ETV Bharat / bharat

ಜ್ಞಾನವಾಪಿ ಪ್ರಕರಣ: ಸಮೀಕ್ಷಾ ವರದಿ ಸಲ್ಲಿಕೆಗೆ ಮತ್ತೆ 3 ವಾರ ಕಾಲಾವಕಾಶ ಕೇಳಿದ ಎಎಸ್​ಐ

author img

By ETV Bharat Karnataka Team

Published : Nov 28, 2023, 4:29 PM IST

Updated : Nov 28, 2023, 6:18 PM IST

Gyanvapi Masjid Case: ಈಗಾಗಲೇ ನ್ಯಾಯಾಲಯವು ಸಮೀಕ್ಷೆ ವರದಿ ಸಲ್ಲಿಸಲು ನೀಡಿದ್ದ 10 ದಿನಗಳ ಕಾಲಾವಕಾಶ ಇಂದಿಗೆ ಕೊನೆಯಾಗಿತ್ತು.

Gyanvapi Masjid
ಜ್ಞಾನವಾಪಿ ಮಸೀದಿ

ವಾರಣಾಸಿ (ಉತ್ತರ ಪ್ರದೇಶ): ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷಾ ವರದಿಯನ್ನು ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಬೇಕಿತ್ತು. ಆದರೆ ಎಎಸ್​ಐ ವರದಿ ಸಲ್ಲಿಕೆಗೆ ಮತ್ತೊಮ್ಮೆ ಮೂರು ವಾರಗಳ ಕಾಲಾವಕಾಶ ಕೇಳಿದೆ. ಮಂಗಳವಾರ ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಎಎಸ್​ಐ ಪರ ಸರ್ಕಾರಿ ವಕೀಲ ಅಮಿತ್​ ಶ್ರೀ ವಾಸ್ತವ್​ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಬುಧವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ.

ಮಸೀದಿ ಸಂಕೀರ್ಣದ ವೈಜ್ಞಾನಿಕ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಮಂಗಳವಾರ(ನ.28) ಕೊನೇ ದಿನವಾಗಿತ್ತು. ಮಸೀದಿಯ ವೈಜ್ಞಾನಿಕ ಸಮೀಕ್ಷೆ ಒಂದು ತಿಂಗಳ ಹಿಂದೆಯೇ ಮುಕ್ತಾಯಗೊಂಡಿದೆ. ಆದರೂ ವರದಿ ಸಲ್ಲಿಸಲು ನ್ಯಾಯಾಲಯ ನೀಡಿದ್ದ ಗಡುವುಗಳನ್ನು ವಿಸ್ತರಿಸಲು ಎಎಸ್​ಐ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದೆ. ಎಎಸ್​ಐ ನವೆಂಬರ್​ 17 ರಂದು ವರದಿಯನ್ನು ಸಲ್ಲಿಸಬೇಕಾಗಿತ್ತು. ಆದರೆ ನವೆಂಬರ್​ 18 ರಂದು ಹೆಚ್ಚುವರಿ 15 ದಿನಗಳ ಕಾಲಾವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಎಎಸ್​ಐ ತನ್ನ ಅರ್ಜಿಯಲ್ಲಿ ಮಸೀದಿ ಸಂಕೀರ್ಣದಲ್ಲಿ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದ್ದು, ನೆಲದ ಪೆನೆಟ್ರೇಟಿಂಗ್​ ರಾಡಾರ್​(ಜಿಪಿಆರ್​) ನಡೆಸಿದ ವರದಿಯ ತಯಾರಿ ನಡೆಯುತ್ತಿದೆ. ಆದ್ದರಿಂದ ವಿವರವಾದ ಸಮೀಕ್ಷೆಯ ವರದಿಯನ್ನು ತಯಾರಿಸಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೇಳಿತ್ತು. ಜಿಲ್ಲಾ ನ್ಯಾಯಾಧೀಶ ಎ. ಕೆ. ವಿಶ್ವೇಶ್​ ಅವರು ನವೆಂಬರ್​ 28ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಿ, ಹೆಚ್ಚುವರಿ 10 ದಿನಗಳ ಕಾಲಾವಕಾಶ ನೀಡಿದ್ದರು.

ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯದ ಬಳಿಯ ಜ್ಞಾನವಾಪಿ ಆವರಣದಲ್ಲಿ ಎಎಸ್​ಐ ಸರ್ವೇ ನಡೆಸಿದ್ದು, 17ನೇ ಶತಮಾನದಲ್ಲಿ ಹಿಂದೂ ದೇವಾಲಯವನ್ನು ಕೆಡವಿ ಅದರ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಎಎಸ್​ಐ ಈ ಸಮೀಕ್ಷೆಯನ್ನು ಕೈಗೊಂಡಿದೆ. ಮಾಹಿತಿ ಪ್ರಕಾರ, ನ್ಯಾಯಾಲಯದ ಆದೇಶದ ಮೇರೆಗೆ ಜ್ಞಾನವಾಪಿ ಮಸೀದಿಯಲ್ಲಿ ಸುಮಾರು 100 ದಿನಗಳ ಕಾಲ ಸಮೀಕ್ಷೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಎರಡೂ ಕಡೆಯ ಜನರು, ಎಎಸ್​ಐ ವಿಜ್ಞಾನಿಗಳು ಮತ್ತು ಸ್ಥಳೀಯ ಆಡಳಿತದ ಜನರು ಭಾಗಿಯಾಗಿದ್ದರು. ಸಮೀಕ್ಷೆಯ ಸಮಯದಲ್ಲಿ ವಿಡಿಯೋಗ್ರಫಿ ಕೂಡ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ: ದೇವಾಲಯದ ಪಶ್ಚಿಮ ಗೋಡೆಯ ಹಿಂಭಾಗದಲ್ಲಿರುವ ಶೃಂಗಾರ್​ ಗೌರಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಕೋರಿ ನಾಲ್ವರು ಮಹಿಳೆಯರು 2021ರಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ವಾರಾಣಸಿ ಜಿಲ್ಲಾ ನ್ಯಾಯಾಲಯ ವಿಡಿಯೋ ಸಮೀಕ್ಷೆಗೆ ಅನುಮತಿ ನೀಡಿತ್ತು. ಸಮೀಕ್ಷೆ ವೇಳೆ ಶಿವಲಿಂಗ ಪತ್ತೆಯಾಗಿತ್ತು. ಶಿವಲಿಂಗ ಪತ್ತೆಯಾದ ಹಿನ್ನೆಲೆ ವೈಜ್ಞಾನಿಕ ಸಮೀಕ್ಷೆಗೆ ಮನವಿ ಮಾಡಲಾಗಿತ್ತು. ಆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಡಾ. ಅಜಯ್​ ಕೃಷ್ಣ ವಿಶ್ವೇಶ್​ ಅವರು ಇದೇ ವರ್ಷ ಜುಲೈ 21 ರಂದು ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಿದ್ದರು. ಜ್ಞಾನವಾಪಿ ಮಸೀದಿಯ ಸೀಲ್​ ಮಾಡಿದ ವುಜುಖಾನಾ ಪ್ರದೇಶವನ್ನು ಹೊರತುಪಡಿಸಿ ಉಳಿದ ಜಾಗವನ್ನು ಎಎಸ್​ಐ ಸಮೀಕ್ಷೆಗೆ ಆದೇಶಿಸಲಾಗಿತ್ತು.

ಜುಲೈ 24 ರಂದು ಎಎಸ್​ಐ ಸಮೀಕ್ಷೆ ಪ್ರಾರಂಭಿಸಿತ್ತು. ಆದರೆ ಮಸೀದಿ ಆಡಳಿತ ಸಮಿತಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರಿಂದ ಕೆಲವೇ ಗಂಟೆಗಳಲ್ಲಿ ಸಮೀಕ್ಷೆ ಕಾರ್ಯ ಸ್ಥಗಿತಗೊಂಡಿತ್ತು. ಹಾಗೂ ಮುಸ್ಲಿಂ ಅರ್ಜಿದಾರರು ಅಲಹಾಬಾದ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸುವಂತೆ ಹೇಳಿತ್ತು. ಅದರಂತೆ ಅಂಜುಮಾನ್​ ಅಂತೇಜಾಮಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್​ ಹೈಕೋರ್ಟ್​ ಸಮೀಕ್ಷೆಗೆ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿತ್ತು. ಇದಾದ ನಂತರ ಅಲಹಾಬಾದ್​ ಹೈಕೋರ್ಟ್​ ಸಮೀಕ್ಷೆಗೆ ಅನುಮತಿ ನೀಡಿತ್ತು. ಅಲಹಾಬಾದ್​ ತೀರ್ಪು ಪ್ರಶ್ನಿಸಿ, ಮಸೀದಿಯ ಆಡಳಿತ ಸಮಿತಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಆ ಮನವಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿತ್ತು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸಮೀಕ್ಷಾ ವರದಿ ಸಲ್ಲಿಕೆಗೆ 15 ದಿನಗಳ ಕಾಲಾವಕಾಶ ಕೇಳಿದ ಎಎಸ್​ಐ

ವಾರಣಾಸಿ (ಉತ್ತರ ಪ್ರದೇಶ): ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷಾ ವರದಿಯನ್ನು ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಬೇಕಿತ್ತು. ಆದರೆ ಎಎಸ್​ಐ ವರದಿ ಸಲ್ಲಿಕೆಗೆ ಮತ್ತೊಮ್ಮೆ ಮೂರು ವಾರಗಳ ಕಾಲಾವಕಾಶ ಕೇಳಿದೆ. ಮಂಗಳವಾರ ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಎಎಸ್​ಐ ಪರ ಸರ್ಕಾರಿ ವಕೀಲ ಅಮಿತ್​ ಶ್ರೀ ವಾಸ್ತವ್​ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಬುಧವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ.

ಮಸೀದಿ ಸಂಕೀರ್ಣದ ವೈಜ್ಞಾನಿಕ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಮಂಗಳವಾರ(ನ.28) ಕೊನೇ ದಿನವಾಗಿತ್ತು. ಮಸೀದಿಯ ವೈಜ್ಞಾನಿಕ ಸಮೀಕ್ಷೆ ಒಂದು ತಿಂಗಳ ಹಿಂದೆಯೇ ಮುಕ್ತಾಯಗೊಂಡಿದೆ. ಆದರೂ ವರದಿ ಸಲ್ಲಿಸಲು ನ್ಯಾಯಾಲಯ ನೀಡಿದ್ದ ಗಡುವುಗಳನ್ನು ವಿಸ್ತರಿಸಲು ಎಎಸ್​ಐ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದೆ. ಎಎಸ್​ಐ ನವೆಂಬರ್​ 17 ರಂದು ವರದಿಯನ್ನು ಸಲ್ಲಿಸಬೇಕಾಗಿತ್ತು. ಆದರೆ ನವೆಂಬರ್​ 18 ರಂದು ಹೆಚ್ಚುವರಿ 15 ದಿನಗಳ ಕಾಲಾವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಎಎಸ್​ಐ ತನ್ನ ಅರ್ಜಿಯಲ್ಲಿ ಮಸೀದಿ ಸಂಕೀರ್ಣದಲ್ಲಿ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದ್ದು, ನೆಲದ ಪೆನೆಟ್ರೇಟಿಂಗ್​ ರಾಡಾರ್​(ಜಿಪಿಆರ್​) ನಡೆಸಿದ ವರದಿಯ ತಯಾರಿ ನಡೆಯುತ್ತಿದೆ. ಆದ್ದರಿಂದ ವಿವರವಾದ ಸಮೀಕ್ಷೆಯ ವರದಿಯನ್ನು ತಯಾರಿಸಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೇಳಿತ್ತು. ಜಿಲ್ಲಾ ನ್ಯಾಯಾಧೀಶ ಎ. ಕೆ. ವಿಶ್ವೇಶ್​ ಅವರು ನವೆಂಬರ್​ 28ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಿ, ಹೆಚ್ಚುವರಿ 10 ದಿನಗಳ ಕಾಲಾವಕಾಶ ನೀಡಿದ್ದರು.

ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯದ ಬಳಿಯ ಜ್ಞಾನವಾಪಿ ಆವರಣದಲ್ಲಿ ಎಎಸ್​ಐ ಸರ್ವೇ ನಡೆಸಿದ್ದು, 17ನೇ ಶತಮಾನದಲ್ಲಿ ಹಿಂದೂ ದೇವಾಲಯವನ್ನು ಕೆಡವಿ ಅದರ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಎಎಸ್​ಐ ಈ ಸಮೀಕ್ಷೆಯನ್ನು ಕೈಗೊಂಡಿದೆ. ಮಾಹಿತಿ ಪ್ರಕಾರ, ನ್ಯಾಯಾಲಯದ ಆದೇಶದ ಮೇರೆಗೆ ಜ್ಞಾನವಾಪಿ ಮಸೀದಿಯಲ್ಲಿ ಸುಮಾರು 100 ದಿನಗಳ ಕಾಲ ಸಮೀಕ್ಷೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಎರಡೂ ಕಡೆಯ ಜನರು, ಎಎಸ್​ಐ ವಿಜ್ಞಾನಿಗಳು ಮತ್ತು ಸ್ಥಳೀಯ ಆಡಳಿತದ ಜನರು ಭಾಗಿಯಾಗಿದ್ದರು. ಸಮೀಕ್ಷೆಯ ಸಮಯದಲ್ಲಿ ವಿಡಿಯೋಗ್ರಫಿ ಕೂಡ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ: ದೇವಾಲಯದ ಪಶ್ಚಿಮ ಗೋಡೆಯ ಹಿಂಭಾಗದಲ್ಲಿರುವ ಶೃಂಗಾರ್​ ಗೌರಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಕೋರಿ ನಾಲ್ವರು ಮಹಿಳೆಯರು 2021ರಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ವಾರಾಣಸಿ ಜಿಲ್ಲಾ ನ್ಯಾಯಾಲಯ ವಿಡಿಯೋ ಸಮೀಕ್ಷೆಗೆ ಅನುಮತಿ ನೀಡಿತ್ತು. ಸಮೀಕ್ಷೆ ವೇಳೆ ಶಿವಲಿಂಗ ಪತ್ತೆಯಾಗಿತ್ತು. ಶಿವಲಿಂಗ ಪತ್ತೆಯಾದ ಹಿನ್ನೆಲೆ ವೈಜ್ಞಾನಿಕ ಸಮೀಕ್ಷೆಗೆ ಮನವಿ ಮಾಡಲಾಗಿತ್ತು. ಆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಡಾ. ಅಜಯ್​ ಕೃಷ್ಣ ವಿಶ್ವೇಶ್​ ಅವರು ಇದೇ ವರ್ಷ ಜುಲೈ 21 ರಂದು ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಿದ್ದರು. ಜ್ಞಾನವಾಪಿ ಮಸೀದಿಯ ಸೀಲ್​ ಮಾಡಿದ ವುಜುಖಾನಾ ಪ್ರದೇಶವನ್ನು ಹೊರತುಪಡಿಸಿ ಉಳಿದ ಜಾಗವನ್ನು ಎಎಸ್​ಐ ಸಮೀಕ್ಷೆಗೆ ಆದೇಶಿಸಲಾಗಿತ್ತು.

ಜುಲೈ 24 ರಂದು ಎಎಸ್​ಐ ಸಮೀಕ್ಷೆ ಪ್ರಾರಂಭಿಸಿತ್ತು. ಆದರೆ ಮಸೀದಿ ಆಡಳಿತ ಸಮಿತಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರಿಂದ ಕೆಲವೇ ಗಂಟೆಗಳಲ್ಲಿ ಸಮೀಕ್ಷೆ ಕಾರ್ಯ ಸ್ಥಗಿತಗೊಂಡಿತ್ತು. ಹಾಗೂ ಮುಸ್ಲಿಂ ಅರ್ಜಿದಾರರು ಅಲಹಾಬಾದ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸುವಂತೆ ಹೇಳಿತ್ತು. ಅದರಂತೆ ಅಂಜುಮಾನ್​ ಅಂತೇಜಾಮಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್​ ಹೈಕೋರ್ಟ್​ ಸಮೀಕ್ಷೆಗೆ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿತ್ತು. ಇದಾದ ನಂತರ ಅಲಹಾಬಾದ್​ ಹೈಕೋರ್ಟ್​ ಸಮೀಕ್ಷೆಗೆ ಅನುಮತಿ ನೀಡಿತ್ತು. ಅಲಹಾಬಾದ್​ ತೀರ್ಪು ಪ್ರಶ್ನಿಸಿ, ಮಸೀದಿಯ ಆಡಳಿತ ಸಮಿತಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಆ ಮನವಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿತ್ತು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸಮೀಕ್ಷಾ ವರದಿ ಸಲ್ಲಿಕೆಗೆ 15 ದಿನಗಳ ಕಾಲಾವಕಾಶ ಕೇಳಿದ ಎಎಸ್​ಐ

Last Updated : Nov 28, 2023, 6:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.