ETV Bharat / bharat

16 ತಿಂಗಳ ಹಸುಳೆ ಮೇಲೆ ಲೈಂಗಿಕ ಕಿರುಕುಳ, ಕೊಲೆ: ತಂದೆ-ತಾಯಿ ಬಂಧನ

16 ತಿಂಗಳ ಹಸುಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ತದನಂತರ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ದಂಪತಿ, ಮೃತದೇಹವನ್ನು ರೈಲಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ರೈಲ್ವೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

author img

By

Published : Jan 7, 2022, 7:21 PM IST

Updated : Jan 7, 2022, 7:26 PM IST

Couple sexually assault
Couple sexually assault

ಪುಣೆ(ಮಹಾರಾಷ್ಟ್ರ): 16 ತಿಂಗಳ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಸೊಲ್ಲಾಪುರ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಹೆಣ್ಣು ಮಗುವಿನ 26 ವರ್ಷದ ತಂದೆ ಜನವರಿ 3ರಂದು ಸಿಕಂದರಾಬಾದ್​​ನ ಮನೆಯಲ್ಲಿ ಮಗುವಿಗೆ ಲೈಂಗಿಕ ಕಿರುಕುಳ ನೀಡಿ, ಕತ್ತು ಹಿಸುಕಿ ಕೊಲೆ ಮಾಡಿದ್ದು, ಇದಕ್ಕೆ ತಾಯಿ ಕೂಡ ಸಹಾಯ ಮಾಡಿದ್ದಾಳೆ. ಇದಾದ ಬಳಿಕ ದಂಪತಿ ತೆಲಂಗಾಣದ ಸಿಕಂದರಾಬಾದ್​​ನಿಂದ ರಾಜ್​​ಕೋಟ್​ಗೆ ತೆರಳುವ ರೈಲಿನಲ್ಲಿ ಮೃತದೇಹದೊಂದಿಗೆ ತಮ್ಮ ಊರಿಗೆ ತೆರಳುತ್ತಿದ್ದರು.

ಇದನ್ನೂ ಓದಿ: ಮತ್ತೆ ಹೆಣ್ಣು ಹುಟ್ಟುವ ಭಯದಲ್ಲಿ ಹೆರಿಗೆ ಹಿಂದಿನ ದಿನವೇ ಗರ್ಭಿಣಿ ಆತ್ಮಹತ್ಯೆ: ಹೊಟ್ಟೆಯಲ್ಲಿದ್ದದ್ದು ಗಂಡು ಮಗು

ಪ್ರಯಾಣದ ಸಮಯದಲ್ಲಿ ಮಗುವಿನ ಚಲನವಲನದ ಬಗ್ಗೆ ರೈಲಿನಲ್ಲಿದ್ದ ಇತರೆ ಪ್ರಯಾಣಿಕರಿಗೆ ಅನುಮಾನ ಬಂದಿದ್ದು, ಟಿಕೆಟ್​​​ ಪರೀಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸೊಲ್ಲಾಪುರ ನಿಲ್ದಾಣದ ರೈಲ್ವೆ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು, ಆರೋಪಿಗಳನ್ನು ರೈಲಿನಿಂದ ಕೆಳಗಿಳಿಸಿ ಮಗುವನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂದು ರೈಲ್ವೆ ಪೊಲೀಸ್ ಅಧಿಕಾರಿ ಗಣೇಶ್​ ಶಿಂಧೆ ತಿಳಿಸಿದ್ದಾರೆ.

ಪರೀಕ್ಷೆಗೊಳಪಡಿಸಿದ ನಂತರ ಮಗು ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬಂದಿದ್ದು, ಲೈಂಗಿಕ ದೌರ್ಜನ್ಯ ವೆಸಗಿರುವುದು ದೃಢಗೊಂಡಿದೆ. ಇದೀಗ ದಂಪತಿ ವಿರುದ್ಧ ವಿವಿಧ ಐಪಿಸಿ ಕಲಂ ಹಾಗು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ(ಪೋಕ್ಸೊ) ಸೇರಿದಂತೆ ವಿವಿಧ ಸೆಕ್ಷನ್​ಗಳಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಪುಣೆ(ಮಹಾರಾಷ್ಟ್ರ): 16 ತಿಂಗಳ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಸೊಲ್ಲಾಪುರ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಹೆಣ್ಣು ಮಗುವಿನ 26 ವರ್ಷದ ತಂದೆ ಜನವರಿ 3ರಂದು ಸಿಕಂದರಾಬಾದ್​​ನ ಮನೆಯಲ್ಲಿ ಮಗುವಿಗೆ ಲೈಂಗಿಕ ಕಿರುಕುಳ ನೀಡಿ, ಕತ್ತು ಹಿಸುಕಿ ಕೊಲೆ ಮಾಡಿದ್ದು, ಇದಕ್ಕೆ ತಾಯಿ ಕೂಡ ಸಹಾಯ ಮಾಡಿದ್ದಾಳೆ. ಇದಾದ ಬಳಿಕ ದಂಪತಿ ತೆಲಂಗಾಣದ ಸಿಕಂದರಾಬಾದ್​​ನಿಂದ ರಾಜ್​​ಕೋಟ್​ಗೆ ತೆರಳುವ ರೈಲಿನಲ್ಲಿ ಮೃತದೇಹದೊಂದಿಗೆ ತಮ್ಮ ಊರಿಗೆ ತೆರಳುತ್ತಿದ್ದರು.

ಇದನ್ನೂ ಓದಿ: ಮತ್ತೆ ಹೆಣ್ಣು ಹುಟ್ಟುವ ಭಯದಲ್ಲಿ ಹೆರಿಗೆ ಹಿಂದಿನ ದಿನವೇ ಗರ್ಭಿಣಿ ಆತ್ಮಹತ್ಯೆ: ಹೊಟ್ಟೆಯಲ್ಲಿದ್ದದ್ದು ಗಂಡು ಮಗು

ಪ್ರಯಾಣದ ಸಮಯದಲ್ಲಿ ಮಗುವಿನ ಚಲನವಲನದ ಬಗ್ಗೆ ರೈಲಿನಲ್ಲಿದ್ದ ಇತರೆ ಪ್ರಯಾಣಿಕರಿಗೆ ಅನುಮಾನ ಬಂದಿದ್ದು, ಟಿಕೆಟ್​​​ ಪರೀಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸೊಲ್ಲಾಪುರ ನಿಲ್ದಾಣದ ರೈಲ್ವೆ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು, ಆರೋಪಿಗಳನ್ನು ರೈಲಿನಿಂದ ಕೆಳಗಿಳಿಸಿ ಮಗುವನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂದು ರೈಲ್ವೆ ಪೊಲೀಸ್ ಅಧಿಕಾರಿ ಗಣೇಶ್​ ಶಿಂಧೆ ತಿಳಿಸಿದ್ದಾರೆ.

ಪರೀಕ್ಷೆಗೊಳಪಡಿಸಿದ ನಂತರ ಮಗು ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬಂದಿದ್ದು, ಲೈಂಗಿಕ ದೌರ್ಜನ್ಯ ವೆಸಗಿರುವುದು ದೃಢಗೊಂಡಿದೆ. ಇದೀಗ ದಂಪತಿ ವಿರುದ್ಧ ವಿವಿಧ ಐಪಿಸಿ ಕಲಂ ಹಾಗು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ(ಪೋಕ್ಸೊ) ಸೇರಿದಂತೆ ವಿವಿಧ ಸೆಕ್ಷನ್​ಗಳಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Last Updated : Jan 7, 2022, 7:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.