ETV Bharat / bharat

ಕಾರ್​ ಟ್ಯಾಂಕರ್​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಆರು ಮಂದಿ ಸಾವು

author img

By

Published : Sep 7, 2022, 8:29 PM IST

ರಾಜಸ್ಥಾನದ ಸಿರೋಹಿ ಜಿಲ್ಲೆಯ ಅಬುರೋಡ್ ರಿಕೊ ಪೊಲೀಸ್ ಠಾಣೆ ವ್ಯಾಪ್ತಿಯ ಮಾವಲ್‌ನಲ್ಲಿ ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಎಲ್ಲಾ 6 ಜನರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

sirohi
ಕಾರ್​ ಟ್ಯಾಂಕರ್​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಆರು ಮಂದಿ ಸಾವು

ಸಿರೋಹಿ (ರಾಜಸ್ಥಾನ): ಜಿಲ್ಲೆಯ ಅಬುರೋಡ್ ರಿಕೊ ಪೊಲೀಸ್ ಠಾಣೆ ವ್ಯಾಪ್ತಿಯ ಮಾವಲ್‌ನಲ್ಲಿ ಬುಧವಾರ ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿ ಒಟ್ಟು 6 ಜನರು ಪ್ರಯಾಣ ಬೆಳೆಸುತ್ತಿದ್ದರು. ಅಪಘಾತದ ಸಮಯದಲ್ಲಿ ಎಲ್ಲ ಆರೂ ಜನರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದವರು ಗುಜರಾತ್‌ಗೆ ತೆರಳುತ್ತಿದ್ದರು ಎನ್ನಲಾಗಿದೆ. ಬೈಕ್ ಉಳಿಸುವ ಯತ್ನದಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಕಾರಿನಲ್ಲಿದ್ದ ಐವರು ಏಕಕಾಲದಲ್ಲಿ ಅಸು ನೀಗಿದ್ದಾರೆ. ಇನ್ನೊಬ್ಬರು ಆಸ್ಪತ್ರೆಗೆ ಸೇರಿಸುವ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿದ್ದಾರೆ.

ಸಿರೋಹಿ ಜಿಲ್ಲೆಯ ಅಬುರೋಡ್ ರಿಕೊ ಪೊಲೀಸ್ ಠಾಣೆ ವ್ಯಾಪ್ತಿಯ ಮಾವಲ್‌ನಲ್ಲಿ ಸಂಜೆ ಟ್ಯಾಂಕರ್ ಮತ್ತು ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಮಾವಲ್ ತಿರುವಿನಲ್ಲಿ ಅತೀ ವೇಗದಲ್ಲಿ ಬಂದ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ತೀವ್ರವಾಗಿ ಜಖಂಗೊಂಡಿದೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಅಪಘಾತದಿಂದ ವಾಹನ ಸಂಚಾರವೂ ಅಸ್ತವ್ಯಸ್ತವಾಗಿತ್ತು.

ಇದನ್ನು ಓದಿ:₹10 ಲಕ್ಷಕ್ಕಾಗಿ 14 ವರ್ಷದ ಬಾಲಕನ ಅಪಹರಣ.. ಸಿನಿಮೀಯ ರೀತಿಯಲ್ಲಿ ಹುಡುಗನ ರಕ್ಷಣೆ

ಸಿರೋಹಿ (ರಾಜಸ್ಥಾನ): ಜಿಲ್ಲೆಯ ಅಬುರೋಡ್ ರಿಕೊ ಪೊಲೀಸ್ ಠಾಣೆ ವ್ಯಾಪ್ತಿಯ ಮಾವಲ್‌ನಲ್ಲಿ ಬುಧವಾರ ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿ ಒಟ್ಟು 6 ಜನರು ಪ್ರಯಾಣ ಬೆಳೆಸುತ್ತಿದ್ದರು. ಅಪಘಾತದ ಸಮಯದಲ್ಲಿ ಎಲ್ಲ ಆರೂ ಜನರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದವರು ಗುಜರಾತ್‌ಗೆ ತೆರಳುತ್ತಿದ್ದರು ಎನ್ನಲಾಗಿದೆ. ಬೈಕ್ ಉಳಿಸುವ ಯತ್ನದಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಕಾರಿನಲ್ಲಿದ್ದ ಐವರು ಏಕಕಾಲದಲ್ಲಿ ಅಸು ನೀಗಿದ್ದಾರೆ. ಇನ್ನೊಬ್ಬರು ಆಸ್ಪತ್ರೆಗೆ ಸೇರಿಸುವ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿದ್ದಾರೆ.

ಸಿರೋಹಿ ಜಿಲ್ಲೆಯ ಅಬುರೋಡ್ ರಿಕೊ ಪೊಲೀಸ್ ಠಾಣೆ ವ್ಯಾಪ್ತಿಯ ಮಾವಲ್‌ನಲ್ಲಿ ಸಂಜೆ ಟ್ಯಾಂಕರ್ ಮತ್ತು ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಮಾವಲ್ ತಿರುವಿನಲ್ಲಿ ಅತೀ ವೇಗದಲ್ಲಿ ಬಂದ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ತೀವ್ರವಾಗಿ ಜಖಂಗೊಂಡಿದೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಅಪಘಾತದಿಂದ ವಾಹನ ಸಂಚಾರವೂ ಅಸ್ತವ್ಯಸ್ತವಾಗಿತ್ತು.

ಇದನ್ನು ಓದಿ:₹10 ಲಕ್ಷಕ್ಕಾಗಿ 14 ವರ್ಷದ ಬಾಲಕನ ಅಪಹರಣ.. ಸಿನಿಮೀಯ ರೀತಿಯಲ್ಲಿ ಹುಡುಗನ ರಕ್ಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.