ETV Bharat / bharat

ಪುಲ್ವಾಮಾದಲ್ಲಿ ಉಗ್ರರ ದಾಳಿ: ಸಿಆರ್‌ಪಿಎಫ್‌ ಎಎಸ್‌ಐ ಹುತಾತ್ಮ

author img

By

Published : Jul 17, 2022, 4:14 PM IST

ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸ್​ ಬಳಿ ಪೊಲೀಸ್ ಮತ್ತು ಸಿಆರ್‌ಪಿಎಫ್‌ ಯೋಧರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ.

CRPF ASI killed in terror attack in Pulwam
ಪುಲ್ವಾಮಾದಲ್ಲಿ ಉಗ್ರರ ದಾಳಿ: ಸಿಆರ್‌ಪಿಎಫ್‌ ಎಎಸ್‌ಐ ಹುತಾತ್ಮ

ಶ್ರೀನಗರ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ಮಾಡಿದ್ದು, ಸಿಆರ್‌ಪಿಎಫ್‌ನ ಸಹಾಯಕ ಸಬ್​ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ. ವಿನೋದ್ ಕುಮಾರ್ ಎಂಬುವವರೇ ಹುತಾತ್ಮ ಯೋಧ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸ್​ ಬಳಿ ಇಂದು ಮಧ್ಯಾಹ್ನ ಉಗ್ರರು ಪೊಲೀಸ್ ಮತ್ತು ಸಿಆರ್‌ಪಿಎಫ್‌ ಪಡೆ ಮೇಲೆ ಅಪರಿಚಿತ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಎಎಸ್‌ಐ ವಿನೋದ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ಕ್ರಾಸ್​ನ ಬಳಿ ಸೇಬು ತೋಟವಿದ್ದು, ಹೆಚ್ಚಿನ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದರು. ಇಡೀ ಪ್ರದೇಶವನ್ನು ಸುತ್ತುವರಿಯಲಾಗಿದೆ. ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ನವೀನ್ ಜಿಂದಾಲ್ ಭದ್ರತಾ ವಾಹನದ ಮೇಲೆ ದಾಳಿ ಆರೋಪ: ತಪ್ಪುದಾರಿಗೆಳೆಯುವ ವದಂತಿ ಎಂದ ಪೊಲೀಸರು

ಶ್ರೀನಗರ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ಮಾಡಿದ್ದು, ಸಿಆರ್‌ಪಿಎಫ್‌ನ ಸಹಾಯಕ ಸಬ್​ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ. ವಿನೋದ್ ಕುಮಾರ್ ಎಂಬುವವರೇ ಹುತಾತ್ಮ ಯೋಧ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸ್​ ಬಳಿ ಇಂದು ಮಧ್ಯಾಹ್ನ ಉಗ್ರರು ಪೊಲೀಸ್ ಮತ್ತು ಸಿಆರ್‌ಪಿಎಫ್‌ ಪಡೆ ಮೇಲೆ ಅಪರಿಚಿತ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಎಎಸ್‌ಐ ವಿನೋದ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ಕ್ರಾಸ್​ನ ಬಳಿ ಸೇಬು ತೋಟವಿದ್ದು, ಹೆಚ್ಚಿನ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದರು. ಇಡೀ ಪ್ರದೇಶವನ್ನು ಸುತ್ತುವರಿಯಲಾಗಿದೆ. ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ನವೀನ್ ಜಿಂದಾಲ್ ಭದ್ರತಾ ವಾಹನದ ಮೇಲೆ ದಾಳಿ ಆರೋಪ: ತಪ್ಪುದಾರಿಗೆಳೆಯುವ ವದಂತಿ ಎಂದ ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.