ETV Bharat / bharat

ಎಂಎಸ್​ಪಿ ಗ್ಯಾರಂಟಿ ಕೊಡಿ: ಫೆಬ್ರವರಿ 13ರಂದು ರೈತರಿಂದ ದೆಹಲಿ ಚಲೋ

author img

By ETV Bharat Karnataka Team

Published : Jan 9, 2024, 4:53 PM IST

ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಫೆಬ್ರವರಿ 13ರಂದು ದೆಹಲಿ ಚಲೋ ನಡೆಸಲು ತೀರ್ಮಾನಿಸಿದೆ.

farmers-protest-in-delhi-regarding-their-pending-demands-including-msp-guarantee-law-sonipat
ಎಂಎಸ್​ಪಿ ಗ್ಯಾರಂಟಿ ಕೊಡಿ : ಫೆಬ್ರವರಿ 13ರಂದು ರೈತರಿಂದ ದೆಹಲಿ ಚಲೋ

ಸೋನಿಪತ್ (ಹರಿಯಾಣ)​ : ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತೆ ದೆಹಲಿ ಚಲೋ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಎಂಎಸ್​ಪಿ ಗ್ಯಾರಂಟಿ ಕಾನೂನು ಜಾರಿ, ಸ್ವಾಮಿನಾಥನ್​ ವರದಿ ಜಾರಿ ಮತ್ತು ಭೂ ಸ್ವಾಧೀನ ಕಾಯ್ದೆ- 2013 ಸೇರಿ ವಿವಿಧ ಯೋಜನೆಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಸಂಬಂಧ ಉತ್ತರಪ್ರದೇಶ, ಹರಿಯಾಣ, ಪಂಜಾಬ್​ನ ರೈತರು ಫೆಬ್ರವರಿ 13ರಂದು ದೆಹಲಿ ಚಲೋ ಹಮ್ಮಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಯುವ ರೈತ ಮುಖಂಡ ಅಭಿಮನ್ಯು ಕೋಹರ್​, ಕೇಂದ್ರ ಸರ್ಕಾರ ಈ ಹಿಂದೆ ಜಾರಿ ಮಾಡಿದ್ದ ಮೂರು ಕೃಷಿ ಕಾನೂನುಗಳನ್ನು ರೈತರ ಪ್ರತಿಭಟನೆ ನಡೆಸಿದ ಕಾರಣ ರದ್ದು ಮಾಡಿದೆ. ಇದರ ಜೊತೆಗೆ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ರೈತರು ಒತ್ತಾಯಿಸಿದ್ದರು. ಆದರೆ, ಕೇಂದ್ರ ಸರ್ಕಾರ ಈ ಬೇಡಿಕೆಗಳನ್ನು ಇದುವರೆಗೆ ಈಡೇರಿಸಿಲ್ಲ. ಈ ಸಂಬಂಧ ಫೆಬ್ರವರಿ 13ರಂದು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.

ಈ ಹಿಂದೆ ಕೇಂದ್ರ ಸರ್ಕಾರವು ಮೂರು ಕೃಷಿ ಮಸೂದೆಗಳನ್ನು ಹಿಂಪಡೆದಿದೆ. ಇದರ ಜೊತೆಗೆ ನಾವು ಕೇಂದ್ರ ಸರ್ಕಾರದ ಮುಂದೆ ಹಲವು ಮಸೂದೆಗಳನ್ನು ಮತ್ತು ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿದ್ದೆವು. ಆದರೆ, ಸರ್ಕಾರ ನಮ್ಮ ಬೇಡಿಕೆಗಳನ್ನು ಬಾಕಿ ಉಳಿಸಿಕೊಂಡಿದ್ದು, ಇದರ ಅನುಷ್ಠಾನ ಮಾಡಿಲ್ಲ. ಈ ಮೂಲಕ ನಾನು ಸರ್ಕಾರಕ್ಕೆ ಒತ್ತಾಯಿಸುವುದೇನೆಂದರೆ, ಎಂಎಸ್​ಪಿ ಕಾನೂನನ್ನು ಜಾರಿ ಮಾಡಬೇಕು ಎಂದರು.

ಜೊತೆಗೆ ಸರ್ಕಾರವು ಸ್ವಾಮಿನಾಥನ್​ ವರದಿ ಹಾಗೂ ಭೂಸ್ವಾಧೀನ ಮಸೂದೆ - 2013ನ್ನು ಜಾರಿ ಮಾಡಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಯಾವುದನ್ನೂ ಗಂಭೀರವಾಗಿ ಪರಿಗಣಿಸಿಲ್ಲ. ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವವರೆಗೆ ನಾವು ಪ್ರತಿಭಟನೆ ನಡೆಸುತ್ತೇವೆ. ಪ್ರತಿಭಟನೆಗೂ ಮುನ್ನ ಚಂಡೀಗಢದ ಎಲ್ಲ ರೈತ ಸಂಘಟನೆಗಳು ಒಟ್ಟಾಗಿ ಪ್ರತಿಭಟನೆಯ ರೂಪುರೇಷೆಗಳನ್ನು ನಿರ್ಧರಿಸುತ್ತೇವೆ ಎಂದು ಹೇಳಿದರು.

2020 ನವೆಂಬರ್​ 26ರಂದು ಮೂರು ಕೃಷಿ ಮಸೂದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದವು. ಈ ವೇಳೆ, ದೆಹಲಿಗೆ ಬರುತ್ತಿದ್ದ ರೈತರನ್ನು ಪೊಲೀಸರು ಅಲ್ಲೇ ತಡೆದಿದ್ದರು. ಬಳಿಕ ರೈತರ ಪ್ರತಿಭಟನೆಗೆ ಮಣಿದು ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿತ್ತು.

ಇದನ್ನೂ ಓದಿ : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಾವು

ಸೋನಿಪತ್ (ಹರಿಯಾಣ)​ : ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತೆ ದೆಹಲಿ ಚಲೋ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಎಂಎಸ್​ಪಿ ಗ್ಯಾರಂಟಿ ಕಾನೂನು ಜಾರಿ, ಸ್ವಾಮಿನಾಥನ್​ ವರದಿ ಜಾರಿ ಮತ್ತು ಭೂ ಸ್ವಾಧೀನ ಕಾಯ್ದೆ- 2013 ಸೇರಿ ವಿವಿಧ ಯೋಜನೆಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಸಂಬಂಧ ಉತ್ತರಪ್ರದೇಶ, ಹರಿಯಾಣ, ಪಂಜಾಬ್​ನ ರೈತರು ಫೆಬ್ರವರಿ 13ರಂದು ದೆಹಲಿ ಚಲೋ ಹಮ್ಮಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಯುವ ರೈತ ಮುಖಂಡ ಅಭಿಮನ್ಯು ಕೋಹರ್​, ಕೇಂದ್ರ ಸರ್ಕಾರ ಈ ಹಿಂದೆ ಜಾರಿ ಮಾಡಿದ್ದ ಮೂರು ಕೃಷಿ ಕಾನೂನುಗಳನ್ನು ರೈತರ ಪ್ರತಿಭಟನೆ ನಡೆಸಿದ ಕಾರಣ ರದ್ದು ಮಾಡಿದೆ. ಇದರ ಜೊತೆಗೆ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ರೈತರು ಒತ್ತಾಯಿಸಿದ್ದರು. ಆದರೆ, ಕೇಂದ್ರ ಸರ್ಕಾರ ಈ ಬೇಡಿಕೆಗಳನ್ನು ಇದುವರೆಗೆ ಈಡೇರಿಸಿಲ್ಲ. ಈ ಸಂಬಂಧ ಫೆಬ್ರವರಿ 13ರಂದು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.

ಈ ಹಿಂದೆ ಕೇಂದ್ರ ಸರ್ಕಾರವು ಮೂರು ಕೃಷಿ ಮಸೂದೆಗಳನ್ನು ಹಿಂಪಡೆದಿದೆ. ಇದರ ಜೊತೆಗೆ ನಾವು ಕೇಂದ್ರ ಸರ್ಕಾರದ ಮುಂದೆ ಹಲವು ಮಸೂದೆಗಳನ್ನು ಮತ್ತು ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿದ್ದೆವು. ಆದರೆ, ಸರ್ಕಾರ ನಮ್ಮ ಬೇಡಿಕೆಗಳನ್ನು ಬಾಕಿ ಉಳಿಸಿಕೊಂಡಿದ್ದು, ಇದರ ಅನುಷ್ಠಾನ ಮಾಡಿಲ್ಲ. ಈ ಮೂಲಕ ನಾನು ಸರ್ಕಾರಕ್ಕೆ ಒತ್ತಾಯಿಸುವುದೇನೆಂದರೆ, ಎಂಎಸ್​ಪಿ ಕಾನೂನನ್ನು ಜಾರಿ ಮಾಡಬೇಕು ಎಂದರು.

ಜೊತೆಗೆ ಸರ್ಕಾರವು ಸ್ವಾಮಿನಾಥನ್​ ವರದಿ ಹಾಗೂ ಭೂಸ್ವಾಧೀನ ಮಸೂದೆ - 2013ನ್ನು ಜಾರಿ ಮಾಡಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಯಾವುದನ್ನೂ ಗಂಭೀರವಾಗಿ ಪರಿಗಣಿಸಿಲ್ಲ. ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವವರೆಗೆ ನಾವು ಪ್ರತಿಭಟನೆ ನಡೆಸುತ್ತೇವೆ. ಪ್ರತಿಭಟನೆಗೂ ಮುನ್ನ ಚಂಡೀಗಢದ ಎಲ್ಲ ರೈತ ಸಂಘಟನೆಗಳು ಒಟ್ಟಾಗಿ ಪ್ರತಿಭಟನೆಯ ರೂಪುರೇಷೆಗಳನ್ನು ನಿರ್ಧರಿಸುತ್ತೇವೆ ಎಂದು ಹೇಳಿದರು.

2020 ನವೆಂಬರ್​ 26ರಂದು ಮೂರು ಕೃಷಿ ಮಸೂದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದವು. ಈ ವೇಳೆ, ದೆಹಲಿಗೆ ಬರುತ್ತಿದ್ದ ರೈತರನ್ನು ಪೊಲೀಸರು ಅಲ್ಲೇ ತಡೆದಿದ್ದರು. ಬಳಿಕ ರೈತರ ಪ್ರತಿಭಟನೆಗೆ ಮಣಿದು ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿತ್ತು.

ಇದನ್ನೂ ಓದಿ : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.