ETV Bharat / bharat

ಕೊಟ್ಟ ಮಾತಿಗೆ ತಪ್ಪಿ ಹಿಂಸಾಚಾರದಲ್ಲಿ ರೈತ ಮುಖಂಡರೂ ಭಾಗಿ: ದೆಹಲಿ ಪೊಲೀಸ್ ಆಯುಕ್ತ

author img

By

Published : Jan 27, 2021, 9:26 PM IST

ರೈತರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಹಿಂಸಾಚಾರದಲ್ಲಿ ಅವರು ಕೂಡ ಭಾಗಿಯಾಗಿದ್ದಾರೆ ಎಂದು ದೆಹಲಿ ಪೊಲೀಸ್ ಆಯುಕ್ತರು ಸುದ್ದಿಗೋಷ್ಠಿ ವೇಳೆ ಮಾಹಿತಿ ನೀಡಿದ್ದಾರೆ.

Delhi Police Commissioner
Delhi Police Commissioner

ನವದೆಹಲಿ: ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಅನೇಕ ರೈತ ಸಂಘಟನೆಗಳ ಮುಖಂಡರು ಭಾಗಿಯಾಗಿ, ಅವರಿಗೆ ನೀಡಲಾಗಿದ್ದ ಷರತ್ತು ಮುರಿದು ಹಾಕಿದ್ದಾರೆ ಎಂದು ಪೊಲೀಸ್ ಆಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ.

ಕೊಟ್ಟ ಮಾತಿಗೆ ತಪ್ಪಿದ ರೈತರು: ದೆಹಲಿ ಪೊಲೀಸ್ ಆಯುಕ್ತ

ಕೃಷಿ ಕಾಯ್ದೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ನಿನ್ನೆ ರೈತ ಸಂಘಟನೆಗಳು ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್​​ ರ‍್ಯಾಲಿ ಹಿಂಸಾಚಾರಕ್ಕೆ ತಿರುಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಆಯುಕ್ತ ಎನ್​.ಎಸ್.ಶ್ರೀವಾಸ್ತವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

  • #WATCH | We have the video footage of those who indulged in the violence & we are analyzing them. They are being identified with the help of the face recognition system. They will be arrested and legal action will be taken against them: Delhi Police Commissioner SN Shrivastava pic.twitter.com/o6X6LSjREy

    — ANI (@ANI) January 27, 2021 " class="align-text-top noRightClick twitterSection" data=" ">

ಓದಿ: 'ಹಿಂಸಾಚಾರ ಸಂಬಂಧ ಇಲ್ಲಿಯವರೆಗೆ 25 ಕೇಸು ದಾಖಲಿಸಿದ್ದೇವೆ; ಯಾವುದೇ ಆರೋಪಿಯನ್ನು ಬಿಡಲ್ಲ'

ರೈತರು ಪ್ರತಿಭಟನೆ ನಡೆಸಲು ನೀಡಲಾಗಿದ್ದ ಷರತ್ತಿನಂತೆ ನಡೆದುಕೊಳ್ಳಲಿಲ್ಲ. ಹಿಂಸಾಚಾರ ನಡೆಸುವ ಬಗ್ಗೆ ನಮಗೆ ಜನವರಿ 25ರ ಸಂಜೆ ಮಾಹಿತಿ ಗೊತ್ತಾಗಿತ್ತು. ಕೆಲ ಸಮಾಜಘಾತುಕ ಶಕ್ತಿಗಳು ರೈತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳದಲ್ಲಿ ಪ್ರಚೋದನಕಾರಿ ಭಾಷಣ ಮಾಡಿ, ಹಿಂಸಾಚಾರಕ್ಕೆ ಪ್ರಚೋದನೆ ನೀಡಿವೆ ಎಂದರು.

  • #WATCH | As per the agreement, we wanted the rally to conclude peacefully. The violence occurred because terms & conditions were not followed. Farmer leaders were involved in the violence: Delhi Police Commissioner SN Shrivastava pic.twitter.com/rusCKk8DBR

    — ANI (@ANI) January 27, 2021 " class="align-text-top noRightClick twitterSection" data=" ">

ಟ್ರ್ಯಾಕ್ಟರ್​ ರ‍್ಯಾಲಿ ಶಾಂತಿಯುತವಾಗಿ ನಡೆಸುವಂತೆ ಸೂಚನೆ ನೀಡಲಾಗಿತ್ತು. ಅದಕ್ಕೆ ರೈತ ಸಂಘಟನೆಗಳು ಒಪ್ಪಿಗೆ ನೀಡಿದ್ದವು. ಆದರೆ ನಾವು ನೀಡಿದ್ದ ಷರತ್ತು ಬ್ರೇಕ್ ಮಾಡಿ ಹಿಂಸೆಯಲ್ಲಿ ಭಾಗಿಯಾಗಿವೆ ಎಂದು ಹೇಳಿದರು. ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಅವರು, ರೈತರು ಕೊಟ್ಟ ಮಾತು ಮುರಿದಿದ್ದಾರೆ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮಹತ್ವದ ಮಾಹಿತಿ ಕಲೆಹಾಕಲಾಗುತ್ತಿದ್ದು, ಹಲವರ ಹೆಸರುಗಳು ಬಹಿರಂಗಗೊಳ್ಳಲಿವೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ನವದೆಹಲಿ: ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಅನೇಕ ರೈತ ಸಂಘಟನೆಗಳ ಮುಖಂಡರು ಭಾಗಿಯಾಗಿ, ಅವರಿಗೆ ನೀಡಲಾಗಿದ್ದ ಷರತ್ತು ಮುರಿದು ಹಾಕಿದ್ದಾರೆ ಎಂದು ಪೊಲೀಸ್ ಆಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ.

ಕೊಟ್ಟ ಮಾತಿಗೆ ತಪ್ಪಿದ ರೈತರು: ದೆಹಲಿ ಪೊಲೀಸ್ ಆಯುಕ್ತ

ಕೃಷಿ ಕಾಯ್ದೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ನಿನ್ನೆ ರೈತ ಸಂಘಟನೆಗಳು ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್​​ ರ‍್ಯಾಲಿ ಹಿಂಸಾಚಾರಕ್ಕೆ ತಿರುಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಆಯುಕ್ತ ಎನ್​.ಎಸ್.ಶ್ರೀವಾಸ್ತವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

  • #WATCH | We have the video footage of those who indulged in the violence & we are analyzing them. They are being identified with the help of the face recognition system. They will be arrested and legal action will be taken against them: Delhi Police Commissioner SN Shrivastava pic.twitter.com/o6X6LSjREy

    — ANI (@ANI) January 27, 2021 " class="align-text-top noRightClick twitterSection" data=" ">

ಓದಿ: 'ಹಿಂಸಾಚಾರ ಸಂಬಂಧ ಇಲ್ಲಿಯವರೆಗೆ 25 ಕೇಸು ದಾಖಲಿಸಿದ್ದೇವೆ; ಯಾವುದೇ ಆರೋಪಿಯನ್ನು ಬಿಡಲ್ಲ'

ರೈತರು ಪ್ರತಿಭಟನೆ ನಡೆಸಲು ನೀಡಲಾಗಿದ್ದ ಷರತ್ತಿನಂತೆ ನಡೆದುಕೊಳ್ಳಲಿಲ್ಲ. ಹಿಂಸಾಚಾರ ನಡೆಸುವ ಬಗ್ಗೆ ನಮಗೆ ಜನವರಿ 25ರ ಸಂಜೆ ಮಾಹಿತಿ ಗೊತ್ತಾಗಿತ್ತು. ಕೆಲ ಸಮಾಜಘಾತುಕ ಶಕ್ತಿಗಳು ರೈತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳದಲ್ಲಿ ಪ್ರಚೋದನಕಾರಿ ಭಾಷಣ ಮಾಡಿ, ಹಿಂಸಾಚಾರಕ್ಕೆ ಪ್ರಚೋದನೆ ನೀಡಿವೆ ಎಂದರು.

  • #WATCH | As per the agreement, we wanted the rally to conclude peacefully. The violence occurred because terms & conditions were not followed. Farmer leaders were involved in the violence: Delhi Police Commissioner SN Shrivastava pic.twitter.com/rusCKk8DBR

    — ANI (@ANI) January 27, 2021 " class="align-text-top noRightClick twitterSection" data=" ">

ಟ್ರ್ಯಾಕ್ಟರ್​ ರ‍್ಯಾಲಿ ಶಾಂತಿಯುತವಾಗಿ ನಡೆಸುವಂತೆ ಸೂಚನೆ ನೀಡಲಾಗಿತ್ತು. ಅದಕ್ಕೆ ರೈತ ಸಂಘಟನೆಗಳು ಒಪ್ಪಿಗೆ ನೀಡಿದ್ದವು. ಆದರೆ ನಾವು ನೀಡಿದ್ದ ಷರತ್ತು ಬ್ರೇಕ್ ಮಾಡಿ ಹಿಂಸೆಯಲ್ಲಿ ಭಾಗಿಯಾಗಿವೆ ಎಂದು ಹೇಳಿದರು. ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಅವರು, ರೈತರು ಕೊಟ್ಟ ಮಾತು ಮುರಿದಿದ್ದಾರೆ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮಹತ್ವದ ಮಾಹಿತಿ ಕಲೆಹಾಕಲಾಗುತ್ತಿದ್ದು, ಹಲವರ ಹೆಸರುಗಳು ಬಹಿರಂಗಗೊಳ್ಳಲಿವೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.