ETV Bharat / bharat

ಬಿಜೆಪಿ ಆರ್​ಎಸ್​ಎಸ್​​ ವಿರುದ್ಧ ಕಾಂಗ್ರೆಸ್​ನಿಂದ ನಿಜವಾದ ಹೋರಾಟ: ಮಲ್ಲಿಕಾರ್ಜುನ ಖರ್ಗೆ

author img

By

Published : Oct 10, 2022, 5:18 PM IST

ಬಿಜೆಪಿಯಲ್ಲಿ ಅಧ್ಯಕ್ಷರ ಚುನಾವಣೆ ಹೇಗೆ ನಡೆಯುತ್ತದೆ ಎಂಬುದು ಯಾರಿಗೂ ತಿಳಿದಿಲ್ಲ. ನಮ್ಮ ನಿಜವಾದ ಹೋರಾಟ ದೇಶದ ರಾಜಕೀಯ, ಪ್ರಜಾಸತ್ತಾತ್ಮಕ ಮತ್ತು ಸಾಮಾಜಿಕ ವಾತಾವರಣವನ್ನು ಹಾಳು ಮಾಡುತ್ತಿರುವ ಬಿಜೆಪಿ ಹಾಗೂ ಆರ್​ಎಸ್ಎಸ್​​ ವಿರುದ್ಧವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Senior party leader Mallikarjuna Kharge
ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ

ಜಮ್ಮು: ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕಾಂಗ್ರೆಸ್‌ನ ಆಂತರಿಕ ವಿಷಯವಾಗಿದೆ. ರಾಜಕೀಯ, ಪ್ರಜಾಸತ್ತಾತ್ಮಕತೆ, ದೇಶದ ಸಾಮಾಜಿಕ ವಾತಾವರಣವನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಹಾಗೂ ಆರ್​ಎಸ್​ಎಸ್​​ ವಿರುದ್ಧವೇ ನಮ್ಮ ಹೋರಾಟ ಎಂದು ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ವಿರೋಧ ಪಕ್ಷಗಳಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಪ್ರಶ್ನೆ ಎತ್ತುವ ಹಕ್ಕು ಬಿಜೆಪಿಗೆ ಇಲ್ಲ. ಬಿಜೆಪಿಯಲ್ಲಿ ಅಧ್ಯಕ್ಷರ ಚುನಾವಣೆ ಹೇಗೆ ನಡೆಯುತ್ತದೆ ಎಂದು ಯಾರಿಗಾದರೂ ತಿಳಿದಿದೆಯೇ ಎಂದು ಪ್ರಶ್ನಿಸಿದರು. ಏಳು ದಶಕಗಳಲ್ಲಿ ಕಾಂಗ್ರೆಸ್ ಕಟ್ಟಿದ ಪ್ರಜಾಸತ್ತಾತ್ಮಕ ಸಂಸ್ಥೆಗಳು ದುರ್ಬಲಗೊಂಡಿವೆ. ನಮ್ಮ ನಿಜವಾದ ಹೋರಾಟ ದೇಶದ ರಾಜಕೀಯ, ಪ್ರಜಾಸತ್ತಾತ್ಮಕ ಮತ್ತು ಸಾಮಾಜಿಕ ವಾತಾವರಣವನ್ನು ಹಾಳು ಮಾಡುತ್ತಿರುವ ಬಿಜೆಪಿ ಹಾಗೂ ಆರ್​ಎಸ್ಎಸ್​​ ವಿರುದ್ಧವಾಗಿದೆ ಎಂದು ಖರ್ಗೆ ಹೇಳಿದರು.

ಇಲ್ಲಿ ನಡೆದ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಪ್ರತಿನಿಧಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಕೆಟ್ಟ ಶಕ್ತಿಗಳಿಂದ ರಕ್ಷಿಸಲು ಕಾಂಗ್ರೆಸ್ ಪಕ್ಷವು ಮುಂಚೂಣಿಯಲ್ಲಿದೆ. ಪಂಡಿತ್ ಜವಾಹರ್ ಲಾಲ್ ನೆಹರೂ ಅವರಿಂದ ಹಿಡಿದು ಮನಮೋಹನ್ ಸಿಂಗ್ ಸರ್ಕಾರದವರೆಗೆ ಕಾಂಗ್ರೆಸ್ ಮಾಡಿದ ಆಸ್ತಿಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾರಾಟ ಮಾಡಿದೆ.

ಕಾಂಗ್ರೆಸಿಗರು ಮುಂದಾಳತ್ವ ವಹಿಸಿ ಎಚ್ಚೆತ್ತುಕೊಂಡು ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲರೂ ಜೊತೆಗೂಡಬೇಕು ಎಂದು ಖರ್ಗೆ ಕರೆ ನೀಡಿದರು. ಬಿಜೆಪಿಯಲ್ಲಿ ಅಧ್ಯಕ್ಷರ ಚುನಾವಣೆ ಯಾವಾಗ ಮತ್ತು ಹೇಗೆ ನಡೆಯುತ್ತದೆ ಎಂಬುದು ಯಾರಿಗೂ ತಿಳಿದಿಲ್ಲ. ಹಾಗಾಗಿ ಇತರರ ಬಗ್ಗೆ ವಿಶೇಷವಾಗಿ ದೇಶದ ಅತ್ಯಂತ ಹಳೆಯ ಮತ್ತು ದೊಡ್ಡ ಪ್ರಜಾಪ್ರಭುತ್ವ ಪಕ್ಷವಾದ ಕಾಂಗ್ರೆಸ್ ಬಗ್ಗೆ ಪ್ರಶ್ನೆ ಮಾಡಲು ಅವರಿಗೆ ಯಾವ ಹಕ್ಕಿದೆ ಎಂದು ಖರ್ಗೆ ಪ್ರಶ್ನಿಸಿದರು.

17 ಕ್ಕೆ ಎಲೆಕ್ಷನ್, 19ಕ್ಕೆ ಫಲಿತಾಂಶ: ಮಲ್ಲಿಕಾರ್ಜುನ್ ಖರ್ಗೆ ಅಕ್ಟೋಬರ್​ 17 ರಂದು ನಡೆಯುವ ಕಾಂಗ್ರೆಸ್​ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಇವರಿಗೆ ಎದುರಾಳಿ ಆಗಿ ತಿರುವನಂತಪುರ ಸಂಸದ ಶಶಿ ತರೂರ್​ ಸ್ಪರ್ಧಿಸಿದ್ದಾರೆ.

ಈಗಾಗಲೇ ಖರ್ಗೆಗೆ ತೆಲಂಗಾಣ ಕಾಂಗ್ರೆಸ್​ ಹಾಗೂ ಕೇರಳ ಪ್ರದೇಶ ಕಾಂಗ್ರೆಸ್​ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಹಿರಂಗ ಬೆಂಬಲ ಘೋಷಿಸಿವೆ. ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೆ ಉಭಯ ಅಭ್ಯರ್ಥಿಗಳು ಭೇಟಿ ನೀಡಿ ಬೆಂಬಲ ಕೋರುತ್ತಿದ್ದಾರೆ.

ರಾಹುಲ್​ ಹಾಗೂ ಸೋನಿಯಾ ಗಾಂಧಿ ಯಾವುದೇ ಅಭ್ಯರ್ಥಿಗೆ ಬಹಿರಂಗ ಬೆಂಬಲ ಘೋಷಿಸಲ್ಲ. ಈ ಬಗ್ಗೆ ರಾಹುಲ್​ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಆದರೆ ಮಲ್ಲಿಕಾರ್ಜುನ್​ ಖರ್ಗೆ ಗಾಂಧಿ ಕುಟುಂಬದ ಅಭ್ಯರ್ಥಿ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಇವೆಲ್ಲವನ್ನು ರಾಹುಲ್​ ಗಾಂಧಿ ಅಲ್ಲಗಳೆದಿದ್ದಾರೆ. ಇಬ್ಬರೂ ಅಭ್ಯರ್ಥಿಗಳು ಸಮರ್ಥರಾಗಿದ್ದಾರೆ ಎಂದು ರಾಹುಲ್​ ಹೇಳಿದ್ದಾರೆ.

ಇದನ್ನೂ ಓದಿ: ಖರ್ಗೆ ಪರ ಪ್ರಚಾರ ಮಾಡಲು ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೂವರು ನಾಯಕರು


ಜಮ್ಮು: ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕಾಂಗ್ರೆಸ್‌ನ ಆಂತರಿಕ ವಿಷಯವಾಗಿದೆ. ರಾಜಕೀಯ, ಪ್ರಜಾಸತ್ತಾತ್ಮಕತೆ, ದೇಶದ ಸಾಮಾಜಿಕ ವಾತಾವರಣವನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಹಾಗೂ ಆರ್​ಎಸ್​ಎಸ್​​ ವಿರುದ್ಧವೇ ನಮ್ಮ ಹೋರಾಟ ಎಂದು ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ವಿರೋಧ ಪಕ್ಷಗಳಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಪ್ರಶ್ನೆ ಎತ್ತುವ ಹಕ್ಕು ಬಿಜೆಪಿಗೆ ಇಲ್ಲ. ಬಿಜೆಪಿಯಲ್ಲಿ ಅಧ್ಯಕ್ಷರ ಚುನಾವಣೆ ಹೇಗೆ ನಡೆಯುತ್ತದೆ ಎಂದು ಯಾರಿಗಾದರೂ ತಿಳಿದಿದೆಯೇ ಎಂದು ಪ್ರಶ್ನಿಸಿದರು. ಏಳು ದಶಕಗಳಲ್ಲಿ ಕಾಂಗ್ರೆಸ್ ಕಟ್ಟಿದ ಪ್ರಜಾಸತ್ತಾತ್ಮಕ ಸಂಸ್ಥೆಗಳು ದುರ್ಬಲಗೊಂಡಿವೆ. ನಮ್ಮ ನಿಜವಾದ ಹೋರಾಟ ದೇಶದ ರಾಜಕೀಯ, ಪ್ರಜಾಸತ್ತಾತ್ಮಕ ಮತ್ತು ಸಾಮಾಜಿಕ ವಾತಾವರಣವನ್ನು ಹಾಳು ಮಾಡುತ್ತಿರುವ ಬಿಜೆಪಿ ಹಾಗೂ ಆರ್​ಎಸ್ಎಸ್​​ ವಿರುದ್ಧವಾಗಿದೆ ಎಂದು ಖರ್ಗೆ ಹೇಳಿದರು.

ಇಲ್ಲಿ ನಡೆದ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಪ್ರತಿನಿಧಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಕೆಟ್ಟ ಶಕ್ತಿಗಳಿಂದ ರಕ್ಷಿಸಲು ಕಾಂಗ್ರೆಸ್ ಪಕ್ಷವು ಮುಂಚೂಣಿಯಲ್ಲಿದೆ. ಪಂಡಿತ್ ಜವಾಹರ್ ಲಾಲ್ ನೆಹರೂ ಅವರಿಂದ ಹಿಡಿದು ಮನಮೋಹನ್ ಸಿಂಗ್ ಸರ್ಕಾರದವರೆಗೆ ಕಾಂಗ್ರೆಸ್ ಮಾಡಿದ ಆಸ್ತಿಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾರಾಟ ಮಾಡಿದೆ.

ಕಾಂಗ್ರೆಸಿಗರು ಮುಂದಾಳತ್ವ ವಹಿಸಿ ಎಚ್ಚೆತ್ತುಕೊಂಡು ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲರೂ ಜೊತೆಗೂಡಬೇಕು ಎಂದು ಖರ್ಗೆ ಕರೆ ನೀಡಿದರು. ಬಿಜೆಪಿಯಲ್ಲಿ ಅಧ್ಯಕ್ಷರ ಚುನಾವಣೆ ಯಾವಾಗ ಮತ್ತು ಹೇಗೆ ನಡೆಯುತ್ತದೆ ಎಂಬುದು ಯಾರಿಗೂ ತಿಳಿದಿಲ್ಲ. ಹಾಗಾಗಿ ಇತರರ ಬಗ್ಗೆ ವಿಶೇಷವಾಗಿ ದೇಶದ ಅತ್ಯಂತ ಹಳೆಯ ಮತ್ತು ದೊಡ್ಡ ಪ್ರಜಾಪ್ರಭುತ್ವ ಪಕ್ಷವಾದ ಕಾಂಗ್ರೆಸ್ ಬಗ್ಗೆ ಪ್ರಶ್ನೆ ಮಾಡಲು ಅವರಿಗೆ ಯಾವ ಹಕ್ಕಿದೆ ಎಂದು ಖರ್ಗೆ ಪ್ರಶ್ನಿಸಿದರು.

17 ಕ್ಕೆ ಎಲೆಕ್ಷನ್, 19ಕ್ಕೆ ಫಲಿತಾಂಶ: ಮಲ್ಲಿಕಾರ್ಜುನ್ ಖರ್ಗೆ ಅಕ್ಟೋಬರ್​ 17 ರಂದು ನಡೆಯುವ ಕಾಂಗ್ರೆಸ್​ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಇವರಿಗೆ ಎದುರಾಳಿ ಆಗಿ ತಿರುವನಂತಪುರ ಸಂಸದ ಶಶಿ ತರೂರ್​ ಸ್ಪರ್ಧಿಸಿದ್ದಾರೆ.

ಈಗಾಗಲೇ ಖರ್ಗೆಗೆ ತೆಲಂಗಾಣ ಕಾಂಗ್ರೆಸ್​ ಹಾಗೂ ಕೇರಳ ಪ್ರದೇಶ ಕಾಂಗ್ರೆಸ್​ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಹಿರಂಗ ಬೆಂಬಲ ಘೋಷಿಸಿವೆ. ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೆ ಉಭಯ ಅಭ್ಯರ್ಥಿಗಳು ಭೇಟಿ ನೀಡಿ ಬೆಂಬಲ ಕೋರುತ್ತಿದ್ದಾರೆ.

ರಾಹುಲ್​ ಹಾಗೂ ಸೋನಿಯಾ ಗಾಂಧಿ ಯಾವುದೇ ಅಭ್ಯರ್ಥಿಗೆ ಬಹಿರಂಗ ಬೆಂಬಲ ಘೋಷಿಸಲ್ಲ. ಈ ಬಗ್ಗೆ ರಾಹುಲ್​ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಆದರೆ ಮಲ್ಲಿಕಾರ್ಜುನ್​ ಖರ್ಗೆ ಗಾಂಧಿ ಕುಟುಂಬದ ಅಭ್ಯರ್ಥಿ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಇವೆಲ್ಲವನ್ನು ರಾಹುಲ್​ ಗಾಂಧಿ ಅಲ್ಲಗಳೆದಿದ್ದಾರೆ. ಇಬ್ಬರೂ ಅಭ್ಯರ್ಥಿಗಳು ಸಮರ್ಥರಾಗಿದ್ದಾರೆ ಎಂದು ರಾಹುಲ್​ ಹೇಳಿದ್ದಾರೆ.

ಇದನ್ನೂ ಓದಿ: ಖರ್ಗೆ ಪರ ಪ್ರಚಾರ ಮಾಡಲು ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೂವರು ನಾಯಕರು


ETV Bharat Logo

Copyright © 2024 Ushodaya Enterprises Pvt. Ltd., All Rights Reserved.