ETV Bharat / bharat

ಕೋವಿಡ್​​ ನಿಯಮ ನಿರ್ಲಕ್ಷಿಸಿ ಧರ್ಮಗುರುವಿನ ಅಂತಿಮ ಯಾತ್ರೆಯಲ್ಲಿ ಸಾವಿರಾರು ಜನ ಭಾಗಿ

author img

By

Published : May 11, 2021, 7:03 AM IST

ಉತ್ತರ ಪ್ರದೇಶದ ಮುಸ್ಲಿಂ ಧರ್ಮಗುರು ಅಬ್ದುಲ್ ಹಮೀದ್ ಮೊಹಮ್ಮದ್ ಸಲೀಮುಲ್ ಖಾದ್ರಿ ಅವರ ಅಂತಿಮ ಯಾತ್ರೆಯಲ್ಲಿ ಕೋವಿಡ್‌ ಕರ್ಫ್ಯೂ- ಮುನ್ನೆಚ್ಚರಿಕೆ ಕ್ರಮಗಳನ್ನು​ ಉಲ್ಲಂಘಿಸಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

COVID norms flouted as thousand attend UP Cleric's funeral in Badaun
ಕರ್ಫ್ಯೂ-ಕೋವಿಡ್​​ ನಿಯಮ ಗಾಳಿಗೆ

ಬದೌನ್‌ (ಉತ್ತರ ಪ್ರದೇಶ): ದೇಶದಲ್ಲಿ ಕೊರೊನಾ ಪರಿಸ್ಥಿತಿ ತೀರಾ ಹದಗೆಟ್ಟಿದ್ದರೆ, ಇತ್ತ ಉತ್ತರ ಪ್ರದೇಶದ ಬದೌನ್​ನಲ್ಲಿ ಸಾವಿರಾರು ಜನರು ಮುಸ್ಲಿಂ ಧರ್ಮಗುರುವಿನ ಅಂತಿಮ ಯಾತ್ರೆ, ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು ಕಂಡುಬಂತು.

ಮುಸ್ಲಿಂ ಧರ್ಮಗುರು ಅಂತಿಮ ಯಾತ್ರೆಯಲ್ಲಿ ಸಾವಿರಾರು ಮಂದಿ

ಉತ್ತರ ಪ್ರದೇಶದಲ್ಲಿ ಲಾಕ್​ಡೌನ್​ ಮಾದರಿಯ ಕಠಿಣ ಕರ್ಫ್ಯೂ ಜಾರಿಯಲ್ಲಿದೆ. ಅಲ್ಲದೇ ರಾಜ್ಯದಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಜನರ ಸಂಖ್ಯೆಯನ್ನು 20ಕ್ಕೆ ಸೀಮಿತಗೊಳಿಸಲಾಗಿದೆ. ಆದ್ರೆ, ಈ ನಿಯಮಗಳನ್ನು ನಿರ್ಲಕ್ಷಿಸಿ ಭಾನುವಾರ ನಡೆದ ಅಬ್ದುಲ್ ಹಮೀದ್ ಮೊಹಮ್ಮದ್ ಸಲೀಮುಲ್ ಖಾದ್ರಿ ಅವರ ಅಂತಿಮ ಯಾತ್ರೆಗೆ ಜನಸಮೂಹವೇ ಸೇರಿತ್ತು.

ಇದನ್ನೂ ಓದಿ: ಬೆಳಗಾವಿ: ಲಾಕ್​ಡೌನ್ ನಿಯಮ ಬ್ರೇಕ್... 679 ಬೈಕ್ ಸೀಜ್, ಒಟ್ಟು ₹ 16 ಲಕ್ಷ ದಂಡ ವಸೂಲಿ

ಕೋವಿಡ್​ ನಿಯಮ ಉಲ್ಲಂಘಿಸಿದ ಜನರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬದೌನ್‌ ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ.

ಬದೌನ್‌ (ಉತ್ತರ ಪ್ರದೇಶ): ದೇಶದಲ್ಲಿ ಕೊರೊನಾ ಪರಿಸ್ಥಿತಿ ತೀರಾ ಹದಗೆಟ್ಟಿದ್ದರೆ, ಇತ್ತ ಉತ್ತರ ಪ್ರದೇಶದ ಬದೌನ್​ನಲ್ಲಿ ಸಾವಿರಾರು ಜನರು ಮುಸ್ಲಿಂ ಧರ್ಮಗುರುವಿನ ಅಂತಿಮ ಯಾತ್ರೆ, ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು ಕಂಡುಬಂತು.

ಮುಸ್ಲಿಂ ಧರ್ಮಗುರು ಅಂತಿಮ ಯಾತ್ರೆಯಲ್ಲಿ ಸಾವಿರಾರು ಮಂದಿ

ಉತ್ತರ ಪ್ರದೇಶದಲ್ಲಿ ಲಾಕ್​ಡೌನ್​ ಮಾದರಿಯ ಕಠಿಣ ಕರ್ಫ್ಯೂ ಜಾರಿಯಲ್ಲಿದೆ. ಅಲ್ಲದೇ ರಾಜ್ಯದಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಜನರ ಸಂಖ್ಯೆಯನ್ನು 20ಕ್ಕೆ ಸೀಮಿತಗೊಳಿಸಲಾಗಿದೆ. ಆದ್ರೆ, ಈ ನಿಯಮಗಳನ್ನು ನಿರ್ಲಕ್ಷಿಸಿ ಭಾನುವಾರ ನಡೆದ ಅಬ್ದುಲ್ ಹಮೀದ್ ಮೊಹಮ್ಮದ್ ಸಲೀಮುಲ್ ಖಾದ್ರಿ ಅವರ ಅಂತಿಮ ಯಾತ್ರೆಗೆ ಜನಸಮೂಹವೇ ಸೇರಿತ್ತು.

ಇದನ್ನೂ ಓದಿ: ಬೆಳಗಾವಿ: ಲಾಕ್​ಡೌನ್ ನಿಯಮ ಬ್ರೇಕ್... 679 ಬೈಕ್ ಸೀಜ್, ಒಟ್ಟು ₹ 16 ಲಕ್ಷ ದಂಡ ವಸೂಲಿ

ಕೋವಿಡ್​ ನಿಯಮ ಉಲ್ಲಂಘಿಸಿದ ಜನರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬದೌನ್‌ ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.