ETV Bharat / bharat

ಆಪ್ ಮುಖಂಡ ಸತ್ಯೇಂದ್ರ ಜೈನ್ ಪ್ರಕರಣ ವರ್ಗಾಯಿಸುವಂತೆ ಕೋರಿದ ಇಡಿ ಮನವಿಗೆ ದೆಹಲಿ ಕೋರ್ಟ್ ಅನುಮತಿ

author img

By

Published : Sep 23, 2022, 9:03 PM IST

ದೆಹಲಿ ಎಎಪಿ ಮುಖಂಡ ಸತ್ಯೇಂದ್ರ ಜೈನ್ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಕೋರಿ ಇಡಿ ಸಲ್ಲಿಸಿದ ಮನವಿಯನ್ನು ದೆಹಲಿ ಕೋರ್ಟ್ ಶುಕ್ರವಾರ ಅಂಗೀಕರಿಸಿದೆ.

ಸತ್ಯೇಂದ್ರ ಜೈನ್
ಸತ್ಯೇಂದ್ರ ಜೈನ್

ನವದೆಹಲಿ: ದೆಹಲಿ ಆಪ್ ಮುಖಂಡ ಸತ್ಯೇಂದರ್ ಜೈನ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರ ರಾಜಧಾನಿ ರೋಸ್ ಅವೆನ್ಯೂ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ಅಂಗೀಕರಿಸಿದೆ. ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ಈ ಹಿಂದೆ ವಿಚಾರಣೆ ನಡೆಸಿದ್ದ ಈ ಪ್ರಕರಣವನ್ನು ಇನ್ನು ಮುಂದೆ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ವಿಚಾರಣೆ ನಡೆಸಲಿದ್ದಾರೆ.

ಇಡಿ ವಾದದ ವೇಳೆ ಸುಳ್ಳು ವೈದ್ಯಕೀಯ ವರದಿಗಳನ್ನು ಬಳಸಿಕೊಂಡು ವೈದ್ಯಕೀಯ ಜಾಮೀನು ಪಡೆಯುವ ಪ್ರಯತ್ನ ನಡೆದಿದೆ ಎಂದು ಎಎಸ್‌ಜಿ ಎಸ್‌ವಿ ರಾಜು ದೂರು ಸಲ್ಲಿಸಿದರು. ನ್ಯಾಯಾಲಯ ಯಾವುದೇ ಕ್ರಮ ಕೈಗೊಂಡಿಲ್ಲ. ಅವರು ಸಚಿವರಾಗಿ ದೆಹಲಿ ಕಾರಾಗೃಹಗಳನ್ನು ಸಹ ನಿರ್ವಹಿಸುತ್ತಿದ್ದಾರೆ. ಅವರು ಅಧಿಕಾರ, ಹಣ ಮತ್ತು ಪ್ರಭಾವವನ್ನು ಬಳಸಬಹುದು. ಅದಕ್ಕಾಗಿ ಪ್ರಕರಣ ವರ್ಗಾವಣೆಗೆ ಕೋರಿದ್ದರು.

ಸತ್ಯೇಂದ್ರ ಜೈನ್ ಅವರ ಮನಿ ಲಾಂಡರಿಂಗ್ ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಒತ್ತಾಯಿಸಿ ಇಡಿ, ರೂಸ್ ಅವೆನ್ಯೂ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಅರ್ಜಿ ಸಲ್ಲಿಸಿತ್ತು.

ನಾಲ್ಕು ಕಂಪನಿಗಳ ಮೂಲಕ ಹಣ ವರ್ಗಾವಣೆ: ಎಎಪಿ ನಾಯಕನ ವಿರುದ್ಧ 2017ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದ ಆಧಾರದ ಮೇಲೆ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಮತ್ತು ಇತರ ಇಬ್ಬರನ್ನು ಇಡಿ ಬಂಧಿಸಿತ್ತು. ಅದರ ಅಡಿಯಲ್ಲಿ ಅವರು ನಾಲ್ಕು ಕಂಪನಿಗಳ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅರ್ಜಿ ಅಂಗೀಕರಿಸಿದ ಕೋರ್ಟ್​: ಸೆಪ್ಟೆಂಬರ್ 16 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ಅವರನ್ನು ಇಡಿ ವಿಚಾರಣೆ ನಡೆಸಿತು. ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಅವರನ್ನು ಪ್ರಶ್ನಿಸಲು ಅನುಮತಿ ಕೋರಿ ಇಡಿ ಸಲ್ಲಿಸಿದ ಅರ್ಜಿಯನ್ನು ಅಂಗೀಕರಿಸಿದರು. ಇತ್ತೀಚೆಗೆ ನ್ಯಾಯಾಲಯವು ಸತ್ಯೇಂದ್ರ ಜೈನ್, ಅವರ ಪತ್ನಿ ಮತ್ತು ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಸಂಸ್ಥೆಗಳು ಸೇರಿದಂತೆ ಎಂಟು ಇತರರ ವಿರುದ್ಧ ಇಡಿ ಸಲ್ಲಿಸಿದ ಪ್ರಾಸಿಕ್ಯೂಷನ್ ದೂರಿನ (ಚಾರ್ಜ್‌ಶೀಟ್) ಗಮನಕ್ಕೆ ತೆಗೆದುಕೊಂಡಿತು.

ಓದಿ: ಪ್ರೇಮಿಗಳ ಕೊಲೆ ಪ್ರಕರಣ: ಒಂದೇ ಕುಟುಂಬದ ನಾಲ್ವರಿಗೆ ಮರಣದಂಡನೆ

ನವದೆಹಲಿ: ದೆಹಲಿ ಆಪ್ ಮುಖಂಡ ಸತ್ಯೇಂದರ್ ಜೈನ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರ ರಾಜಧಾನಿ ರೋಸ್ ಅವೆನ್ಯೂ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ಅಂಗೀಕರಿಸಿದೆ. ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ಈ ಹಿಂದೆ ವಿಚಾರಣೆ ನಡೆಸಿದ್ದ ಈ ಪ್ರಕರಣವನ್ನು ಇನ್ನು ಮುಂದೆ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ವಿಚಾರಣೆ ನಡೆಸಲಿದ್ದಾರೆ.

ಇಡಿ ವಾದದ ವೇಳೆ ಸುಳ್ಳು ವೈದ್ಯಕೀಯ ವರದಿಗಳನ್ನು ಬಳಸಿಕೊಂಡು ವೈದ್ಯಕೀಯ ಜಾಮೀನು ಪಡೆಯುವ ಪ್ರಯತ್ನ ನಡೆದಿದೆ ಎಂದು ಎಎಸ್‌ಜಿ ಎಸ್‌ವಿ ರಾಜು ದೂರು ಸಲ್ಲಿಸಿದರು. ನ್ಯಾಯಾಲಯ ಯಾವುದೇ ಕ್ರಮ ಕೈಗೊಂಡಿಲ್ಲ. ಅವರು ಸಚಿವರಾಗಿ ದೆಹಲಿ ಕಾರಾಗೃಹಗಳನ್ನು ಸಹ ನಿರ್ವಹಿಸುತ್ತಿದ್ದಾರೆ. ಅವರು ಅಧಿಕಾರ, ಹಣ ಮತ್ತು ಪ್ರಭಾವವನ್ನು ಬಳಸಬಹುದು. ಅದಕ್ಕಾಗಿ ಪ್ರಕರಣ ವರ್ಗಾವಣೆಗೆ ಕೋರಿದ್ದರು.

ಸತ್ಯೇಂದ್ರ ಜೈನ್ ಅವರ ಮನಿ ಲಾಂಡರಿಂಗ್ ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಒತ್ತಾಯಿಸಿ ಇಡಿ, ರೂಸ್ ಅವೆನ್ಯೂ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಅರ್ಜಿ ಸಲ್ಲಿಸಿತ್ತು.

ನಾಲ್ಕು ಕಂಪನಿಗಳ ಮೂಲಕ ಹಣ ವರ್ಗಾವಣೆ: ಎಎಪಿ ನಾಯಕನ ವಿರುದ್ಧ 2017ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದ ಆಧಾರದ ಮೇಲೆ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಮತ್ತು ಇತರ ಇಬ್ಬರನ್ನು ಇಡಿ ಬಂಧಿಸಿತ್ತು. ಅದರ ಅಡಿಯಲ್ಲಿ ಅವರು ನಾಲ್ಕು ಕಂಪನಿಗಳ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅರ್ಜಿ ಅಂಗೀಕರಿಸಿದ ಕೋರ್ಟ್​: ಸೆಪ್ಟೆಂಬರ್ 16 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ಅವರನ್ನು ಇಡಿ ವಿಚಾರಣೆ ನಡೆಸಿತು. ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಅವರನ್ನು ಪ್ರಶ್ನಿಸಲು ಅನುಮತಿ ಕೋರಿ ಇಡಿ ಸಲ್ಲಿಸಿದ ಅರ್ಜಿಯನ್ನು ಅಂಗೀಕರಿಸಿದರು. ಇತ್ತೀಚೆಗೆ ನ್ಯಾಯಾಲಯವು ಸತ್ಯೇಂದ್ರ ಜೈನ್, ಅವರ ಪತ್ನಿ ಮತ್ತು ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಸಂಸ್ಥೆಗಳು ಸೇರಿದಂತೆ ಎಂಟು ಇತರರ ವಿರುದ್ಧ ಇಡಿ ಸಲ್ಲಿಸಿದ ಪ್ರಾಸಿಕ್ಯೂಷನ್ ದೂರಿನ (ಚಾರ್ಜ್‌ಶೀಟ್) ಗಮನಕ್ಕೆ ತೆಗೆದುಕೊಂಡಿತು.

ಓದಿ: ಪ್ರೇಮಿಗಳ ಕೊಲೆ ಪ್ರಕರಣ: ಒಂದೇ ಕುಟುಂಬದ ನಾಲ್ವರಿಗೆ ಮರಣದಂಡನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.