ETV Bharat / bharat

ಸೋಲಿಗೆ ಕಾರಣ ಹುಡುಕುತ್ತಿರುವ ಪ್ರತಿಪಕ್ಷಗಳು: ವಿಧಾನಸಭಾ ಚುನಾವಣೆ ಸಿದ್ಧತೆಯಲ್ಲಿ ಬಿಜೆಪಿ

author img

By

Published : Apr 17, 2022, 10:58 AM IST

ಪ್ರತಿಪಕ್ಷಗಳು ಸೋಲಿಗೆ ಕಾರಣಗಳೇನು ಎಂದು ಯೋಚಿಸುತ್ತಿರುವಾಗಲೇ, ಮುಂದಿನ ವರ್ಷಾಂತ್ಯದವರೆಗೆ ನಡೆಯಲಿರುವ ಎಲ್ಲ ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ.

BJP revs up its election juggernaut for upcoming state polls
ವಿಧಾನಸಭಾ ಚುನಾವಣೆ ಸಿದ್ಧತೆಯಲ್ಲಿ ಬಿಜೆಪಿ

ನವದೆಹಲಿ: ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಸೋಲಿಗೆ ಕಾರಣಗಳೇನು ಎಂದು ಪ್ರತಿಪಕ್ಷಗಳು ಚಿಂತಿಸುತ್ತಿವೆ. ಆದ್ರೆ ಇತ್ತ ಬಿಜೆಪಿ ಮುಂದಿನ ವರ್ಷಾಂತ್ಯದವರೆಗೆ ನಡೆಯಲಿರುವ ಎಲ್ಲ ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಪ್ರಧಾನಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈಗಾಗಲೇ ಈ ಚುನಾವಣೆ ಇರುವ ರಾಜ್ಯಗಳಿಗೆ ಭೇಟಿ ನೀಡಲು ಆರಂಭಿಸಿದ್ದಾರೆ.

ಡಿಸೆಂಬರ್ 2023 ರೊಳಗೆ ನಡೆಯಲಿರುವ ಅಸೆಂಬ್ಲಿ ಚುನಾವಣೆಗಳೆಂದರೆ, 2022 ರ ಕೊನೆಯಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶ, 2023 ರಲ್ಲಿ ಕರ್ನಾಟಕ ಮತ್ತು 2023 ರ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣೆ ನಡೆಯಲಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಗೆ ಸೆಮಿಫೈನಲ್ ಎಂದು ಪರಿಗಣಿಸಲಾಗಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಪ್ರಚಾರವನ್ನು ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗುಜರಾತ್‌ಗೆ ಎರಡನೇ ಭೇಟಿ ನೀಡಲಿದ್ದಾರೆ.

ಕಳೆದ ತಿಂಗಳು ಗುಜರಾತ್‌ನ ಬಿಜೆಪಿ ಸಂಸದರೊಂದಿಗೆ ಸಂವಾದ ನಡೆಸುತ್ತಿದ್ದ ವೇಳೆ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣಗಳನ್ನು ಬಳಸಿ ಸರ್ಕಾರಿ ಕೆಲಸಗಳ ಬಗ್ಗೆ ಜನರಿಗೆ ವಿವರಿಸುವಂತೆ ಹೇಳಿದ್ದರು. ಹಿರಿಯ ಸಚಿವರು ಮತ್ತು ಮುಖಂಡರು ಚುನಾವಣೆಗೆ ಒಳಪಡುವ ರಾಜ್ಯಗಳಿಗೆ ಆಗಾಗ್ಗೆ ಭೇಟಿ ನೀಡಿ ಸರ್ಕಾರದ ಕಾರ್ಯಕ್ರಮಗಳನ್ನು ಹೈಲೈಟ್ ಮಾಡಲು ಮತ್ತು ಸಿದ್ಧತೆಗಳನ್ನು ಪರಿಶೀಲಿಸುತ್ತಾರೆ ಎಂದು ಪಕ್ಷದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂಸತ್ತಿನಲ್ಲಿ ಅಧಿವೇಶನ ನಡೆಯದ ಕಾರಣ ಹಿರಿಯ ನಾಯಕರು ಮತ್ತು ಸಚಿವರು ಚುನಾವಣೆಗೆ ಒಳಪಡುವ ರಾಜ್ಯಗಳಿಗೆ ಭೇಟಿ ನೀಡುವುದು ನಿಯಮಿತ ಲಕ್ಷಣವಾಗಿದೆ ಎಂದು ಅವರು ಹೇಳಿದರು.

ನಾವು ಕಿರು ವಿಡಿಯೋವನ್ನು ಮಾಡಿ ಮತ್ತು ಅದನ್ನು ವಾಟ್ಸಾಪ್ ಗುಂಪಿನ ಮೂಲಕ ಪ್ರತಿಯೊಬ್ಬ ಮತದಾರರೊಂದಿಗೆ ಹಂಚಿಕೊಳ್ಳಲು ಕೇಳಿಕೊಳ್ಳುತ್ತೇವೆ. ವಿಡಿಯೋ ಚಿಕ್ಕದಾಗಿರುತ್ತದೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೆಲಸದ ಬಗ್ಗೆ ಹೇಳುತ್ತದೆ. ಸಂಸದರು ತಮ್ಮ ಸಂಸತ್ತಿನಲ್ಲಿ ಮಾಡಲಾಗಿರುವ ಕೆಲಸಗಳನ್ನು ಹೈಲೈಟ್ ಮಾಡುವಂತೆ ಕೇಳಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದರು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಶಿಮ್ಲಾದಲ್ಲಿ ರೋಡ್‌ಶೋ ಮೂಲಕ ಪಕ್ಷದ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಹಿಮಾಚಲ ಪ್ರದೇಶದ ವಿವಿಧ ಭಾಗಗಳಲ್ಲಿ ಪಕ್ಷದ ಸಿದ್ಧತೆಗಳನ್ನು ಪರಿಶೀಲಿಸಲು ಹಲವಾರು ಸಭೆಗಳನ್ನು ನಡೆಸಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿ ತಂದೆ!

ಭಾನುವಾರದಿಂದ ನಡ್ಡಾ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಐತಿಹಾಸಿಕ ಮಹತ್ವದ ಸ್ಥಳಗಳಿಗೆ ಭೇಟಿ ನೀಡುತ್ತಿರುವ ನಡ್ಡಾ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ನಡ್ಡಾ ಅವರು ರಾಜಸ್ಥಾನಕ್ಕೆ ಭೇಟಿ ನೀಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಕ್ಷಿಣ ರಾಜ್ಯ ಕರ್ನಾಟಕಕ್ಕೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದ್ದರು.

ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಅಮಿತ್ ಶಾ ಭಾಯ್ ಜಿ ಅವರು ನೆಲದಲ್ಲಿ ಹೇಗೆ ಕೆಲಸ ಮಾಡಬೇಕು ಎಂದು ರಾಜ್ಯ ಘಟಕಕ್ಕೆ ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ. ರಾಜ್ಯ ಘಟಕವು ಆ ನಿರ್ದೇಶನಗಳನ್ನು ಕಾರ್ಯಗತಗೊಳಿಸುತ್ತದೆ. ನಾವು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಸ್ಪರ್ಧಿಸುತ್ತೇವೆ. ರಾಜ್ಯದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ವಿಧಾನಸಭೆ ಸದಸ್ಯ ಸಿ ಟಿ ರವಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ, ಬಿಜೆಪಿಯು ಸ್ಥಳೀಯವಾಗಿ ಸಂಘಟನೆಗಳನ್ನು ಬಲಪಡಿಸುವ ಹಲವಾರು ಕಾರ್ಯಕ್ರಮಗಳನ್ನು ಪ್ರಾರಂಭಿಸಿದೆ. ಪೇಜ್ ಕಮಿಟಿ ಹಾಗೂ ಬೂತ್ ಸಮಿತಿ ರಚನೆ ಕಾರ್ಯ ಭರದಿಂದ ಸಾಗಿದೆ. ಮುಂದಿನ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಕೋವಿಡ್ ಸಾಂಕ್ರಾಮಿಕದ ಉತ್ತುಂಗದಲ್ಲಿಯೂ ಸಹ ಬಿಜೆಪಿ ಕಾರ್ಯಕರ್ತರು ಯಾವಾಗಲೂ ಜನರ ನಡುವೆ ಇರುತ್ತಾರೆ ಎಂದು ಪಕ್ಷದ ಒಳಗಿನವರು ಹೇಳಿದರು.

ನವದೆಹಲಿ: ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಸೋಲಿಗೆ ಕಾರಣಗಳೇನು ಎಂದು ಪ್ರತಿಪಕ್ಷಗಳು ಚಿಂತಿಸುತ್ತಿವೆ. ಆದ್ರೆ ಇತ್ತ ಬಿಜೆಪಿ ಮುಂದಿನ ವರ್ಷಾಂತ್ಯದವರೆಗೆ ನಡೆಯಲಿರುವ ಎಲ್ಲ ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಪ್ರಧಾನಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈಗಾಗಲೇ ಈ ಚುನಾವಣೆ ಇರುವ ರಾಜ್ಯಗಳಿಗೆ ಭೇಟಿ ನೀಡಲು ಆರಂಭಿಸಿದ್ದಾರೆ.

ಡಿಸೆಂಬರ್ 2023 ರೊಳಗೆ ನಡೆಯಲಿರುವ ಅಸೆಂಬ್ಲಿ ಚುನಾವಣೆಗಳೆಂದರೆ, 2022 ರ ಕೊನೆಯಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶ, 2023 ರಲ್ಲಿ ಕರ್ನಾಟಕ ಮತ್ತು 2023 ರ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣೆ ನಡೆಯಲಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಗೆ ಸೆಮಿಫೈನಲ್ ಎಂದು ಪರಿಗಣಿಸಲಾಗಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಪ್ರಚಾರವನ್ನು ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗುಜರಾತ್‌ಗೆ ಎರಡನೇ ಭೇಟಿ ನೀಡಲಿದ್ದಾರೆ.

ಕಳೆದ ತಿಂಗಳು ಗುಜರಾತ್‌ನ ಬಿಜೆಪಿ ಸಂಸದರೊಂದಿಗೆ ಸಂವಾದ ನಡೆಸುತ್ತಿದ್ದ ವೇಳೆ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣಗಳನ್ನು ಬಳಸಿ ಸರ್ಕಾರಿ ಕೆಲಸಗಳ ಬಗ್ಗೆ ಜನರಿಗೆ ವಿವರಿಸುವಂತೆ ಹೇಳಿದ್ದರು. ಹಿರಿಯ ಸಚಿವರು ಮತ್ತು ಮುಖಂಡರು ಚುನಾವಣೆಗೆ ಒಳಪಡುವ ರಾಜ್ಯಗಳಿಗೆ ಆಗಾಗ್ಗೆ ಭೇಟಿ ನೀಡಿ ಸರ್ಕಾರದ ಕಾರ್ಯಕ್ರಮಗಳನ್ನು ಹೈಲೈಟ್ ಮಾಡಲು ಮತ್ತು ಸಿದ್ಧತೆಗಳನ್ನು ಪರಿಶೀಲಿಸುತ್ತಾರೆ ಎಂದು ಪಕ್ಷದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂಸತ್ತಿನಲ್ಲಿ ಅಧಿವೇಶನ ನಡೆಯದ ಕಾರಣ ಹಿರಿಯ ನಾಯಕರು ಮತ್ತು ಸಚಿವರು ಚುನಾವಣೆಗೆ ಒಳಪಡುವ ರಾಜ್ಯಗಳಿಗೆ ಭೇಟಿ ನೀಡುವುದು ನಿಯಮಿತ ಲಕ್ಷಣವಾಗಿದೆ ಎಂದು ಅವರು ಹೇಳಿದರು.

ನಾವು ಕಿರು ವಿಡಿಯೋವನ್ನು ಮಾಡಿ ಮತ್ತು ಅದನ್ನು ವಾಟ್ಸಾಪ್ ಗುಂಪಿನ ಮೂಲಕ ಪ್ರತಿಯೊಬ್ಬ ಮತದಾರರೊಂದಿಗೆ ಹಂಚಿಕೊಳ್ಳಲು ಕೇಳಿಕೊಳ್ಳುತ್ತೇವೆ. ವಿಡಿಯೋ ಚಿಕ್ಕದಾಗಿರುತ್ತದೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೆಲಸದ ಬಗ್ಗೆ ಹೇಳುತ್ತದೆ. ಸಂಸದರು ತಮ್ಮ ಸಂಸತ್ತಿನಲ್ಲಿ ಮಾಡಲಾಗಿರುವ ಕೆಲಸಗಳನ್ನು ಹೈಲೈಟ್ ಮಾಡುವಂತೆ ಕೇಳಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದರು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಶಿಮ್ಲಾದಲ್ಲಿ ರೋಡ್‌ಶೋ ಮೂಲಕ ಪಕ್ಷದ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಹಿಮಾಚಲ ಪ್ರದೇಶದ ವಿವಿಧ ಭಾಗಗಳಲ್ಲಿ ಪಕ್ಷದ ಸಿದ್ಧತೆಗಳನ್ನು ಪರಿಶೀಲಿಸಲು ಹಲವಾರು ಸಭೆಗಳನ್ನು ನಡೆಸಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿ ತಂದೆ!

ಭಾನುವಾರದಿಂದ ನಡ್ಡಾ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಐತಿಹಾಸಿಕ ಮಹತ್ವದ ಸ್ಥಳಗಳಿಗೆ ಭೇಟಿ ನೀಡುತ್ತಿರುವ ನಡ್ಡಾ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ನಡ್ಡಾ ಅವರು ರಾಜಸ್ಥಾನಕ್ಕೆ ಭೇಟಿ ನೀಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಕ್ಷಿಣ ರಾಜ್ಯ ಕರ್ನಾಟಕಕ್ಕೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದ್ದರು.

ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಅಮಿತ್ ಶಾ ಭಾಯ್ ಜಿ ಅವರು ನೆಲದಲ್ಲಿ ಹೇಗೆ ಕೆಲಸ ಮಾಡಬೇಕು ಎಂದು ರಾಜ್ಯ ಘಟಕಕ್ಕೆ ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ. ರಾಜ್ಯ ಘಟಕವು ಆ ನಿರ್ದೇಶನಗಳನ್ನು ಕಾರ್ಯಗತಗೊಳಿಸುತ್ತದೆ. ನಾವು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಸ್ಪರ್ಧಿಸುತ್ತೇವೆ. ರಾಜ್ಯದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ವಿಧಾನಸಭೆ ಸದಸ್ಯ ಸಿ ಟಿ ರವಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ, ಬಿಜೆಪಿಯು ಸ್ಥಳೀಯವಾಗಿ ಸಂಘಟನೆಗಳನ್ನು ಬಲಪಡಿಸುವ ಹಲವಾರು ಕಾರ್ಯಕ್ರಮಗಳನ್ನು ಪ್ರಾರಂಭಿಸಿದೆ. ಪೇಜ್ ಕಮಿಟಿ ಹಾಗೂ ಬೂತ್ ಸಮಿತಿ ರಚನೆ ಕಾರ್ಯ ಭರದಿಂದ ಸಾಗಿದೆ. ಮುಂದಿನ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಕೋವಿಡ್ ಸಾಂಕ್ರಾಮಿಕದ ಉತ್ತುಂಗದಲ್ಲಿಯೂ ಸಹ ಬಿಜೆಪಿ ಕಾರ್ಯಕರ್ತರು ಯಾವಾಗಲೂ ಜನರ ನಡುವೆ ಇರುತ್ತಾರೆ ಎಂದು ಪಕ್ಷದ ಒಳಗಿನವರು ಹೇಳಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.