ETV Bharat / bharat

ಸ್ಮೃತಿ ಇರಾನಿ, ಪುತ್ರಿ ಯಾವುದೇ ರೆಸ್ಟೋರೆಂಟ್​ ಹೊಂದಿಲ್ಲ, ಲೈಸನ್ಸ್​​ಗೂ ಅರ್ಜಿ ಸಲ್ಲಿಸಿಲ್ಲ: ದೆಹಲಿ ಹೈಕೋರ್ಟ್​​

author img

By

Published : Aug 1, 2022, 8:34 PM IST

ಗೋವಾದಲ್ಲಿ ಸ್ಮೃತಿ ಇರಾನಿ ಪುತ್ರಿ ಬಾರ್ & ರೆಸ್ಟೋರೆಂಟ್ ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

Goa restaurant
Goa restaurant

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್ & ರೆಸ್ಟೋರೆಂಟ್ ನಡೆಸುತ್ತಿದ್ದಾರೆಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿತ್ತು. ತಮ್ಮ ಮೇಲೆ ಕೇಳಿ ಬಂದಿದ್ದ ಗಂಭೀರ ಆರೋಪವನ್ನು ಪ್ರಶ್ನೆ ಮಾಡಿದ್ದ ಕೇಂದ್ರ ಸಚಿವೆ ದೆಹಲಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಮಹತ್ವದ ಆದೇಶ ಹೊರಹಾಕಿರುವ ಹೈಕೋರ್ಟ್​ ಸ್ಮೃತಿ ಇರಾನಿ, ಪುತ್ರಿ ಗೋವಾದಲ್ಲಿ ಯಾವುದೇ ರೀತಿಯ ರೆಸ್ಟೋರೆಂಟ್​ ಹೊಂದಿಲ್ಲ, ಜೊತೆಗೆ ಲೈಸನ್ಸ್​​ಗೋಸ್ಕರ ಅರ್ಜಿಯನ್ನೂ ಸಲ್ಲಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.

ಜುಲೈ 23ರಂದು ಟ್ವೀಟ್ ಮಾಡಿದ್ದ ಕಾಂಗ್ರೆಸ್​ನ ಜೈರಾಮ್ ರಮೇಶ್ ಹಾಗೂ ಇತರೆ ಮುಖಂಡರು ಸ್ಮೃತಿ ಇರಾನಿ ವಿರುದ್ಧ ಈ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಕೇಂದ್ರ ಸಚಿವೆ, ಸೋನಿಯಾ ಹಾಗೂ ರಾಹುಲ್​ ಗಾಂಧಿ ವಿರುದ್ಧ ನಾನು ವಾಗ್ದಾಳಿ ನಡೆಸುತ್ತಿರುವ ಕಾರಣ ನನ್ನ ಮೇಲೆ ಇಂತಹ ಆರೋಪ ಮಾಡಲಾಗಿದೆ. ಕಾಂಗ್ರೆಸ್​​ ಆರೋಪದಲ್ಲಿ ಯಾವುದೇ ರೀತಿಯ ಹುರುಳಿಲ್ಲ. ಕೇವಲ 18 ವರ್ಷದ ಅಮಾಯಕ ಮಗಳ ಮೇಲೆ ಇಂತಹ ಆರೋಪ ಸರಿಯಲ್ಲ ಎಂದಿದ್ದರು. ಇದರ ಜೊತೆಗೆ ಕೋರ್ಟ್​ ಮೂಲಕ ತಿರುಗೇಟು ನೀಡುವುದಾಗಿಯೂ ತಿಳಿಸಿದ್ದರು. ಜೊತೆಗೆ ಆರೋಪ ಮಾಡಿದ್ದ ಕಾಂಗ್ರೆಸ್​ ನಾಯಕರಿಗೆ ಕೋರ್ಟ್ ಮೂಲಕ ಲೀಗಲ್ ನೋಟಿಸ್ ಜಾರಿ ಮಾಡಿದ್ದರು.

ಇದನ್ನೂ ಓದಿ: ಸ್ಮೃತಿ ಇರಾನಿ ಮಗಳ ಅಕ್ರಮ ಬಾರ್​ ಆರೋಪ: 'ಕೈ' ನಾಯಕರಿಗೆ ದೆಹಲಿ ಹೈಕೋರ್ಟ್​ ಸಮನ್ಸ್​, ಪೋಸ್ಟ್ ಡಿಲೀಟ್ ಮಾಡಲು ಸೂಚನೆ

ಕೈ ನಾಯಕರಿಗೆ ದೆಹಲಿ ಹೈಕೋರ್ಟ್ ಸಮನ್ಸ್​: ಸ್ಮೃತಿ ಇರಾನಿ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್​ ನಡೆಸುತ್ತಿದ್ದಾರೆಂದು ಕಾಂಗ್ರೆಸ್ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕಳೆದ ಎರಡು ದಿನಗಳ ಹಿಂದೆ​ ಸಮನ್ಸ್ ಜಾರಿ ಮಾಡಿದ್ದು, ಉತ್ತರ ನೀಡುವಂತೆ ತಿಳಿಸಿತ್ತು. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಎಲ್ಲ ಪೋಸ್ಟ್ ಡಿಲೀಟ್ ಮಾಡುವಂತೆ ಸೂಚನೆ ನೀಡಿತ್ತು. ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್​ ,ಪವನ್ ಖೇರಾ ಮತ್ತು ನೆಟ್ಟ ಡಿಸೋಜಾ ಅವರಿಗೆ ದೆಹಲಿ ಹೈಕೋರ್ಟ್ ಸಮನ್ಸ್ ಮಾಡಿ, ಅಕ್ರಮ ಬಾರ್​ಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಎಲ್ಲ ಪೋಸ್ಟ್ ಡಿಲೀಟ್ ಮಾಡುವಂತೆ ಸೂಚಿಸಿತ್ತು.

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್ & ರೆಸ್ಟೋರೆಂಟ್ ನಡೆಸುತ್ತಿದ್ದಾರೆಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿತ್ತು. ತಮ್ಮ ಮೇಲೆ ಕೇಳಿ ಬಂದಿದ್ದ ಗಂಭೀರ ಆರೋಪವನ್ನು ಪ್ರಶ್ನೆ ಮಾಡಿದ್ದ ಕೇಂದ್ರ ಸಚಿವೆ ದೆಹಲಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಮಹತ್ವದ ಆದೇಶ ಹೊರಹಾಕಿರುವ ಹೈಕೋರ್ಟ್​ ಸ್ಮೃತಿ ಇರಾನಿ, ಪುತ್ರಿ ಗೋವಾದಲ್ಲಿ ಯಾವುದೇ ರೀತಿಯ ರೆಸ್ಟೋರೆಂಟ್​ ಹೊಂದಿಲ್ಲ, ಜೊತೆಗೆ ಲೈಸನ್ಸ್​​ಗೋಸ್ಕರ ಅರ್ಜಿಯನ್ನೂ ಸಲ್ಲಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.

ಜುಲೈ 23ರಂದು ಟ್ವೀಟ್ ಮಾಡಿದ್ದ ಕಾಂಗ್ರೆಸ್​ನ ಜೈರಾಮ್ ರಮೇಶ್ ಹಾಗೂ ಇತರೆ ಮುಖಂಡರು ಸ್ಮೃತಿ ಇರಾನಿ ವಿರುದ್ಧ ಈ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಕೇಂದ್ರ ಸಚಿವೆ, ಸೋನಿಯಾ ಹಾಗೂ ರಾಹುಲ್​ ಗಾಂಧಿ ವಿರುದ್ಧ ನಾನು ವಾಗ್ದಾಳಿ ನಡೆಸುತ್ತಿರುವ ಕಾರಣ ನನ್ನ ಮೇಲೆ ಇಂತಹ ಆರೋಪ ಮಾಡಲಾಗಿದೆ. ಕಾಂಗ್ರೆಸ್​​ ಆರೋಪದಲ್ಲಿ ಯಾವುದೇ ರೀತಿಯ ಹುರುಳಿಲ್ಲ. ಕೇವಲ 18 ವರ್ಷದ ಅಮಾಯಕ ಮಗಳ ಮೇಲೆ ಇಂತಹ ಆರೋಪ ಸರಿಯಲ್ಲ ಎಂದಿದ್ದರು. ಇದರ ಜೊತೆಗೆ ಕೋರ್ಟ್​ ಮೂಲಕ ತಿರುಗೇಟು ನೀಡುವುದಾಗಿಯೂ ತಿಳಿಸಿದ್ದರು. ಜೊತೆಗೆ ಆರೋಪ ಮಾಡಿದ್ದ ಕಾಂಗ್ರೆಸ್​ ನಾಯಕರಿಗೆ ಕೋರ್ಟ್ ಮೂಲಕ ಲೀಗಲ್ ನೋಟಿಸ್ ಜಾರಿ ಮಾಡಿದ್ದರು.

ಇದನ್ನೂ ಓದಿ: ಸ್ಮೃತಿ ಇರಾನಿ ಮಗಳ ಅಕ್ರಮ ಬಾರ್​ ಆರೋಪ: 'ಕೈ' ನಾಯಕರಿಗೆ ದೆಹಲಿ ಹೈಕೋರ್ಟ್​ ಸಮನ್ಸ್​, ಪೋಸ್ಟ್ ಡಿಲೀಟ್ ಮಾಡಲು ಸೂಚನೆ

ಕೈ ನಾಯಕರಿಗೆ ದೆಹಲಿ ಹೈಕೋರ್ಟ್ ಸಮನ್ಸ್​: ಸ್ಮೃತಿ ಇರಾನಿ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್​ ನಡೆಸುತ್ತಿದ್ದಾರೆಂದು ಕಾಂಗ್ರೆಸ್ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕಳೆದ ಎರಡು ದಿನಗಳ ಹಿಂದೆ​ ಸಮನ್ಸ್ ಜಾರಿ ಮಾಡಿದ್ದು, ಉತ್ತರ ನೀಡುವಂತೆ ತಿಳಿಸಿತ್ತು. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಎಲ್ಲ ಪೋಸ್ಟ್ ಡಿಲೀಟ್ ಮಾಡುವಂತೆ ಸೂಚನೆ ನೀಡಿತ್ತು. ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್​ ,ಪವನ್ ಖೇರಾ ಮತ್ತು ನೆಟ್ಟ ಡಿಸೋಜಾ ಅವರಿಗೆ ದೆಹಲಿ ಹೈಕೋರ್ಟ್ ಸಮನ್ಸ್ ಮಾಡಿ, ಅಕ್ರಮ ಬಾರ್​ಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಎಲ್ಲ ಪೋಸ್ಟ್ ಡಿಲೀಟ್ ಮಾಡುವಂತೆ ಸೂಚಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.