ETV Bharat / bharat

Farmers Celebration: ಕೃಷಿ ಕಾನೂನುಗಳು ರದ್ದು - ಅನ್ನದಾತರ ಸಂಭ್ರಮ ನೋಡಿ..

author img

By

Published : Nov 19, 2021, 12:37 PM IST

ಎಲ್ಲ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಹತ್ತರ ಘೋಷಣೆ ಹೊರಡಿಸಿದ ಬೆನ್ನಲ್ಲೇ ಗಾಜಿಪುರ, ಸಿಂಘು ಸೇರಿದಂತೆ ಎನ್​ಸಿಆರ್​ ಗಡಿಭಾಗಳಲ್ಲಿ ರೈತರು ಜಿಲೇಬಿ ಹಂಚಿ, "ಕಿಸಾನ್ ಜಿಂದಾಬಾದ್" ಎಂದು ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದ್ದಾರೆ.

Farmers Celebration
Farmers Celebration

ನವದೆಹಲಿ: ರಾಷ್ಟ್ರ ರಾಜಧಾನಿಯ ಗಡಿಭಾಗಗಳಲ್ಲಿ ಕಳೆದೊಂದು ವರ್ಷದಿಂದ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದ್ದ ಅನ್ನದಾತರು ಇದೀಗ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಇದೇ ಹೋರಾಟದಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ 700ಕ್ಕೂ ಹೆಚ್ಚು ರೈತರು ಬಲಿಯಾಗಿದ್ದರು.

ಎನ್​ಸಿಆರ್​ ಗಡಿಭಾಗಳಲ್ಲಿ ಅನ್ನದಾತರ ಸಂಭ್ರಮ

ಮೂರೂ ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಹತ್ತರ ಘೋಷಣೆ ಹೊರಡಿಸಿದ ಬೆನ್ನಲ್ಲೇ ಘಾಜಿಪುರ, ಸಿಂಘು ಸೇರಿದಂತೆ ಎನ್​ಸಿಆರ್​ ಗಡಿಭಾಗಳಲ್ಲಿ ರೈತರು ಜಿಲೇಬಿ ಹಂಚಿ, "ಕಿಸಾನ್ ಜಿಂದಾಬಾದ್" ಎಂದು ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Repeal of 3 farm laws: ಅನ್ಯಾಯದ ವಿರುದ್ಧದ ವಿಜಯ ಎಂದ ರಾಗಾ ; ಸಂಸತ್ತಿನಲ್ಲಿ ಕೃಷಿ ಕಾನೂನುಗಳು ರದ್ದಾಗೋ ವರೆಗೂ ಪ್ರತಿಭಟನೆ - ಟಿಕಾಯತ್​

ಇತ್ತ, ಭಾರತೀಯ ಕಿಸಾನ್​ ಯೂನಿಯನ್​ ರಾಷ್ಟ್ರೀಯ ವಕ್ತಾರ​ (National spokesperson of Bhartiya Kisan Union -BKU) ರಾಕೇಶ್ ಟಿಕಾಯತ್​ (Rakesh Tikait) ಅವರು ಆಂದೋಲನವನ್ನು ತಕ್ಷಣವೇ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ ಎಂದು ಹೇಳಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿಯ ಗಡಿಭಾಗಗಳಲ್ಲಿ ಕಳೆದೊಂದು ವರ್ಷದಿಂದ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದ್ದ ಅನ್ನದಾತರು ಇದೀಗ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಇದೇ ಹೋರಾಟದಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ 700ಕ್ಕೂ ಹೆಚ್ಚು ರೈತರು ಬಲಿಯಾಗಿದ್ದರು.

ಎನ್​ಸಿಆರ್​ ಗಡಿಭಾಗಳಲ್ಲಿ ಅನ್ನದಾತರ ಸಂಭ್ರಮ

ಮೂರೂ ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಹತ್ತರ ಘೋಷಣೆ ಹೊರಡಿಸಿದ ಬೆನ್ನಲ್ಲೇ ಘಾಜಿಪುರ, ಸಿಂಘು ಸೇರಿದಂತೆ ಎನ್​ಸಿಆರ್​ ಗಡಿಭಾಗಳಲ್ಲಿ ರೈತರು ಜಿಲೇಬಿ ಹಂಚಿ, "ಕಿಸಾನ್ ಜಿಂದಾಬಾದ್" ಎಂದು ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Repeal of 3 farm laws: ಅನ್ಯಾಯದ ವಿರುದ್ಧದ ವಿಜಯ ಎಂದ ರಾಗಾ ; ಸಂಸತ್ತಿನಲ್ಲಿ ಕೃಷಿ ಕಾನೂನುಗಳು ರದ್ದಾಗೋ ವರೆಗೂ ಪ್ರತಿಭಟನೆ - ಟಿಕಾಯತ್​

ಇತ್ತ, ಭಾರತೀಯ ಕಿಸಾನ್​ ಯೂನಿಯನ್​ ರಾಷ್ಟ್ರೀಯ ವಕ್ತಾರ​ (National spokesperson of Bhartiya Kisan Union -BKU) ರಾಕೇಶ್ ಟಿಕಾಯತ್​ (Rakesh Tikait) ಅವರು ಆಂದೋಲನವನ್ನು ತಕ್ಷಣವೇ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.