ETV Bharat / bharat

ಪೊಲೀಸರು, ಆಡಳಿತದ ವಿರುದ್ಧ ಹಿಸಾರ್​ನಲ್ಲಿ ರೈತರ ಪ್ರತಿಭಟನೆ: ಸ್ಥಳದಲ್ಲಿ ಬಿಗಿ ಬಂದೋಬಸ್ತ್​ - ಹಿಸಾರ್​​ನಲ್ಲಿ ಪೊಲೀಸರ ವಿರುದ್ಧ ರೈತರ ಪ್ರತಿಭಟನೆ

ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಕ್ಕಾಗಿ 350 ಕ್ಕೂ ಹೆಚ್ಚು ರೈತರ ವಿರುದ್ಧ ಎಫ್​ಐಆರ್​ ದಾಖಲಿಸಿರುವುದನ್ನು ಪ್ರತಿಭಟಿಸಲು ಹಿಸಾರ್​ನ ಕ್ರಾಂತಿಮಾನ್ ಉದ್ಯಾನವನಕ್ಕೆ ಸಾವಿರಾರು ಸಂಖ್ಯೆಯಲ್ಲಿ ರೈತರು ಆಗಮಿಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್​ ಕೈಗೊಳ್ಳಲಾಗಿದೆ.

hisar
hisar
author img

By

Published : May 24, 2021, 4:01 PM IST

ಹಿಸಾರ್‌/ಹರಿಯಾಣ: ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಕ್ಕಾಗಿ 350 ಕ್ಕೂ ಹೆಚ್ಚು ರೈತರ ವಿರುದ್ಧ ಎಫ್​ಐಆರ್​ ದಾಖಲಾದ ಹಿನ್ನೆಲೆ ಅದನ್ನು ವಿರೋಧಿಸಿ ಹರಿಯಾಣದ ಹಿಸಾರ್​ ರೈತರು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ.

ಈಗಾಗಲೇ 3 ಸಾವಿರಕ್ಕೂ ಹೆಚ್ಚು ರೈತರು ಹಿಸಾರ್‌ನ ಕ್ರಾಂತಿಮಾನ್ ಉದ್ಯಾನ ತಲುಪಿದ್ದಾರೆ. ವಿವಿಧ ಜಿಲ್ಲೆಗಳ ರೈತರು ಟ್ರ್ಯಾಕ್ಟರ್​ ಮತ್ತು ವಾಹನಗಳಲ್ಲಿ ಹಿಸಾರ್ ತಲುಪುತ್ತಿದ್ದಾರೆ. ಅವರಿಗೆ ಬೆಂಬಲವಾಗಿ ಖಾಪ್ ನಾಯಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತಲುಪಿದ್ದಾರೆ. ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್​ ಟಿಕಾಯತ್​ ಸಹ ಅವರನ್ನು ಬೆಂಬಲಿಸಲು ಹಿಸಾರ್​ಗೆ ತಲುಪಿದ್ದಾರೆ ಎಂಬ ಮಾಹಿತಿ ಇದೆ.

ರೈತರ ಪ್ರತಿಭಟನೆ ಹಿನ್ನೆಲೆ ಈಗಾಗಲೇ ಹಿಸಾರ್​ನ 7 ಜಿಲ್ಲೆಗಳ ಪೊಲೀಸರಿಗೆ ಜಿಲ್ಲಾಡಳಿತ ಕರೆ ಮೂಲಕ ಸಂಪರ್ಕಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಸುಮಾರು 4 ಸಾವಿರ ಸೈನಿಕರನ್ನು ನಿಯೋಜಿಸಲಾಗಿದೆ.

ಮೇ 16 ರಂದು ಹಿಸಾರ್‌ನಲ್ಲಿ ನಡೆದಿದ್ದೇನು?

ಮೇ 16 ರಂದು ಸಿಎಂ ಮನೋಹರ್ ಲಾಲ್ ಖಟ್ಟರ್​ ಕೋವಿಡ್ ಆಸ್ಪತ್ರೆಯ ಉದ್ಘಾಟನೆಗೆ ಆಗಮಿಸಿದ್ದರು. ಈ ವೇಳೆ, ರೈತರು ಈ ಸ್ಥಳದತ್ತ ಮೆರವಣಿಗೆ ನಡೆಸಲು ಉದ್ದೇಶಿಸಿದ್ದರು. ಈ ಬಳಿಕ ಹಿಂಸಾಚಾರ ಭುಗಿಲೆದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದರು. ಖಟ್ಟರ್ ಕೋವಿಡ್ ಆಸ್ಪತ್ರೆಯ ಉದ್ಘಾಟನೆ ಬಳಿಕ ಪೊಲೀಸರ ಕ್ರಮದಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಹೆದ್ದಾರಿ ಬಂದ್​ ಮಾಡಿದರು. ಈ ಹಿನ್ನೆಲೆ ಪೊಲೀಸರು ಕೆಲವರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಸದ್ಯ ಮೇ 16ರ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 350 ಕ್ಕೂ ಹೆಚ್ಚು ಜನರ ಮೇಲೆ ಎಫ್​ಐಆರ್​ ದಾಖಲಿಸಿದ್ದಾರೆ. ಪೊಲೀಸರ ಈ ಕ್ರಮದ ವಿರುದ್ಧ ರೈತರು ಇದೀಗ ಪ್ರತಿಭಟನೆಗೆ ಮುಂದಾಗಿದ್ದಾರೆ.

ಹಿಸಾರ್‌/ಹರಿಯಾಣ: ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಕ್ಕಾಗಿ 350 ಕ್ಕೂ ಹೆಚ್ಚು ರೈತರ ವಿರುದ್ಧ ಎಫ್​ಐಆರ್​ ದಾಖಲಾದ ಹಿನ್ನೆಲೆ ಅದನ್ನು ವಿರೋಧಿಸಿ ಹರಿಯಾಣದ ಹಿಸಾರ್​ ರೈತರು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ.

ಈಗಾಗಲೇ 3 ಸಾವಿರಕ್ಕೂ ಹೆಚ್ಚು ರೈತರು ಹಿಸಾರ್‌ನ ಕ್ರಾಂತಿಮಾನ್ ಉದ್ಯಾನ ತಲುಪಿದ್ದಾರೆ. ವಿವಿಧ ಜಿಲ್ಲೆಗಳ ರೈತರು ಟ್ರ್ಯಾಕ್ಟರ್​ ಮತ್ತು ವಾಹನಗಳಲ್ಲಿ ಹಿಸಾರ್ ತಲುಪುತ್ತಿದ್ದಾರೆ. ಅವರಿಗೆ ಬೆಂಬಲವಾಗಿ ಖಾಪ್ ನಾಯಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತಲುಪಿದ್ದಾರೆ. ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್​ ಟಿಕಾಯತ್​ ಸಹ ಅವರನ್ನು ಬೆಂಬಲಿಸಲು ಹಿಸಾರ್​ಗೆ ತಲುಪಿದ್ದಾರೆ ಎಂಬ ಮಾಹಿತಿ ಇದೆ.

ರೈತರ ಪ್ರತಿಭಟನೆ ಹಿನ್ನೆಲೆ ಈಗಾಗಲೇ ಹಿಸಾರ್​ನ 7 ಜಿಲ್ಲೆಗಳ ಪೊಲೀಸರಿಗೆ ಜಿಲ್ಲಾಡಳಿತ ಕರೆ ಮೂಲಕ ಸಂಪರ್ಕಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಸುಮಾರು 4 ಸಾವಿರ ಸೈನಿಕರನ್ನು ನಿಯೋಜಿಸಲಾಗಿದೆ.

ಮೇ 16 ರಂದು ಹಿಸಾರ್‌ನಲ್ಲಿ ನಡೆದಿದ್ದೇನು?

ಮೇ 16 ರಂದು ಸಿಎಂ ಮನೋಹರ್ ಲಾಲ್ ಖಟ್ಟರ್​ ಕೋವಿಡ್ ಆಸ್ಪತ್ರೆಯ ಉದ್ಘಾಟನೆಗೆ ಆಗಮಿಸಿದ್ದರು. ಈ ವೇಳೆ, ರೈತರು ಈ ಸ್ಥಳದತ್ತ ಮೆರವಣಿಗೆ ನಡೆಸಲು ಉದ್ದೇಶಿಸಿದ್ದರು. ಈ ಬಳಿಕ ಹಿಂಸಾಚಾರ ಭುಗಿಲೆದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದರು. ಖಟ್ಟರ್ ಕೋವಿಡ್ ಆಸ್ಪತ್ರೆಯ ಉದ್ಘಾಟನೆ ಬಳಿಕ ಪೊಲೀಸರ ಕ್ರಮದಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಹೆದ್ದಾರಿ ಬಂದ್​ ಮಾಡಿದರು. ಈ ಹಿನ್ನೆಲೆ ಪೊಲೀಸರು ಕೆಲವರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಸದ್ಯ ಮೇ 16ರ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 350 ಕ್ಕೂ ಹೆಚ್ಚು ಜನರ ಮೇಲೆ ಎಫ್​ಐಆರ್​ ದಾಖಲಿಸಿದ್ದಾರೆ. ಪೊಲೀಸರ ಈ ಕ್ರಮದ ವಿರುದ್ಧ ರೈತರು ಇದೀಗ ಪ್ರತಿಭಟನೆಗೆ ಮುಂದಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.