ETV Bharat / bharat

ಅನ್ನದಾತರ ಕಿಚ್ಚು: ಇಂದು 4 ತಾಸು ರಾಷ್ಟ್ರವ್ಯಾಪಿ 'ರೈಲು ತಡೆ ಚಳವಳಿ'

author img

By

Published : Feb 18, 2021, 8:17 AM IST

ಇಂದು 4 ಗಂಟೆಗಳ ಕಾಲ ರಾಷ್ಟ್ರವ್ಯಾಪಿ 'ರೈಲು ತಡೆ ಚಳವಳಿ'ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ರೈಲ್ವೆ ಭದ್ರತಾ ವಿಶೇಷ ಪಡೆಯು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದೆ.

rail roko
ರೈಲು ತಡೆ

ನವದೆಹಲಿ: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಅನ್ನದಾತರ ಪ್ರತಿಭಟನೆ ಮುಂದುವರೆದಿದ್ದು, ಇಂದು 4 ಗಂಟೆಗಳ ಕಾಲ ರಾಷ್ಟ್ರವ್ಯಾಪಿ 'ರೈಲು ತಡೆ ಚಳವಳಿ'ಗೆ ರೈತ ಸಂಘಟನೆಗಳು ಕರೆ ನೀಡಿವೆ.

ಇಂದು ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ರೈತರು ರೈಲು ತಡೆದು ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ. ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ ಅವರಿಗೆ ಉಪಹಾರದ ವ್ಯವಸ್ಥೆಯನ್ನು ನಾವು ಮಾಡುತ್ತೇವೆ ಎಂದು ಕಿಸಾನ್ ಆಂದೋಲನ ಸಮಿತಿಯ ವಕ್ತಾರ ಜಗ್ತಾರ್ ಸಿಂಗ್ ಬಜ್ವಾ ಗಾಜಿಪುರ ಗಡಿಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲೂ ರಾಜ್ಯ ಕಬ್ಬು ಬೆಳಗಾರರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್​ ನೇತೃತ್ವದಲ್ಲಿ ರೈಲ್​ ರೋಖೋ ಚಳವಳಿ ನಡೆಯಲಿದೆ.

ಇದನ್ನೂ ಓದಿ: ರಾಮೋಜಿ ಫಿಲಂ ಸಿಟಿಯ ಖುಷಿಗೆ ಇನ್ನಷ್ಟು ಮೆರುಗು: ಇಂದಿನಿಂದ ಗ್ರ್ಯಾಂಡ್ ಓಪನಿಂಗ್

ಯಾವುದೇ ವಿಳಂಬ ಮಾಡದೆ ರೈತರ ಸಮಸ್ಯೆಗಳನ್ನು ಸರ್ಕಾರ ತಕ್ಷಣವೇ ಬಗೆಹರಿಸಬೇಕು. ಇದರ ಬದಲು ಬಿಜೆಪಿ ರೈತರನ್ನ ನಾಶಮಾಡುತ್ತಿದೆ. ಆಡಳಿತ ಪಕ್ಷದ ನಡೆಯನ್ನು ನಾವು ಖಂಡಿಸುತ್ತೇವೆ ಎಂದು ಸಂಯುಕ್ತ ಕಿಸಾನ್​ ಮೋರ್ಚಾ (ಎಸ್​ಕೆಎಂ) ಆಕ್ರೋಶ ವ್ಯಕ್ತಪಡಿಸಿದೆ.

ಪ್ರತಿಭಟನೆ ಹಿನ್ನೆಲೆ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿ ಹಲವೆಡೆ ರೈಲ್ವೆ ಭದ್ರತಾ ವಿಶೇಷ ಪಡೆಯು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದೆ.

ನವದೆಹಲಿ: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಅನ್ನದಾತರ ಪ್ರತಿಭಟನೆ ಮುಂದುವರೆದಿದ್ದು, ಇಂದು 4 ಗಂಟೆಗಳ ಕಾಲ ರಾಷ್ಟ್ರವ್ಯಾಪಿ 'ರೈಲು ತಡೆ ಚಳವಳಿ'ಗೆ ರೈತ ಸಂಘಟನೆಗಳು ಕರೆ ನೀಡಿವೆ.

ಇಂದು ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ರೈತರು ರೈಲು ತಡೆದು ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ. ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ ಅವರಿಗೆ ಉಪಹಾರದ ವ್ಯವಸ್ಥೆಯನ್ನು ನಾವು ಮಾಡುತ್ತೇವೆ ಎಂದು ಕಿಸಾನ್ ಆಂದೋಲನ ಸಮಿತಿಯ ವಕ್ತಾರ ಜಗ್ತಾರ್ ಸಿಂಗ್ ಬಜ್ವಾ ಗಾಜಿಪುರ ಗಡಿಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲೂ ರಾಜ್ಯ ಕಬ್ಬು ಬೆಳಗಾರರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್​ ನೇತೃತ್ವದಲ್ಲಿ ರೈಲ್​ ರೋಖೋ ಚಳವಳಿ ನಡೆಯಲಿದೆ.

ಇದನ್ನೂ ಓದಿ: ರಾಮೋಜಿ ಫಿಲಂ ಸಿಟಿಯ ಖುಷಿಗೆ ಇನ್ನಷ್ಟು ಮೆರುಗು: ಇಂದಿನಿಂದ ಗ್ರ್ಯಾಂಡ್ ಓಪನಿಂಗ್

ಯಾವುದೇ ವಿಳಂಬ ಮಾಡದೆ ರೈತರ ಸಮಸ್ಯೆಗಳನ್ನು ಸರ್ಕಾರ ತಕ್ಷಣವೇ ಬಗೆಹರಿಸಬೇಕು. ಇದರ ಬದಲು ಬಿಜೆಪಿ ರೈತರನ್ನ ನಾಶಮಾಡುತ್ತಿದೆ. ಆಡಳಿತ ಪಕ್ಷದ ನಡೆಯನ್ನು ನಾವು ಖಂಡಿಸುತ್ತೇವೆ ಎಂದು ಸಂಯುಕ್ತ ಕಿಸಾನ್​ ಮೋರ್ಚಾ (ಎಸ್​ಕೆಎಂ) ಆಕ್ರೋಶ ವ್ಯಕ್ತಪಡಿಸಿದೆ.

ಪ್ರತಿಭಟನೆ ಹಿನ್ನೆಲೆ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿ ಹಲವೆಡೆ ರೈಲ್ವೆ ಭದ್ರತಾ ವಿಶೇಷ ಪಡೆಯು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.