positive
author img

By

Published : May 22, 2021, 5:38 PM IST

ವಿಜಯವಾಡ (ಆಂಧ್ರಪ್ರದೇಶ): ಮಹಾಮಾರಿ ಕೊರೊನಾ ಸೋಂಕಿಗೊಳಗಾಗಿದ್ದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಕೃಷ್ಣ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, 40 ವರ್ಷದ ಪ್ರಸಾದ್​ ಹಾಗೂ ಆತನ ಪತ್ನಿ 37 ವರ್ಷದ ಭಾರತಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಅಂತ್ಯ ಸಂಸ್ಕಾರದ ವೇಳೆ ಏಕಾಏಕಿ ಎದ್ದು ಕುಳಿತ.. ಮುಂದೇನಾಯ್ತು?

ಕಳೆದ 10 ದಿನಗಳಿಂದ ಜ್ವರ, ನೆಗಡಿಯಿಂದ ಬಳಲುತ್ತಿದ್ದ ಇವರನ್ನ ಕೋವಿಡ್ ತಪಾಸಣೆಗೊಳಪಡಿಸಲಾಗಿತ್ತು. ಈ ವೇಳೆ ಸೋಂಕು ಇರುವುದು ದೃಢಗೊಂಡಿದೆ. ತಕ್ಷಣವೇ ಇಬ್ಬರನ್ನ ಮನೆಯಲ್ಲಿ ಐಸೋಲೇಷನ್​ ಮಾಡಲಾಗಿತ್ತು. ಈ ವೇಳೆ ದಂಪತಿಗಳು ಖಿನ್ನತೆಗೊಳಗಾಗಿದ್ದಾರೆ. ಜತೆಗೆ ಸೋಂಕು ತಮ್ಮ ಮಕ್ಕಳಿಗೂ ಹರಡಬಹುದು ಎಂದು ಭಯಗೊಂಡಿದ್ದಾರೆ. ಇದೇ ಕಾರಣಕ್ಕಾಗಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸೆಕ್ಷನ್​​ 174ರ ಅಡಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ, ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ವಿಜಯವಾಡ (ಆಂಧ್ರಪ್ರದೇಶ): ಮಹಾಮಾರಿ ಕೊರೊನಾ ಸೋಂಕಿಗೊಳಗಾಗಿದ್ದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಕೃಷ್ಣ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, 40 ವರ್ಷದ ಪ್ರಸಾದ್​ ಹಾಗೂ ಆತನ ಪತ್ನಿ 37 ವರ್ಷದ ಭಾರತಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಅಂತ್ಯ ಸಂಸ್ಕಾರದ ವೇಳೆ ಏಕಾಏಕಿ ಎದ್ದು ಕುಳಿತ.. ಮುಂದೇನಾಯ್ತು?

ಕಳೆದ 10 ದಿನಗಳಿಂದ ಜ್ವರ, ನೆಗಡಿಯಿಂದ ಬಳಲುತ್ತಿದ್ದ ಇವರನ್ನ ಕೋವಿಡ್ ತಪಾಸಣೆಗೊಳಪಡಿಸಲಾಗಿತ್ತು. ಈ ವೇಳೆ ಸೋಂಕು ಇರುವುದು ದೃಢಗೊಂಡಿದೆ. ತಕ್ಷಣವೇ ಇಬ್ಬರನ್ನ ಮನೆಯಲ್ಲಿ ಐಸೋಲೇಷನ್​ ಮಾಡಲಾಗಿತ್ತು. ಈ ವೇಳೆ ದಂಪತಿಗಳು ಖಿನ್ನತೆಗೊಳಗಾಗಿದ್ದಾರೆ. ಜತೆಗೆ ಸೋಂಕು ತಮ್ಮ ಮಕ್ಕಳಿಗೂ ಹರಡಬಹುದು ಎಂದು ಭಯಗೊಂಡಿದ್ದಾರೆ. ಇದೇ ಕಾರಣಕ್ಕಾಗಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸೆಕ್ಷನ್​​ 174ರ ಅಡಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ, ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.