ETV Bharat / bharat

ಕಾಂಗ್ರೆಸ್ ಯಾತ್ರೆಯಲ್ಲಿ ಪಾಲ್ಗೊಂಡ ಆರ್​ಬಿಐ ಮಾಜಿ ಗವರ್ನರ್ ರಾಜನ್

author img

By

Published : Dec 14, 2022, 3:09 PM IST

Updated : Dec 14, 2022, 3:45 PM IST

ಮಾಜಿ ಆರ್‌ಬಿಐ ಮುಖ್ಯಸ್ಥ ರಾಜನ್ ನೋಟು ಅಮಾನ್ಯೀಕರಣದ ತೀವ್ರ ಟೀಕಾಕಾರರಾಗಿದ್ದಾರೆ. ಈ ಹಿಂದೆ ಭಾರತದ ಆರ್ಥಿಕ ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ಬಗ್ಗೆ ಆಗಾಗ ಕಳವಳ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಯಾತ್ರೆಯಲ್ಲಿ ಪಾಲ್ಗೊಂಡ ಆರ್​ಬಿಐ ಮಾಜಿ ಗವರ್ನರ್ ರಾಜನ್
Former RBI Governor Rajan participated in the Congress Yatra
ಕಾಂಗ್ರೆಸ್ ಯಾತ್ರೆಯಲ್ಲಿ ಪಾಲ್ಗೊಂಡ ಆರ್​ಬಿಐ ಮಾಜಿ ಗವರ್ನರ್ ರಾಜನ್

ಸವಾಯಿ ಮಾಧೋಪುರ (ರಾಜಸ್ಥಾನ) : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಬುಧವಾರ ಬೆಳಗ್ಗೆ ಪ್ರಸ್ತುತ ರಾಜಸ್ಥಾನದ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು. ಮಾಜಿ ಆರ್‌ಬಿಐ ಗವರ್ನರ್ ರಾಜನ್, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಮತ್ತು ಸಚಿನ್ ಪೈಲಟ್ ಅವರೊಂದಿಗೆ ಹೆಜ್ಜೆ ಹಾಕಿದರು.

ಮಾಜಿ ಆರ್‌ಬಿಐ ಮುಖ್ಯಸ್ಥ ರಾಜನ್ ನೋಟು ಅಮಾನ್ಯೀಕರಣದ ತೀವ್ರ ಟೀಕಾಕಾರರಾಗಿದ್ದಾರೆ. ಈ ಹಿಂದೆ ಭಾರತದ ಆರ್ಥಿಕ ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ಬಗ್ಗೆ ಆಗಾಗ ಕಳವಳ ವ್ಯಕ್ತಪಡಿಸಿದ್ದಾರೆ. ರಾಜನ್ ತಮ್ಮ ಪುಸ್ತಕ ವಾಟ್ ಡು ವಾಟ್ ಐ ಡು (I do what I do) ನಲ್ಲಿ ತಾವು ನೋಟು ಅಮಾನ್ಯೀಕರಣದ ಪರವಾಗಿಲ್ಲ ಎಂದು ಬಹಿರಂಗಪಡಿಸಿದ್ದರು. ಇಂಥ ಕ್ರಮಗಳಿಂದ ಅಲ್ಪಾವಧಿಯಲ್ಲಿ ಆಗುವ ಲಾಭಕ್ಕಿಂತ ದೀರ್ಘಾವಧಿಯಲ್ಲಿ ಆಗುವ ನಷ್ಟವೇ ಹೆಚ್ಚು ಎಂದು ಅವರು ಪ್ರತಿಪಾದಿಸಿದ್ದರು.

ಇಂದು ಬೆಳಗ್ಗೆ ರಾಜಸ್ಥಾನದ ಸವಾಯಿ ಮಾಧೋಪುರದ ಭಡೋತಿಯಿಂದ ಭಾರತ್ ಜೋಡೊ ಯಾತ್ರೆ ಪುನಾರಂಭವಾಗಿದೆ. ಸೆ.7ರಂದು ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆ ಇದುವರೆಗೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಂಚರಿಸಿದೆ. ಇದು ಫೆಬ್ರವರಿ 2023 ರ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ.

ಕಾಂಗ್ರೆಸ್ ಯಾತ್ರೆಯಲ್ಲಿ ಪಾಲ್ಗೊಂಡ ಆರ್​ಬಿಐ ಮಾಜಿ ಗವರ್ನರ್ ರಾಜನ್
ಕಾಂಗ್ರೆಸ್ ಯಾತ್ರೆಯಲ್ಲಿ ಪಾಲ್ಗೊಂಡ ಆರ್​ಬಿಐ ಮಾಜಿ ಗವರ್ನರ್ ರಾಜನ್

ಮಾಜಿ ಆರ್‌ಬಿಐ ಗವರ್ನರ್ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ, ರಾಜನ್ ತಮ್ಮನ್ನು ತಾವು ಮುಂದಿನ ಮನಮೋಹನ್ ಸಿಂಗ್ ಎಂದು ಭಾವಿಸಿಕೊಂಡಿದ್ದಾರೆ ಎಂದು ಟೀಕೆ ಮಾಡಿದೆ.

ಕಾಂಗ್ರೆಸ್​ನಿಂದ ನೇಮಕಗೊಂಡಿದ್ದ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್, ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಸೇರುವುದು ಅಚ್ಚರಿಯೇನಲ್ಲ. ಅವರು ತಮ್ಮನ್ನು ತಾವು ಮುಂದಿನ ಮನಮೋಹನ್ ಸಿಂಗ್ ಎಂದು ಭಾವಿಸಿದ್ದಾರೆ. ಭಾರತದ ಆರ್ಥಿಕತೆಯ ಬಗ್ಗೆ ಅವರ ಅವಕಾಶವಾದಿ ವ್ಯಾಖ್ಯಾನವನ್ನು ತಿರಸ್ಕರಿಸಲೇಬೇಕು ಎಂದು ಬಿಜೆಪಿ ರಾಷ್ಟ್ರೀಯ ಮುಖಂಡ ಅಮಿತ ಮಾಳವೀಯ ಟ್ವೀಟ್ ಮಾಡಿದ್ದಾರೆ.

ಕಾರ್ಯಕರ್ತೆ ಮೇಧಾ ಪಾಟ್ಕರ್, ಸ್ವಯಂಘೋಷಿತ ದೇವಮಾನವ ನಾಮದೇವ್ ದಾಸ್ ತ್ಯಾಗಿ (ಕಂಪ್ಯೂಟರ್ ಬಾಬಾ), ನಟಿ ಸ್ವರಾ ಭಾಸ್ಕರ್ ಮತ್ತು ಬಾಕ್ಸರ್ ವಿಜೇಂದರ್ ಸಿಂಗ್ ಕಳೆದ ಕೆಲವು ತಿಂಗಳುಗಳಿಂದ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡವರಲ್ಲಿ ಸೇರಿದ್ದಾರೆ.

ಇದನ್ನೂ ಓದಿ: ಜನವರಿ 15ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು: ಸಿದ್ದರಾಮಯ್ಯ

ಕಾಂಗ್ರೆಸ್ ಯಾತ್ರೆಯಲ್ಲಿ ಪಾಲ್ಗೊಂಡ ಆರ್​ಬಿಐ ಮಾಜಿ ಗವರ್ನರ್ ರಾಜನ್

ಸವಾಯಿ ಮಾಧೋಪುರ (ರಾಜಸ್ಥಾನ) : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಬುಧವಾರ ಬೆಳಗ್ಗೆ ಪ್ರಸ್ತುತ ರಾಜಸ್ಥಾನದ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು. ಮಾಜಿ ಆರ್‌ಬಿಐ ಗವರ್ನರ್ ರಾಜನ್, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಮತ್ತು ಸಚಿನ್ ಪೈಲಟ್ ಅವರೊಂದಿಗೆ ಹೆಜ್ಜೆ ಹಾಕಿದರು.

ಮಾಜಿ ಆರ್‌ಬಿಐ ಮುಖ್ಯಸ್ಥ ರಾಜನ್ ನೋಟು ಅಮಾನ್ಯೀಕರಣದ ತೀವ್ರ ಟೀಕಾಕಾರರಾಗಿದ್ದಾರೆ. ಈ ಹಿಂದೆ ಭಾರತದ ಆರ್ಥಿಕ ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ಬಗ್ಗೆ ಆಗಾಗ ಕಳವಳ ವ್ಯಕ್ತಪಡಿಸಿದ್ದಾರೆ. ರಾಜನ್ ತಮ್ಮ ಪುಸ್ತಕ ವಾಟ್ ಡು ವಾಟ್ ಐ ಡು (I do what I do) ನಲ್ಲಿ ತಾವು ನೋಟು ಅಮಾನ್ಯೀಕರಣದ ಪರವಾಗಿಲ್ಲ ಎಂದು ಬಹಿರಂಗಪಡಿಸಿದ್ದರು. ಇಂಥ ಕ್ರಮಗಳಿಂದ ಅಲ್ಪಾವಧಿಯಲ್ಲಿ ಆಗುವ ಲಾಭಕ್ಕಿಂತ ದೀರ್ಘಾವಧಿಯಲ್ಲಿ ಆಗುವ ನಷ್ಟವೇ ಹೆಚ್ಚು ಎಂದು ಅವರು ಪ್ರತಿಪಾದಿಸಿದ್ದರು.

ಇಂದು ಬೆಳಗ್ಗೆ ರಾಜಸ್ಥಾನದ ಸವಾಯಿ ಮಾಧೋಪುರದ ಭಡೋತಿಯಿಂದ ಭಾರತ್ ಜೋಡೊ ಯಾತ್ರೆ ಪುನಾರಂಭವಾಗಿದೆ. ಸೆ.7ರಂದು ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆ ಇದುವರೆಗೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಂಚರಿಸಿದೆ. ಇದು ಫೆಬ್ರವರಿ 2023 ರ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ.

ಕಾಂಗ್ರೆಸ್ ಯಾತ್ರೆಯಲ್ಲಿ ಪಾಲ್ಗೊಂಡ ಆರ್​ಬಿಐ ಮಾಜಿ ಗವರ್ನರ್ ರಾಜನ್
ಕಾಂಗ್ರೆಸ್ ಯಾತ್ರೆಯಲ್ಲಿ ಪಾಲ್ಗೊಂಡ ಆರ್​ಬಿಐ ಮಾಜಿ ಗವರ್ನರ್ ರಾಜನ್

ಮಾಜಿ ಆರ್‌ಬಿಐ ಗವರ್ನರ್ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ, ರಾಜನ್ ತಮ್ಮನ್ನು ತಾವು ಮುಂದಿನ ಮನಮೋಹನ್ ಸಿಂಗ್ ಎಂದು ಭಾವಿಸಿಕೊಂಡಿದ್ದಾರೆ ಎಂದು ಟೀಕೆ ಮಾಡಿದೆ.

ಕಾಂಗ್ರೆಸ್​ನಿಂದ ನೇಮಕಗೊಂಡಿದ್ದ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್, ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಸೇರುವುದು ಅಚ್ಚರಿಯೇನಲ್ಲ. ಅವರು ತಮ್ಮನ್ನು ತಾವು ಮುಂದಿನ ಮನಮೋಹನ್ ಸಿಂಗ್ ಎಂದು ಭಾವಿಸಿದ್ದಾರೆ. ಭಾರತದ ಆರ್ಥಿಕತೆಯ ಬಗ್ಗೆ ಅವರ ಅವಕಾಶವಾದಿ ವ್ಯಾಖ್ಯಾನವನ್ನು ತಿರಸ್ಕರಿಸಲೇಬೇಕು ಎಂದು ಬಿಜೆಪಿ ರಾಷ್ಟ್ರೀಯ ಮುಖಂಡ ಅಮಿತ ಮಾಳವೀಯ ಟ್ವೀಟ್ ಮಾಡಿದ್ದಾರೆ.

ಕಾರ್ಯಕರ್ತೆ ಮೇಧಾ ಪಾಟ್ಕರ್, ಸ್ವಯಂಘೋಷಿತ ದೇವಮಾನವ ನಾಮದೇವ್ ದಾಸ್ ತ್ಯಾಗಿ (ಕಂಪ್ಯೂಟರ್ ಬಾಬಾ), ನಟಿ ಸ್ವರಾ ಭಾಸ್ಕರ್ ಮತ್ತು ಬಾಕ್ಸರ್ ವಿಜೇಂದರ್ ಸಿಂಗ್ ಕಳೆದ ಕೆಲವು ತಿಂಗಳುಗಳಿಂದ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡವರಲ್ಲಿ ಸೇರಿದ್ದಾರೆ.

ಇದನ್ನೂ ಓದಿ: ಜನವರಿ 15ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು: ಸಿದ್ದರಾಮಯ್ಯ

Last Updated : Dec 14, 2022, 3:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.