ETV Bharat / bharat

ತೀವ್ರಗೊಂಡ ಪ್ರತಿಭಟನೆ: ಕ್ರೀಡಾಂಗಣಗಳನ್ನು 'ತಾತ್ಕಾಲಿಕ ಕಾರಾಗೃಹ'ಗಳಾಗಿ ಪರಿವರ್ತಿಸುವಂತೆ ದೆಹಲಿ ಪೊಲೀಸರ ಮನವಿ

author img

By

Published : Nov 27, 2020, 11:39 AM IST

ರೈತರ 'ದೆಹಲಿ ಚಲೋ' ಪ್ರತಿಭಟನೆ ಮುಂದುವರೆದಿದ್ದು, ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇರುವುದರಿಂದ 9 ಕ್ರೀಡಾಂಗಣಗಳನ್ನು ತಾತ್ಕಾಲಿಕ ಕಾರಾಗೃಹಗಳಾಗಿ ಪರಿವರ್ತಿಸಲು ದೆಹಲಿ ಪೊಲೀಸರು ಅರವಿಂದ್​ ಕೇಜ್ರಿವಾಲ್​ ಸರ್ಕಾರದ ಅನುಮತಿ ಕೇಳಿದ್ದಾರೆ.

farmers' protest
ರೈತರ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ನಗರದ 9 ಕ್ರೀಡಾಂಗಣಗಳನ್ನು ತಾತ್ಕಾಲಿಕ ಕಾರಾಗೃಹಗಳಾಗಿ ಪರಿವರ್ತಿಸಲು ಅನುಮತಿ ನೀಡುವಂತೆ ಅರವಿಂದ್​ ಕೇಜ್ರಿವಾಲ್​ ಸರ್ಕಾರಕ್ಕೆ ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ.

ಪಂಜಾಬ್​, ಹರಿಯಾಣದ ಸಾವಿರಾರು ರೈತರ 'ದೆಹಲಿ ಚಲೋ' ಪ್ರತಿಭಟನೆ ಮುಂದುವರೆದಿದೆ. ಪರಿಸ್ಥಿತಿ ಮತ್ತಷ್ಟು ಉಲ್ಭಣವಾಗಲಿದ್ದು, ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇರುವುದರಿಂದ ದೆಹಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ.

ರಾಷ್ಟ್ರ ರಾಜಧಾನಿಗೆ ಬಂದ ಪಂಜಾಬ್ ರೈತರನ್ನು ಬೆಂಬಲಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಶಾಂತಿಯುತ ಪ್ರತಿಭಟನೆ ನಡೆಸುವುದು ಸಾಂವಿಧಾನಿಕ ಹಕ್ಕು. ಪ್ರತಿಭಟನಾಕಾರರ ಮೇಲೆ ಜಲ ಫಿರಂಗಿಗಳನ್ನು ಬಳಸುವುದು ಅಪರಾಧ ಎಂದು ನಿನ್ನೆ ಹೇಳಿದ್ದರು.

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ನಗರದ 9 ಕ್ರೀಡಾಂಗಣಗಳನ್ನು ತಾತ್ಕಾಲಿಕ ಕಾರಾಗೃಹಗಳಾಗಿ ಪರಿವರ್ತಿಸಲು ಅನುಮತಿ ನೀಡುವಂತೆ ಅರವಿಂದ್​ ಕೇಜ್ರಿವಾಲ್​ ಸರ್ಕಾರಕ್ಕೆ ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ.

ಪಂಜಾಬ್​, ಹರಿಯಾಣದ ಸಾವಿರಾರು ರೈತರ 'ದೆಹಲಿ ಚಲೋ' ಪ್ರತಿಭಟನೆ ಮುಂದುವರೆದಿದೆ. ಪರಿಸ್ಥಿತಿ ಮತ್ತಷ್ಟು ಉಲ್ಭಣವಾಗಲಿದ್ದು, ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇರುವುದರಿಂದ ದೆಹಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ.

ರಾಷ್ಟ್ರ ರಾಜಧಾನಿಗೆ ಬಂದ ಪಂಜಾಬ್ ರೈತರನ್ನು ಬೆಂಬಲಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಶಾಂತಿಯುತ ಪ್ರತಿಭಟನೆ ನಡೆಸುವುದು ಸಾಂವಿಧಾನಿಕ ಹಕ್ಕು. ಪ್ರತಿಭಟನಾಕಾರರ ಮೇಲೆ ಜಲ ಫಿರಂಗಿಗಳನ್ನು ಬಳಸುವುದು ಅಪರಾಧ ಎಂದು ನಿನ್ನೆ ಹೇಳಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.