ETV Bharat / bharat

ಹೈದರಾಬಾದ್‌ ಪಾಲಿಕೆ ಫಲಿತಾಂಶ; 'ಭಾಗ್ಯ'ದ ಹೊಸ್ತಿಲಲ್ಲಿ 'ಕಮಲ'... ಅಧಿಕಾರದತ್ತ TRS-MIM

author img

By

Published : Dec 4, 2020, 8:43 PM IST

Updated : Dec 4, 2020, 9:49 PM IST

ತೀವ್ರ ಕುತೂಹಲ ಮೂಡಿಸಿರುವ ಗ್ರೇಟರ್ ಹೈದರಾಬಾದ್‌ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಏಕಾಂಗಿಯಾಗಿ ಸ್ಪರ್ಧೆವೊಡ್ಡಿದ್ದ ಬಿಜೆಪಿ ಅಚ್ಚರಿಯ ಫಲಿತಾಂಶ ಪಡೆಯುವ ಮೂಲಕ ಮುನ್ನುಗ್ಗುತ್ತಿದೆ. ಸದ್ಯದ ಫಲಿತಾಂಶದ ಪ್ರಕಾರ ಆಡಳಿತಾರೂಢ ಟಿಆರ್​ಎಸ್​ ಭರ್ಜರಿ ಮುನ್ನಡೆ ಸಾಧಿಸಿದೆ. ಬಿಜೆಪಿ ಎರಡನೇ ಸ್ಥಾನದಲ್ಲಿದ್ದು ಎಂಐಎಂ ಇದರ ಜೊತೆಗೆ ಸ್ಪರ್ಧೆ ನೀಡಿದೆ.

GHMC ELECTIONS RESULTS AND TRENDS FINAL(150/150)
ಹೈದರಾಬಾದ್‌ ಪಾಲಿಕೆ ಫಲಿತಾಂಶ

ಹೈದರಾಬಾದ್: ಹೈದರಾಬಾದ್ ನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಏಕಾಂಕಿಯಾಗಿ ಕಣಕ್ಕಿಳಿದಿದ್ದ ಬಿಜೆಪಿ ಅಚ್ಚರಿಯ ಫಲಿತಾಂಶ ಪಡೆದುಕೊಂಡು, ಟಿಆರ್​ಎಸ್​ಗೆ ಎಚ್ಚರಿಕೆ ಕರೆ ಗಂಟೆ ನೀಡಿದೆ. ಇನ್ನೊಂದೆಡೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್​​​​ ಮುಖಭಂಗ ಅನುಭವಿಸಿದೆ. ಅಷ್ಟೇ ಅಲ್ಲ ಟಿಪಿಸಿಸಿ ಅಧ್ಯಕ್ಷ ಉತ್ತಮ್​ ಕುಮಾರ್ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶುಕ್ರವಾರ ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಇಲ್ಲಿಯವರೆಗೆ ನಡೆದ ಫಲಿತಾಂಶದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ 55+1 ವಾರ್ಡ್​ಗಳ ಗೆಲುವು ಸಾಧಿಸಿದೆ. (1 ವಾರ್ಡ್​​​ನಲ್ಲಿ ಮುನ್ನಡೆ) ಬಿಜೆಪಿ 48 ವಾರ್ಡ್​ಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಚ್ಚರಿಕೆಯ ಫಲಿತಾಂಶದತ್ತ ಮುನ್ನುಗ್ಗುತ್ತಿದೆ. ಕಾಂಗ್ರೆಸ್​ ಕೇವಲ ಎರಡು ವಾರ್ಡ್​ಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರಿ ಮುಖಭಂಗ ಅನುಭವಿಸಿದೆ. ಎಂಐಎಂ 44 ವಾರ್ಡ್​ಗಳಲ್ಲಿ ಗೆಲುವು ಸಾಧಿಸಿದೆ. 1 ಸ್ಥಾನಗಳ ಫಲಿತಾಂಶವಷ್ಟೇ ಬರಬೇಕಿದೆ.

ಇದನ್ನೂ ಓದಿ : ಜಿಹೆಚ್​ಎಂಸಿ ಚುನಾವಣೆಗೆ ಒಲವು ತೋರದ ಮತದಾರ: ಅತ್ಯಲ್ಪ ಪ್ರಮಾಣದ ಮತದಾನ

ಒಟ್ಟು 150 ವಾರ್ಡ್​ಗಳ ಬಲದ ಜಿಹೆಚ್​ಎಂಸಿಗೆ ಕೊರೊನಾ ಹಿನ್ನೆಲೆಯಲ್ಲಿ ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸಲಾಗಿತ್ತು. ಚುನಾವಣಾ ಕಣದಲ್ಲಿ ಒಟ್ಟು 1,122 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 30 ಮತ ಎಣಿಕೆ ಕೇಂದ್ರಗಳಲ್ಲಿ 8,152 ಸಿಬ್ಬಂದಿ ಮತ ಎಣಿಕೆಯಲ್ಲಿ ಭಾಗಿಯಾಗಿದ್ದರು.

ಈ ಬಾರಿಯ ಚುನಾವಣೆಯನ್ನು ಬಿಜೆಪಿ ಹಾಗೂ ಟಿಆರ್​ಎಸ್​ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದವು. ಇದರಂತೆ ಬಿಜೆಪಿಯ ಘಟಾನುಘಟಿ ನಾಯಕರು ಹೈದರಾಬಾದ್​ನಲ್ಲಿ ಚುನಾವಣಾ ಪ್ರಚಾರ ಮಾಡಿದ್ದರು. ಅಮಿತ್ ಶಾ, ಯೋಗಿ ಆದಿತ್ಯನಾಥ್, ಸ್ಮೃತಿ ಇರಾನಿ, ರಾಜ್ಯದ ಸಚಿವರಾದ ಸುಧಾಕರ್, ಈಶ್ವರಪ್ಪ ಸೇರಿದಂತೆ ಹಲವಾರು ನಾಯಕರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.

  • Telangana: BJP leaders, including MoS (Home) G Kishan Reddy and party's state chief Bandi Sanjay Kumar, distribute sweets and celebrate in Hyderabad following their party's performance in #GHMCElections pic.twitter.com/GsF9dy4d4R

    — ANI (@ANI) December 4, 2020 " class="align-text-top noRightClick twitterSection" data=" ">

ಪ್ರಚಾರದ ವೇಳೆ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಬಿಜೆಪಿ ನಾಯಕರು ಹೈದರಾಬಾದ್​ ಅನ್ನು ಭಾಗ್ಯನಗರವಾಗಿ ಮರುನಾಮಕರಣ ಮಾಡಲಾಗುತ್ತದೆ ಎಂದು ಹೇಳಿದ್ದು ಭಾರೀ ಕುತೂಹಲ ಕೆರಳಿಸುವಂತೆ ಮಾಡಿತ್ತು. ಚುನಾವಣಾ ಅಖಾಡದಲ್ಲಿ ಟಿಆರ್​ಎಸ್​, ಬಿಜೆಪಿ, ಎಂಐಎಂ, ಕಾಂಗ್ರೆಸ್ ಪಕ್ಷಗಳಿದ್ದವು.

ಅಚ್ಚರಿಯೆ ಫಲಿತಾಂಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್​ ಮೂಲಕ ತೆಲಂಗಾಣ ಜನತೆಗೆ ಧನ್ಯವಾದ ಹೇಳಿದ್ದಾರೆ. ಇಂದು ಗ್ರೇಟರ್ ಹೈದರಾಬಾದ್ ಮುನಿಸಿಪಲ್ ಕಾರ್ಪೋರೇಶನ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿರುವ ಬಿಜೆಪಿ ರಾಜಕಾರಣದ ಮೇಲೆ ನಂಬಿಕೆ ಇಟ್ಟ ತೆಲಂಗಾಣ ಜನರಿಗೆ ಧನ್ಯವಾದಗಳು. ಜಿಹೆಚ್​ಎಂಸಿ ಚುನಾವಣೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರಿಗೆ ಸುಸ್ವಾಗತ. ತೆಲಂಗಾಣ ಬಿಜೆಪಿ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸುತ್ತದೆ ಎಂದಿದ್ದಾರೆ.

ಹೈದರಾಬಾದ್: ಹೈದರಾಬಾದ್ ನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಏಕಾಂಕಿಯಾಗಿ ಕಣಕ್ಕಿಳಿದಿದ್ದ ಬಿಜೆಪಿ ಅಚ್ಚರಿಯ ಫಲಿತಾಂಶ ಪಡೆದುಕೊಂಡು, ಟಿಆರ್​ಎಸ್​ಗೆ ಎಚ್ಚರಿಕೆ ಕರೆ ಗಂಟೆ ನೀಡಿದೆ. ಇನ್ನೊಂದೆಡೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್​​​​ ಮುಖಭಂಗ ಅನುಭವಿಸಿದೆ. ಅಷ್ಟೇ ಅಲ್ಲ ಟಿಪಿಸಿಸಿ ಅಧ್ಯಕ್ಷ ಉತ್ತಮ್​ ಕುಮಾರ್ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶುಕ್ರವಾರ ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಇಲ್ಲಿಯವರೆಗೆ ನಡೆದ ಫಲಿತಾಂಶದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ 55+1 ವಾರ್ಡ್​ಗಳ ಗೆಲುವು ಸಾಧಿಸಿದೆ. (1 ವಾರ್ಡ್​​​ನಲ್ಲಿ ಮುನ್ನಡೆ) ಬಿಜೆಪಿ 48 ವಾರ್ಡ್​ಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಚ್ಚರಿಕೆಯ ಫಲಿತಾಂಶದತ್ತ ಮುನ್ನುಗ್ಗುತ್ತಿದೆ. ಕಾಂಗ್ರೆಸ್​ ಕೇವಲ ಎರಡು ವಾರ್ಡ್​ಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರಿ ಮುಖಭಂಗ ಅನುಭವಿಸಿದೆ. ಎಂಐಎಂ 44 ವಾರ್ಡ್​ಗಳಲ್ಲಿ ಗೆಲುವು ಸಾಧಿಸಿದೆ. 1 ಸ್ಥಾನಗಳ ಫಲಿತಾಂಶವಷ್ಟೇ ಬರಬೇಕಿದೆ.

ಇದನ್ನೂ ಓದಿ : ಜಿಹೆಚ್​ಎಂಸಿ ಚುನಾವಣೆಗೆ ಒಲವು ತೋರದ ಮತದಾರ: ಅತ್ಯಲ್ಪ ಪ್ರಮಾಣದ ಮತದಾನ

ಒಟ್ಟು 150 ವಾರ್ಡ್​ಗಳ ಬಲದ ಜಿಹೆಚ್​ಎಂಸಿಗೆ ಕೊರೊನಾ ಹಿನ್ನೆಲೆಯಲ್ಲಿ ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸಲಾಗಿತ್ತು. ಚುನಾವಣಾ ಕಣದಲ್ಲಿ ಒಟ್ಟು 1,122 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 30 ಮತ ಎಣಿಕೆ ಕೇಂದ್ರಗಳಲ್ಲಿ 8,152 ಸಿಬ್ಬಂದಿ ಮತ ಎಣಿಕೆಯಲ್ಲಿ ಭಾಗಿಯಾಗಿದ್ದರು.

ಈ ಬಾರಿಯ ಚುನಾವಣೆಯನ್ನು ಬಿಜೆಪಿ ಹಾಗೂ ಟಿಆರ್​ಎಸ್​ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದವು. ಇದರಂತೆ ಬಿಜೆಪಿಯ ಘಟಾನುಘಟಿ ನಾಯಕರು ಹೈದರಾಬಾದ್​ನಲ್ಲಿ ಚುನಾವಣಾ ಪ್ರಚಾರ ಮಾಡಿದ್ದರು. ಅಮಿತ್ ಶಾ, ಯೋಗಿ ಆದಿತ್ಯನಾಥ್, ಸ್ಮೃತಿ ಇರಾನಿ, ರಾಜ್ಯದ ಸಚಿವರಾದ ಸುಧಾಕರ್, ಈಶ್ವರಪ್ಪ ಸೇರಿದಂತೆ ಹಲವಾರು ನಾಯಕರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.

  • Telangana: BJP leaders, including MoS (Home) G Kishan Reddy and party's state chief Bandi Sanjay Kumar, distribute sweets and celebrate in Hyderabad following their party's performance in #GHMCElections pic.twitter.com/GsF9dy4d4R

    — ANI (@ANI) December 4, 2020 " class="align-text-top noRightClick twitterSection" data=" ">

ಪ್ರಚಾರದ ವೇಳೆ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಬಿಜೆಪಿ ನಾಯಕರು ಹೈದರಾಬಾದ್​ ಅನ್ನು ಭಾಗ್ಯನಗರವಾಗಿ ಮರುನಾಮಕರಣ ಮಾಡಲಾಗುತ್ತದೆ ಎಂದು ಹೇಳಿದ್ದು ಭಾರೀ ಕುತೂಹಲ ಕೆರಳಿಸುವಂತೆ ಮಾಡಿತ್ತು. ಚುನಾವಣಾ ಅಖಾಡದಲ್ಲಿ ಟಿಆರ್​ಎಸ್​, ಬಿಜೆಪಿ, ಎಂಐಎಂ, ಕಾಂಗ್ರೆಸ್ ಪಕ್ಷಗಳಿದ್ದವು.

ಅಚ್ಚರಿಯೆ ಫಲಿತಾಂಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್​ ಮೂಲಕ ತೆಲಂಗಾಣ ಜನತೆಗೆ ಧನ್ಯವಾದ ಹೇಳಿದ್ದಾರೆ. ಇಂದು ಗ್ರೇಟರ್ ಹೈದರಾಬಾದ್ ಮುನಿಸಿಪಲ್ ಕಾರ್ಪೋರೇಶನ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿರುವ ಬಿಜೆಪಿ ರಾಜಕಾರಣದ ಮೇಲೆ ನಂಬಿಕೆ ಇಟ್ಟ ತೆಲಂಗಾಣ ಜನರಿಗೆ ಧನ್ಯವಾದಗಳು. ಜಿಹೆಚ್​ಎಂಸಿ ಚುನಾವಣೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರಿಗೆ ಸುಸ್ವಾಗತ. ತೆಲಂಗಾಣ ಬಿಜೆಪಿ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸುತ್ತದೆ ಎಂದಿದ್ದಾರೆ.

Last Updated : Dec 4, 2020, 9:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.