ETV Bharat / bharat

'ಕೈ' ಬಿಟ್ಟು ಆಮ್​ ಆದ್ಮಿ ಪಕ್ಷ ಸೇರಿದ ವಿರೇಂದ್ರ ಸೆಹ್ವಾಗ್​ ಸಹೋದರಿ ಅಂಜು!

author img

By

Published : Dec 31, 2021, 5:34 PM IST

2012ರಲ್ಲಿ ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಿದ್ದ ವಿರೇಂದ್ರ ಸೆಹ್ವಾಗ್​ ಸಹೋದರಿ ಇದೀಗ ಆಮ್​ ಆದ್ಮಿ ಪಕ್ಷ ಸೇರಿದ್ದಾರೆ. ದೆಹಲಿಯಲ್ಲಿ ಕೇಜ್ರಿವಾಲ್ ನೇತೃತ್ವದ ಸರ್ಕಾರ ಮಾಡಿರುವ ಕೆಲಸದಿಂದ ಪ್ರಭಾವಕ್ಕೊಳಗಾಗಿ ತಾವು ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾರೆ..

anju sehwag aam aadmi party
anju sehwag aam aadmi party

ನವದೆಹಲಿ : ಟೀಂ ಇಂಡಿಯಾ ಮಾಜಿ ಸ್ಫೋಟಕ ಆಟಗಾರ ವಿರೇಂದ್ರ ಸೆಹ್ವಾಗ್​​ ಸಹೋದರಿ ಅಂಜು ಇಂದು ಆಮ್​​ ಆದ್ಮಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆ ಅವರು ಕಾಂಗ್ರೆಸ್​​ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇವರ ಜೊತೆಗೆ ಸಾಮಾಜಿಕ ಕಾರ್ಯಕರ್ತ ಅರವಿಂದ್​ ಚಂದೇಲಾ ಕೂಡ ಆಪ್​ ಸೇರ್ಪಡೆಯಾಗಿದ್ದಾರೆ.

ಆಮ್​ ಆದ್ಮಿ ಪಕ್ಷ ಸೇರಿದ ವಿರೇಂದ್ರ ಸೆಹ್ವಾಗ್​ ಸಹೋದರಿ ಅಂಜು

ಆಮ್​ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪಂಕಜ್​ ಗುಪ್ತಾ, ಮಾಳವೀಯ ನಗರದ ಶಾಸಕ ಸೋಮನಾಥ್​ ಭಾರ್ತಿ ಅವರು ಪಕ್ಷದ ಕ್ಯಾಪ್​ ಮತ್ತು ಬಾವುಟ ನೀಡಿ ಬರಮಾಡಿಕೊಂಡರು.

Delhi: Anju Sehwag, sister of former cricketer Virender Sehwag, joins Aam Aadmi Party (AAP) pic.twitter.com/pyypeNGrwe

— ANI (@ANI) December 31, 2021

ಈಟಿವಿ ಭಾರತ್​ ಜೊತೆ ಮಾತನಾಡಿದ ಅಂಜು ಸೆಹ್ವಾಗ್​, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರ ಕಾರ್ಯದಿಂದ ಪ್ರಭಾವಿತರಾಗಿ ಎಎಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಎಎಪಿ ಅದ್ಭುತ ಕೆಲಸ ಮಾಡ್ತಿದ್ದು, ಅದರಿಂದ ನಾನು ಪ್ರಭಾವಿತಳಾಗಿದ್ದೇನೆ. ದೆಹಲಿ ಸಿಎಂ ಕೇಜ್ರಿವಾಲ್​​ ಅವರು ನಮ್ಮೆಲ್ಲರ ಮೇಲೆ ಪ್ರಭಾವ ಬೀರುವ ಅನೇಕ ಕೆಲಸ ಮಾಡಿದ್ದಾರೆ. ಈ ಎಲ್ಲ ಬದಲಾವಣೆ ಗಮನದಲ್ಲಿಟ್ಟುಕೊಂಡು ಆಮ್​ ಆದ್ಮಿ ಪಕ್ಷದ ಸದಸ್ಯತ್ವ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಜ್ಯದಲ್ಲಿ ಒಮಿಕ್ರಾನ್​ ಅಬ್ಬರ.. 23 ಹೊಸ ಸೋಂಕಿತರು ಪತ್ತೆ..

2012ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಅಂಜು ಸೆಹ್ವಾಗ್​, ಪುರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ ಪಾಲಿಕೆ ಸದಸ್ಯೆಯಾಗಿದ್ದರು. ಇದಕ್ಕೂ ಮೊದಲು ಖಾಸಗಿ ಶಾಲೆವೊಂದರಲ್ಲಿ ಹಿಂದಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ.

ನವದೆಹಲಿ : ಟೀಂ ಇಂಡಿಯಾ ಮಾಜಿ ಸ್ಫೋಟಕ ಆಟಗಾರ ವಿರೇಂದ್ರ ಸೆಹ್ವಾಗ್​​ ಸಹೋದರಿ ಅಂಜು ಇಂದು ಆಮ್​​ ಆದ್ಮಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆ ಅವರು ಕಾಂಗ್ರೆಸ್​​ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇವರ ಜೊತೆಗೆ ಸಾಮಾಜಿಕ ಕಾರ್ಯಕರ್ತ ಅರವಿಂದ್​ ಚಂದೇಲಾ ಕೂಡ ಆಪ್​ ಸೇರ್ಪಡೆಯಾಗಿದ್ದಾರೆ.

ಆಮ್​ ಆದ್ಮಿ ಪಕ್ಷ ಸೇರಿದ ವಿರೇಂದ್ರ ಸೆಹ್ವಾಗ್​ ಸಹೋದರಿ ಅಂಜು

ಆಮ್​ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪಂಕಜ್​ ಗುಪ್ತಾ, ಮಾಳವೀಯ ನಗರದ ಶಾಸಕ ಸೋಮನಾಥ್​ ಭಾರ್ತಿ ಅವರು ಪಕ್ಷದ ಕ್ಯಾಪ್​ ಮತ್ತು ಬಾವುಟ ನೀಡಿ ಬರಮಾಡಿಕೊಂಡರು.

ಈಟಿವಿ ಭಾರತ್​ ಜೊತೆ ಮಾತನಾಡಿದ ಅಂಜು ಸೆಹ್ವಾಗ್​, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರ ಕಾರ್ಯದಿಂದ ಪ್ರಭಾವಿತರಾಗಿ ಎಎಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಎಎಪಿ ಅದ್ಭುತ ಕೆಲಸ ಮಾಡ್ತಿದ್ದು, ಅದರಿಂದ ನಾನು ಪ್ರಭಾವಿತಳಾಗಿದ್ದೇನೆ. ದೆಹಲಿ ಸಿಎಂ ಕೇಜ್ರಿವಾಲ್​​ ಅವರು ನಮ್ಮೆಲ್ಲರ ಮೇಲೆ ಪ್ರಭಾವ ಬೀರುವ ಅನೇಕ ಕೆಲಸ ಮಾಡಿದ್ದಾರೆ. ಈ ಎಲ್ಲ ಬದಲಾವಣೆ ಗಮನದಲ್ಲಿಟ್ಟುಕೊಂಡು ಆಮ್​ ಆದ್ಮಿ ಪಕ್ಷದ ಸದಸ್ಯತ್ವ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಜ್ಯದಲ್ಲಿ ಒಮಿಕ್ರಾನ್​ ಅಬ್ಬರ.. 23 ಹೊಸ ಸೋಂಕಿತರು ಪತ್ತೆ..

2012ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಅಂಜು ಸೆಹ್ವಾಗ್​, ಪುರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ ಪಾಲಿಕೆ ಸದಸ್ಯೆಯಾಗಿದ್ದರು. ಇದಕ್ಕೂ ಮೊದಲು ಖಾಸಗಿ ಶಾಲೆವೊಂದರಲ್ಲಿ ಹಿಂದಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.