ETV Bharat / bharat

ಶ್ರದ್ಧಾ ಕೊಲೆ ಕೇಸ್​: ಚಾರ್ಜ್​ಶೀಟ್​, ಸಾಕ್ಷ್ಯಾಧಾರಗಳ ಪ್ರಸಾರಕ್ಕೆ ಕೋರ್ಟ್​ ನಿರ್ಬಂಧ

author img

By

Published : Apr 10, 2023, 3:19 PM IST

ಶ್ರದ್ಧಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ಷ್ಮ ವಿಚಾರಗಳನ್ನು ಪ್ರಸಾರ/ ಪ್ರಕಟ ಮಾಡದಂತೆ ಮಾಧ್ಯಮಗಳ ಮೇಲೆ ದೆಹಲಿ ಕೋರ್ಟ್​ ನಿರ್ಬಂಧ ವಿಧಿಸಿದೆ.

ಶ್ರದ್ಧಾ ಕೊಲೆ ಕೇಸ್
ಶ್ರದ್ಧಾ ಕೊಲೆ ಕೇಸ್

ನವದೆಹಲಿ: ದೆಹಲಿಯಲ್ಲಿ ನಡೆದಿದ್ದ ಶ್ರದ್ಧಾ ವಾಕರ್ ಎಂಬ ಯುವತಿಯ ಭೀಕರ​ ಕೊಲೆ ಪ್ರಕರಣದ ಚಾರ್ಜ್​ಶೀಟ್​ನಲ್ಲಿನ ವಿಷಯಗಳು ಮತ್ತು ಡಿಜಿಟಲ್​ ಸಾಕ್ಷ್ಯ ದಾಖಲೆಗಳನ್ನು ಯಾವುದೇ ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಇಲ್ಲಿನ ಸಾಕೇತ್ ನ್ಯಾಯಾಲಯವು ಇಂದು ನಿರ್ಬಂಧ ವಿಧಿಸಿದೆ. ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನಿಗೆ ನಡೆಸಲಾಗಿದ್ದ ನಾರ್ಕೋ ಪರೀಕ್ಷೆ, ಆಡಿಯೋ, ವಿಡಿಯೋ ಸಾಕ್ಷ್ಯಗಳು ಮಾಧ್ಯಮ ಸಂಸ್ಥೆಯೊಂದಕ್ಕೆ ಸಿಕ್ಕಿದ್ದು, ಪ್ರಸಾರ ಮಾಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೋರ್ಟ್​ ಈ ಆದೇಶ ಹೊರಡಿಸಿದೆ.

ಪ್ರಕರಣದ ಪ್ರಮುಖ ಸಾಕ್ಷ್ಯಗಳ ಬಗೆಗಿನ ಮಾಹಿತಿ ಮಾಧ್ಯಮವೊಂದಕ್ಕೆ ಲಭ್ಯವಾಗಿದೆ. ಮಾಧ್ಯಮ ಇದನ್ನು ಪ್ರಸಾರ ಮಾಡುವ ಸಾಧ್ಯತೆ ಇದೆ. ತನಿಖೆಯ ಹಂತದಲ್ಲಿ ಸಾಕ್ಷ್ಯಗಳ ಬಗ್ಗೆ ಮಾಹಿತಿ ಭಿತ್ತರವಾಗುವುದರಿಂದ ತನಿಖೆಯ ದಾರಿ ತಪ್ಪಲಿದೆ. ಹೀಗಾಗಿ ಪ್ರಕಟಣೆ ಮತ್ತು ಪ್ರಸಾರಕ್ಕೆ ಅನುವು ಮಾಡಿಕೊಡಬಾರದು ಎಂದು ದೆಹಲಿ ಪೊಲೀಸರು ಕೋರ್ಟ್​ ಮೊರೆ ಹೋಗಿದ್ದರು. ಮನವಿ ಆಲಿಸಿದ ಕೋರ್ಟ್​ ನಿರ್ಬಂಧ ಹೇರಿದೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್ ಈ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲಾ ಮಾಧ್ಯಮ ಸಂಸ್ಥೆಗಳಿಗೆ ಪ್ರಕರಣದ ಡಿಜಿಟಲ್ ಸಾಕ್ಷ್ಯ ಸೇರಿದಂತೆ ಚಾರ್ಜ್ ಶೀಟ್‌ನ ವಿಷಯವನ್ನು ಪ್ರಕಟಿಸದಂತೆ ಮತ್ತು ಪ್ರಸಾರ ಮಾಡದಂತೆ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕ ದಾಖಲೆಗಳಲ್ಲ: ಪ್ರಕರಣದಲ್ಲಿನ ದಾಖಲೆಗಳು ಸಾರ್ವಜನಿಕವಾಗಿ ಭಿತ್ತರಿಸುವಂತಹ ವಿಷಯಗಳಲ್ಲ. ಚಾರ್ಜ್‌ಶೀಟ್‌ಗೆ ಸಂಬಂಧಿಸಿದ ಯಾವುದೇ ಆಡಿಯೋ, ವಿಡಿಯೋ ಇತರೆ ಸಾಕ್ಷ್ಯಾಧಾರಗಳ ಮಾಹಿತಿಯನ್ನು ಪ್ರಸಾರ ಮಾಡುವುದು ತನಿಖೆಗೆ ಅಡ್ಡಿಯಾಗಲಿದೆ. ಕೆಲವು ಮಾಧ್ಯಮಗಳು ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಸೂಕ್ಷ್ಮ ಸಾಕ್ಷ್ಯಗಳ ಸಮೇತ ವರದಿ ಮಾಡುತ್ತಿವೆ. ಇದು ಸೂಕ್ಷ್ಮ ವಿಷಯದಲ್ಲಿ ಆರೋಪಿ ಮತ್ತು ತನಿಖಾಧಿಕಾರಿಗಳಿಗೆ ಹಾನಿಯನ್ನುಂಟು ಮಾಡುತ್ತದೆ. ಈ ವಿಷಯ ಇನ್ನೂ ನ್ಯಾಯಾಲಯದ ಮುಂದೆ ಬಾಕಿ ಇದೆ. ಅದಕ್ಕಾಗಿ ನ್ಯಾಯಾಲಯವು ಚಾರ್ಜ್​ಶೀಟ್‌ನಲ್ಲಿ ಲಗತ್ತಿಸಲಾದ ವಿಷಯಗಳನ್ನು ಪ್ರಸಾರ ಮತ್ತು ಪ್ರಕಟಣೆಯನ್ನು ಮಾಡುವಂತಿಲ್ಲ ಎಂದಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಕೇಶ್ ಕುಮಾರ್ ಸಿಂಗ್ ಅವರು ಈ ಆದೇಶ ನೀಡಿದ್ದು, ಔಪಚಾರಿಕ ಆದೇಶ, ಸೂಚನೆಗಳನ್ನು ನೀಡಲಾಗುತ್ತಿದೆ. ಇದು ತನಿಖೆಯ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಬಹುದು. ಸುಪ್ರೀಂ ಕೋರ್ಟ್‌ನ ಆದೇಶದ ಉಲ್ಲಂಘನೆ ಮಾಡಿದಂತಾಗುತ್ತದೆ. ಚಾರ್ಜ್‌ಶೀಟ್ ಸಾರ್ವಜನಿಕ ದಾಖಲೆಯಲ್ಲ ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣವೇನು?: 2022 ರ ಮೇ ತಿಂಗಳಲ್ಲಿ ದೆಹಲಿಯ ಮೆಹ್ರೌಲಿಯಲ್ಲಿರುವ ಬಾಡಿಗೆ ಫ್ಲಾಟ್‌ನಲ್ಲಿ ವಾಸವಾಗಿದ್ದ ಅಫ್ತಾಬ್ ಪೂನಾವಾಲಾ ಎಂಬಾತ ತನ್ನ ಲಿವ್​ಇನ್​ ಗೆಳತಿ ಶ್ರದ್ಧಾ ವಾಕರ್‌ಳನ್ನು ಕತ್ತು ಹಿಸುಕಿ ಕೊಂದಿದ್ದ. ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರೀಜರ್​ನಲ್ಲಿ ಸಂಗ್ರಹಿಸಿಟ್ಟಿದ್ದ. ಕೊಲೆ ಮಾಡಿದ್ದು ಗೊತ್ತಾಗಬಾರದು ಎಂದು ದಿನವೂ ದೇಹದ ಒಂದೊಂದೇ ತುಂಡನ್ನು ಮೆಹ್ರೌಲಿಯ ಕಾಡು, ನಿರ್ಜನ ಪ್ರದೇಶದಲ್ಲಿ ವಿಲೇವಾರಿ ಮಾಡುತ್ತಿದ್ದ.

ಇತ್ತ ಮಗಳು ನಾಪತ್ತೆಯಾಗಿದ್ದಾಳೆ ಎಂದು ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದರು. ಕೊಲೆ ನಡೆದು ಸುಮಾರು 5 ತಿಂಗಳ ನಂತರ ಶ್ರದ್ಧಾ ವಾಲ್ಕರ್ ಕೊಲೆಯಾಗಿದ್ದು ಬೆಳಕಿಗೆ ಬಂದಿತ್ತು. ಅಂತೆಯೇ, ನವೆಂಬರ್ 12 ರಂದು ಹಂತಕ ಅಫ್ತಾಬ್​ನನ್ನು ಬಂಧಿಸಲಾಗಿತ್ತು. ಪ್ರಕರಣ ವಿಚಾರಣೆಯ ಹಂತದಲ್ಲಿದ್ದು, ಅನೇಕ ಆಡಿಯೊ, ವಿಡಿಯೋ ಕ್ಲಿಪ್‌ಗಳನ್ನು ಸುದ್ದಿ ವಾಹಿನಿಗಳು ಪದೇ ಪದೇ ಪ್ರಸಾರ ಮಾಡುತ್ತಿವೆ. ಇವುಗಳನ್ನು ನಿರ್ಬಂಧಿಸಬೇಕು ಎಂದು ಒತ್ತಾಯ ಕೇಳಿಬಂದಿತ್ತು.

ಇದನ್ನೂ ಓದಿ: ಪ್ರೀತಿ, ಗುಟ್ಟಾಗಿ ಮದುವೆ, ನಿಂದನೆ ಆರೋಪ.. ನವ ವಿವಾಹಿತ ಆತ್ಮಹತ್ಯೆಗೆ ಶರಣು!

ನವದೆಹಲಿ: ದೆಹಲಿಯಲ್ಲಿ ನಡೆದಿದ್ದ ಶ್ರದ್ಧಾ ವಾಕರ್ ಎಂಬ ಯುವತಿಯ ಭೀಕರ​ ಕೊಲೆ ಪ್ರಕರಣದ ಚಾರ್ಜ್​ಶೀಟ್​ನಲ್ಲಿನ ವಿಷಯಗಳು ಮತ್ತು ಡಿಜಿಟಲ್​ ಸಾಕ್ಷ್ಯ ದಾಖಲೆಗಳನ್ನು ಯಾವುದೇ ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಇಲ್ಲಿನ ಸಾಕೇತ್ ನ್ಯಾಯಾಲಯವು ಇಂದು ನಿರ್ಬಂಧ ವಿಧಿಸಿದೆ. ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನಿಗೆ ನಡೆಸಲಾಗಿದ್ದ ನಾರ್ಕೋ ಪರೀಕ್ಷೆ, ಆಡಿಯೋ, ವಿಡಿಯೋ ಸಾಕ್ಷ್ಯಗಳು ಮಾಧ್ಯಮ ಸಂಸ್ಥೆಯೊಂದಕ್ಕೆ ಸಿಕ್ಕಿದ್ದು, ಪ್ರಸಾರ ಮಾಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೋರ್ಟ್​ ಈ ಆದೇಶ ಹೊರಡಿಸಿದೆ.

ಪ್ರಕರಣದ ಪ್ರಮುಖ ಸಾಕ್ಷ್ಯಗಳ ಬಗೆಗಿನ ಮಾಹಿತಿ ಮಾಧ್ಯಮವೊಂದಕ್ಕೆ ಲಭ್ಯವಾಗಿದೆ. ಮಾಧ್ಯಮ ಇದನ್ನು ಪ್ರಸಾರ ಮಾಡುವ ಸಾಧ್ಯತೆ ಇದೆ. ತನಿಖೆಯ ಹಂತದಲ್ಲಿ ಸಾಕ್ಷ್ಯಗಳ ಬಗ್ಗೆ ಮಾಹಿತಿ ಭಿತ್ತರವಾಗುವುದರಿಂದ ತನಿಖೆಯ ದಾರಿ ತಪ್ಪಲಿದೆ. ಹೀಗಾಗಿ ಪ್ರಕಟಣೆ ಮತ್ತು ಪ್ರಸಾರಕ್ಕೆ ಅನುವು ಮಾಡಿಕೊಡಬಾರದು ಎಂದು ದೆಹಲಿ ಪೊಲೀಸರು ಕೋರ್ಟ್​ ಮೊರೆ ಹೋಗಿದ್ದರು. ಮನವಿ ಆಲಿಸಿದ ಕೋರ್ಟ್​ ನಿರ್ಬಂಧ ಹೇರಿದೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್ ಈ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲಾ ಮಾಧ್ಯಮ ಸಂಸ್ಥೆಗಳಿಗೆ ಪ್ರಕರಣದ ಡಿಜಿಟಲ್ ಸಾಕ್ಷ್ಯ ಸೇರಿದಂತೆ ಚಾರ್ಜ್ ಶೀಟ್‌ನ ವಿಷಯವನ್ನು ಪ್ರಕಟಿಸದಂತೆ ಮತ್ತು ಪ್ರಸಾರ ಮಾಡದಂತೆ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕ ದಾಖಲೆಗಳಲ್ಲ: ಪ್ರಕರಣದಲ್ಲಿನ ದಾಖಲೆಗಳು ಸಾರ್ವಜನಿಕವಾಗಿ ಭಿತ್ತರಿಸುವಂತಹ ವಿಷಯಗಳಲ್ಲ. ಚಾರ್ಜ್‌ಶೀಟ್‌ಗೆ ಸಂಬಂಧಿಸಿದ ಯಾವುದೇ ಆಡಿಯೋ, ವಿಡಿಯೋ ಇತರೆ ಸಾಕ್ಷ್ಯಾಧಾರಗಳ ಮಾಹಿತಿಯನ್ನು ಪ್ರಸಾರ ಮಾಡುವುದು ತನಿಖೆಗೆ ಅಡ್ಡಿಯಾಗಲಿದೆ. ಕೆಲವು ಮಾಧ್ಯಮಗಳು ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಸೂಕ್ಷ್ಮ ಸಾಕ್ಷ್ಯಗಳ ಸಮೇತ ವರದಿ ಮಾಡುತ್ತಿವೆ. ಇದು ಸೂಕ್ಷ್ಮ ವಿಷಯದಲ್ಲಿ ಆರೋಪಿ ಮತ್ತು ತನಿಖಾಧಿಕಾರಿಗಳಿಗೆ ಹಾನಿಯನ್ನುಂಟು ಮಾಡುತ್ತದೆ. ಈ ವಿಷಯ ಇನ್ನೂ ನ್ಯಾಯಾಲಯದ ಮುಂದೆ ಬಾಕಿ ಇದೆ. ಅದಕ್ಕಾಗಿ ನ್ಯಾಯಾಲಯವು ಚಾರ್ಜ್​ಶೀಟ್‌ನಲ್ಲಿ ಲಗತ್ತಿಸಲಾದ ವಿಷಯಗಳನ್ನು ಪ್ರಸಾರ ಮತ್ತು ಪ್ರಕಟಣೆಯನ್ನು ಮಾಡುವಂತಿಲ್ಲ ಎಂದಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಕೇಶ್ ಕುಮಾರ್ ಸಿಂಗ್ ಅವರು ಈ ಆದೇಶ ನೀಡಿದ್ದು, ಔಪಚಾರಿಕ ಆದೇಶ, ಸೂಚನೆಗಳನ್ನು ನೀಡಲಾಗುತ್ತಿದೆ. ಇದು ತನಿಖೆಯ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಬಹುದು. ಸುಪ್ರೀಂ ಕೋರ್ಟ್‌ನ ಆದೇಶದ ಉಲ್ಲಂಘನೆ ಮಾಡಿದಂತಾಗುತ್ತದೆ. ಚಾರ್ಜ್‌ಶೀಟ್ ಸಾರ್ವಜನಿಕ ದಾಖಲೆಯಲ್ಲ ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣವೇನು?: 2022 ರ ಮೇ ತಿಂಗಳಲ್ಲಿ ದೆಹಲಿಯ ಮೆಹ್ರೌಲಿಯಲ್ಲಿರುವ ಬಾಡಿಗೆ ಫ್ಲಾಟ್‌ನಲ್ಲಿ ವಾಸವಾಗಿದ್ದ ಅಫ್ತಾಬ್ ಪೂನಾವಾಲಾ ಎಂಬಾತ ತನ್ನ ಲಿವ್​ಇನ್​ ಗೆಳತಿ ಶ್ರದ್ಧಾ ವಾಕರ್‌ಳನ್ನು ಕತ್ತು ಹಿಸುಕಿ ಕೊಂದಿದ್ದ. ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರೀಜರ್​ನಲ್ಲಿ ಸಂಗ್ರಹಿಸಿಟ್ಟಿದ್ದ. ಕೊಲೆ ಮಾಡಿದ್ದು ಗೊತ್ತಾಗಬಾರದು ಎಂದು ದಿನವೂ ದೇಹದ ಒಂದೊಂದೇ ತುಂಡನ್ನು ಮೆಹ್ರೌಲಿಯ ಕಾಡು, ನಿರ್ಜನ ಪ್ರದೇಶದಲ್ಲಿ ವಿಲೇವಾರಿ ಮಾಡುತ್ತಿದ್ದ.

ಇತ್ತ ಮಗಳು ನಾಪತ್ತೆಯಾಗಿದ್ದಾಳೆ ಎಂದು ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದರು. ಕೊಲೆ ನಡೆದು ಸುಮಾರು 5 ತಿಂಗಳ ನಂತರ ಶ್ರದ್ಧಾ ವಾಲ್ಕರ್ ಕೊಲೆಯಾಗಿದ್ದು ಬೆಳಕಿಗೆ ಬಂದಿತ್ತು. ಅಂತೆಯೇ, ನವೆಂಬರ್ 12 ರಂದು ಹಂತಕ ಅಫ್ತಾಬ್​ನನ್ನು ಬಂಧಿಸಲಾಗಿತ್ತು. ಪ್ರಕರಣ ವಿಚಾರಣೆಯ ಹಂತದಲ್ಲಿದ್ದು, ಅನೇಕ ಆಡಿಯೊ, ವಿಡಿಯೋ ಕ್ಲಿಪ್‌ಗಳನ್ನು ಸುದ್ದಿ ವಾಹಿನಿಗಳು ಪದೇ ಪದೇ ಪ್ರಸಾರ ಮಾಡುತ್ತಿವೆ. ಇವುಗಳನ್ನು ನಿರ್ಬಂಧಿಸಬೇಕು ಎಂದು ಒತ್ತಾಯ ಕೇಳಿಬಂದಿತ್ತು.

ಇದನ್ನೂ ಓದಿ: ಪ್ರೀತಿ, ಗುಟ್ಟಾಗಿ ಮದುವೆ, ನಿಂದನೆ ಆರೋಪ.. ನವ ವಿವಾಹಿತ ಆತ್ಮಹತ್ಯೆಗೆ ಶರಣು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.