ETV Bharat / bharat

Exclusive: ಲೋಕಸಭೆ ಚುನಾವಣೆಗೆ ಬಿಜೆಪಿ ರಣತಂತ್ರ.. ಪ್ರಧಾನಿ ನಿವಾಸದಲ್ಲಿ 5 ತಾಸು ಸುದೀರ್ಘ ಚರ್ಚೆ

author img

By

Published : Jun 29, 2023, 5:05 PM IST

ಮೂರನೇ ಸಲ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಈಗಿನಿಂದಲೇ ರಣತಂತ್ರ ರೂಪಿಸುತ್ತಿದೆ. ಬುಧವಾರ ರಾತ್ರಿ ಪ್ರಧಾನಿ ನಿವಾಸದಲ್ಲಿ ಸುದೀರ್ಘ ಸಭೆ ನಡೆಸಲಾಗಿದೆ. ಅಲ್ಲಿ ಏನೆಲ್ಲಾ ಚರ್ಚೆ ನಡೆದವು ಎಂಬ ಬಗ್ಗೆ 'ಈಟಿವಿ ಭಾರತ್' ಎಕ್ಸ್​ಕ್ಲೂಸಿವ್​ ವರದಿ ಇಲ್ಲಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ರಣತಂತ್ರ
ಲೋಕಸಭೆ ಚುನಾವಣೆಗೆ ಬಿಜೆಪಿ ರಣತಂತ್ರ

ನವದೆಹಲಿ: ಹಿಮಾಚಲಪ್ರದೇಶ, ಕರ್ನಾಟಕ ವಿಧಾನಸಭೆ ಸೋಲಿನ ಬಳಿಕ ಬಿಜೆಪಿಯಲ್ಲಿ ಹೊಸ ಮನ್ವಂತರ ಶುರುವಾಗಿದೆ. 17 ಕ್ಕೂ ಹೆಚ್ಚು ವಿಪಕ್ಷಗಳು ಒಗ್ಗಟ್ಟು ಪ್ರದರ್ಶಿಲು ಮುಂದಾಗಿರುವುದು ಬಿಜೆಪಿಯ ನಾಯಕತ್ವವನ್ನು ಬಡಿದೆಬ್ಬಿಸಿದೆ. ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲು ಈಗಿನಿಂದಲೇ ತಯಾರಿ ನಡೆಸಲು ಸೂಚಿಸಲಾಗಿದೆ. ಇದೇ ವಿಚಾರವಾಗಿ ನಿನ್ನೆ ರಾತ್ರಿ ಪ್ರಧಾನಿ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ನೇತೃತ್ವದಲ್ಲಿ 5 ಗಂಟೆಗಳ ಕಾಲ ಸಭೆ ನಡೆಸಲಾಗಿದೆ.

ಪಕ್ಷದ ಯೋಜನೆ ಏನು?: ಈ ಸಭೆಯಲ್ಲಿ ಪಕ್ಷ ಸಂಘಟನೆಗಾಗಿ ನಿರ್ದಿಷ್ಟ ಕಾರ್ಯತಂತ್ರವನ್ನು ರೂಪಿಸಿದೆ. ದೇಶವನ್ನು ಮೂರು ವಲಯಗಳಾಗಿ ವಿಂಗಡಿಸಲಾಗಿದೆ. ಉತ್ತರ, ದಕ್ಷಿಣ ಮತ್ತು ಪೂರ್ವ ವಲಯವನ್ನಾಗಿ ಗುರುತಿಸಲಾಗಿದೆ. ಇದು ಪಕ್ಷದ ಕಾರ್ಯಚಟುವಟಿಕೆಯನ್ನು ಸುಗಮಗೊಳಿಸುವ ಮತ್ತು ಚುನಾವಣೆಯ ಪೂರ್ವದಲ್ಲಿ ಪರಿಣಾಮಕಾರಿಯಾಗಿ ಸಮನ್ವಯತೆಯನ್ನು ಸಾಧಿಸಲು ಸಹಕಾರಿಯಾಗಲಿದೆ. ಇದಕ್ಕಾಗಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಇತರ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಪ್ರಧಾನಿ ಮೋದಿ ಸಲಹೆಯೇನು?: ರಣತಂತ್ರಗಳ ಜೊತೆಗೆ ಸಮಾಜದಲ್ಲಿನ ವರ್ಗಗಳ ಅಭಿವೃದ್ಧಿಯೂ ಪ್ರಮುಖ ಅಸ್ತ್ರ ಎಂಬುದನ್ನು ಪ್ರಧಾನಿ ಮೋದಿ ಅವರು ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ತಿಳಿದುಬಂದಿದೆ. ದಲಿತರು, ಹಿಂದುಳಿದವರು ಮತ್ತು ಹಲವು ವರ್ಗಗಳ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡುವಂತೆ ಸಚಿವರುಗಳಿಗೆ ಪ್ರಧಾನಿ ಸಲಹೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಎಲ್ಲಕ್ಕಿಂತ ಹೆಚ್ಚಾಗಿ ಹಿಂದುಳಿದ ವರ್ಗಗಳ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಸಲಹೆ ಬಂದಿದೆ.

ಪೂರ್ವ ವಲಯದ ಚಟುವಟಿಕೆಗಳು: ಮೂರು ವಲಯಗಳಲ್ಲಿ ಒಂದಾಗಿ ಗುರುತಿಸಿರುವ ಪೂರ್ವದಲ್ಲಿ ಜುಲೈ 6, 7, ಮತ್ತು 8 ರಂದು ಸರಣಿ ಸಭೆ ನಡೆಯಲಿವೆ. ಪ್ರತಿ ದಿನ ನಿರ್ದಿಷ್ಟ ಪ್ರದೇಶಕ್ಕೆ ಅನುಗುಣವಾಗಿ ಚರ್ಚೆ ಮಾಡಬೇಕು. ಮೊದಲ ಸಭೆ ಜುಲೈ 6 ರಂದು ಗುವಾಹಟಿಯಲ್ಲಿ ನಡೆಯಲಿದೆ. ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಅಸ್ಸೋಂ, ಸಿಕ್ಕೀಂ, ಅರುಣಾಚಲ ಪ್ರದೇಶ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳಿಗೆ ಇದು ಕೇಂದ್ರೀಕೃತವಾಗಿರುತ್ತದೆ.

ಉತ್ತರ ವಲಯ: ಜುಲೈ 7 ರಂದು ದೆಹಲಿಯಲ್ಲಿ ಮತ್ತೊಂದು ಸಭೆ ನಡೆಯಲಿದೆ. ಇದರಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಚಂಡೀಗಢ, ರಾಜಸ್ಥಾನ, ಗುಜರಾತ್, ಕೇಂದ್ರಾಡಳಿತ ಪ್ರದೇಶಗಳಾದ ದಮನ್ ದಿಯು, ದಾದರ್ ನಗರ್ ಹವೇಲಿ, ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರಪ್ರದೇಶ, ಉತ್ತರಾಖಂಡ, ದೆಹಲಿ ಮತ್ತು ಹರಿಯಾಣ ರಾಜ್ಯಗಳನ್ನು ಇದು ಗುರಿಯಾಗಿಸಿಕೊಂಡಿದೆ.

ದಕ್ಷಿಣ ವಲಯ: ಅಂತಿಮವಾಗಿ ಜುಲೈ 8 ರಂದು ಹೈದರಾಬಾದ್‌ನಲ್ಲಿ ದಕ್ಷಿಣ ವಲಯದ ಸಭೆ ನಡೆಯಲಿದೆ. ಕೇರಳ, ತಮಿಳುನಾಡು, ಪುದುಚೇರಿ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮುಂಬೈ, ಗೋವಾ, ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್ ಮತ್ತು ಲಕ್ಷದ್ವೀಪಗಳನ್ನು ಇದು ಒಳಗೊಂಡಿದೆ. ಸಭೆಯಲ್ಲಿ ರಾಜ್ಯ ಉಸ್ತುವಾರಿ, ರಾಜ್ಯಾಧ್ಯಕ್ಷರು, ಸಂಘಟನಾ ಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಸದರು, ಶಾಸಕರು ಮತ್ತು ಎಂಎಲ್​ಸಿಗಳು ಭಾಗವಹಿಸಲಿದ್ದಾರೆ.

ಪ್ರಮುಖ ಅಂಶವೇನು?: ಮೂರು ವಲಯಗಳಲ್ಲಿ ನಡೆಯುವ ಸಭೆಗಳಲ್ಲಿ ಪ್ರಮುಖವಾಗಿ ಪ್ರಾದೇಶಿಕ ಚರ್ಚೆಗಳು, ಕಾರ್ಯತಂತ್ರಗಳ ರಚನೆ ಮತ್ತು ಪ್ರತಿ ಪ್ರದೇಶದಲ್ಲಿ ಪಕ್ಷದ ಕಾರ್ಯಕಾರಿಣಿಯನ್ನು ಬಲಪಡಿಸಲು ನಿರ್ಣಾಯಕ ವೇದಿಕೆ ಒದಗಿಸಬೇಕು. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ನಿಖರವಾದ ಯೋಜನೆ ಮತ್ತು ಸಿದ್ಧತೆಯು ಗೆಲುವಿಗೆ ನೆರವಾಗಬೇಕು ಎಂಬುದು ಪ್ರಮುಖ ನಿರ್ಣಯವಾಗಿರಬೇಕು.

ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಪಕ್ಷ ಯಾವುದೇ ಅಧಿಕೃತ ಹೇಳಿಕೆಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ಬಗ್ಗೆ ಪ್ರಧಾನಿ ಇತ್ತೀಚೆಗೆ ಬಲವಾದ ಹೇಳಿಕೆ ನೀಡಿದ ಬಳಿಕ ಗಮನಾರ್ಹ ಬೆಳವಣಿಗೆಗಳು ನಡೆಯುತ್ತಿವೆ.

ಇದನ್ನೂ ಓದಿ: Manipur violence: ಮಣಿಪುರದಲ್ಲಿ ರಾಹುಲ್​ ಗಾಂಧಿ ಪ್ರಯಾಣಕ್ಕೆ ತಡೆ; ಸುರಕ್ಷತೆಗಾಗಿ ಕ್ರಮವೆಂದ ಪೊಲೀಸರು

ನವದೆಹಲಿ: ಹಿಮಾಚಲಪ್ರದೇಶ, ಕರ್ನಾಟಕ ವಿಧಾನಸಭೆ ಸೋಲಿನ ಬಳಿಕ ಬಿಜೆಪಿಯಲ್ಲಿ ಹೊಸ ಮನ್ವಂತರ ಶುರುವಾಗಿದೆ. 17 ಕ್ಕೂ ಹೆಚ್ಚು ವಿಪಕ್ಷಗಳು ಒಗ್ಗಟ್ಟು ಪ್ರದರ್ಶಿಲು ಮುಂದಾಗಿರುವುದು ಬಿಜೆಪಿಯ ನಾಯಕತ್ವವನ್ನು ಬಡಿದೆಬ್ಬಿಸಿದೆ. ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲು ಈಗಿನಿಂದಲೇ ತಯಾರಿ ನಡೆಸಲು ಸೂಚಿಸಲಾಗಿದೆ. ಇದೇ ವಿಚಾರವಾಗಿ ನಿನ್ನೆ ರಾತ್ರಿ ಪ್ರಧಾನಿ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ನೇತೃತ್ವದಲ್ಲಿ 5 ಗಂಟೆಗಳ ಕಾಲ ಸಭೆ ನಡೆಸಲಾಗಿದೆ.

ಪಕ್ಷದ ಯೋಜನೆ ಏನು?: ಈ ಸಭೆಯಲ್ಲಿ ಪಕ್ಷ ಸಂಘಟನೆಗಾಗಿ ನಿರ್ದಿಷ್ಟ ಕಾರ್ಯತಂತ್ರವನ್ನು ರೂಪಿಸಿದೆ. ದೇಶವನ್ನು ಮೂರು ವಲಯಗಳಾಗಿ ವಿಂಗಡಿಸಲಾಗಿದೆ. ಉತ್ತರ, ದಕ್ಷಿಣ ಮತ್ತು ಪೂರ್ವ ವಲಯವನ್ನಾಗಿ ಗುರುತಿಸಲಾಗಿದೆ. ಇದು ಪಕ್ಷದ ಕಾರ್ಯಚಟುವಟಿಕೆಯನ್ನು ಸುಗಮಗೊಳಿಸುವ ಮತ್ತು ಚುನಾವಣೆಯ ಪೂರ್ವದಲ್ಲಿ ಪರಿಣಾಮಕಾರಿಯಾಗಿ ಸಮನ್ವಯತೆಯನ್ನು ಸಾಧಿಸಲು ಸಹಕಾರಿಯಾಗಲಿದೆ. ಇದಕ್ಕಾಗಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಇತರ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಪ್ರಧಾನಿ ಮೋದಿ ಸಲಹೆಯೇನು?: ರಣತಂತ್ರಗಳ ಜೊತೆಗೆ ಸಮಾಜದಲ್ಲಿನ ವರ್ಗಗಳ ಅಭಿವೃದ್ಧಿಯೂ ಪ್ರಮುಖ ಅಸ್ತ್ರ ಎಂಬುದನ್ನು ಪ್ರಧಾನಿ ಮೋದಿ ಅವರು ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ತಿಳಿದುಬಂದಿದೆ. ದಲಿತರು, ಹಿಂದುಳಿದವರು ಮತ್ತು ಹಲವು ವರ್ಗಗಳ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡುವಂತೆ ಸಚಿವರುಗಳಿಗೆ ಪ್ರಧಾನಿ ಸಲಹೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಎಲ್ಲಕ್ಕಿಂತ ಹೆಚ್ಚಾಗಿ ಹಿಂದುಳಿದ ವರ್ಗಗಳ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಸಲಹೆ ಬಂದಿದೆ.

ಪೂರ್ವ ವಲಯದ ಚಟುವಟಿಕೆಗಳು: ಮೂರು ವಲಯಗಳಲ್ಲಿ ಒಂದಾಗಿ ಗುರುತಿಸಿರುವ ಪೂರ್ವದಲ್ಲಿ ಜುಲೈ 6, 7, ಮತ್ತು 8 ರಂದು ಸರಣಿ ಸಭೆ ನಡೆಯಲಿವೆ. ಪ್ರತಿ ದಿನ ನಿರ್ದಿಷ್ಟ ಪ್ರದೇಶಕ್ಕೆ ಅನುಗುಣವಾಗಿ ಚರ್ಚೆ ಮಾಡಬೇಕು. ಮೊದಲ ಸಭೆ ಜುಲೈ 6 ರಂದು ಗುವಾಹಟಿಯಲ್ಲಿ ನಡೆಯಲಿದೆ. ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಅಸ್ಸೋಂ, ಸಿಕ್ಕೀಂ, ಅರುಣಾಚಲ ಪ್ರದೇಶ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳಿಗೆ ಇದು ಕೇಂದ್ರೀಕೃತವಾಗಿರುತ್ತದೆ.

ಉತ್ತರ ವಲಯ: ಜುಲೈ 7 ರಂದು ದೆಹಲಿಯಲ್ಲಿ ಮತ್ತೊಂದು ಸಭೆ ನಡೆಯಲಿದೆ. ಇದರಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಚಂಡೀಗಢ, ರಾಜಸ್ಥಾನ, ಗುಜರಾತ್, ಕೇಂದ್ರಾಡಳಿತ ಪ್ರದೇಶಗಳಾದ ದಮನ್ ದಿಯು, ದಾದರ್ ನಗರ್ ಹವೇಲಿ, ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರಪ್ರದೇಶ, ಉತ್ತರಾಖಂಡ, ದೆಹಲಿ ಮತ್ತು ಹರಿಯಾಣ ರಾಜ್ಯಗಳನ್ನು ಇದು ಗುರಿಯಾಗಿಸಿಕೊಂಡಿದೆ.

ದಕ್ಷಿಣ ವಲಯ: ಅಂತಿಮವಾಗಿ ಜುಲೈ 8 ರಂದು ಹೈದರಾಬಾದ್‌ನಲ್ಲಿ ದಕ್ಷಿಣ ವಲಯದ ಸಭೆ ನಡೆಯಲಿದೆ. ಕೇರಳ, ತಮಿಳುನಾಡು, ಪುದುಚೇರಿ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮುಂಬೈ, ಗೋವಾ, ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್ ಮತ್ತು ಲಕ್ಷದ್ವೀಪಗಳನ್ನು ಇದು ಒಳಗೊಂಡಿದೆ. ಸಭೆಯಲ್ಲಿ ರಾಜ್ಯ ಉಸ್ತುವಾರಿ, ರಾಜ್ಯಾಧ್ಯಕ್ಷರು, ಸಂಘಟನಾ ಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಸದರು, ಶಾಸಕರು ಮತ್ತು ಎಂಎಲ್​ಸಿಗಳು ಭಾಗವಹಿಸಲಿದ್ದಾರೆ.

ಪ್ರಮುಖ ಅಂಶವೇನು?: ಮೂರು ವಲಯಗಳಲ್ಲಿ ನಡೆಯುವ ಸಭೆಗಳಲ್ಲಿ ಪ್ರಮುಖವಾಗಿ ಪ್ರಾದೇಶಿಕ ಚರ್ಚೆಗಳು, ಕಾರ್ಯತಂತ್ರಗಳ ರಚನೆ ಮತ್ತು ಪ್ರತಿ ಪ್ರದೇಶದಲ್ಲಿ ಪಕ್ಷದ ಕಾರ್ಯಕಾರಿಣಿಯನ್ನು ಬಲಪಡಿಸಲು ನಿರ್ಣಾಯಕ ವೇದಿಕೆ ಒದಗಿಸಬೇಕು. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ನಿಖರವಾದ ಯೋಜನೆ ಮತ್ತು ಸಿದ್ಧತೆಯು ಗೆಲುವಿಗೆ ನೆರವಾಗಬೇಕು ಎಂಬುದು ಪ್ರಮುಖ ನಿರ್ಣಯವಾಗಿರಬೇಕು.

ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಪಕ್ಷ ಯಾವುದೇ ಅಧಿಕೃತ ಹೇಳಿಕೆಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ಬಗ್ಗೆ ಪ್ರಧಾನಿ ಇತ್ತೀಚೆಗೆ ಬಲವಾದ ಹೇಳಿಕೆ ನೀಡಿದ ಬಳಿಕ ಗಮನಾರ್ಹ ಬೆಳವಣಿಗೆಗಳು ನಡೆಯುತ್ತಿವೆ.

ಇದನ್ನೂ ಓದಿ: Manipur violence: ಮಣಿಪುರದಲ್ಲಿ ರಾಹುಲ್​ ಗಾಂಧಿ ಪ್ರಯಾಣಕ್ಕೆ ತಡೆ; ಸುರಕ್ಷತೆಗಾಗಿ ಕ್ರಮವೆಂದ ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.