ETV Bharat / bharat

ಅಪಘಾತಕ್ಕೀಡಾದ ಯುಪಿ ಡೆಪ್ಯುಟಿ ಸಿಎಂ ಮಗನ ಕಾರು.. ಪ್ರಾಣಾಪಾಯದಿಂದ ಪಾರು - ಕೇಶವ್ ಪ್ರಸಾದ್ ಮೌರ್ಯ ಅವರ ಮಗನ ಕಾರು

ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಮಗ ಪ್ರಯಾಣಿಸುತ್ತಿದ್ದ ಕಾರ್​ವೊಂದು ಅಪಘಾತಕ್ಕೀಡಾಗಿರುವ ಘಟನೆ ಜಲೌನ್​​ನಲ್ಲಿ ನಡೆದಿದೆ.

Keshav Prasad Maurya son car accident
Keshav Prasad Maurya son car accident
author img

By

Published : Mar 26, 2022, 7:37 PM IST

ಜಲೌನ್​(ಉತ್ತರ ಪ್ರದೇಶ): ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಮಗನ ಕಾರು ಅಪಘಾತಕ್ಕೀಡಾಗಿದ್ದು, ಯೋಗೀಶ್ ಕುಮಾರ್ ಮೌರ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉತ್ತರ ಪ್ರದೇಶದ ಜಲೌನ್​​ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಯೋಗೇಶ್​ ಮೌರ್ಯ ಪ್ರಯಾಣಿಸುತ್ತಿದ್ದ ಕಾರು ಇಂದು ಮಧ್ಯಾಹ್ನ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿರುವ ಪರಿಣಾಮ ನಜ್ಜುಗುಜ್ಜಾಗಿದೆ. ಆದರೆ, ಯಾವುದೇ ಪ್ರಾಣಹಾನಿ ಆಗಿಲ್ಲವೆಂದು ತಿಳಿದುಬಂದಿದೆ.

ಉತ್ತರ ಪ್ರದೇಶದ ಜಲೌನ್​​ನ ಆಲಂಪುರದ ಬೈಪಾಸ್ ಬಳಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕಾಗಮಿಸಿರುವ ಕಲ್ಪಿ ಪೊಲೀಸ್​ ಠಾಣೆಯ ಅಧಿಕಾರಿಗಳು, ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅದೃಷ್ಟವಶಾತ್​​ ಉಪ ಮುಖ್ಯಮಂತ್ರಿ ಮಗ ಯೋಗೇಶ್​ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

  • माँ पीतांबरा की असीम अनुकंपा एवं आप सभी के आशीर्वाद से पुत्र योगेश कुमार मौर्य पूर्ण रूप से स्वस्थ है। चिकित्सकों के परामर्श से कुछ देर में पुनः माँ पितांबरा के दर्शन/पूजन हेतु प्रस्थान करेंगे। pic.twitter.com/kIcq0LMr2e

    — Keshav Prasad Maurya (@kpmaurya1) March 26, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಹಲ್ಲೆ ಆರೋಪ..

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್​​, ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರು ಹಾನಿಗೊಂಡಿದೆ ಎಂದಿರುವ ಅವರು, ಅಪಘಾತ ನಡೆದ ಸಂದರ್ಭದಲ್ಲಿ ಡೆಪ್ಯುಟಿ ಸಿಎಂ ಅವರ ಮಗ ಯೋಗೇಶ್​ ಕಾರಿನೊಳಗೆ ಇದ್ದರು ಎಂದು ಖಚಿತಪಡಿಸಿದ್ದಾರೆ. ನಿನ್ನೆ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಡೆಪ್ಯುಟಿ ಸಿಎಂ ಆಗಿ ಕೇಶವ್ ಪ್ರಸಾದ್ ಮೌರ್ಯ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಜಲೌನ್​(ಉತ್ತರ ಪ್ರದೇಶ): ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಮಗನ ಕಾರು ಅಪಘಾತಕ್ಕೀಡಾಗಿದ್ದು, ಯೋಗೀಶ್ ಕುಮಾರ್ ಮೌರ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉತ್ತರ ಪ್ರದೇಶದ ಜಲೌನ್​​ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಯೋಗೇಶ್​ ಮೌರ್ಯ ಪ್ರಯಾಣಿಸುತ್ತಿದ್ದ ಕಾರು ಇಂದು ಮಧ್ಯಾಹ್ನ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿರುವ ಪರಿಣಾಮ ನಜ್ಜುಗುಜ್ಜಾಗಿದೆ. ಆದರೆ, ಯಾವುದೇ ಪ್ರಾಣಹಾನಿ ಆಗಿಲ್ಲವೆಂದು ತಿಳಿದುಬಂದಿದೆ.

ಉತ್ತರ ಪ್ರದೇಶದ ಜಲೌನ್​​ನ ಆಲಂಪುರದ ಬೈಪಾಸ್ ಬಳಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕಾಗಮಿಸಿರುವ ಕಲ್ಪಿ ಪೊಲೀಸ್​ ಠಾಣೆಯ ಅಧಿಕಾರಿಗಳು, ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅದೃಷ್ಟವಶಾತ್​​ ಉಪ ಮುಖ್ಯಮಂತ್ರಿ ಮಗ ಯೋಗೇಶ್​ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

  • माँ पीतांबरा की असीम अनुकंपा एवं आप सभी के आशीर्वाद से पुत्र योगेश कुमार मौर्य पूर्ण रूप से स्वस्थ है। चिकित्सकों के परामर्श से कुछ देर में पुनः माँ पितांबरा के दर्शन/पूजन हेतु प्रस्थान करेंगे। pic.twitter.com/kIcq0LMr2e

    — Keshav Prasad Maurya (@kpmaurya1) March 26, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಹಲ್ಲೆ ಆರೋಪ..

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್​​, ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರು ಹಾನಿಗೊಂಡಿದೆ ಎಂದಿರುವ ಅವರು, ಅಪಘಾತ ನಡೆದ ಸಂದರ್ಭದಲ್ಲಿ ಡೆಪ್ಯುಟಿ ಸಿಎಂ ಅವರ ಮಗ ಯೋಗೇಶ್​ ಕಾರಿನೊಳಗೆ ಇದ್ದರು ಎಂದು ಖಚಿತಪಡಿಸಿದ್ದಾರೆ. ನಿನ್ನೆ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಡೆಪ್ಯುಟಿ ಸಿಎಂ ಆಗಿ ಕೇಶವ್ ಪ್ರಸಾದ್ ಮೌರ್ಯ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.