ETV Bharat / bharat

ಮಹಾರಾಷ್ಟ್ರದಲ್ಲಿ ರಾಕೇಶ್ ಟಿಕಾಯತ್​ರ ಕಿಸಾನ್​​ ಮಹಾ ಪಂಚಾಯತ್ ರದ್ದು - ಯವತ್ಮಾಲ್

ಜಿಲ್ಲಾಡಳಿತ ಅನುಮತಿ ನೀಡದ ಕಾರಣ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ನಡೆಸಬೇಕೆಂದಿದ್ದ ಕಿಸಾನ್​ ಮಹಾ ಪಂಚಾಯತ್ ರದ್ದುಗೊಂಡಿದೆ.

No permission for Rakesh Tikait's rally in Yavatmal
ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್
author img

By

Published : Feb 20, 2021, 8:12 AM IST

ಗಾಜಿಪುರ (ಉತ್ತರ ಪ್ರದೇಶ): ಇಂದು ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರ ರಾಕೇಶ್ ಟಿಕಾಯತ್ ನಡೆಸಬೇಕೆಂದಿದ್ದ ಕಿಸಾನ್​ ಮಹಾ ಪಂಚಾಯತ್ ರದ್ದಾಗಿದೆ.

ಮಹಾ ಪಂಚಾಯತ್​ಗೆ ಯವತ್ಮಾಲ್ ಜಿಲ್ಲಾಡಳಿತ ಅನುಮತಿ ನೀಡಲು ನಿರಾಕರಿಸಿದೆ. ಜಿಲ್ಲೆಯಲ್ಲಿನ ಕೊರೊನಾ ಪರಿಸ್ಥಿತಿಯಿಂದಾಗಿ ರ‍್ಯಾಲಿ ನಡೆಸಲು ಅನುಮತಿಗಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್

ಇದನ್ನೂ ಓದಿ: ಪಿಎಂ ಮೋದಿ ನೇತೃತ್ವದಲ್ಲಿಂದು ನೀತಿ ಆಯೋಗದ 6ನೇ ಆಡಳಿತ ಮಂಡಳಿ ಸಭೆ

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗೆ ರೈತರನ್ನು ಮತ್ತಷ್ಟು ಒಗ್ಗೂಡಿಸಲು ಯವತ್ಮಾಲ್ ಜಿಲ್ಲೆಯ ಆಜಾದ್ ಮೈದಾನದಲ್ಲಿ ಇಂದು ಕಿಸಾನ್​ ಮಹಾ ಪಂಚಾಯತ್ ನಡೆಸುವುದಾಗಿ ಟಿಕಾಯತ್ ತಿಳಿಸಿದ್ದರು. ಇದೀಗ ಪ್ರತಿಕ್ರಿಯೆ ನೀಡಿರುವ ಅವರು, ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಅವಕಾಶ ನೀಡಿಲ್ಲ. ಹೀಗಾಗಿ ಕಿಸಾನ್​ ಮಹಾ ಪಂಚಾಯತ್​ ರದ್ದಾಗಿದೆ. ರೈತರು ಯವತ್ಮಾಲ್​ಗೆ ಬರಬೇಡಿ ಎಂದು ಹೇಳಿದ್ದಾರೆ.

ಗಾಜಿಪುರ (ಉತ್ತರ ಪ್ರದೇಶ): ಇಂದು ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರ ರಾಕೇಶ್ ಟಿಕಾಯತ್ ನಡೆಸಬೇಕೆಂದಿದ್ದ ಕಿಸಾನ್​ ಮಹಾ ಪಂಚಾಯತ್ ರದ್ದಾಗಿದೆ.

ಮಹಾ ಪಂಚಾಯತ್​ಗೆ ಯವತ್ಮಾಲ್ ಜಿಲ್ಲಾಡಳಿತ ಅನುಮತಿ ನೀಡಲು ನಿರಾಕರಿಸಿದೆ. ಜಿಲ್ಲೆಯಲ್ಲಿನ ಕೊರೊನಾ ಪರಿಸ್ಥಿತಿಯಿಂದಾಗಿ ರ‍್ಯಾಲಿ ನಡೆಸಲು ಅನುಮತಿಗಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್

ಇದನ್ನೂ ಓದಿ: ಪಿಎಂ ಮೋದಿ ನೇತೃತ್ವದಲ್ಲಿಂದು ನೀತಿ ಆಯೋಗದ 6ನೇ ಆಡಳಿತ ಮಂಡಳಿ ಸಭೆ

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗೆ ರೈತರನ್ನು ಮತ್ತಷ್ಟು ಒಗ್ಗೂಡಿಸಲು ಯವತ್ಮಾಲ್ ಜಿಲ್ಲೆಯ ಆಜಾದ್ ಮೈದಾನದಲ್ಲಿ ಇಂದು ಕಿಸಾನ್​ ಮಹಾ ಪಂಚಾಯತ್ ನಡೆಸುವುದಾಗಿ ಟಿಕಾಯತ್ ತಿಳಿಸಿದ್ದರು. ಇದೀಗ ಪ್ರತಿಕ್ರಿಯೆ ನೀಡಿರುವ ಅವರು, ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಅವಕಾಶ ನೀಡಿಲ್ಲ. ಹೀಗಾಗಿ ಕಿಸಾನ್​ ಮಹಾ ಪಂಚಾಯತ್​ ರದ್ದಾಗಿದೆ. ರೈತರು ಯವತ್ಮಾಲ್​ಗೆ ಬರಬೇಡಿ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.