ETV Bharat / bharat

ಡಿಕ್ಕಿ ರಭಸಕ್ಕೆ ಹೊತ್ತಿ ಉರಿದ ಲಾರಿಗಳು: ಇಬ್ಬರು ಚಾಲಕರು ಸಜೀವ ದಹನ

author img

By

Published : Jun 16, 2021, 3:47 PM IST

Updated : Jun 16, 2021, 4:00 PM IST

ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಇಬ್ಬರು ಚಾಲಕರು ಸಜೀವ ದಹನವಾಗಿದ್ದಾರೆ. ಈ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

uttarpradesh
ಡಿಕ್ಕಿ ರಭಸಕ್ಕೆ ಹೊತ್ತಿ ಉರಿದ ಲಾರಿಗಳು

ಮಹೋಬಾ: ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹೊತ್ತಿ ಉರಿದಿದ್ದು, ಚಾಲಕರಿಬ್ಬರು ಸಜೀವ ದಹನವಾಗಿದ್ದಾರೆ. ಮಹೋಬಾ ಜಿಲ್ಲೆಯ ಕಬ್ರೈ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ್ ಸಾಗರ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಯುವಕನಿಗೆ ಕೂಡ ಸುಟ್ಟಗಾಯಗಳಾಗಿದ್ದು, ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ರಭಸಕ್ಕೆ ಹೊತ್ತಿ ಉರಿದ ಲಾರಿಗಳು

ಘಟನೆ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಬಳಿಕ ಮೃತರ ದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕಲ್ಲು ಮಾರುಕಟ್ಟೆಯಿಂದ ಸರಕುಗಳನ್ನು ಲೋಡ್ ಮಾಡಿ ತೆರಳುತ್ತದ್ದ ಲಾರಿ, ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಚಾಲಕರಿಗೆ ಲಾರಿಯಿಂದ ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡಿದ್ದಾರೆ. ಆದರೆ ದುರಾದೃಷ್ಟವೆಂಬಂತೆ ಎರಡೂ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿವೆ.

ಇದನ್ನು ಓದಿ: ಕೋಲಾರದ ಆಸ್ಪತ್ರೆಗೆ ಧನ್ಯವಾದ ಹೇಳಿದ ಕ್ರಿಕೆಟಿಗ ಇರ್ಫಾನ್ ಪಠಾಣ್

ಕಾನ್ಪುರ ನಿವಾಸಿ ಪ್ರಾಣ್ ಸಿಂಗ್ (20) ಮತ್ತು ಶಿವ ಕುಮಾರ್ (35) ಮೃತರು. ರಾಂಪಾಲ್ (28) ಎಂಬ ಯುವಕನಿಗೆ ಗಂಭೀರವಾಗಿ ಗಾಯಗಳಾಗಿವೆ. ಘಟನೆಯ ಮಾಹಿತಿ ದೊರೆತ ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆ ಸ್ಥಳಕ್ಕೆ ತಲುಪಿ ಗಂಟೆಗಳ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಪ್ರಾಣ್ ಸಿಂಗ್ ಮತ್ತು ಶಿವ ಕುಮಾರ್ ಮೃತದೇಹವನ್ನು ಲಾರಿಯಿಂದ ಹೊರತೆಗೆಯಲಾಗಿದೆ. ತೀವ್ರವಾಗಿ ಗಾಯಗೊಂಡ ರಾಂಪಾಲ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಹೋಬಾ: ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹೊತ್ತಿ ಉರಿದಿದ್ದು, ಚಾಲಕರಿಬ್ಬರು ಸಜೀವ ದಹನವಾಗಿದ್ದಾರೆ. ಮಹೋಬಾ ಜಿಲ್ಲೆಯ ಕಬ್ರೈ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ್ ಸಾಗರ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಯುವಕನಿಗೆ ಕೂಡ ಸುಟ್ಟಗಾಯಗಳಾಗಿದ್ದು, ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ರಭಸಕ್ಕೆ ಹೊತ್ತಿ ಉರಿದ ಲಾರಿಗಳು

ಘಟನೆ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಬಳಿಕ ಮೃತರ ದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕಲ್ಲು ಮಾರುಕಟ್ಟೆಯಿಂದ ಸರಕುಗಳನ್ನು ಲೋಡ್ ಮಾಡಿ ತೆರಳುತ್ತದ್ದ ಲಾರಿ, ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಚಾಲಕರಿಗೆ ಲಾರಿಯಿಂದ ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡಿದ್ದಾರೆ. ಆದರೆ ದುರಾದೃಷ್ಟವೆಂಬಂತೆ ಎರಡೂ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿವೆ.

ಇದನ್ನು ಓದಿ: ಕೋಲಾರದ ಆಸ್ಪತ್ರೆಗೆ ಧನ್ಯವಾದ ಹೇಳಿದ ಕ್ರಿಕೆಟಿಗ ಇರ್ಫಾನ್ ಪಠಾಣ್

ಕಾನ್ಪುರ ನಿವಾಸಿ ಪ್ರಾಣ್ ಸಿಂಗ್ (20) ಮತ್ತು ಶಿವ ಕುಮಾರ್ (35) ಮೃತರು. ರಾಂಪಾಲ್ (28) ಎಂಬ ಯುವಕನಿಗೆ ಗಂಭೀರವಾಗಿ ಗಾಯಗಳಾಗಿವೆ. ಘಟನೆಯ ಮಾಹಿತಿ ದೊರೆತ ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆ ಸ್ಥಳಕ್ಕೆ ತಲುಪಿ ಗಂಟೆಗಳ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಪ್ರಾಣ್ ಸಿಂಗ್ ಮತ್ತು ಶಿವ ಕುಮಾರ್ ಮೃತದೇಹವನ್ನು ಲಾರಿಯಿಂದ ಹೊರತೆಗೆಯಲಾಗಿದೆ. ತೀವ್ರವಾಗಿ ಗಾಯಗೊಂಡ ರಾಂಪಾಲ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Last Updated : Jun 16, 2021, 4:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.