ನವದೆಹಲಿ : ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿ ಹದಗೆಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಆರೋಗ್ಯ ಸಚಿವ ಹರ್ಷ್ ವರ್ಧನ್ ತಮ್ಮ ಜವಾಬ್ದಾರಿಯನ್ನು ನಿರಾಕರಿಸುತ್ತಿದ್ದಾರೆ ಮತ್ತು ಪ್ರಜಾಪ್ರಭುತ್ವ ತತ್ವಗಳನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಆರೋಪಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಂತೆ ಇಂದು ಭಾರತದಲ್ಲಿ ಒಂದು ದಿನದಲ್ಲಿ 4,14,188 ಕೊರೊನಾ ವೈರಸ್ ಪ್ರಕರಣ ವರದಿಯಾಗಿವೆ. ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 2,14,91,598ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 36 ಲಕ್ಷ ದಾಟಿವೆ.
"ಸಾಂಕ್ರಾಮಿಕ ಪರಿಸ್ಥಿತಿ ಕೆಟ್ಟದಾಗಿ ಹದಗೆಡುತ್ತಿದೆ. ಲಸಿಕೆಗಳ ಅಸಮರ್ಪಕ ಪೂರೈಕೆ ಕಹಿ ಸತ್ಯ. ಆದರೆ, ಸರ್ಕಾರ ಅದನ್ನು ನಿರಾಕರಿಸುತ್ತಿದೆ" ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.
"ಪ್ರಧಾನಿ ಮತ್ತು ಆರೋಗ್ಯ ಸಚಿವರು ಜವಾಬ್ದಾರಿ ಹೊರಲು ನಿರಾಕರಿಸುತ್ತಾರೆ ಮತ್ತು ಪ್ರಜಾಪ್ರಭುತ್ವ ತತ್ವಗಳನ್ನು ಅಪಹಾಸ್ಯ ಮಾಡುತ್ತಿದ್ದಾರೆ" ಎಂದು ಚಿದಂಬರಂ ಆರೋಪಿಸಿದ್ದಾರೆ.