ETV Bharat / bharat

ಚಿಪ್ಕೋ ಚಳವಳಿ ನೇತಾರ ಸುಂದರ್​ಲಾಲ್​ ಬಹುಗುಣ ಕೊರೊನಾಗೆ ಬಲಿ - ಕೋವಿಡ್​

ಕೊರೊನಾ ಸೋಂಕಿಗೆ ಒಳಗಾಗಿದ್ದ ಪರಿಸರವಾದಿ, ಚಿಪ್ಕೊ ಚಳವಳಿಯ ನಾಯಕ, ಪದ್ಮವಿಭೂಷಣ ಸುಂದರ್​ಲಾಲ್​ ಬಹುಗುಣ ಅವರು ಕೊನೆಯುಸಿರೆಳೆದಿದ್ದಾರೆ.

Environmentalist Sunderlal Bahuguna admitted in AIIMS dies from Corona
ಸುಂದರ್​ಲಾಲ್​ ಬಹುಗುಣ
author img

By

Published : May 21, 2021, 1:01 PM IST

ಡೆಹ್ರಾಡೂನ್ (ಉತ್ತರಾಖಂಡ): ಹಿರಿಯ ಪರಿಸರವಾದಿ ಮತ್ತು ಚಿಪ್ಕೊ ಚಳುವಳಿಯ ನಾಯಕ ಸುಂದರ್​ಲಾಲ್​ ಬಹುಗುಣ (94) ಅವರು ಕೋವಿಡ್​ ಸೋಂಕಿಗೆ ಒಳಗಾಗಿ ವಿಧಿವಶರಾಗಿದ್ದಾರೆ.

ಸೋಂಕು ದೃಢಪಟ್ಟ ಬಳಿಕ ಮೇ 8 ರಂದು ಬಹುಗುಣ ಅವರನ್ನು ಉತ್ತರಾಖಂಡದ ರಿಷಿಕೇಶ್​ನಲ್ಲಿರುವ ಏಮ್ಸ್​ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೇ 12 ರಂದು ಶ್ವಾಸಕೋಶದಲ್ಲಿ ಸೋಂಕು ಇರುವುದು ತಿಳಿದುಬಂದಿದ್ದು, ವೆಂಟಿಲೇಟರ್​ ಬೆಂಬಲದಲ್ಲಿ ಅವರನ್ನು ಇರಿಸಲಾಗಿತ್ತು. ಮಧುಮೇಹ ಹಾಗೂ ನ್ಯುಮೋನಿಯಾದಿಂದಲೂ ಬಳಲುತ್ತಿದ್ದ ಅವರ ಆಮ್ಲಜನಕ ಮಟ್ಟ ಕುಸಿಯುತ್ತಾ ಬಂದಿದ್ದು, ಪರಿಸ್ಥಿತಿ ಗಂಭೀರವಾಗಿ ಇಂದು ಕೊನೆಯುಸಿರೆಳೆದಿದ್ದಾರೆ.

1973ರಲ್ಲಿ ಪರಿಸರ ಸಂರಕ್ಷಣೆಗಾಗಿ ನಡೆದ ಚಿಪ್ಕೋ ಚಳವಳಿಯನ್ನು ಸುಂದರ್​ಲಾಲ್​ ಬಹುಗುಣ ಅವರು ಮುನ್ನಡೆಸಿದ್ದರು. ತೆಹ್ರಿ ಅಣೆಕಟ್ಟು ವಿರುದ್ಧದ ಚಳವಳಿಯಲ್ಲೂ ಪ್ರಮುಖ ಪಾತ್ರವಹಿಸಿದ್ದರು. ಪರಿಸರದ ಪರವಾದ ಇವರ ಸೇವೆಗಳಿಗೆ ಸರ್ಕಾರ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ಡೆಹ್ರಾಡೂನ್ (ಉತ್ತರಾಖಂಡ): ಹಿರಿಯ ಪರಿಸರವಾದಿ ಮತ್ತು ಚಿಪ್ಕೊ ಚಳುವಳಿಯ ನಾಯಕ ಸುಂದರ್​ಲಾಲ್​ ಬಹುಗುಣ (94) ಅವರು ಕೋವಿಡ್​ ಸೋಂಕಿಗೆ ಒಳಗಾಗಿ ವಿಧಿವಶರಾಗಿದ್ದಾರೆ.

ಸೋಂಕು ದೃಢಪಟ್ಟ ಬಳಿಕ ಮೇ 8 ರಂದು ಬಹುಗುಣ ಅವರನ್ನು ಉತ್ತರಾಖಂಡದ ರಿಷಿಕೇಶ್​ನಲ್ಲಿರುವ ಏಮ್ಸ್​ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೇ 12 ರಂದು ಶ್ವಾಸಕೋಶದಲ್ಲಿ ಸೋಂಕು ಇರುವುದು ತಿಳಿದುಬಂದಿದ್ದು, ವೆಂಟಿಲೇಟರ್​ ಬೆಂಬಲದಲ್ಲಿ ಅವರನ್ನು ಇರಿಸಲಾಗಿತ್ತು. ಮಧುಮೇಹ ಹಾಗೂ ನ್ಯುಮೋನಿಯಾದಿಂದಲೂ ಬಳಲುತ್ತಿದ್ದ ಅವರ ಆಮ್ಲಜನಕ ಮಟ್ಟ ಕುಸಿಯುತ್ತಾ ಬಂದಿದ್ದು, ಪರಿಸ್ಥಿತಿ ಗಂಭೀರವಾಗಿ ಇಂದು ಕೊನೆಯುಸಿರೆಳೆದಿದ್ದಾರೆ.

1973ರಲ್ಲಿ ಪರಿಸರ ಸಂರಕ್ಷಣೆಗಾಗಿ ನಡೆದ ಚಿಪ್ಕೋ ಚಳವಳಿಯನ್ನು ಸುಂದರ್​ಲಾಲ್​ ಬಹುಗುಣ ಅವರು ಮುನ್ನಡೆಸಿದ್ದರು. ತೆಹ್ರಿ ಅಣೆಕಟ್ಟು ವಿರುದ್ಧದ ಚಳವಳಿಯಲ್ಲೂ ಪ್ರಮುಖ ಪಾತ್ರವಹಿಸಿದ್ದರು. ಪರಿಸರದ ಪರವಾದ ಇವರ ಸೇವೆಗಳಿಗೆ ಸರ್ಕಾರ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.