ETV Bharat / bharat

ಬಾಲಕಿಯ ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ ವೈರಲ್ ಮಾಡಿದ ಪುಂಡರು: ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆ - ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆ

ಸಿಎಂ ಯೋಗಿ ಆದಿತ್ಯನಾಥ್ ನಾಡಲ್ಲಿ ಅಮಾನವೀಯ ಕೃತ್ಯವೊಂದು ಜರುಗಿದ್ದು, ಇಡೀ ಮಾನವ ಕುಲವೇ ತಲೆತಗ್ಗಿಸುವಂತಾಗಿದೆ.

dabangs-took-off-the-girl-lower-clothes-and-made-video-viral-in-moradabad
ಬಾಲಕಿಯ ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ ವೈರಲ್ ಮಾಡಿದ ಪುಂಡರು: ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆ
author img

By

Published : Jun 11, 2021, 4:01 PM IST

Updated : Jun 11, 2021, 4:15 PM IST

ಮೊರದಾಬಾದ್( ಉತ್ತರ ಪ್ರದೇಶ): ಪುಂಡ ಯುವಕರು ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ, ಆ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮೊರದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಬಾಲಕಿ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ, ಮನ ಕರಗದ ಇಬ್ಬರು ದುಷ್ಕರ್ಮಿಗಳು ಆಕೆಯನ್ನು ಬಯಲಿನಲ್ಲಿ ವಿವಸ್ತ್ರಗೊಳಿಸಿ, ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು, ವಿಡಿಯೋ ವೈರಲ್ ಮಾಡಿದ್ದಾರೆ.

ಬೋಜಪುರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇದಕ್ಕೂ ಮೊದಲು ಬಾಲಕ ಮತ್ತು ಬಾಲಕಿ ಇಬ್ಬರು ತೋಟವೊಂದರ ಬಳಿ ಕುಳಿತುಕೊಂಡಿದ್ದರು. ಸ್ಥಳಕ್ಕೆ ಧಾವಿಸಿದ ಪುಂಡರ ಗುಂಪು, ಬಾಲಕನ ಮೇಲೆ ಹಲ್ಲೆ ಮಾಡಿ, ಬಾಲಕಿಯನ್ನು ವಿವಸ್ತ್ರಗೊಳಿಸಿದ್ದಾರೆ. ಈ ಘಟನೆಯ ನಂತರ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇಬ್ಬರು ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: 114 ಟನ್ ಪ್ರಾಣವಾಯು ಹೊತ್ತು ರಾಜ್ಯಕ್ಕೆ ಬಂದ 31ನೇ ಆಕ್ಸಿಜನ್ ಎಕ್ಸ್‌ಪ್ರೆಸ್‌

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ದೇಹಾತ್ ವಿದ್ಯಾಸಾಗರ್ ಮಿಶ್ರಾ, ವಿಡಿಯೋ ವೈರಲ್ ಆಗಿರುವ ವಿಚಾರ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಈ ಸಂಬಂಧ ಬಾಲಕಿಯ ತಂದೆ ದೂರು ನೀಡಿದ್ದು, ಐಟಿ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಮೊಹಮದ್ ಅರ್ಷದ್ ಮತ್ತು ಸಯೀದ್ ಎಂದು ಗುರುತಿಸಲಾಗಿದ್ದು, ಆದಷ್ಟು ಬೇಗನೇ ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ.

ಮೊರದಾಬಾದ್( ಉತ್ತರ ಪ್ರದೇಶ): ಪುಂಡ ಯುವಕರು ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ, ಆ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮೊರದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಬಾಲಕಿ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ, ಮನ ಕರಗದ ಇಬ್ಬರು ದುಷ್ಕರ್ಮಿಗಳು ಆಕೆಯನ್ನು ಬಯಲಿನಲ್ಲಿ ವಿವಸ್ತ್ರಗೊಳಿಸಿ, ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು, ವಿಡಿಯೋ ವೈರಲ್ ಮಾಡಿದ್ದಾರೆ.

ಬೋಜಪುರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇದಕ್ಕೂ ಮೊದಲು ಬಾಲಕ ಮತ್ತು ಬಾಲಕಿ ಇಬ್ಬರು ತೋಟವೊಂದರ ಬಳಿ ಕುಳಿತುಕೊಂಡಿದ್ದರು. ಸ್ಥಳಕ್ಕೆ ಧಾವಿಸಿದ ಪುಂಡರ ಗುಂಪು, ಬಾಲಕನ ಮೇಲೆ ಹಲ್ಲೆ ಮಾಡಿ, ಬಾಲಕಿಯನ್ನು ವಿವಸ್ತ್ರಗೊಳಿಸಿದ್ದಾರೆ. ಈ ಘಟನೆಯ ನಂತರ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇಬ್ಬರು ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: 114 ಟನ್ ಪ್ರಾಣವಾಯು ಹೊತ್ತು ರಾಜ್ಯಕ್ಕೆ ಬಂದ 31ನೇ ಆಕ್ಸಿಜನ್ ಎಕ್ಸ್‌ಪ್ರೆಸ್‌

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ದೇಹಾತ್ ವಿದ್ಯಾಸಾಗರ್ ಮಿಶ್ರಾ, ವಿಡಿಯೋ ವೈರಲ್ ಆಗಿರುವ ವಿಚಾರ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಈ ಸಂಬಂಧ ಬಾಲಕಿಯ ತಂದೆ ದೂರು ನೀಡಿದ್ದು, ಐಟಿ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಮೊಹಮದ್ ಅರ್ಷದ್ ಮತ್ತು ಸಯೀದ್ ಎಂದು ಗುರುತಿಸಲಾಗಿದ್ದು, ಆದಷ್ಟು ಬೇಗನೇ ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ.

Last Updated : Jun 11, 2021, 4:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.