ETV Bharat / bharat

24 ಗಂಟೆಯಲ್ಲಿ 20 ಮಂದಿ ಸಾವು..ವಿಷಪೂರಿತ ಮದ್ಯವೇ ಕಾರಣಾನಾ?

author img

By

Published : Nov 4, 2021, 3:19 PM IST

Updated : Nov 4, 2021, 3:42 PM IST

ಬಿಹಾರದಲ್ಲಿ ವಿಷಪೂರಿತ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಇದು ಪ್ರತಿಪಕ್ಷಗಳ ಪಿತೂರಿ ಎಂದು ಸಚಿವನೋರ್ವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Death toll touches 20 in Gopalganj hooch tragedy
ವಿಷಪೂರಿತ ಮದ್ಯ ಸೇವನೆ ಪ್ರಕರಣ: ಬಿಹಾರದಲ್ಲಿ 20ಕ್ಕೆ ಏರಿದ ಸಾವಿನ ಸಂಖ್ಯೆ

ಪಾಟ್ನಾ(ಬಿಹಾರ): ವಿಷಪೂರಿತ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ನಾಲ್ವರು ತಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಕೆಲವರು ಅಸ್ವಸ್ಥರಾಗಿದ್ದು, ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಗೋಪಾಲ್​ಗಂಜ್​ ಜಿಲ್ಲೆಯ ಮೊಹಮದ್​ಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ದುರ್ಘಟನೆ ಸಂಭವಿಸಿದ್ದು,​ ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೋಪಾಲ್​ಗಂಜ್ ಜಿಲ್ಲಾಧಿಕಾರಿ ಡಾ. ನವಲ್ ಕಿಶೋರ್ ಚೌಧರಿ ನಿಗೂಢ ಕಾರಣದಿಂದ ಸಾವುಗಳು ಸಂಭವಿಸಿವೆ ಎಂದು ಮಾಹಿತಿ ನೀಡಿದ್ದಾರೆ.

ದುರ್ಘಟನೆಯಿಂದ ಸಂತ್ರಸ್ತರಾದವರ ಮನೆಗಳಿಂದ ನಾವು ಸ್ಯಾಂಪಲ್​ಗಳನ್ನು ಸಂಗ್ರಹ ಮಾಡಿದ್ದು, ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟವರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ವರದಿ ಬಂದ ಮೇಲೆ ಅವಘಡಕ್ಕೆ ಕಾರಣ ಗೊತ್ತಾಗಲಿದೆ. ಸದ್ಯಕ್ಕೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ಈ ಬೆಳವಣಿಗೆಗಳ ನಡುವೆ ಗೋಪಾಲ್‌ಗಂಜ್‌ನ ಎಸ್‌ಡಿಪಿಒ ಸಂಜೀವ್ ಕುಮಾರ್ ಮತ್ತು ಗೋಪಾಲ್‌ಗಂಜ್ ನಗರದ ಅಬಕಾರಿ ಇನ್ಸ್​​ಪೆಕ್ಟರ್​ ರಾಕೇಶ್ ಕುಮಾರ್ ಮೊಹಮದ್​​ಪುರ ಗ್ರಾಮದ ಮೇಲೆ ದಾಳಿ ನಡೆಸಿ ಕೆಲವರ ಮನೆಗಳಿಂದ ಮದ್ಯದ ಪೊಟ್ಟಣಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಆ ಮನೆಗಳನ್ನು ಜಪ್ತಿ ಮಾಡಿದ್ದಾರೆ.

ಘಟನೆಯಲ್ಲಿ ಪ್ರಮುಖ ಆರೋಪಿಯಾಗಿರುವ ಚತುರಾಮ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಆತನ ಸಹಚರ ಮಹೇಶ್ ರಾಮ್ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

'ಪ್ರತಿಪಕ್ಷಗಳ ಪಿತೂರಿ': ಉಪಚುನಾವಣೆಯಲ್ಲಿ ಸಿಎಂ ನಿತೀಶ್ ಕುಮಾರ್ ಅವರ ಪಕ್ಷಕ್ಕೆ ಗೆಲುವು ಸಿಕ್ಕಿದ್ದು, ಇದನ್ನ ಸಹಿಸಿಕೊಳ್ಳದ ಪ್ರತಿಕ್ಷಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕಾರಣಕ್ಕಾಗಿ ಈ ಪಿತೂರಿ ನಡೆಸಿವೆ ಎಂದು ಗಣಿ, ಭೂ ವಿಜ್ಞಾನ ಸಚಿವ ಮತ್ತು ಗೋಪಾಲ್​ಗಂಜ್​ನ ಬಿಜೆಪಿ ಶಾಸಕ ಜಾನಕ್ ರಾಮ್ ಆರೋಪಿಸಿದ್ದಾರೆ. ಇದರ ಜೊತೆಗೆ ಅಪರಾಧಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ದೀಪಾವಳಿಗೆ ಸಾರ್ವತ್ರಿಕ ರಜೆ ಘೋಷಣೆಗೆ ಒತ್ತಾಯ; ಮಸೂದೆ ಮಂಡನೆ

ಪಾಟ್ನಾ(ಬಿಹಾರ): ವಿಷಪೂರಿತ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ನಾಲ್ವರು ತಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಕೆಲವರು ಅಸ್ವಸ್ಥರಾಗಿದ್ದು, ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಗೋಪಾಲ್​ಗಂಜ್​ ಜಿಲ್ಲೆಯ ಮೊಹಮದ್​ಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ದುರ್ಘಟನೆ ಸಂಭವಿಸಿದ್ದು,​ ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೋಪಾಲ್​ಗಂಜ್ ಜಿಲ್ಲಾಧಿಕಾರಿ ಡಾ. ನವಲ್ ಕಿಶೋರ್ ಚೌಧರಿ ನಿಗೂಢ ಕಾರಣದಿಂದ ಸಾವುಗಳು ಸಂಭವಿಸಿವೆ ಎಂದು ಮಾಹಿತಿ ನೀಡಿದ್ದಾರೆ.

ದುರ್ಘಟನೆಯಿಂದ ಸಂತ್ರಸ್ತರಾದವರ ಮನೆಗಳಿಂದ ನಾವು ಸ್ಯಾಂಪಲ್​ಗಳನ್ನು ಸಂಗ್ರಹ ಮಾಡಿದ್ದು, ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟವರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ವರದಿ ಬಂದ ಮೇಲೆ ಅವಘಡಕ್ಕೆ ಕಾರಣ ಗೊತ್ತಾಗಲಿದೆ. ಸದ್ಯಕ್ಕೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ಈ ಬೆಳವಣಿಗೆಗಳ ನಡುವೆ ಗೋಪಾಲ್‌ಗಂಜ್‌ನ ಎಸ್‌ಡಿಪಿಒ ಸಂಜೀವ್ ಕುಮಾರ್ ಮತ್ತು ಗೋಪಾಲ್‌ಗಂಜ್ ನಗರದ ಅಬಕಾರಿ ಇನ್ಸ್​​ಪೆಕ್ಟರ್​ ರಾಕೇಶ್ ಕುಮಾರ್ ಮೊಹಮದ್​​ಪುರ ಗ್ರಾಮದ ಮೇಲೆ ದಾಳಿ ನಡೆಸಿ ಕೆಲವರ ಮನೆಗಳಿಂದ ಮದ್ಯದ ಪೊಟ್ಟಣಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಆ ಮನೆಗಳನ್ನು ಜಪ್ತಿ ಮಾಡಿದ್ದಾರೆ.

ಘಟನೆಯಲ್ಲಿ ಪ್ರಮುಖ ಆರೋಪಿಯಾಗಿರುವ ಚತುರಾಮ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಆತನ ಸಹಚರ ಮಹೇಶ್ ರಾಮ್ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

'ಪ್ರತಿಪಕ್ಷಗಳ ಪಿತೂರಿ': ಉಪಚುನಾವಣೆಯಲ್ಲಿ ಸಿಎಂ ನಿತೀಶ್ ಕುಮಾರ್ ಅವರ ಪಕ್ಷಕ್ಕೆ ಗೆಲುವು ಸಿಕ್ಕಿದ್ದು, ಇದನ್ನ ಸಹಿಸಿಕೊಳ್ಳದ ಪ್ರತಿಕ್ಷಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕಾರಣಕ್ಕಾಗಿ ಈ ಪಿತೂರಿ ನಡೆಸಿವೆ ಎಂದು ಗಣಿ, ಭೂ ವಿಜ್ಞಾನ ಸಚಿವ ಮತ್ತು ಗೋಪಾಲ್​ಗಂಜ್​ನ ಬಿಜೆಪಿ ಶಾಸಕ ಜಾನಕ್ ರಾಮ್ ಆರೋಪಿಸಿದ್ದಾರೆ. ಇದರ ಜೊತೆಗೆ ಅಪರಾಧಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ದೀಪಾವಳಿಗೆ ಸಾರ್ವತ್ರಿಕ ರಜೆ ಘೋಷಣೆಗೆ ಒತ್ತಾಯ; ಮಸೂದೆ ಮಂಡನೆ

Last Updated : Nov 4, 2021, 3:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.