ETV Bharat / bharat

ಭಾರತೀಯ ಸಂವಿಧಾನದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ: ನೀವು ತಿಳಿದುಕೊಳ್ಳಬೇಕಾದ ಅಂಶಗಳಿವು!

author img

By

Published : Jun 29, 2023, 1:43 PM IST

ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಹೊರಡಿಸಿದ್ದಕ್ಕೆ ಈಗ 48 ವರ್ಷ. ಹಾಗಾದ್ರೆ, ತುರ್ತು ಪರಿಸ್ಥಿತಿ ಎಂದರೇನು?, ಭಾರತೀಯ ಸಂವಿಧಾನದ ಯಾವ ವಿಧಿ ಈ ಕುರಿತು ಮಾಹಿತಿ ನೀಡುತ್ತದೆ. ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಲ್ಪಟ್ಟಿದ್ದೇಕೆ? ಎಂಬ ಮಾಹಿತಿ ಇಲ್ಲಿದೆ ನೋಡಿ.

Financial Emergency
ಆರ್ಥಿಕ ತುರ್ತು ಪರಿಸ್ಥಿತಿ

ನವದೆಹಲಿ : ಭಾರತದ ಇತಿಹಾಸದಲ್ಲಿ 1975, ಜೂನ್ 25 ಮರೆಯಲಾಗದ ದಿನ. ಯಾಕೆಂದರೆ, ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರು. ಈ ತುರ್ತು ಪರಿಸ್ಥಿತಿ 21 ತಿಂಗಳುಗಳ ಕಾಲ ಜಾರಿಯಲ್ಲಿದ್ದು, ಮಾರ್ಚ್ 21, 1977ರವರೆಗೆ ಮುಂದುವರಿಯಿತು. ಇದೀಗ ತುರ್ತು ಪರಿಸ್ಥಿತಿ 48ನೇ ವರ್ಷಾಚರಣೆಯನ್ನು ದೇಶವು ಆಚರಿಸಿದ್ದು, ಯಾವ ವಿಧಿ ಅಡಿ ತುರ್ತು ಪರಿಸ್ಥಿತಿ ಹೇರಲಾಯಿತು ಎಂಬ ಮಾಹಿತಿ ಇಲ್ಲಿದೆ ನೋಡಿ.

ಸಂವಿಧಾನದ 352 ನೇ ವಿಧಿಯ ಅಡಿಯಲ್ಲಿ ಅಂದಿನ ರಾಷ್ಟ್ರಪತಿಗಳ ಒಪ್ಪಿಗೆ ಪಡೆದು ಆಂತರಿಕ ಕಠಿಣ ಪರಿಸ್ಥಿತಿ ಕಾರಣ ನೀಡಿ ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿಸಲಾಯಿತು. ದೇಶದಲ್ಲಿ ಹೀಗೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿರುವುದು ಇದೇ ಮೊದಲೇನೂ ಅಲ್ಲ. 1962 ರ ಭಾರತ-ಚೀನಾ ಯುದ್ಧದ ಸಮಯದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಮೊದಲು ಬಾರಿಗೆ ಘೋಷಿಸಲಾಗಿತ್ತು. ಆನಂತರ, 1971 ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಎರಡನೇ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಈ ಸಂದರ್ಭದಲ್ಲೇ ಪಾಕಿಸ್ತಾನದಿಂದ ಬೇರ್ಪಟ್ಟ ಬಾಂಗ್ಲಾ, ಬಾಂಗ್ಲಾದೇಶ ಎಂಬ ಹೊಸ ರಾಷ್ಟ್ರ ರಚನೆಗೆ ಕಾರಣವಾಯಿತು.

ಇನ್ನು ಈ ಸಂದರ್ಭದಲ್ಲೇ ಸಮಾಜವಾದಿ ಪಕ್ಷದ ನಾಯಕ ಜಯಪ್ರಕಾಶ ನಾರಾಯಣ ಅವರು ಅಂದು ಬೃಹತ್ ರ್‍ಯಾಲಿಗಳನ್ನು ನಡೆಸುತ್ತಿದ್ದರು. ಇಂದಿರಾ ಗಾಂಧಿ ಆಡಳಿತ ವಿರುದ್ಧ ತೀವ್ರ ಪ್ರಚಾರ ಮಾಡುತ್ತಿದ್ದರು. ಆಡಳಿತ ವಿರುದ್ಧ ದಂಗೆ ಏಳಬೇಕು, ಸರ್ಕಾರದ ಆದೇಶ ಪಾಲಿಸಬಾರದು ಎಂದು ಪೊಲೀಸರಿಗೆ, ಸೈನ್ಯಕ್ಕೆ ಕರೆ ನೀಡುತ್ತಿದ್ದರು. ನಾರಾಯಣ ಕರೆಗೆ ಓಗೊಟ್ಟು ದೇಶದ ಜನರು ತಿರುಗಿ ಬೀಳುತ್ತಾರೆ ಎಂದು ಭಾವಿಸಿದ ಇಂದಿರಾ ಗಾಂಧಿ, ರಾಷ್ಟ್ರಪತಿಗಳ ಜೊತೆ ಚರ್ಚೆ ನಡೆಸಿ ಅವರಿಂದ ಅಧಿಕೃತ ಒಪ್ಪಿಗೆ ಪಡೆದು 1975, ಜೂನ್ 25 ರಂದು ತುರ್ತು ಪರಿಸ್ಥಿತಿಯನ್ನು ಜಾರಿಗೆ ತಂದೇ ಬಿಟ್ಟರು.

ಇಂದಿರಾ ಗಾಂಧಿ ವಿರುದ್ಧ ಕಠಿಣ ಕ್ರಮ: 12 ಜೂನ್ 1975 ರಂದು ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಜಗಮೋಹನ್‌ಲಾಲ್ ಸಿನ್ಹಾ ಅವರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸರ್ಕಾರಿ ಯಂತ್ರಗಳನ್ನ ದುರುಪಯೋಗ ಪಡಿಸಿಕೊಂಡ ಆರೋಪದಲ್ಲಿ ಪ್ರಧಾನಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಿಸಿದ್ದರು. ನ್ಯಾಯಾಲಯವು ಆ ಚುನಾವಣೆಯನ್ನು ಅನೂರ್ಜಿತ ಎಂದು ಘೋಷಿಸಿತು.ಜೊತೆಗೆ, ಲೋಕಸಭೆಯಲ್ಲಿ ಅವರ ಸಂಸದ ಸ್ಥಾನದಿಂದಲೂ ಇಂದಿರಾಗಾಂಧಿ ಅವರನ್ನು ಪದಚ್ಯುತಗೊಳಿಸಿ ಆದೇಶಿಸಿತ್ತು.

ಅಲಹಾಬಾದ್​​​​ ಹೈಕೋರ್ಟ್​ನ ತೀರ್ಪು ಪ್ರಶ್ನಿಸಿ ಇಂದಿರಾಗಾಂಧಿ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ಅಲಹಾಬಾದ್​ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು. ಇದರಿಂದ ಕೆರಳಿದ ಇಂದಿರಾಗಾಂಧಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದ್ದರು.

360 ನೇ ವಿಧಿ : ಭಾರತೀಯ ಸಂವಿಧಾನದ 360 ನೇ ವಿಧಿಯು ಆರ್ಥಿಕ ತುರ್ತು ಪರಿಸ್ಥಿತಿ ಘೋಷಿಸಲು ರಾಷ್ಟ್ರಪತಿಗಳಿಗೆ ಅಧಿಕಾರ ನೀಡುತ್ತದೆ. ಈ ವಿಧಿಯ ಅಡಿಯಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಬಹುದು. ಅಷ್ಟೇ ಅಲ್ಲದೆ, ಈ ವಿಧಿಯ ಅನ್ವಯ ಭಾರತದ ರಾಷ್ಟ್ರಪತಿಗಳು ಆರ್ಥಿಕ ತುರ್ತು ಪರಿಸ್ಥಿತಿಯ ಘೋಷಣೆಯನ್ನು ಹಿಂತೆಗೆದುಕೊಳ್ಳುವ ಅಥವಾ ಇನ್ನೊಂದು ಘೋಷಣೆಯ ಮೂಲಕ ಅದನ್ನು ಬದಲಾಯಿಸುವ ಅಧಿಕಾರವನ್ನು ಹೊಂದಿದ್ದಾರೆ.

ಸಾರ್ವಜನಿಕ ಸೇವಕರ ಸಂಬಳ ಏನಾಗುತ್ತದೆ? : ದೇಶದಲ್ಲಿ ಆರ್ಥಿಕ ತುರ್ತುಸ್ಥಿತಿಯ ಕಾರ್ಯಾಚರಣೆಯ ಸಮಯದಲ್ಲಿ ಕೇಂದ್ರ (ಕೇಂದ್ರ ಸರ್ಕಾರ) ತಮ್ಮ ಅಧಿಕಾರಿಗಳು ಮತ್ತು ಉದ್ಯೋಗಿಗಳ ವೇತನವನ್ನು ಕಡಿಮೆ ಮಾಡಲು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡಬಹುದು. ಕೇಂದ್ರ ಸರ್ಕಾರದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಸೇವೆ ಸಲ್ಲಿಸುತ್ತಿದ್ದರೆ, ಎಲ್ಲ ವರ್ಗದ ವ್ಯಕ್ತಿಗಳ ಸಂಬಳ ಮತ್ತು ಭತ್ಯೆಗಳನ್ನು ಕಡಿಮೆ ಮಾಡಬಹುದು. ಈ ನಿರ್ದೇಶನವು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರ ವೇತನ ಮತ್ತು ಭತ್ಯೆಗಳನ್ನು ಸಹ ಒಳಗೊಂಡಿದೆ.

ಇದನ್ನೂ ಓದಿ : Emergency Teaser : 'ಇಂಡಿಯಾ ಈಸ್​ ಇಂದಿರಾ, ಇಂದಿರಾ ಈಸ್​ ಇಂಡಿಯಾ'- ಎಮರ್ಜೆನ್ಸಿ ಟೀಸರ್ ರಿಲೀಸ್

ಆರ್ಥಿಕ ತುರ್ತು ಪರಿಸ್ಥಿತಿ ಹೇರಬಹುದಾಗಿದ್ದ ಇತರ ಸಂದರ್ಭಗಳು : ಇನ್ನು 1991 ರ ಆರ್ಥಿಕ ಬಿಕ್ಕಟ್ಟಿನಂತಹ ಸಂದರ್ಭದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಲಾಯಿತು. ಮೂರು ವಾರಗಳವರೆಗೆ ದೇಶದ ವಿದೇಶಿ ವಿನಿಮಯ ಮೇಲೆ ನಿರ್ಬಂಧ ಹೇರಿ ಆಮದು ಮಾಡಿಕೊಳ್ಳುವುದನ್ನು ಕಡಿಮೆಗೊಳಿಸಲಾಯಿತು. ಆದರೂ ಅಂದು ದೇಶದ ಮೇಲೆ ಆರ್ಥಿಕ ತುರ್ತುಸ್ಥಿತಿ ಘೋಷಿಸಲಾಗಿರಲಿಲ್ಲ. ಹಾಗೆಯೇ, 2020 ರ ಆರಂಭದಲ್ಲಿ ಕೋವಿಡ್ -19 ಜಾಗತಿಕ ಸಾಂಕ್ರಾಮಿಕ ರೋಗವು ಏಕಾಏಕಿ ಸಂಭವಿಸಿದ ಹಿನ್ನೆಲೆಯಲ್ಲಿ ಆರ್ಥಿಕ ತುರ್ತು ಪರಿಸ್ಥಿತಿಯನ್ನು ಘೋಷಿಸುವ ಬಗ್ಗೆ ಚರ್ಚೆ ನಡೆಸಲಾಯಿತಾದರೂ ಜಾರಿಗೆ ತರಲಾಗಿಲ್ಲ.

ತುರ್ತು ಪರಿಸ್ಥಿತಿ ಎಂದರೇನು? : ಕೆಲ ಪರಿಸ್ಥಿತಿ ಅಥವಾ ಸನ್ನಿವೇಶಗಳಲ್ಲಿ ದೇಶದ ಸರ್ಕಾರವು ಕೆಲವು ನಿಯಮಿತ ಕಾರ್ಯಗಳನ್ನು ಸ್ಥಗಿತಗೊಳಿಸಿ, ಪ್ರಜೆಗಳ ವ್ಯವಹಾರಗಳ ಮೇಲೆ ನಿಯಮ ಅಥವಾ ನಿಯಂತ್ರಣ ತರಬಹುದು. ಈ ಘೋಷಣೆಯು ನೈಸರ್ಗಿಕ ವಿಕೋಪಗಳಿಗಿರಬಹುದು ಅಥವಾ ಯುದ್ಧಕಾಲ, ಪರದೇಶದ ಆಕ್ರಮಣದಿಂದಿರಬಹುದು ಹಾಗೂ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿರಬಹುದು. ಇಂತಹ ಪರಿಸ್ಥಿತಿಗಳಿಗೆ ತುರ್ತು ಪರಿಸ್ಥಿತಿ ಎಂದು ಕರೆಯುತ್ತಾರೆ.

ನವದೆಹಲಿ : ಭಾರತದ ಇತಿಹಾಸದಲ್ಲಿ 1975, ಜೂನ್ 25 ಮರೆಯಲಾಗದ ದಿನ. ಯಾಕೆಂದರೆ, ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರು. ಈ ತುರ್ತು ಪರಿಸ್ಥಿತಿ 21 ತಿಂಗಳುಗಳ ಕಾಲ ಜಾರಿಯಲ್ಲಿದ್ದು, ಮಾರ್ಚ್ 21, 1977ರವರೆಗೆ ಮುಂದುವರಿಯಿತು. ಇದೀಗ ತುರ್ತು ಪರಿಸ್ಥಿತಿ 48ನೇ ವರ್ಷಾಚರಣೆಯನ್ನು ದೇಶವು ಆಚರಿಸಿದ್ದು, ಯಾವ ವಿಧಿ ಅಡಿ ತುರ್ತು ಪರಿಸ್ಥಿತಿ ಹೇರಲಾಯಿತು ಎಂಬ ಮಾಹಿತಿ ಇಲ್ಲಿದೆ ನೋಡಿ.

ಸಂವಿಧಾನದ 352 ನೇ ವಿಧಿಯ ಅಡಿಯಲ್ಲಿ ಅಂದಿನ ರಾಷ್ಟ್ರಪತಿಗಳ ಒಪ್ಪಿಗೆ ಪಡೆದು ಆಂತರಿಕ ಕಠಿಣ ಪರಿಸ್ಥಿತಿ ಕಾರಣ ನೀಡಿ ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿಸಲಾಯಿತು. ದೇಶದಲ್ಲಿ ಹೀಗೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿರುವುದು ಇದೇ ಮೊದಲೇನೂ ಅಲ್ಲ. 1962 ರ ಭಾರತ-ಚೀನಾ ಯುದ್ಧದ ಸಮಯದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಮೊದಲು ಬಾರಿಗೆ ಘೋಷಿಸಲಾಗಿತ್ತು. ಆನಂತರ, 1971 ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಎರಡನೇ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಈ ಸಂದರ್ಭದಲ್ಲೇ ಪಾಕಿಸ್ತಾನದಿಂದ ಬೇರ್ಪಟ್ಟ ಬಾಂಗ್ಲಾ, ಬಾಂಗ್ಲಾದೇಶ ಎಂಬ ಹೊಸ ರಾಷ್ಟ್ರ ರಚನೆಗೆ ಕಾರಣವಾಯಿತು.

ಇನ್ನು ಈ ಸಂದರ್ಭದಲ್ಲೇ ಸಮಾಜವಾದಿ ಪಕ್ಷದ ನಾಯಕ ಜಯಪ್ರಕಾಶ ನಾರಾಯಣ ಅವರು ಅಂದು ಬೃಹತ್ ರ್‍ಯಾಲಿಗಳನ್ನು ನಡೆಸುತ್ತಿದ್ದರು. ಇಂದಿರಾ ಗಾಂಧಿ ಆಡಳಿತ ವಿರುದ್ಧ ತೀವ್ರ ಪ್ರಚಾರ ಮಾಡುತ್ತಿದ್ದರು. ಆಡಳಿತ ವಿರುದ್ಧ ದಂಗೆ ಏಳಬೇಕು, ಸರ್ಕಾರದ ಆದೇಶ ಪಾಲಿಸಬಾರದು ಎಂದು ಪೊಲೀಸರಿಗೆ, ಸೈನ್ಯಕ್ಕೆ ಕರೆ ನೀಡುತ್ತಿದ್ದರು. ನಾರಾಯಣ ಕರೆಗೆ ಓಗೊಟ್ಟು ದೇಶದ ಜನರು ತಿರುಗಿ ಬೀಳುತ್ತಾರೆ ಎಂದು ಭಾವಿಸಿದ ಇಂದಿರಾ ಗಾಂಧಿ, ರಾಷ್ಟ್ರಪತಿಗಳ ಜೊತೆ ಚರ್ಚೆ ನಡೆಸಿ ಅವರಿಂದ ಅಧಿಕೃತ ಒಪ್ಪಿಗೆ ಪಡೆದು 1975, ಜೂನ್ 25 ರಂದು ತುರ್ತು ಪರಿಸ್ಥಿತಿಯನ್ನು ಜಾರಿಗೆ ತಂದೇ ಬಿಟ್ಟರು.

ಇಂದಿರಾ ಗಾಂಧಿ ವಿರುದ್ಧ ಕಠಿಣ ಕ್ರಮ: 12 ಜೂನ್ 1975 ರಂದು ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಜಗಮೋಹನ್‌ಲಾಲ್ ಸಿನ್ಹಾ ಅವರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸರ್ಕಾರಿ ಯಂತ್ರಗಳನ್ನ ದುರುಪಯೋಗ ಪಡಿಸಿಕೊಂಡ ಆರೋಪದಲ್ಲಿ ಪ್ರಧಾನಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಿಸಿದ್ದರು. ನ್ಯಾಯಾಲಯವು ಆ ಚುನಾವಣೆಯನ್ನು ಅನೂರ್ಜಿತ ಎಂದು ಘೋಷಿಸಿತು.ಜೊತೆಗೆ, ಲೋಕಸಭೆಯಲ್ಲಿ ಅವರ ಸಂಸದ ಸ್ಥಾನದಿಂದಲೂ ಇಂದಿರಾಗಾಂಧಿ ಅವರನ್ನು ಪದಚ್ಯುತಗೊಳಿಸಿ ಆದೇಶಿಸಿತ್ತು.

ಅಲಹಾಬಾದ್​​​​ ಹೈಕೋರ್ಟ್​ನ ತೀರ್ಪು ಪ್ರಶ್ನಿಸಿ ಇಂದಿರಾಗಾಂಧಿ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ಅಲಹಾಬಾದ್​ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು. ಇದರಿಂದ ಕೆರಳಿದ ಇಂದಿರಾಗಾಂಧಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದ್ದರು.

360 ನೇ ವಿಧಿ : ಭಾರತೀಯ ಸಂವಿಧಾನದ 360 ನೇ ವಿಧಿಯು ಆರ್ಥಿಕ ತುರ್ತು ಪರಿಸ್ಥಿತಿ ಘೋಷಿಸಲು ರಾಷ್ಟ್ರಪತಿಗಳಿಗೆ ಅಧಿಕಾರ ನೀಡುತ್ತದೆ. ಈ ವಿಧಿಯ ಅಡಿಯಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಬಹುದು. ಅಷ್ಟೇ ಅಲ್ಲದೆ, ಈ ವಿಧಿಯ ಅನ್ವಯ ಭಾರತದ ರಾಷ್ಟ್ರಪತಿಗಳು ಆರ್ಥಿಕ ತುರ್ತು ಪರಿಸ್ಥಿತಿಯ ಘೋಷಣೆಯನ್ನು ಹಿಂತೆಗೆದುಕೊಳ್ಳುವ ಅಥವಾ ಇನ್ನೊಂದು ಘೋಷಣೆಯ ಮೂಲಕ ಅದನ್ನು ಬದಲಾಯಿಸುವ ಅಧಿಕಾರವನ್ನು ಹೊಂದಿದ್ದಾರೆ.

ಸಾರ್ವಜನಿಕ ಸೇವಕರ ಸಂಬಳ ಏನಾಗುತ್ತದೆ? : ದೇಶದಲ್ಲಿ ಆರ್ಥಿಕ ತುರ್ತುಸ್ಥಿತಿಯ ಕಾರ್ಯಾಚರಣೆಯ ಸಮಯದಲ್ಲಿ ಕೇಂದ್ರ (ಕೇಂದ್ರ ಸರ್ಕಾರ) ತಮ್ಮ ಅಧಿಕಾರಿಗಳು ಮತ್ತು ಉದ್ಯೋಗಿಗಳ ವೇತನವನ್ನು ಕಡಿಮೆ ಮಾಡಲು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡಬಹುದು. ಕೇಂದ್ರ ಸರ್ಕಾರದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಸೇವೆ ಸಲ್ಲಿಸುತ್ತಿದ್ದರೆ, ಎಲ್ಲ ವರ್ಗದ ವ್ಯಕ್ತಿಗಳ ಸಂಬಳ ಮತ್ತು ಭತ್ಯೆಗಳನ್ನು ಕಡಿಮೆ ಮಾಡಬಹುದು. ಈ ನಿರ್ದೇಶನವು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರ ವೇತನ ಮತ್ತು ಭತ್ಯೆಗಳನ್ನು ಸಹ ಒಳಗೊಂಡಿದೆ.

ಇದನ್ನೂ ಓದಿ : Emergency Teaser : 'ಇಂಡಿಯಾ ಈಸ್​ ಇಂದಿರಾ, ಇಂದಿರಾ ಈಸ್​ ಇಂಡಿಯಾ'- ಎಮರ್ಜೆನ್ಸಿ ಟೀಸರ್ ರಿಲೀಸ್

ಆರ್ಥಿಕ ತುರ್ತು ಪರಿಸ್ಥಿತಿ ಹೇರಬಹುದಾಗಿದ್ದ ಇತರ ಸಂದರ್ಭಗಳು : ಇನ್ನು 1991 ರ ಆರ್ಥಿಕ ಬಿಕ್ಕಟ್ಟಿನಂತಹ ಸಂದರ್ಭದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಲಾಯಿತು. ಮೂರು ವಾರಗಳವರೆಗೆ ದೇಶದ ವಿದೇಶಿ ವಿನಿಮಯ ಮೇಲೆ ನಿರ್ಬಂಧ ಹೇರಿ ಆಮದು ಮಾಡಿಕೊಳ್ಳುವುದನ್ನು ಕಡಿಮೆಗೊಳಿಸಲಾಯಿತು. ಆದರೂ ಅಂದು ದೇಶದ ಮೇಲೆ ಆರ್ಥಿಕ ತುರ್ತುಸ್ಥಿತಿ ಘೋಷಿಸಲಾಗಿರಲಿಲ್ಲ. ಹಾಗೆಯೇ, 2020 ರ ಆರಂಭದಲ್ಲಿ ಕೋವಿಡ್ -19 ಜಾಗತಿಕ ಸಾಂಕ್ರಾಮಿಕ ರೋಗವು ಏಕಾಏಕಿ ಸಂಭವಿಸಿದ ಹಿನ್ನೆಲೆಯಲ್ಲಿ ಆರ್ಥಿಕ ತುರ್ತು ಪರಿಸ್ಥಿತಿಯನ್ನು ಘೋಷಿಸುವ ಬಗ್ಗೆ ಚರ್ಚೆ ನಡೆಸಲಾಯಿತಾದರೂ ಜಾರಿಗೆ ತರಲಾಗಿಲ್ಲ.

ತುರ್ತು ಪರಿಸ್ಥಿತಿ ಎಂದರೇನು? : ಕೆಲ ಪರಿಸ್ಥಿತಿ ಅಥವಾ ಸನ್ನಿವೇಶಗಳಲ್ಲಿ ದೇಶದ ಸರ್ಕಾರವು ಕೆಲವು ನಿಯಮಿತ ಕಾರ್ಯಗಳನ್ನು ಸ್ಥಗಿತಗೊಳಿಸಿ, ಪ್ರಜೆಗಳ ವ್ಯವಹಾರಗಳ ಮೇಲೆ ನಿಯಮ ಅಥವಾ ನಿಯಂತ್ರಣ ತರಬಹುದು. ಈ ಘೋಷಣೆಯು ನೈಸರ್ಗಿಕ ವಿಕೋಪಗಳಿಗಿರಬಹುದು ಅಥವಾ ಯುದ್ಧಕಾಲ, ಪರದೇಶದ ಆಕ್ರಮಣದಿಂದಿರಬಹುದು ಹಾಗೂ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿರಬಹುದು. ಇಂತಹ ಪರಿಸ್ಥಿತಿಗಳಿಗೆ ತುರ್ತು ಪರಿಸ್ಥಿತಿ ಎಂದು ಕರೆಯುತ್ತಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.