ETV Bharat / bharat

ಆಸ್ಪತ್ರೆಯಿಂದ ಮನೆಗೆ ತೆರಳುವಾಗ ಅಪಘಾತ: ತಂದೆ-ತಾಯಿ, ಮಗು ಸೇರಿ ಐವರ ದುರ್ಮರಣ

author img

By

Published : Aug 7, 2021, 4:21 AM IST

ಮಗುವಿಗೆ ಚಿಕಿತ್ಸೆ ಕೊಡಿಸಿ, ಆಸ್ಪತ್ರೆಯಿಂದ ಮನೆಗೆ ಮರಳುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತರಾಗಿದ್ಧಾರೆ.

Five killed in road accident Sangareddy Telangana
ಆಸ್ಪತ್ರೆಯಿಂದ ಮನೆಗೆ ತೆರಳುವಾಗ ಅಪಘಾತ: ತಂದೆ-ತಾಯಿ, ಮಗು ಸೇರಿ ಐವರ ದುರ್ಮರಣ

ಹೈದರಾಬಾದ್​: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೌಟಕೂರು ಮಂಡಲದಲ್ಲಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ. ಮಗುವನ್ನು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಕಾರಿನಲ್ಲಿ ಹೊರಟ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

ಮೇಡಕ್ ಜಿಲ್ಲೆಯ ರಂಗಂಪೇಟೆ ಗ್ರಾಮದ ನಿವಾಸಿಗಳಾದ ಪದ್ಮ (30) ಹಾಗೂ ಅಂಬಾದಾಸ್ (40) ದಂಪತಿ ತಮ್ಮ ಮಗು ವಿವೇಕ್ (6)ನನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಮಗುವಿಗೆ ಆರಾಮಿಲ್ಲದ ಕಾರಣ ಸಂಗಾರೆಡ್ಡಿ ಸರ್ಕಾರಿ ಆಸ್ಪತ್ರೆಗೆ ಬಂದಿದ್ದು, ಅವರ ಜೊತೆಗೆ ಸಂಬಂಧಿಕರಾದ ಲುಕಾ ಮತ್ತು ದೀವೆನಾ ಲಾಸೊ ಕೂಡ ಇದ್ದರು. ಆಸ್ಪತ್ರೆಯಿಂದ ಮನೆಗೆ ಮರಳುವಾಗ ಕೂಟಕೂರು ಸಮೀಪ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

Five killed in road accident Sangareddy Telangana
ಅಪಘಾತ

ಘಟನೆ ಬಗ್ಗೆ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಜೆಸಿಬಿ ಮೂಲಕ ಕಾರು ಹಾಗೂ ಲಾರಿಯನ್ನು ಬೇರ್ಪಡಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಂಗಾರೆಡ್ಡಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಎಚ್ಚರ.. ಎಚ್ಚರ.. ಕಿವಿಯಲ್ಲಿದ್ದ ಬ್ಲ್ಯೂಟೂತ್‌ ಇಯರ್‌ಫೋನ್‌ ಸ್ಫೋಟಗೊಂಡು ಯುವಕ ಸಾವು

ಹೈದರಾಬಾದ್​: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೌಟಕೂರು ಮಂಡಲದಲ್ಲಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ. ಮಗುವನ್ನು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಕಾರಿನಲ್ಲಿ ಹೊರಟ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

ಮೇಡಕ್ ಜಿಲ್ಲೆಯ ರಂಗಂಪೇಟೆ ಗ್ರಾಮದ ನಿವಾಸಿಗಳಾದ ಪದ್ಮ (30) ಹಾಗೂ ಅಂಬಾದಾಸ್ (40) ದಂಪತಿ ತಮ್ಮ ಮಗು ವಿವೇಕ್ (6)ನನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಮಗುವಿಗೆ ಆರಾಮಿಲ್ಲದ ಕಾರಣ ಸಂಗಾರೆಡ್ಡಿ ಸರ್ಕಾರಿ ಆಸ್ಪತ್ರೆಗೆ ಬಂದಿದ್ದು, ಅವರ ಜೊತೆಗೆ ಸಂಬಂಧಿಕರಾದ ಲುಕಾ ಮತ್ತು ದೀವೆನಾ ಲಾಸೊ ಕೂಡ ಇದ್ದರು. ಆಸ್ಪತ್ರೆಯಿಂದ ಮನೆಗೆ ಮರಳುವಾಗ ಕೂಟಕೂರು ಸಮೀಪ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

Five killed in road accident Sangareddy Telangana
ಅಪಘಾತ

ಘಟನೆ ಬಗ್ಗೆ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಜೆಸಿಬಿ ಮೂಲಕ ಕಾರು ಹಾಗೂ ಲಾರಿಯನ್ನು ಬೇರ್ಪಡಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಂಗಾರೆಡ್ಡಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಎಚ್ಚರ.. ಎಚ್ಚರ.. ಕಿವಿಯಲ್ಲಿದ್ದ ಬ್ಲ್ಯೂಟೂತ್‌ ಇಯರ್‌ಫೋನ್‌ ಸ್ಫೋಟಗೊಂಡು ಯುವಕ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.