ETV Bharat / bharat

ಕೇಂದ್ರದ ಯೋಜನೆ ಬಿಜೆಪಿಯೇತರ ರಾಜ್ಯಗಳಿಗೂ ತಲುಪಿಸಬೇಕು : ಪ್ರಧಾನಿ ಮೋದಿ

author img

By

Published : Aug 3, 2023, 7:32 AM IST

ಎನ್​ಡಿಎ ಸಂಸದರೊಂದಿಗೆ ಪ್ರಧಾನಿ ಮೋದಿ ಸಭೆ ನಡೆಸಿದ್ದು, ಕೇಂದ್ರದ ಯೋಜನೆ ಪ್ರತಿಯೊಬ್ಬರಿಗೂ ತಲುಪಿಸುವಂತೆ ಸಂಸದರಿಗೆ ಸಲಹೆ ನೀಡಿದ್ದಾರೆ.

ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದಹೆಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸಂಸದರೊಂದಿಗೆ ಬುಧವಾರ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಸರ್ಕಾರವು ಜನ ಸಾಮಾನ್ಯರಿಗಾಗಿ ಹಲವಾರು ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅವುಗಳು ಪ್ರತಿಯೊಬ್ಬರಿಗೂ ತಲುಪುವಂತಗಾಬೇಕು. ವಿಶೇಷವಾಗಿ ಬಿಜೆಪಿಯೇತರ ರಾಜ್ಯಗಳಿಗೂ ಕೇಂದ್ರದ ಯೋಜನೆಗಳನ್ನು ತಲುಪಿಸಬೇಕು ಎಂದು ಪ್ರಧಾನಿ ಸಂಸದರಿಗೆ ಸೂಚಿಸಿದರು.

ಬಿಜೆಪಿಯೇತರ ರಾಜ್ಯಗಳಲ್ಲಿ ಅಲ್ಲಿಯ ಆಡಳಿತದ ಸಹಾಯವಿಲ್ಲದೇ ಕೇಂದ್ರ ಸರ್ಕಾರದ ಯೋಜನೆಯ ಸಾರ್ವಜನಿಕರಿಗೆ ತಲುಪಿಸುವುದು ಮುಖ್ಯ. ಕರ್ನಾಟಕ, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದಂತಹ ಬಿಜೆಪಿಯೇತರ ರಾಜ್ಯಗಳ ಜನರೊಂದಿಗೆ ಸಂಪರ್ಕ ಸಾಧಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಹೆಚ್ಚಿನ ಗಮನಹರಿಸಬೇಕು. ಎಲ್ಲ ಧಾರ್ಮಿಕ ಹಬ್ಬಗಳನ್ನು ಸಾರ್ವಜನಿಕರೊಂದಿಗೆ ಆಚರಿಸಿ ಮತ್ತು ಒಗ್ಗಟ್ಟಿನಿಂದಿರಬೇಕು. ಹಾಗೆಯೇ ಮುಂಬರುವ 2024ರ ಲೋಕಸಭಾ ಚುನಾವಣೆಗೆ ಎಲ್ಲರೂ ಸಿದ್ಧರಾಗಿರುವಂತೆ ಪ್ರಧಾನಿ ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.

ಸಂಸತ್ತಿನ ಅನೆಕ್ಸ್​ ಕಟ್ಟಡದಲ್ಲಿ ಸುಮಾರು ಒಂದು ಗಂಟೆ ಕಾಲ ನಡೆದ ಈ ಸಭೆಯಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ಹಾಗೂ ಲಕ್ಷ್ವದೀಪಗಳು ಸೇರಿದಂತೆ ಒಟ್ಟು 48 ಸಂಸದರು ಭಾಗಿಯಾಗಿದ್ದರು. ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ ಮುರಳೀಧರನ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಡಾ.ಕೆ.ಲಕ್ಷ್ಮಣ್, ಜಿ. ಕಿಶನ್ ರೆಡ್ಡಿ, ವನತಿ ಶ್ರೀನಿವಾಸನ್ ಮತ್ತು ಇತರ ಎನ್‌ಡಿಎ ಸಂಸದರು ಸಭೆಯಲ್ಲಿ ಉಪಸ್ಥಿತರಿದ್ದರು.

ಕ್ಲಸ್ಟರ್-3 ಸಭೆ: ಇದಕ್ಕೂ ಮುನ್ನ ಪ್ರಧಾನಿ ಬುಧವಾರ ಮಹಾರಾಷ್ಟ್ರ ಭವನದಲ್ಲಿ ಉತ್ತರ ಪ್ರದೇಶ ಮತ್ತು ಅವಧ್ ಪ್ರದೇಶದ 48 ಎನ್‌ಡಿಎ ಸಂಸದರ ಗುಂಪುಗಳೊಂದಿಗೆ ಕ್ಲಸ್ಟರ್-3 ಸಭೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಅನುಪ್ರಿಯಾ ಪಟೇಲ್ ಮತ್ತು ಮಹೇಂದ್ರ ನಾಥ್ ಪಾಂಡೆ ಭಾಗಿಯಾಗಿದ್ದರು.

2024ರ ಲೋಕಸಭೆ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳ ಭಾಗವಾಗಿ ಸೋಮವಾರದಂದು, ಪಿಎಂ ಮೋದಿ ಪಶ್ಚಿಮ ಉತ್ತರ ಪ್ರದೇಶ, ಬುಂದೇಲ್‌ಖಂಡ್ ಮತ್ತು ಬ್ರಜ್ ಪ್ರದೇಶದ ಎನ್‌ಡಿಎ ಸಂಸದರೊಂದಿಗೆ ಸಭೆ ನಡೆಸಿದರು. ಜನರೊಂದಿಗೆ ಆಳಸಂಪರ್ಕ ಹೊಂದಿ, ಸರ್ಕಾರದ ಯೋಜನೆಗಳ ಬಗ್ಗೆ ತಿಳಿಸಲು ಹೇಳಿದರು. ಹಾಗಯೇ ತಳಮಟ್ಟದಲ್ಲಿ ಪ್ರಭಾವ ಬೀರುವ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲೂ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Modi surname row: ಕ್ಷಮೆ ಕೇಳಲ್ಲ, ಹಾಗನ್ನಿಸಿದ್ದರೆ ಮೊದಲೇ ಕೇಳಿರುತ್ತಿದ್ದೆ; ಸುಪ್ರೀಂಕೋರ್ಟ್​ಗೆ ರಾಹುಲ್​ ಗಾಂಧಿ ಅಫಿಡವಿಟ್​

ನವದಹೆಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸಂಸದರೊಂದಿಗೆ ಬುಧವಾರ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಸರ್ಕಾರವು ಜನ ಸಾಮಾನ್ಯರಿಗಾಗಿ ಹಲವಾರು ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅವುಗಳು ಪ್ರತಿಯೊಬ್ಬರಿಗೂ ತಲುಪುವಂತಗಾಬೇಕು. ವಿಶೇಷವಾಗಿ ಬಿಜೆಪಿಯೇತರ ರಾಜ್ಯಗಳಿಗೂ ಕೇಂದ್ರದ ಯೋಜನೆಗಳನ್ನು ತಲುಪಿಸಬೇಕು ಎಂದು ಪ್ರಧಾನಿ ಸಂಸದರಿಗೆ ಸೂಚಿಸಿದರು.

ಬಿಜೆಪಿಯೇತರ ರಾಜ್ಯಗಳಲ್ಲಿ ಅಲ್ಲಿಯ ಆಡಳಿತದ ಸಹಾಯವಿಲ್ಲದೇ ಕೇಂದ್ರ ಸರ್ಕಾರದ ಯೋಜನೆಯ ಸಾರ್ವಜನಿಕರಿಗೆ ತಲುಪಿಸುವುದು ಮುಖ್ಯ. ಕರ್ನಾಟಕ, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದಂತಹ ಬಿಜೆಪಿಯೇತರ ರಾಜ್ಯಗಳ ಜನರೊಂದಿಗೆ ಸಂಪರ್ಕ ಸಾಧಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಹೆಚ್ಚಿನ ಗಮನಹರಿಸಬೇಕು. ಎಲ್ಲ ಧಾರ್ಮಿಕ ಹಬ್ಬಗಳನ್ನು ಸಾರ್ವಜನಿಕರೊಂದಿಗೆ ಆಚರಿಸಿ ಮತ್ತು ಒಗ್ಗಟ್ಟಿನಿಂದಿರಬೇಕು. ಹಾಗೆಯೇ ಮುಂಬರುವ 2024ರ ಲೋಕಸಭಾ ಚುನಾವಣೆಗೆ ಎಲ್ಲರೂ ಸಿದ್ಧರಾಗಿರುವಂತೆ ಪ್ರಧಾನಿ ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.

ಸಂಸತ್ತಿನ ಅನೆಕ್ಸ್​ ಕಟ್ಟಡದಲ್ಲಿ ಸುಮಾರು ಒಂದು ಗಂಟೆ ಕಾಲ ನಡೆದ ಈ ಸಭೆಯಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ಹಾಗೂ ಲಕ್ಷ್ವದೀಪಗಳು ಸೇರಿದಂತೆ ಒಟ್ಟು 48 ಸಂಸದರು ಭಾಗಿಯಾಗಿದ್ದರು. ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ ಮುರಳೀಧರನ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಡಾ.ಕೆ.ಲಕ್ಷ್ಮಣ್, ಜಿ. ಕಿಶನ್ ರೆಡ್ಡಿ, ವನತಿ ಶ್ರೀನಿವಾಸನ್ ಮತ್ತು ಇತರ ಎನ್‌ಡಿಎ ಸಂಸದರು ಸಭೆಯಲ್ಲಿ ಉಪಸ್ಥಿತರಿದ್ದರು.

ಕ್ಲಸ್ಟರ್-3 ಸಭೆ: ಇದಕ್ಕೂ ಮುನ್ನ ಪ್ರಧಾನಿ ಬುಧವಾರ ಮಹಾರಾಷ್ಟ್ರ ಭವನದಲ್ಲಿ ಉತ್ತರ ಪ್ರದೇಶ ಮತ್ತು ಅವಧ್ ಪ್ರದೇಶದ 48 ಎನ್‌ಡಿಎ ಸಂಸದರ ಗುಂಪುಗಳೊಂದಿಗೆ ಕ್ಲಸ್ಟರ್-3 ಸಭೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಅನುಪ್ರಿಯಾ ಪಟೇಲ್ ಮತ್ತು ಮಹೇಂದ್ರ ನಾಥ್ ಪಾಂಡೆ ಭಾಗಿಯಾಗಿದ್ದರು.

2024ರ ಲೋಕಸಭೆ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳ ಭಾಗವಾಗಿ ಸೋಮವಾರದಂದು, ಪಿಎಂ ಮೋದಿ ಪಶ್ಚಿಮ ಉತ್ತರ ಪ್ರದೇಶ, ಬುಂದೇಲ್‌ಖಂಡ್ ಮತ್ತು ಬ್ರಜ್ ಪ್ರದೇಶದ ಎನ್‌ಡಿಎ ಸಂಸದರೊಂದಿಗೆ ಸಭೆ ನಡೆಸಿದರು. ಜನರೊಂದಿಗೆ ಆಳಸಂಪರ್ಕ ಹೊಂದಿ, ಸರ್ಕಾರದ ಯೋಜನೆಗಳ ಬಗ್ಗೆ ತಿಳಿಸಲು ಹೇಳಿದರು. ಹಾಗಯೇ ತಳಮಟ್ಟದಲ್ಲಿ ಪ್ರಭಾವ ಬೀರುವ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲೂ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Modi surname row: ಕ್ಷಮೆ ಕೇಳಲ್ಲ, ಹಾಗನ್ನಿಸಿದ್ದರೆ ಮೊದಲೇ ಕೇಳಿರುತ್ತಿದ್ದೆ; ಸುಪ್ರೀಂಕೋರ್ಟ್​ಗೆ ರಾಹುಲ್​ ಗಾಂಧಿ ಅಫಿಡವಿಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.