ETV Bharat / bharat

ಫೈಬರ್​ ನೆಟ್​ ಹಗರಣ: ನವೆಂಬರ್ 30ರವರೆಗೆ ಚಂದ್ರಬಾಬು ನಾಯ್ಡುಗೆ ಬಂಧನದಿಂದ ರಕ್ಷಣೆ ವಿಸ್ತರಿಸಿದ ಸುಪ್ರೀಂ

author img

By ETV Bharat Karnataka Team

Published : Nov 9, 2023, 4:07 PM IST

SC extends protection from arrest to Chandrababu: ಫೈಬರ್​ ನೆಟ್​ ಹಗರಣದ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ, ಸುಪ್ರೀಂಕೋರ್ಟ್​ ನವೆಂಬರ್ 30ರವರೆಗೆ ಬಂಧನದಿಂದ ರಕ್ಷಣೆಯನ್ನು ಗುರುವಾರ ವಿಸ್ತರಿಸಿ ಆದೇಶಿಸಿದೆ.

fibernet-scam-supreme-court-extends-protection-for-naidu-till-nov-30-orders-on-quashing-skill-development-case-after-diwali
ಫೈಬರ್​ ನೆಟ್​ ಹಗರಣ: ನವೆಂಬರ್ 30ರವರೆಗೆ ಚಂದ್ರಬಾಬು ನಾಯ್ಡುಗೆ ಬಂಧನದಿಂದ ರಕ್ಷಣೆ ವಿಸ್ತರಿಸಿದ ಸುಪ್ರೀಂ

ನವದೆಹಲಿ: ಫೈಬರ್​ ನೆಟ್​ ಹಗರಣದ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರಿಗೆ ರಿಲೀಫ್​ ಸಿಕ್ಕಿದೆ. ಚಂದ್ರಬಾಬು ಅವರಿಗೆ ನವೆಂಬರ್ 30ರವರೆಗೆ ಬಂಧನದಿಂದ ರಕ್ಷಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ವಿಸ್ತರಿಸಿದೆ.

ಫೈಬರ್​ ನೆಟ್​ ಹಗರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ಆಂಧ್ರಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಚಂದ್ರಬಾಬು ನಾಯ್ಡು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ಪೀಠವು ಈ ಅರ್ಜಿ ವಿಚಾರಣೆ ನಡೆಯುತ್ತಿದೆ. ಈ ಹಿಂದೆ ಅಕ್ಟೋಬರ್​ 20ರಂದು ನ್ಯಾಯಾಲಯವು ನವೆಂಬರ್ 9ಕ್ಕೆ ವಿಚಾರಣೆ ಮುಂದೂಡಿತ್ತು.

ಇಂದಿನ ವಿಚಾರಣೆ ವೇಳೆ, ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಎಫ್‌ಐಆರ್ ರದ್ದುಗೊಳಿಸುವಂತೆ ನಾಯ್ಡು ಸಲ್ಲಿಸಿರುವ ಮನವಿಯ ತೀರ್ಪನ್ನು ದೀಪಾವಳಿ ರಜೆ ನಂತರ ಪ್ರಕಟಿಸಲಾಗುವುದು ಎಂದು ನಾಯ್ಡು ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರಿಗೆ ನ್ಯಾಯ ಪೀಠ ತಿಳಿಸಿತು. ಅಲ್ಲದೇ, ಇದರ ತೀರ್ಪು ನೀಡಿದ ನಂತರ ಫೈಬರ್ ನೆಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದೂ ಹೇಳಿತು.

ಮತ್ತೊಂದೆಡೆ, ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರು ಹೈಕೋರ್ಟ್‌ನಿಂದ ನಾಲ್ಕು ವಾರಗಳ ಮಧ್ಯಂತರ ಜಾಮೀನು ಪಡೆದಿದ್ದಾರೆ ಎಂದು ಆಂಧ್ರಪ್ರದೇಶ ಸರ್ಕಾರದ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಆಗ ಪೀಠವು ಇದೇ ಅರ್ಜಿದಾರರ ಮತ್ತೊಂದು ಅರ್ಜಿಯಿದೆ. ಇದು ಒಂದರ ಮೇಲೆ ಇನ್ನೊಂದು ವ್ಯಾಪಿಸುವ ಸಾಧ್ಯತೆ ಹೊಂದಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ನವೆಂಬರ್ 30ಕ್ಕೆ ಫೈಬರ್​ ನೆಟ್​ ಹಗರಣದ ವಿಚಾರಣೆ ನಿಗದಿಪಡಿಸಲಾಗಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

ಈ ಹಿಂದೆ ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಬಾರದು ಎಂದು ಸುಪ್ರೀಂ ಕೋರ್ಟ್‌ ನೀಡಿದ್ದ ಮೌಖಿಕ ಆದೇಶವನ್ನು ಆಂಧ್ರಪ್ರದೇಶ ಸರ್ಕಾರ ಅಂಗೀಕರಿಸಿತ್ತು. ಇನ್ನು, ಫೈಬರ್ ನೆಟ್ ಪ್ರಕರಣದಲ್ಲಿ ಚಂದ್ರಬಾಬು ಅವರನ್ನು ಆರೋಪಿ ಎಂದು ಹೆಸರಿಸಿ ಸಿಐಡಿ ವಿಜಯವಾಡದ ಎಸಿಬಿ ನ್ಯಾಯಾಲಯಕ್ಕೆ ಪಿಟಿ ವಾರಂಟ್ ಸಲ್ಲಿಸಿತ್ತು.

ನಿಯಮಗಳಿಗೆ ವಿರುದ್ಧವಾಗಿ ಟೆರಾಸಾಫ್ಟ್ ಕಂಪನಿಗೆ ಫೈಬರ್ ನೆಟ್​ ಗುತ್ತಿಗೆ ನೀಡಿದ ಆರೋಪ ಚಂದ್ರಬಾಬು ಮೇಲಿದೆ. 2021ರಲ್ಲಿ ಈ ಕುರಿತು ಪ್ರಕರಣ ದಾಖಲಿಸಿರುವ ಸಿಐಡಿ, ಟೆಂಡರ್ ಇಲ್ಲದೇ ಟೆರಾಸಾಫ್ಟ್‌ಗೆ ಗುತ್ತಿಗೆ ನೀಡಿದ ಆರೋಪವನ್ನು 19 ಜನರ ಮೇಲೆ ಹೊರಿಸಿತ್ತು. ಇದರಿಂದಾಗಿ ಈ ಪ್ರಕರಣದಲ್ಲಿ ಎಸಿಬಿ ಕೋರ್ಟ್​ ಮತ್ತು ಹೈಕೋರ್ಟ್​ಗೆ ನಿರೀಕ್ಷಣಾ ಜಾಮೀನು ಕೋರಿ ಚಂದ್ರಬಾಬು ಅರ್ಜಿ ಸಲ್ಲಿಸಿದ್ದರು. ಎರಡೂ ಅರ್ಜಿಗಳನ್ನು ವಜಾಗೊಳಿಸಿದ್ದರೂ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: ಸ್ಕಿಲ್​ ಡೆವಲಪ್​ಮೆಂಟ್​ ಕೇಸ್​: ಚಂದ್ರಬಾಬು ನಾಯ್ಡುಗೆ ಹೈಕೋರ್ಟ್​ನಿಂದ 4 ವಾರಗಳ ಮಧ್ಯಂತರ ಜಾಮೀನು

ನವದೆಹಲಿ: ಫೈಬರ್​ ನೆಟ್​ ಹಗರಣದ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರಿಗೆ ರಿಲೀಫ್​ ಸಿಕ್ಕಿದೆ. ಚಂದ್ರಬಾಬು ಅವರಿಗೆ ನವೆಂಬರ್ 30ರವರೆಗೆ ಬಂಧನದಿಂದ ರಕ್ಷಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ವಿಸ್ತರಿಸಿದೆ.

ಫೈಬರ್​ ನೆಟ್​ ಹಗರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ಆಂಧ್ರಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಚಂದ್ರಬಾಬು ನಾಯ್ಡು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ಪೀಠವು ಈ ಅರ್ಜಿ ವಿಚಾರಣೆ ನಡೆಯುತ್ತಿದೆ. ಈ ಹಿಂದೆ ಅಕ್ಟೋಬರ್​ 20ರಂದು ನ್ಯಾಯಾಲಯವು ನವೆಂಬರ್ 9ಕ್ಕೆ ವಿಚಾರಣೆ ಮುಂದೂಡಿತ್ತು.

ಇಂದಿನ ವಿಚಾರಣೆ ವೇಳೆ, ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಎಫ್‌ಐಆರ್ ರದ್ದುಗೊಳಿಸುವಂತೆ ನಾಯ್ಡು ಸಲ್ಲಿಸಿರುವ ಮನವಿಯ ತೀರ್ಪನ್ನು ದೀಪಾವಳಿ ರಜೆ ನಂತರ ಪ್ರಕಟಿಸಲಾಗುವುದು ಎಂದು ನಾಯ್ಡು ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರಿಗೆ ನ್ಯಾಯ ಪೀಠ ತಿಳಿಸಿತು. ಅಲ್ಲದೇ, ಇದರ ತೀರ್ಪು ನೀಡಿದ ನಂತರ ಫೈಬರ್ ನೆಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದೂ ಹೇಳಿತು.

ಮತ್ತೊಂದೆಡೆ, ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರು ಹೈಕೋರ್ಟ್‌ನಿಂದ ನಾಲ್ಕು ವಾರಗಳ ಮಧ್ಯಂತರ ಜಾಮೀನು ಪಡೆದಿದ್ದಾರೆ ಎಂದು ಆಂಧ್ರಪ್ರದೇಶ ಸರ್ಕಾರದ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಆಗ ಪೀಠವು ಇದೇ ಅರ್ಜಿದಾರರ ಮತ್ತೊಂದು ಅರ್ಜಿಯಿದೆ. ಇದು ಒಂದರ ಮೇಲೆ ಇನ್ನೊಂದು ವ್ಯಾಪಿಸುವ ಸಾಧ್ಯತೆ ಹೊಂದಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ನವೆಂಬರ್ 30ಕ್ಕೆ ಫೈಬರ್​ ನೆಟ್​ ಹಗರಣದ ವಿಚಾರಣೆ ನಿಗದಿಪಡಿಸಲಾಗಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

ಈ ಹಿಂದೆ ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಬಾರದು ಎಂದು ಸುಪ್ರೀಂ ಕೋರ್ಟ್‌ ನೀಡಿದ್ದ ಮೌಖಿಕ ಆದೇಶವನ್ನು ಆಂಧ್ರಪ್ರದೇಶ ಸರ್ಕಾರ ಅಂಗೀಕರಿಸಿತ್ತು. ಇನ್ನು, ಫೈಬರ್ ನೆಟ್ ಪ್ರಕರಣದಲ್ಲಿ ಚಂದ್ರಬಾಬು ಅವರನ್ನು ಆರೋಪಿ ಎಂದು ಹೆಸರಿಸಿ ಸಿಐಡಿ ವಿಜಯವಾಡದ ಎಸಿಬಿ ನ್ಯಾಯಾಲಯಕ್ಕೆ ಪಿಟಿ ವಾರಂಟ್ ಸಲ್ಲಿಸಿತ್ತು.

ನಿಯಮಗಳಿಗೆ ವಿರುದ್ಧವಾಗಿ ಟೆರಾಸಾಫ್ಟ್ ಕಂಪನಿಗೆ ಫೈಬರ್ ನೆಟ್​ ಗುತ್ತಿಗೆ ನೀಡಿದ ಆರೋಪ ಚಂದ್ರಬಾಬು ಮೇಲಿದೆ. 2021ರಲ್ಲಿ ಈ ಕುರಿತು ಪ್ರಕರಣ ದಾಖಲಿಸಿರುವ ಸಿಐಡಿ, ಟೆಂಡರ್ ಇಲ್ಲದೇ ಟೆರಾಸಾಫ್ಟ್‌ಗೆ ಗುತ್ತಿಗೆ ನೀಡಿದ ಆರೋಪವನ್ನು 19 ಜನರ ಮೇಲೆ ಹೊರಿಸಿತ್ತು. ಇದರಿಂದಾಗಿ ಈ ಪ್ರಕರಣದಲ್ಲಿ ಎಸಿಬಿ ಕೋರ್ಟ್​ ಮತ್ತು ಹೈಕೋರ್ಟ್​ಗೆ ನಿರೀಕ್ಷಣಾ ಜಾಮೀನು ಕೋರಿ ಚಂದ್ರಬಾಬು ಅರ್ಜಿ ಸಲ್ಲಿಸಿದ್ದರು. ಎರಡೂ ಅರ್ಜಿಗಳನ್ನು ವಜಾಗೊಳಿಸಿದ್ದರೂ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: ಸ್ಕಿಲ್​ ಡೆವಲಪ್​ಮೆಂಟ್​ ಕೇಸ್​: ಚಂದ್ರಬಾಬು ನಾಯ್ಡುಗೆ ಹೈಕೋರ್ಟ್​ನಿಂದ 4 ವಾರಗಳ ಮಧ್ಯಂತರ ಜಾಮೀನು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.