ETV Bharat / bharat

ಮತ್ತೊಂದು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಕಾರ್ಮಿಕರ ಸಾವು

author img

By

Published : Nov 10, 2022, 11:01 PM IST

ತಮಿಳುನಾಡಿನ ಮಧುರೈನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಐವರು ಮೃತಪಟ್ಟಿರುವ ಬೆನ್ನಲ್ಲೇ ಆಂಧ್ರದಲ್ಲೂ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲೂ ಮೂವರು ಸಾವನ್ನಪ್ಪಿದ್ದಾರೆ.

explosion-in-fire-cracker-unit-in-west-godavari-district
ಮತ್ತೊಂದು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಕಾರ್ಮಿಕರ ಸಾವು

ಪಶ್ಚಿಮ ಗೋದಾವರಿ (ಆಂಧ್ರ ಪ್ರದೇಶ): ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಇಲ್ಲಿನ ತಾಡೆಪಲ್ಲಿಗುಡೆಂ ಮಂಡಲದ ಕಡಿಯಡ್ಡಾದಲ್ಲಿ ಅಣ್ಣಾವರಂ ಎಂಬುವವರಿಗೆ ಸೇರಿದ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಈ ಸ್ಫೋಟದ ವೇಳೆ ಕಾರ್ಖಾನೆಯಲ್ಲಿ 10 ಮಂದಿ ಕಾರ್ಮಿಕರು ಇದ್ದರು ಎನ್ನಲಾಗಿದೆ.

ಸ್ಫೋಟದಿಂದ ಮೂವರು ಸಾವನ್ನಪ್ಪಿ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರೀ ಸ್ಫೋಟದಿಂದ ಸ್ಥಳೀಯರು ಭಯಭೀತರಾಗಿದ್ದರು. ಈ ವಿಷಯ ತಿಳಿದು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ನಡೆಸಿದ್ದಾರೆ.

ಇನ್ನು, ಇಂದು ಒಂದೇ ದಿನ ದೇಶದಲ್ಲಿ ಸಂಭವಿಸಿದ ಎರಡನೇ ದುರ್ಘಟನೆ ಇದಾಗಿದೆ. ತಮಿಳುನಾಡಿನ ಮಧುರೈನಲ್ಲೂ ಇಂದು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಐವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಐವರ ದುರ್ಮರಣ, 11 ಮಂದಿಗೆ ಗಂಭೀರ ಗಾಯ

ಪಶ್ಚಿಮ ಗೋದಾವರಿ (ಆಂಧ್ರ ಪ್ರದೇಶ): ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಇಲ್ಲಿನ ತಾಡೆಪಲ್ಲಿಗುಡೆಂ ಮಂಡಲದ ಕಡಿಯಡ್ಡಾದಲ್ಲಿ ಅಣ್ಣಾವರಂ ಎಂಬುವವರಿಗೆ ಸೇರಿದ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಈ ಸ್ಫೋಟದ ವೇಳೆ ಕಾರ್ಖಾನೆಯಲ್ಲಿ 10 ಮಂದಿ ಕಾರ್ಮಿಕರು ಇದ್ದರು ಎನ್ನಲಾಗಿದೆ.

ಸ್ಫೋಟದಿಂದ ಮೂವರು ಸಾವನ್ನಪ್ಪಿ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರೀ ಸ್ಫೋಟದಿಂದ ಸ್ಥಳೀಯರು ಭಯಭೀತರಾಗಿದ್ದರು. ಈ ವಿಷಯ ತಿಳಿದು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ನಡೆಸಿದ್ದಾರೆ.

ಇನ್ನು, ಇಂದು ಒಂದೇ ದಿನ ದೇಶದಲ್ಲಿ ಸಂಭವಿಸಿದ ಎರಡನೇ ದುರ್ಘಟನೆ ಇದಾಗಿದೆ. ತಮಿಳುನಾಡಿನ ಮಧುರೈನಲ್ಲೂ ಇಂದು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಐವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಐವರ ದುರ್ಮರಣ, 11 ಮಂದಿಗೆ ಗಂಭೀರ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.