ETV Bharat / bharat

AP Floods: ಪ್ರವಾಹಕ್ಕೆ ಆಂಧ್ರ ತತ್ತರ: ಇಲ್ಲಿಯವರೆಗೆ 20ಕ್ಕೂ ಹೆಚ್ಚು ಮಂದಿ ಸಾವು

author img

By

Published : Nov 19, 2021, 3:59 PM IST

Updated : Nov 20, 2021, 12:59 PM IST

ಪ್ರವಾಹ, ಭೂಕುಸಿತ ಸೇರಿದಂತೆ ವರುಣನ ಅವಾಂತರಕ್ಕೆ ಆಂಧ್ರಪ್ರದೇಶದಲ್ಲಿ ಬಲಿಯಾದವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಸಿಎಂ ಜಗನ್​ ಮೋಹನ್​ ರೆಡ್ಡಿ ಘೋಷಿಸಿದ್ದಾರೆ. ಈಗಾಗಲೆ ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

AP Floods
AP Floods

ಕಡಪ (ಆಂಧ್ರಪ್ರದೇಶ): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ (depression over Bay of Bengal) ಪರಿಣಾಮ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಆಂಧ್ರದಲ್ಲಂತೂ ಪ್ರವಾಹ ಪರಿಸ್ಥಿತಿ (Flood in Andhra Pradesh) ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇಲ್ಲಿಯವರೆಗೆ ಮಳೆ ಸಂಬಂಧಿತ ಅವಘಡಗಳಿಗೆ 20 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಶಂಕೆ ಇದೆ.


ಪ್ರವಾಹ, ಭೂಕುಸಿತ ಸೇರಿದಂತೆ ವರುಣನ ಅವಾಂತರದಲ್ಲಿ ಬಲಿಯಾದವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಸಿಎಂ ಜಗನ್​ ಮೋಹನ್​ ರೆಡ್ಡಿ (CM Jagan Mohan Reddy announces ex gratia) ಘೋಷಿಸಿದ್ದಾರೆ.

ಚಿತ್ತೂರು, ಕಡಪ ಮತ್ತು ನೆಲ್ಲೂರು ಜಿಲ್ಲೆಗಳಲ್ಲಿ ಮನೆಗಳು, ರಸ್ತೆಗಳು, ಕಟ್ಟಡಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಕೆಲವೆಡೆ ರಸ್ತೆ, ಸೇತುವೆಗಳು ಸಂಪೂರ್ಣ ಕೊಚ್ಚಿ ಹೋಗಿದ್ದು, ಜನರು ಮಧ್ಯದಾರಿಯಲ್ಲಿ ಸಿಲುಕಿ ಸಂಪರ್ಕ ಕಳೆದುಕೊಂಡಿದ್ದಾರೆ. ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲವಂತೂ ಪ್ರವಾಹ-ಭೂಕುಸಿತ ಎರಡಕ್ಕೂ ತುತ್ತಾಗಿದೆ. ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ನೀರು ನುಗ್ಗಿದ್ದು, ಒಳಗಿದ್ದ ಭಕ್ತರು ಆತಂಕಕ್ಕೆ ಒಳಗಾಗಿದ್ದಾರೆ.

ಪ್ರವಾಹಕ್ಕೆ ಆಂಧ್ರ ತತ್ತರ

ಪರಿಸ್ಥಿತಿ ಅಪಾಯಕಾರಿಯಾರುವುದರಿಂದ ಎರಡು ದಿನಗಳ ಕಾಲ ತಿರುಮಲದ ಎರಡು ಘಾಟ್‌ಗಳನ್ನು (ghats in Tirumala closed) ಸಿಎಂ ಜಗನ್ ಆದೇಶದ ಮೇರೆಗೆ ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನಂ (TTD) ಮುಚ್ಚಿದೆ. ಇದರಿಂದಾಗಿ ಕಪಿಲತೀರ್ಥ-ತಿರುಮಲ ಬೈಪಾಸ್ ರಸ್ತೆಯಲ್ಲಿ ನೂರಾರು ವಾಹನಗಳು ಸಿಲುಕಿವೆ. ಭಕ್ತರು ತಿರುಮಲಕ್ಕೆ ಬರಬಾರದು ಎಂದು ಟಿಟಿಡಿ ಸೂಚಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರಿ ಮಳೆ: ಕಟ್ಟಡ ಕುಸಿತ, ಜನಜೀವನ ಅಸ್ತವ್ಯಸ್ತ

ನಿನ್ನೆ ಚಿತ್ತೂರು ಜಿಲ್ಲೆಯ ಬಲಿಜೆಪಲ್ಲಿ ಹಳ್ಳದ ಪ್ರವಾಹದಲ್ಲಿ ಬಂಗಾರುಪಳ್ಳಂ ಮಂಡಲದ ನಾಲ್ವರು ಮಹಿಳೆಯರು ಕೊಚ್ಚಿ ಹೋಗಿದ್ದರು. ಅವರಲ್ಲಿ ಒಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ಇನ್ನೂ ಮೂವರು ಮಹಿಳೆಯರ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.

ಪ್ರವಾಹಪೀಡಿತ ಜಿಲ್ಲೆಗಳಿಗೆ ಅಧಿಕಾರಿಗಳನ್ನು, ರಕ್ಷಣಾ ತಂಡಗಳನ್ನು ಕಳುಹಿಸಿಕೊಡಲಾಗಿದೆ. ನೋಡ ನೋಡುತ್ತಲೇ ಕಟ್ಟಡವೊಂದು ಕುಸಿದು ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಕಡಪ (ಆಂಧ್ರಪ್ರದೇಶ): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ (depression over Bay of Bengal) ಪರಿಣಾಮ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಆಂಧ್ರದಲ್ಲಂತೂ ಪ್ರವಾಹ ಪರಿಸ್ಥಿತಿ (Flood in Andhra Pradesh) ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇಲ್ಲಿಯವರೆಗೆ ಮಳೆ ಸಂಬಂಧಿತ ಅವಘಡಗಳಿಗೆ 20 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಶಂಕೆ ಇದೆ.


ಪ್ರವಾಹ, ಭೂಕುಸಿತ ಸೇರಿದಂತೆ ವರುಣನ ಅವಾಂತರದಲ್ಲಿ ಬಲಿಯಾದವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಸಿಎಂ ಜಗನ್​ ಮೋಹನ್​ ರೆಡ್ಡಿ (CM Jagan Mohan Reddy announces ex gratia) ಘೋಷಿಸಿದ್ದಾರೆ.

ಚಿತ್ತೂರು, ಕಡಪ ಮತ್ತು ನೆಲ್ಲೂರು ಜಿಲ್ಲೆಗಳಲ್ಲಿ ಮನೆಗಳು, ರಸ್ತೆಗಳು, ಕಟ್ಟಡಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಕೆಲವೆಡೆ ರಸ್ತೆ, ಸೇತುವೆಗಳು ಸಂಪೂರ್ಣ ಕೊಚ್ಚಿ ಹೋಗಿದ್ದು, ಜನರು ಮಧ್ಯದಾರಿಯಲ್ಲಿ ಸಿಲುಕಿ ಸಂಪರ್ಕ ಕಳೆದುಕೊಂಡಿದ್ದಾರೆ. ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲವಂತೂ ಪ್ರವಾಹ-ಭೂಕುಸಿತ ಎರಡಕ್ಕೂ ತುತ್ತಾಗಿದೆ. ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ನೀರು ನುಗ್ಗಿದ್ದು, ಒಳಗಿದ್ದ ಭಕ್ತರು ಆತಂಕಕ್ಕೆ ಒಳಗಾಗಿದ್ದಾರೆ.

ಪ್ರವಾಹಕ್ಕೆ ಆಂಧ್ರ ತತ್ತರ

ಪರಿಸ್ಥಿತಿ ಅಪಾಯಕಾರಿಯಾರುವುದರಿಂದ ಎರಡು ದಿನಗಳ ಕಾಲ ತಿರುಮಲದ ಎರಡು ಘಾಟ್‌ಗಳನ್ನು (ghats in Tirumala closed) ಸಿಎಂ ಜಗನ್ ಆದೇಶದ ಮೇರೆಗೆ ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನಂ (TTD) ಮುಚ್ಚಿದೆ. ಇದರಿಂದಾಗಿ ಕಪಿಲತೀರ್ಥ-ತಿರುಮಲ ಬೈಪಾಸ್ ರಸ್ತೆಯಲ್ಲಿ ನೂರಾರು ವಾಹನಗಳು ಸಿಲುಕಿವೆ. ಭಕ್ತರು ತಿರುಮಲಕ್ಕೆ ಬರಬಾರದು ಎಂದು ಟಿಟಿಡಿ ಸೂಚಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರಿ ಮಳೆ: ಕಟ್ಟಡ ಕುಸಿತ, ಜನಜೀವನ ಅಸ್ತವ್ಯಸ್ತ

ನಿನ್ನೆ ಚಿತ್ತೂರು ಜಿಲ್ಲೆಯ ಬಲಿಜೆಪಲ್ಲಿ ಹಳ್ಳದ ಪ್ರವಾಹದಲ್ಲಿ ಬಂಗಾರುಪಳ್ಳಂ ಮಂಡಲದ ನಾಲ್ವರು ಮಹಿಳೆಯರು ಕೊಚ್ಚಿ ಹೋಗಿದ್ದರು. ಅವರಲ್ಲಿ ಒಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ಇನ್ನೂ ಮೂವರು ಮಹಿಳೆಯರ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.

ಪ್ರವಾಹಪೀಡಿತ ಜಿಲ್ಲೆಗಳಿಗೆ ಅಧಿಕಾರಿಗಳನ್ನು, ರಕ್ಷಣಾ ತಂಡಗಳನ್ನು ಕಳುಹಿಸಿಕೊಡಲಾಗಿದೆ. ನೋಡ ನೋಡುತ್ತಲೇ ಕಟ್ಟಡವೊಂದು ಕುಸಿದು ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

Last Updated : Nov 20, 2021, 12:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.